• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಸ್ಕೂಟರ್ ಪೆಟ್ರೋಲ್’ಗೆ ಕಾಸಿಲ್ಲದಿದ್ದವರೂ ಈಗ ಹೇಗಿದ್ದಾರೆ ಎನ್ನುವುದು ಗೊತ್ತಿದೆ!

P K Channakrishna by P K Channakrishna
November 15, 2021
in STATE
Reading Time: 2 mins read
0
ಸ್ಕೂಟರ್ ಪೆಟ್ರೋಲ್’ಗೆ ಕಾಸಿಲ್ಲದಿದ್ದವರೂ ಈಗ ಹೇಗಿದ್ದಾರೆ ಎನ್ನುವುದು ಗೊತ್ತಿದೆ!
1k
VIEWS
FacebookTwitterWhatsuplinkedinEmail
  • ಇಂಥವರೇ ರಾಜಕೀಯಕ್ಕೆ ಬರಬೇಕು ಎಂದು ಸಂವಿಧಾನದಲ್ಲಿ ಗೆರೆ ಹಾಕಲಾಗಿದೆಯಾ?
  • ಬಿಜೆಪಿ ‘ಕುಟುಂಬ ರಾಜಕಾರಣ ರಾಜಕೀಯ’ಕ್ಕೆ ತಿರುಗೇಟು ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ ಅವರು
  • ಬಿಜೆಪಿ ಪಕ್ಷ ಶಾಸಕರನ್ನು ದುಡ್ಡಿಗೆ ಖರೀದಿಸಿ ಚುನಾವಣೆ ವ್ಯವಸ್ಥೆಯನ್ನು ಹಾಳು ಮಾಡಿದೆ

ಬೆಂಗಳೂರು: ಭಾರತೀಯ ಸಂವಿಧಾನದಲ್ಲಿ ನಿರ್ಧಿಷ್ಟವಾಗಿ ಇಂಥವರೇ ರಾಜಕೀಯಕ್ಕೆ ಬರಬೇಕು ಎಂದು ಗೆರೆ ಎಳೆಯಲಾಗಿದೆಯಾ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬಿಜೆಪಿಯನ್ನು ನೇರವಾಗಿ ಪ್ರಶ್ನೆ ಮಾಡಿದರು.

ಜೆಡಿಎಸ್ ಕುಟುಂಬ ರಾಜಕಾರಣ ಮಾಡುತ್ತಿದೆ, ಪಕ್ಷವು ದೇವೇಗೌಡರ ಕುಟುಂಬಕ್ಕೆ ಮಾತ್ರ ಸೀಮಿತವಾಗಿದೆ ಎಂದು ಟ್ವೀಟರ್ ನಲ್ಲಿ ಬಿಜೆಪಿ ಮಾಡಿದ್ದ ಟೀಕೆಗೆ ಮಾಧ್ಯಮಗೋಷ್ಟಿಯಲ್ಲಿ ತಿರುಗೇಟು ಕೊಟ್ಟ ಅವರು, “ಬಿಜೆಪಿ ಕುಟುಂಬ ರಾಜಕಾರಣದಲ್ಲಿ ತೊಯ್ದಾಡುತ್ತಿದೆ. ತನ್ನ ಹುಳುಕನ್ನು ಮರೆಮಾಚಲು ಜೆಡಿಎಸ್ ಮೇಲೆ ಕೆಸರು ಎರಚುತ್ತಿದೆ” ಎಂದರು.

ಬಿಜೆಪಿಯಲ್ಲಿ ಕುಟುಂಬ ರಾಜಕಾರಣ ಇಲ್ಲವೇ? ನಾವೂ ಒಂದು ಪಟ್ಟಿ ಕೊಟ್ಟಿದ್ದೇವೆ. ಇನ್ನು ಬೇಕಾದಷ್ಟು ಪಟ್ಟಿಗಳಿವೆ. ಹೇಳುತ್ತಾ ಹೋದ್ದರೆ ಅದು ಮುಗಿಯದ ಕಥೆ ಆಗುತ್ತದೆ. ಸುಮ್ಮನೆ ನಮ್ಮ ಕುಟುಂಬದ ತಂಟೆಗೆ ಬರುವುದು ಬೇಡ ಎಂದು ಬಿಜೆಪಿಗೆ ಎಚ್ಚರಿಕೆ ನೀಡಿದರು.

ಭಾರತೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಬೇಕಾದರೂ ರಾಜಕಾರಣಕ್ಕೆ ಬರಬಹುದು. ಎಲ್ಲ ವೃತ್ತಿಗಳಲ್ಲೂ ಇರುವಂತೆ ರಾಜಕೀಯದಲ್ಲೂ ಕುಟುಂಬ ಸದಸ್ಯರು ರಾಜಕಾರಣಕ್ಕೆ ಬರುವುದು ಹೊಸತೇನಲ್ಲ. ಚಿತ್ರರಂಗ, ವೈದ್ಯ ಕ್ಷೇತ್ರದಲ್ಲೂ ಇದೆಯಲ್ಲವೇ? ಕಾಂಗ್ರೆಸ್, ಬಿಜೆಪಿ ಸೇರಿದಂತೆ ಎಲ್ಲ ಪಕ್ಷಗಳಲ್ಲೂ ಕುಟುಂಬ ರಾಜಕಾರಣ ಇದೆ. ಬಿಜೆಪಿ ನಿರ್ದಿಷ್ಟವಾಗಿ ನಮ್ಮ ಕುಟುಂಬ ಮತ್ತು ನಮ್ಮ ಪಕ್ಷದ ಬಗ್ಗೆ ಮಾತನಾಡುವುದು ಏಕೆ? ಸುಖಾಸುಮ್ಮನೆ ಟ್ವೀಟ್ ಮಾಡುವುದು, ಮಾತನಾಡುವುದನ್ನು ನಿಲ್ಲಿಸದಿದ್ದರೆ ನಾವು ಕೂಡ ಅದೇ ಧಾಟಿಯಲ್ಲಿ ಉತ್ತರ ಕೊಡಬೇಕಾಗುತ್ತದೆ ಎಂದು ಕುಮಾರಸ್ವಾಮಿ ಅವರು ಎಚ್ಚರಿಕೆ ನೀಡಿದರು.

ದೇವೇಗೌಡರು ಸುದೀರ್ಘ ಅವಧಿಯಲ್ಲಿ ರಾಷ್ಟ್ರೀಯ ಅಧ್ಯಕ್ಷರಾಗಿದ್ದಾರೆ ನಿಜ. ನಾಳೆ ಯಾರಾದರೂ ಬಂದರೂ ಅವರಿಗೆ ಆ ಪದವಿ ಬಿಟ್ಟುಕೊಡಲು ಅವರು ಸಿದ್ಧರಿದ್ದಾರೆ. ನಮ್ಮದು ಪ್ರಾದೇಶಿಕ ಪಕ್ಷ. ನಮ್ಮ ವೈಯಕ್ತಿಕ ವರ್ಚಸ್ಸಿನಲ್ಲೇ ಪಕ್ಷ ನಡೆಯಬೇಕು ಎಂದ ಅವರು; ದೇವೇಗೌಡರ ಕಾಲದಲ್ಲಿ ಬಿಟ್ ಕಾಯಿನ್ ಹಗರಣ ನಡೆದಿತ್ತಾ? ಹೋಗಲಿ, ನಾನು ಸಿಎಂ ಆಗಿದ್ದಾಗ ಯಾವುದಾದರೂ ಹಗರಣ ಆಗಿತ್ತಾ? ಅದ್ಯಾವುದೋ 150 ಕೋಟಿ ರೂಪಾಯಿ ಆರೋಪ ಹೊರಿಸಿದ್ದರು. ಆ ಸುಳ್ಳು ಆರೋಪ ಎಲ್ಲಿಗೆ ಹೋಯಿತು ಎನ್ನುವುದು ರಾಜ್ಯದ ಜನರಿಗೆ ಗೊತ್ತಿದೆ ಎಂದು ಬಿಜೆಪಿಗೆ ಅವರು ಟಾಂಗ್ ಕೊಟ್ಟರು.

ನಮ್ಮ ವೆಬ್ ತಾಣದಲ್ಲಿ ರಾಜ್ಯಾಧ್ಯಕ್ಷರ ಭಾವಚಿತ್ರ ಇಲ್ಲ ಎನ್ನುವ ಸುಳ್ಳನ್ನು ಬಿಜೆಪಿ ಹೇಳಿದೆ. ಮೊದಲು ನನ್ನ ಮತ್ತು ದೇವೇಗೌಡರ ಚಿತ್ರಗಳಿದ್ದು, ಹೆ ಚ್.ಕೆ. ಕುಮಾರಸ್ವಾಮಿ ಅವರ ಚಿತ್ರವೂ ಇದೆ. ಬಿಜೆಪಿ ವೆಬ್ ತಾಣಗಳಲ್ಲಿ ಮೊದಲು ಮೋದಿ ಅವರ ಚಿತ್ರ ಬಂದು ನಂತರ ಇತರೆ ನಾಯಕರ ಚಿತ್ರಗಳನ್ನು ಹಾಕಿಲ್ಲವೇ? ಬೇರೆಯವರ ತಟ್ಟೆಯತ್ತ ಬಿಜೆಪಿ ಕಣ್ಣೇಕೆ ಎಂದು ಅವರು ಪ್ರಶ್ನಿಸಿದರು.

ಬಿಜೆಪಿ ರಾಜಕೀಯ ಹಾಳು ಮಾಡಿದೆ

ಬಿಜೆಪಿಯವರು ಎಂಥಾ ಹೀನ ರಾಜಕೀಯ ಮಾಡುತ್ತಿದ್ದಾರೆ ಎನ್ನುವುದು ದೇಶಕ್ಕೆ ಗೊತ್ತಿದೆ. ಶಾಸಕರನ್ನು ಖರೀದಿ ಮಾಡಿ ಚುನಾವಣೆ ಮತ್ತು ರಾಜಕೀಯ ವ್ಯವಸ್ಥೆಯನ್ನು ಹದಗೆಡಿಸುತ್ತಿದ್ದಾರೆ. ಇವತ್ತು ಆಪರೇಷನ್ ಕಮಲ ಇಡೀ ದೇಶವೆಲ್ಲಾ ಹಬ್ಬುತ್ತಿದೆ. ಇದು ಒಳ್ಳೆಯ ರಾಜಕಾರಣವಾ? ಎಂದು ಮಾಜಿ ಮುಖ್ಯಮಂತ್ರಿಗಳು ಪ್ರಶ್ನಿಸಿದರು.

ಸ್ಕೂಟರ್ ಗೆ ಪೆಟ್ರೋಲ್ ಹಾಕಿಸಲು ದುಡ್ಡು ಇಲ್ಲದವರು ಈಗ ಹೇಗಿದ್ದಾರೆ ಗೊತ್ತಾ?

ನಾವು ಯಾರ ತಲೆ ಹೊಡೆದು ಹಣ ಸಂಪಾದಿಸಿಲ್ಲ. ಪಕ್ಷ ಸಂಘಟಿಸಲು ಸಾಲಸೋಲ ಮಾಡಿ ಒದ್ದಾಡುತ್ತಿದ್ದೇವೆ. ಎಲ್ಲವನ್ನೂ ನಾವೇ ಮಾಡಬೇಕು ಎಂದ ಅವರು, ಬಿಜೆಪಿಯವರು ಈ ಹಿಂದೆ ಯಾವ ರೀತಿ ಇದ್ದರು? ಈಗ ಹೇಗಿದ್ದಾರೆ ಎಂಬುದು ಗೊತ್ತಿದೆ. ಸ್ಕೂಟರ್ ಗೆ ಪೆಟ್ರೋಲ್ ಹಾಕಿಸಲು ದುಡ್ಡು ಇಲ್ಲದೆ ಇದ್ದವರು ಈಗ ಹೇಗಿದ್ದಾರೆ ಎನ್ನುವುದೂ ಗೊತ್ತಿದೆ ಎಂದು ಬಿಜೆಪಿ ವಿರುದ್ಧ ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು

ನನಗೆ ನೋಟಿಸ್ ಕೊಟ್ಟು ಏನ್ಮಾಡ್ತಾರೆ?

ಬಿಟ್ ಕಾಯಿನ್ ಮತ್ತು ಜನಧನ್ ಖಾತೆಗಳ ಹಗರಣಗಳ ಬಗ್ಗೆ ಹೇಳಿಕೆ ನೀಡಿರುವ ಕುಮಾರಸ್ವಾಮಿ ಅವರಿಗೆ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿ ತನಿಖೆಗೆ ಸಹಕಾರ ಪಡೆಯಲಿ ಎಂದು ಸಂಸದ ಪ್ರತಾಪ್ ಸಿಂಹ ನೀಡಿರುವ ಹೇಳಿಕೆಯ ಬಗ್ಗೆ ತೀಕ್ಷ್ಣವಾಗಿ ಪ್ರತಿಕಿಯೆ ನೀಡಿದರು ಮಾಜಿ ಮುಖ್ಯಮಂತ್ರಿಗಳು.

ಜನಧನ್ ಖಾತೆಯಿಂದ ಹಣ ಎತ್ತಿರುವ ವಿಚಾರವನ್ನು ನಾನು ಹೇಳಿದ್ದೇನೆ. ಆ ಮಾಹಿತಿ ಎಲ್ಲ ಕಡೆ ವ್ಯಾಪಕವಾಗಿ ಚರ್ಚೆ ಆಗುತ್ತಿದೆ. ಈ ಬಗ್ಗೆ ತನಿಖೆ ನಡೆಸಿ ಜನರಿಗೆ ಸತ್ಯ ತಿಳಿಸಬೇಕಾದ ಕರ್ತವ್ಯ ಸರಕಾರದ್ದು. ಅವರು ನನಗೆ ನೋಟಿಸ್ ಕೊಟ್ಟು ಏನು ಮಾಡುತ್ತಾರೆ? ಎರಡು ಬಾರಿ ಸಂಸದರಾದವರು ಸ್ವಲ್ಪ ಜವಾಬ್ದಾರಿಯಿಂದ ಮಾತನಾಡಬೇಕು ಎಂದು ಕುಮಾರಸ್ವಾಮಿ ಅವರು ಹೇಳಿದರು.

ದೇಶದಲ್ಲಿ ನಡೆದ ದೊಡ್ಡ ದೊಡ್ಡ ಹಗರಣಗಳು ಏನಾದವು? ಯಾವ ಹಗರಣವನ್ನಾದರೂ ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗಿದ್ದಾರಾ? ಇಲ್ಲ, ಸಣ್ಣಪುಟ್ಟದವರಿಗೆ ಮಾತ್ರ ಶಿಕ್ಷೆ ಕೊಡಿಸಿದ್ದಾರೆ ಅಷ್ಟೇ ಎಂದು ಅವರು ಹೇಳಿದರು.

ಕಾಂಗ್ರೆಸ್ ದಾಖಲೆ ಸಮೇತ ಹೇಳಿಕೆ ಹೋರಾಡಲಿ

ಬಿಟ್ ಕಾಯಿನ್ ಹಗರಣದ ಬಗ್ಗೆ ಮಾತನಾಡುತ್ತಿರುವ ಕಾಂಗ್ರೆಸ್ ಪಕ್ಷ ದಾಖಲೆಗಳೊಂದಿಗೆ ಸ್ಪಷ್ಟವಾದ ಹೋರಾಟ ಮಾಡಬೇಕು. ವಿನಾಕಾರಣ ಮಾತಾನಾಡಿದರೆ ಪ್ರಯೋಜನ ಇಲ್ಲ. ಅವರು ಯಾರನ್ನು ಬೇಕಾದರೂ ಮುಳುಗಿಸುತ್ತಾರೆ. ಯಾರನ್ನು ಬೇಕಾದರೂ ತೇಲಿಸುತ್ತಾರೆ ಎಂದು ಪ್ರಶ್ನೆಯೊಂದಕ್ಕೆ ಕುಮಾರಸ್ವಾಮಿ ಅವರು ಉತ್ತರಿಸಿದರು.

ಪರಿಷತ್ ಅಭ್ಯರ್ಥಿಗಳು ಅಂತಿಮವಾಗಿಲ್ಲ

ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಗೆ ನಡೆಯುತ್ತಿರುವ ಚುನಾವಣೆಗೆ ನಮ್ಮ ಪಕ್ಷದಿಂದ ಅಭ್ಯರ್ಥಿಗಳನ್ನು ಇನ್ನು ಅಂತಿಮಗೊಳಿಸಿಲ್ಲ. ಪಕ್ಷ ಗೆಲ್ಲುವ ಅವಕಾಶ ಇರುವ 6-8 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಹಾಕುವ ಬಗ್ಗೆ ಚರ್ಚಿಸಲಾಗುತ್ತಿದೆ. ಈಗಾಗಲೇ ಮಂಡ್ಯ, ಚಿಕ್ಕಾಬಳ್ಳಾಪುರ, ಕೋಲಾರ, ತುಮಕೂರು ಕ್ಷೇತ್ರಗಳ ಬಗ್ಗೆ ನಾನೇ ಚರ್ಚೆ ನಡೆಸಿದ್ದೇನೆ. ಆದಷ್ಟು ಬೇಗ ಹೆಸರುಗಳನ್ನು ಅಂತಿಮಗೊಳಿಸುತ್ತೇವೆ ಎಂದು ಅವರು ಹೇಳಿದರು.

ಹಾಸನದಲ್ಲಿ ಅಭ್ಯರ್ಥಿ ಯಾರಾಗುತ್ತಾರೆ ಎನ್ನುವ ವಿಚಾರ ಇನ್ನೂ ನನ್ನವರೆಗೂ ಬಂದಿಲ್ಲ. ಜಿಲ್ಲೆಯಲ್ಲಿ ನಮ್ಮ ಪಕ್ಷದ ಆರು ಶಾಸಕರು ಇದ್ದು, ಇತ್ತೀಚೆಗೆ ಎಲ್ಲರೂ ಸೇರಿ ಸಭೆ ನಡೆಸಿದ್ದಾರೆ. ಆದಷ್ಟು ಬೇಗ ಅಲ್ಲಿಯೂ ಅಭ್ಯರ್ಥಿ ಹೆಸರನ್ನು ಅಂತಿಮಗೊಳಿಸುತ್ತೇವೆ ಎಂದರು ಅವರು.

ಮಾಧ್ಯಮಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ರಮೇಶ್ ಗೌಡ ಅವರು ಇದ್ದರು.

ಬಿಜೆಪಿ ಅವರು ಸುಮ್ಮನೆ ಇದ್ದರೆ ಒಳ್ಳೆಯದು. ಇಲ್ಲವಾದರೆ ಅವರ ಧಾಟಿಯಲ್ಲೇ ನಾವೂ ಉತ್ತರ ಕೊಡಬೇಕಾಗುತ್ತದೆ. ಜನರ ವಿಷಯಗಳ ಬಗ್ಗೆ ಮಾತನಾಡುವುದನ್ನು ಬಿಟ್ಟು ಕ್ಷುಲ್ಲಕ ವಿಚಾರಗಳ ಬಗ್ಗೆ ಆ ಪಕ್ಷ ಮಾತನಾಡುತ್ತಿದೆ.

ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ
Tags: Bengalurubjpcknewsnowfamily politicshd kumaraswamyjanatasangamajdsnews
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಅಪಾಯದಲ್ಲಿದೆ ಗುಡಿಬಂಡೆ ಅಮಾನಿಭೈರ ಸಾಗರ ಕೆರೆ ಏರಿ

ಅಪಾಯದಲ್ಲಿದೆ ಗುಡಿಬಂಡೆ ಅಮಾನಿಭೈರ ಸಾಗರ ಕೆರೆ ಏರಿ

Leave a Reply Cancel reply

Your email address will not be published. Required fields are marked *

Recommended

11 ಸಲ ಕಾಲ್‌ ಮಾಡಿದ  ಮಾಜಿ ಸಿಎಂ! ಜೆಡಿಎಸ್‌ ಶಾಸಕರ ಬ್ರೈನ್‌ವಾಶ್!!

11 ಸಲ ಕಾಲ್‌ ಮಾಡಿದ ಮಾಜಿ ಸಿಎಂ! ಜೆಡಿಎಸ್‌ ಶಾಸಕರ ಬ್ರೈನ್‌ವಾಶ್!!

4 years ago
ಮಕ್ಕಳಿಗೆ ಪರೀಕ್ಷೆ ಟೆನ್ಷನ್;‌ ಬೆಲೆ ಏರಿಕೆ‌ ಬಿಸಿ

ಮಕ್ಕಳಿಗೆ ಪರೀಕ್ಷೆ ಟೆನ್ಷನ್;‌ ಬೆಲೆ ಏರಿಕೆ‌ ಬಿಸಿ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ