• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home POLITICS

ಸಿದ್ದರಾಮಯ್ಯಗೆ ನೇರ ಚಾಲೆಂಜ್‌ ಮಾಡಿದ ಹೆಚ್‌ಡಿಕೆ

cknewsnow desk by cknewsnow desk
October 22, 2021
in POLITICS, STATE
Reading Time: 1 min read
0
ಅಕ್ಕಿಭಾಗ್ಯದ ಅಸಲಿಯೆತ್ತು ಬಿಚ್ಚಿಟ್ಟ ಎಚ್ಡಿಕೆ
992
VIEWS
FacebookTwitterWhatsuplinkedinEmail
  • ಸಿಂಧಗಿ ಕ್ಷೇತ್ರಕ್ಕೆ ನಿಮ್ಮ ಕೊಡುಗೆ ಏನು?
  • ಕಾಂಗ್ರೆಸ್‌ 3ನೇ ಸ್ಥಾನದಲ್ಲಿದೆ, ಯಾಕೆ?
  • ಜೆಡಿಎಸ್‌ ಮುಳುಗಿಹೋಗುತ್ತೆ ಎಂದಿರಿ, 2018ರಲ್ಲಿ ನಿಮ್ಮ ಪಕ್ಷ ನಮ್ಮ ಮನೆ ಬಾಗಿಲ ಮುಂದೆ ನಿಂತಿತ್ತು, ಯಾಕೆ?
  • ಜಮೀರ್‌ಗೆ ಹರಕೆಯ ಕುರಿ ಎಂದಿದ್ದು ಯಾರು?
  • ವೈಯಕ್ತಿಕ ಟೀಕೆ ಜೀರ್ಣಿಸಿಕೊಂಡಿದ್ದೇನೆ, ಇನ್ನು ಕೆಣಕಬೇಡಿ

ಸಿಂಧಗಿ: ಈ ಚುನಾವಣೆಯಲ್ಲಿ ಜೆಡಿಎಸ್‌ ಆಟಕ್ಕುಂಟು ಲೆಕ್ಕಿಕ್ಕಿಲ್ಲ, ಆ ಪಕ್ಷವು ಬಿಜೆಪಿ ಜತೆ ಒಳಒಪ್ಪಂದ ಮಾಡಿಕೊಂಡಿದೆ ಎಂದು ನಿರಾಧಾರ ಆರೋಪ ಮಾಡಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌ ಪಕ್ಷದ ವರಿಷ್ಠ ನಾಯಕರಾದ ಹೆಚ್.‌ಡಿ.ಕುಮಾರಸ್ವಾಮಿ ಅವರು ತೀವ್ರ ತಿರುಗೇಟು ನೀಡಿದರು.

ಸಿಂಧಗಿ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಪಾಲ್ಗೊಂಡಿದ್ದ ಮಾಜಿ ಮುಖ್ಯಮಂತ್ರಿಗಳು ಮೋರಟಗಿ ಗ್ರಾಮದಲ್ಲಿ ಮಾಧ್ಯಮಗಳ ಜತೆ ಮಾತನಾಡಿದರು.

ಈ ಸಂದರ್ಭದಲ್ಲಿ ಜೆಡಿಎಸ್‌ ವಿರುದ್ಧ ಸುಖಾಸುಮ್ಮನೆ ದುರುದ್ದೇಶಪೂರಿತ ಅಪಪ್ರಚಾರ ಮಾಡುತ್ತಿರುವ ಸಿದ್ದರಾಮಯ್ಯಗೆ ನೇರ ಸವಾಲು ಹಾಕಿದ ಅವರು; “ಎಷ್ಟು ವರ್ಷ ಇದೇ ರೀತಿಯ ಸುಳ್ಳು ಹೇಳಲು ಸಾಧ್ಯ? ಕಳೆದ ಇಪ್ಪತ್ತು ವರ್ಷಗಳಿಂದ ಸಿಂಧಗಿ ಕ್ಷೇತ್ರದ ಜನರು ನಮ್ಮ ಪಕ್ಷವನ್ನು ಬೆಂಬಲಿಸುತ್ತಾ ಬಂದಿದ್ದಾರೆ. ಈ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆ ಏನು? ನಾವು ಕೊಟ್ಟ ಕೊಡುಗೆ ಏನು? ಸಿದ್ದರಾಮಯ್ಯ ಬಹಿರಂಗ ಚರ್ಚೆಗೆ ಬರಲಿ” ಎಂದರು.

ಸಿಂಧಗಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಮೊದಲಿನಿಂದಲೂ ಮೂರನೇ ಸ್ಥಾನದಲ್ಲಿದೆ. ಅದನ್ನು ಸಿದ್ದರಾಮಯ್ಯ ಅರ್ಥ ಮಾಡಿಕೊಳ್ಳಬೇಕು. ಯಾರ ಯಾರ ಕಾಲದಲ್ಲಿ ಈ ನಾಡಿನ ಅಭಿವೃದ್ಧಿಗೆ ಏನೆಲ್ಲ ಕೆಲಸ ಆಗಿದೆ ಎಂಬುದನ್ನು ಚರ್ಚೆ ನಡೆಸಲು ಮೂರೂ ಪಕ್ಷಗಳ ನಾಯಕರು ಒಂದೇ ವೇದಿಕೆ ಮೇಲೆ ಚರ್ಚೆಗೆ ಬರಲಿ. ಇದು ನನ್ನ ಸವಾಲು. ನಮ್ಮ ಪಕ್ಷ ಅಧಿಕಾರಿದಲ್ಲಿದ್ದ ಕಾಲದಲ್ಲಿ ರಾಜ್ಯದ ಅಭಿವೃದ್ಧಿಗೆ ಗುಣಾತ್ಮಕ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದೇವೆ. ಮುಕ್ತ ಚರ್ಚೆಗೆ ನಾನು ಸಿದ್ಧ ಇದ್ದೇನೆ ಎಂದ ಅವರು, ನಾನು ಅಧಿಕಾರದಲ್ಲಿ ಇದ್ದಿದ್ದು ಒಮ್ಮೆ 18 ತಿಂಗಳು, ಇನ್ನೊಮ್ಮೆ 14 ತಿಂಗಳು ಮಾತ್ರ. ಇವರು ಐದೈದು ವರ್ಷ ಅಧಿಕಾರದಲ್ಲಿ ಇದ್ದರಲ್ಲಾ, ಏನೇನು ಸಾಧನೆ ಮಾಡಿದರು ಎಂದು ಹೇಳಲು ಬಹಿರಂಗ ಚರ್ಚೆಗೆ ಬರಲಿ ಎಂದು ಅವರು ನೇರ ಸವಾಲು ಒಡ್ಡಿದರು.

ಜಮೀರ್‌ ಹರಕೆಯ ಕುರಿ ಎಂದಿದ್ದ ಸಿದ್ದರಾಮಯ್ಯ!

2004ರಲ್ಲಿ ಎಸ್.ಎಂ.ಕೃಷ್ಣ ಅವರು ರಾಜೀನಾಮೆ ನೀಡಿದ ನಂತರ ಚಾಮರಾಜಪೇಟೆ ವಿಧಾನಸಭೆ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯಲ್ಲಿ ಜೆಡಿಎಸ್‌ ಅಲ್ಪಸಂಖ್ಯಾತ ಅಭ್ಯರ್ಥಿಗೆ ಟಿಕೆಟ್‌ ನೀಡಿತು. ನಾವೇನು ಈಗ ಹೊಸದಾಗಿ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್‌ ಕೊಟ್ಟಿದ್ದಲ್ಲ. ಮೊದಲಿನಿಂದಲೂ ಕೊಡುತ್ತಾ ಬಂದಿದ್ದೇವೆ. ಆಗ ಅದೇ ಅಭ್ಯರ್ಥಿ ಬಗ್ಗೆ ಮಾತನಾಡಿದ್ದ ಇದೇ ಸಿದ್ದರಾಮಯ್ಯ ಚಾಮರಾಜಪೇಟೆ ಕ್ಷೇತ್ರದಲ್ಲಿ ʼಹರಕೆಯ ಕುರಿʼಯನ್ನು ತಂದು ನಿಲ್ಲಿಸಿದ್ದಾರೆಂದು ಹೇಳಿದ್ದರು. ಈಗ ಅದೇ ಸಿದ್ದರಾಮಯ್ಯನವರು ಅದೇ ಹರಕೆಯ ಕುರಿಯನ್ನು ತಬ್ಬಿಕೊಂಡಿದ್ದಾರೆ ಎಂದು ಹೆಚ್‌ಡಿಕೆ ಕುಟುಕಿದರು.

ಆವತ್ತು ಅವರು ನಮ್ಮ ಪಕ್ಷದ ರಾಜ್ಯಾಧ್ಯಕ್ಷರಾಗಿದ್ದರು ಹಾಗೂ ಉಪ ಮುಖ್ಯಮಂತ್ರಿಯೂ ಆಗಿದ್ದರು. ಕಾಂಗ್ರೆಸ್‌ʼಗೆ ಅನಾನುಕೂಲ ಆಗುತ್ತದೆ. ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್‌ ಕೊಡಬೇಡಿ ಎಂದು ಆಗಲೇ ಹೇಳಬಹುದಿತ್ತಲ್ಲ. ಆಗ ಹೇಳದೇ ಈಗ ಸಿಂಧಗಿ ಮತ್ತು ಹಾನಗಲ್‌ ಕ್ಷೇತ್ರಗಳಲ್ಲಿ ನಾವು ಟಿಕೆಟ್‌ ಕೊಟ್ಟರೆ ಟೀಕೆ ಮಾಡುವುದು ಏಕೆ? ಇದು ದ್ವಂದ್ವ ನೀತಿಯಲ್ಲವೇ? ಎಂದು ಮಾಜಿ ಸಿಎಂ ಪ್ರಶ್ನೆ ಮಾಡಿದರು.

ಆವತ್ತು ಬಸ್‌ ನಿಲ್ಲಿಸಿದ್ದೆವು, ಹತ್ತಿಕೊಂಡರು. ಆಮೇಲೆ ಮುಂದಿನ ನಿಲ್ದಾಣದಲ್ಲಿ ಇಳಿದುಹೋದರು ಎಂದು ಇದೇ ವೇಳೆ ಪರೋಕ್ಷವಾಗಿ ಜಮೀರ್‌ ಅಹಮದ್‌ʼಗೆ ಟಾಂಗ್‌ ಕೊಟ್ಟರು ಹೆಚ್‌ಡಿಕೆ.

ಜೆಡಿಎಸ್‌ ಪಕ್ಷ ಮುಗಿದುಹೋಯಿತು ಎಂದು ಪದೇಪದೆ ಹೇಳಿದರೆ ಕೊನೆಗೆ ಮುಗಿದು ಹೋಗುವುದು ಕಾಂಗ್ರೆಸ್‌ ಪಕ್ಷವೇ. ಹಿಂದೆ ೨೦೧೮ರಲ್ಲಿ ಇದೇ ವ್ಯಕ್ತಿ ಅವರಪ್ಪನಾಣೆ ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿ ಆಗಲ್ಲ ಎಂದರು. ಕೊನೆಗೆ ಏನಾಯಿತು? ಅವರೇ ನಮ್ಮ ಮನೆಗೆ ಬಾಗಿಲಿಗೆ ಬಂದು ನಿಂತುಕೊಂಡರು. ಇದನ್ನು ಅವರು ನೆನಪಿಸಿಕೊಳ್ಳಬೇಕು ಎಂದು ಹೆಚ್‌ಡಿಕೆ ಟಾಂಗ್‌ ನೀಡಿದರು.

ಸಾಲ ಮನ್ನಾ ಮಾಡಲು ಸಹಕಾರ ನೀಡಲಿಲ್ಲ. ನಮ್ಮ ಭಾಗ್ಯಗಳು ನಿಲ್ಲಬಾರದು, ಸಾಲ ಮನ್ನಾಕ್ಕೆ ಹಣ ಹೊಂದಿಸಿಕೊಳ್ಳುವುದು ನಿಮಗೆ ಬಿಟ್ಟಿದ್ದು. ರೈತರ ಸಾಲ ನನಗೆ ಸಂಬಂಧವಿಲ್ಲ, ಅದು ನಿಮ್ಮ ಪಕ್ಷದ ಭರವಸೆ ಅಂದ್ರು. ಆದರೆ, ನಾನು ಕೊಟ್ಟ ಮಾತನ್ನು ಉಳಿಸಿಕೊಂಡೆ. ನನ್ನ 37 ಶಾಸಕರ ಬೆಂಬಲದಿಂದ ಅದು ಸಾಧ್ಯವಾಯಿತು ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಸತ್ಯ ಕಹಿಯಾಗಿರುತ್ತದೆ

ಕುಮಾರಸ್ವಾಮಿ ಅವರು ಎಲ್ಲರದ್ದೂ ಬಿಚ್ಚಡಲಿ ಎಂದು ಕೆಲವರು ಹೇಳುತ್ತಿದ್ದಾರೆ. ಒಂದು ವೇಳೆ ನಾನು ಅವರೆಲ್ಲರ ಜಾತಕ ತೆರೆದಿಟ್ಟರೆ ಅವರು ಹೊರಗೆ ಓಡಾಡೋಕೆ ಸಾಧ್ಯವೇ ಆಗಲ್ಲ. ಸತ್ಯ ಯಾವತ್ತೂ ಕಹಿಯಾಗಿರುತ್ತದೆ ಎಂದ ಅವರು ಎಚ್ಚರಿಕೆ ನೀಡಿದರು.

ನಾನು ನಿನ್ನೆಯೇ ಹೇಳಿದ್ದೇನೆ. ಜನಪರ ವಿಷಯ ಹಾಗೂ ಮಾಡಿರುವ ಸೇವಾ ಕಾರ್ಯಗಳನ್ನು ಇಟ್ಟುಕೊಂಡು ಚುನಾವಣೆ ನಡೆಸೋಣ ಎಂದು ಎಲ್ಲ ಪಕ್ಷಗಳಿಗೂ ಹೇಳಿದ್ದೇನೆ. ಹಾಗಂತ ನಾನು ಅಹಂಭಾವದಿಂದ ಹೇಳಲಾರೆ. ಆದರೆ, ಎಲ್ಲರ ಮನೆ ದೋಸೆ ತೂತೇ ಎನ್ನುವುದನ್ನು ಯಾರು ಮರೆಯಬಾರದು. ಎಚ್ಚರಿಕೆಯಿಂದ ಮಾತನಾಡಿ ಎಂದು ಹೇಳಿದ್ದೇನೆ ಎಂದರು ಕುಮಾರಸ್ವಾಮಿ ಅವರು.

ವೈಯಕ್ತಿಕ ಟೀಕೆ ಜೀರ್ಣಿಸಿಕೊಂಡಿದ್ದೇನೆ

ನಾನು ಆರ್‌ಎಸ್‌ಎಸ್‌ ಬಗ್ಗೆ ಟೀಕೆ ಮಾಡಿದೆ ಎನ್ನುವ ಕಾರಣಕ್ಕೆ ಕಳೆದ ಒಂದು ವಾರದಿಂದ ಕೆಲವರು ನನ್ನ ಬಗ್ಗೆ ವೈಯಕ್ತಿಕ ಟೀಕೆ ಮಾಡಿದರು. ಅದನ್ನೆಲ್ಲವನ್ನೂ ಜೀರ್ಣಿಸಿಕೊಂಡಿದ್ದೇನೆ ಹೊರತು ಹೆದರಿಲ್ಲ, ಈಗಲೂ ಹೆದರುವುದಿಲ್ಲ. ಆರ್‌ಎಸ್‌ಎಸ್‌ ಬಗ್ಗೆ ನಾನು ಹೇಳಿರುವುದು ಬರೀ ಆರೋಪವಲ್ಲ, ನನಗೆ ತಿಳಿದಿದ್ದು ಮತ್ತು ಓದಿದ್ದರಿಂದ ಗೊತ್ತಾಗಿದ್ದನ್ನು ಮಾತ್ರ ಹೇಳಿದ್ದೇನೆ. ಕೇವಲ ಚುನಾವಣೆಯಲ್ಲಿ ಮತ ಪಡೆಯುವ ಉದ್ದೇಶಕ್ಕೆ ನಾನು ಸಂಘದ ಬಗ್ಗೆ ಮಾತನಾಡಿಲ್ಲ. ವಿಷಯಾಧಾರಿತವಾಗಿ ಮಾತ್ರ ಚರ್ಚೆ ಮಾಡಿದ್ದೇನೆ. ಆದರೆ, ಕಾಂಗ್ರೆಸ್‌ ಪಕ್ಷದವರು ಮತಕ್ಕಾಗಿ ಮಾತ್ರ ಕೀಳು ಮಟ್ಟದ ಟೀಕೆ ಮಾಡುತ್ತಿದ್ದಾರೆ. ಅದು ಅವರ ಸಂಸ್ಕೃತಿ ಎಂದು ಕುಮಾರಸ್ವಾಮಿ ಅವರು ಗುಡುಗಿದರು.

ಇಬ್ರಾಹಿಂ ಅವರು ಬರ್ತಾರೆ

ಸಿ.ಎಂ.ಇಬ್ರಾಹಿಂ ಅವರು ನಮ್ಮ ಪಕ್ಷಕ್ಕೆ ಬರುತ್ತಾರೆ. ಎಲ್ಲರೂ ಹೇಳ್ತದ್ರಲ್ಲ, ಜೆಡಿಎಸ್‌ನಿಂದ ಗುಳೆ ಎದ್ದಿದೆ ಎಂದು. ಈಗ ಬೇರೆ ಪಕ್ಷಗಳಿಂದ ನಮ್ಮ ಪಕ್ಷಕ್ಕೆ ಬರಲು ಗುಳೆ ಎದ್ದಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಮಾರ್ಮಿಕವಾಗಿ ಹೇಳಿದರು.

Tags: by electioncknewsnowCongresshd kumaraswamyjdskarnatakaPoliticssiddaramaiahsindagi
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಜೈಲಿಗೆ ಹೋಗಲು ರೆಡಿ ಎಂದ ರಮೇಶ್‌ ಕುಮಾರ್;‌ ನಾನು ಹಾಗೆ ಅಂದೇ ಇಲ್ಲ ಎಂದ ಡಾ.ಸುಧಾಕರ್‌

ಜೈಲಿಗೆ ಹೋಗಲು ರೆಡಿ ಎಂದ ರಮೇಶ್‌ ಕುಮಾರ್;‌ ನಾನು ಹಾಗೆ ಅಂದೇ ಇಲ್ಲ ಎಂದ ಡಾ.ಸುಧಾಕರ್‌

Leave a Reply Cancel reply

Your email address will not be published. Required fields are marked *

Recommended

ಎತ್ತಿನಹೊಳೆ ಎತ್ತ? ಈವರೆಗೆ 9003.86 ಕೋಟಿ ರೂ. ಖರ್ಚು!!

ಎತ್ತಿನಹೊಳೆ ಎತ್ತ? ಈವರೆಗೆ 9003.86 ಕೋಟಿ ರೂ. ಖರ್ಚು!!

5 years ago
ಜೈ ಶ್ರೀರಾಂ ಎಂದ ಹೆಚ್.ಡಿ.ಕುಮಾರಸ್ವಾಮಿ

ಜೈ ಶ್ರೀರಾಂ ಎಂದ ಹೆಚ್.ಡಿ.ಕುಮಾರಸ್ವಾಮಿ

2 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ