• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಕೋವಿಡ್‌ ನಂತರ ಮಳೆ; ತತ್ತರಿಸಿದ ಶಿಕ್ಷಣ ವ್ಯವಸ್ಥೆ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎರಡು ದಿನ ಶಾಲೆ-ಕಾಲೇಜುಗಳಿಗೆ ರಜೆ

cknewsnow desk by cknewsnow desk
November 18, 2021
in CHIKKABALLAPUR, EDITORS'S PICKS, STATE
Reading Time: 3 mins read
0
ಕೋವಿಡ್‌ ನಂತರ ಮಳೆ; ತತ್ತರಿಸಿದ ಶಿಕ್ಷಣ ವ್ಯವಸ್ಥೆ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎರಡು ದಿನ ಶಾಲೆ-ಕಾಲೇಜುಗಳಿಗೆ ರಜೆ

ಪಸುಪುಲೋಡು ಗ್ರಾಮದ ಸರಕಾರಿ ಶಾಲೆಯ ದುಃಸ್ಥಿತಿ.

1.3k
VIEWS
FacebookTwitterWhatsuplinkedinEmail

ಸೋರುತಿವೆ ಗುಡಿಬಂಡೆ ಸರಕಾರಿ ಸ್ಕೂಲುಗಳು

  • ಮಕ್ಕಳನ್ನು ಶಾಲೆಗಳಿಗೆ ಕಳಿಸಲು ಪೋಷಕರ ಹಿಂದೇಟು
  • ಚಿಕ್ಕಬಳ್ಳಾಪುರ-ಕೋಲಾರದಲ್ಲಿ ಆರೆಂಜ್ ಅಲರ್ಟ್
  • ಗುಡಿಬಂಡೆ ಪಟ್ಟಣಕ್ಕೆ ಸಂಪರ್ಕ ನೀಡುವ ಎಲ್ಲಾ ಮಾರ್ಗಗಳು ಜಲಾವೃತ

By GS Bharath Gudibande

ಗುಡಿಬಂಡೆ: ನಿರಂತರವಾಗಿ ಅನಾವೃಷ್ಟಿಯಿಂದ ತತ್ತರಿಸುತ್ತಿದ್ದ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕು ಈಗ ಅತಿವೃಷ್ಟಿಯಿಂದ ತತ್ತರಿಸುತ್ತಿದ್ದು, ನಿರಂತರ ಮಳೆ ಕಾರಣಕ್ಕೆ ಈ ಭಾಗದ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ.

ಮಳೆ ಕೃಷಿಯ ಮೇಲೆ ಮಾರಕ ಪರಿಣಾಮ ಬೀರಿ ರೈತ ಕಂಗೆಟ್ಟಿರುವುದು ಒಂದೆಡೆಯಾದರೆ, ಕೋವಿಡ್‌ʼನಿಂದ ಎರಡು ವರ್ಷ ಕಷ್ಟಕ್ಕೆ ಸಿಲುಕಿದ್ದ ಶೈಕ್ಷಣಿಕ ವ್ಯವಸ್ಥೆ ಈಗ ವರುಣ ತಾಂಡವದಿಂದ ಪುನಾ ತತ್ತರಿಸಿದೆ. ಮಳೆ ಅಬ್ಬರದಿಂದ ಪೋಷಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು, ಉಪನ್ಯಾಸಕರು ಸೇರಿದಂತೆ ಎಲ್ಲರೂ ಸಮಸ್ಯೆಗೆ ಸಿಲುಕಿಕೊಂಡಿದ್ದಾರೆ.

ಇದೇ ವೇಳೆ ಹವಾಮಾನ ಇಲಾಖೆ ನೀಡಿರುವ ಮಾಹಿತಿಯಂತೆ ಇನ್ನೂ ಎರಡು-ಮೂರು ದಿನ ಭಾರೀ ಮಳೆ ಆಗುವ ಮುನ್ಸೂಚನೆ ಇದೆ. ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಸೇರಿದಂತೆ  ಹನ್ನೊಂದು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್‌ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಎರಡು ದಿನಗಳ ಕಾಲ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ.

Source IMD:(1/2)
Orange Alert: Bengaluru Rural, Bengaluru, Chikkaballapura, Chikkamagaluru, Hassan, Kodagu, Kolar, Mandya, Ramanagara, Shimoga & Tumkuru dists on 18.11.21 at 1300hrs valid till 8:30 AM of 19.11.21.
Orange alert – Isolated Very heavy rains (115.6 to 204.4 mm)

— Karnataka State Natural Disaster Monitoring Centre (@KarnatakaSNDMC) November 18, 2021

ಆದರೆ; ರಜೆ ಘೋಷಣೆಗೂ ಮುನ್ನವೇ ಪೋಷಕರು ತೀವ್ರ ಆತಂಕಕ್ಕೆ ಗುರಿಯಾಗಿದ್ದರು. ಎಲ್ಲ ಹಳ್ಳ ಕೊಳ್ಳಗಳು ಉಕ್ಕಿ ಹರಿಯುತ್ತಿದ್ದು, ಕೆರೆಗಳ ಕೋಡಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ತಾಲೂಕಿನಾದ್ಯಂತ ವಿದ್ಯಾರ್ಥಿಗಳು ಶಾಲೆ-ಕಾಲೇಜುಗಳಿಗೆ ಭಯದಿಂದ ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಆ ಆತಂಕದ ನಡುವೆಯೇ ಜಿಲ್ಲಾಡಳಿತದಿಂದ ರಜೆಯ ಘೋಷಣೆ ಆಗಿದೆ.

ತಾಲೂಕಿನಲ್ಲಿ 6,699 ವಿದ್ಯಾರ್ಥಿಗಳು

ಗುಡಿಬಂಡೆ ಪಟ್ಟಣ ಹಾಗೂ ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ಒಟ್ಟು 120 ಶಾಲೆಗಳಿವೆ. 64 ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, 28 ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, 1 ಶಾಲೆ 6 ರಿಂದ 8ನೇ ತರಗತಿ, 11 ಪ್ರಾಥಮಿಕ ಶಾಲೆ, 1 ಶಾಲೆ 8 ರಿಂದ 10ನೇ ತರಗತಿ, 1 ಸರಕಾರಿ ಅನುದಾನಿತ ಶಾಲೆ, ಹಾಗೂ ಅನುದಾನ ರಹಿತ 12 ಶಾಲೆಗಳು ಸೇರಿ ಒಟ್ಟು 120 ಶಾಲೆಗಳಿವೆ. ಇವುಗಳಲ್ಲಿ 13,00 ವಿದ್ಯಾರ್ಥಿಗಳು ಪಟ್ಟಣದಲ್ಲಿ ಪ್ರತಿನಿತ್ಯ ಶಾಲೆಗಳಿಗೆ ಹೋಗುತ್ತಿದ್ದಾರೆ. ಇನ್ನು; ಗ್ರಾಮೀಣ ಪ್ರದೇಶದಲ್ಲಿ ಒಟ್ಟು 5,399 ವಿದ್ಯಾರ್ಥಿಗಳು ಮಳೆಯಲ್ಲೇ ಶಾಲೆಗಳಿಗೆ ಹೋಗಬೇಕಾದ ಅನಿವಾರ್ಯ ಪರಿಸ್ಥಿತಿ ಇತ್ತು. ಬಹುತೇಕ ಭಾಗಗಳಲ್ಲಿ ಬಸ್‌ ಸೌಲಭ್ಯ ಇಲ್ಲದಿದ್ದ ಕಾರಣ ಮಕ್ಕಳು ನಡೆದೇ ಹೋಗಬೇಕಾಗಿತ್ತು. ಈ ಹಿನ್ನೆಲೆಯಲ್ಲಿ ಪೋಷಕರು ತಮ್ಮ ಮಕ್ಕಳನ್ನು ಶಾಲೆಗಳಿಗೆ ಕಳಿಸಲು ಹಿಂಜರಿಯುತ್ತಿದ್ದರು.

ಶಾಲೆಗಳಿಗೆ ರಜೆ ಘೋಷಣೆ

ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಎಡೆಬಿಡದೆ ಮಳೆಯಾಗುತ್ತಿದೆ. ಬಹುತೇಕ ಎಲ್ಲಾ ಕಡೆ ಕೆರೆ ಕುಂಟೆ, ಕಾಲುವೆಗಳು ತುಂಬಿ ಹರಿಯುತ್ತಿವೆ. ಮತ್ತೊಂದೆಡೆ ಮನೆಗಳು ಬಿದ್ದು ಕೆಲವರಿಗೆ ಪ್ರಾಣಾಪಾಯವಾಗಿದೆ. ತಾಲೂಕಿನಲ್ಲಿ ಬಹುತೇಕ ಶಾಲೆಗಳು ಹಳೆಯ ಹಾಗೂ ಕಳಪೆ ಕಾಮಗಾರಿಯ ಕಟ್ಟಡಗಳಾಗಿದ್ದು, ಅವು ಅಪಾಯದ ಸ್ಥಿತಿಯಲ್ಲಿವೆ. ಅನಾಹುತ ಸಂಭವಿಸುವ ಮೊದಲು ಮುನ್ನೆಚ್ಚರಿಕೆ ಕ್ರಮ ವಹಿಸಿರುವ ಜಿಲ್ಲಾಧಿಕಾರಿಗಳು ನವೆಂಬರ್‌ 19 ಮತ್ತು 20ರಂದು ರಜೆ ಘೋಷಿಸಿದ್ದಾರೆ.

ಪದವಿ ಕಾಲೇಜು ವಿದ್ಯಾರ್ಥಿಗಳಿಗಿಲ್ಲ ರಜೆ

ಜಿಲ್ಲಾಡಳಿತವು ಸರಕಾರಿ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದು, ಸರಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ರಜೆ ಘೋಷಣೆ ಮಾಡಿಲ್ಲ. ಈ ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಕಾಲೇಜಿನ ಸಿಬ್ಬಂದಿ ಮಳೆಯಲ್ಲಿ ಕೆಲಸಕ್ಕೆ ಹಾಜರಾಗಲು  ಪರದಾಡುತ್ತಿದ್ದಾರೆ. ಹಾಗಾಗಿ ಈ ಕಾಲೇಜುಗಳಿಗೂ ರಜೆ ಘೋಷಣೆ ಮಾಡಬೇಕೆಂದು ವಿದ್ಯಾರ್ಥಿಗಳು ಒತ್ತಾಯಿಸುತ್ತಿದ್ದಾರೆ.

ಶಿಥಿಲ ಸ್ಥಿತಿಯಲ್ಲಿ ಶಾಲಾ ಕಟ್ಟಡಗಳು

ಬಹುತೇಕ ಸರಕಾರಿ ಶಾಲೆಗಳ ಕಟ್ಟಡಗಳು ಅಪಾಯಕಾರಿ ಸ್ಥಿತಿಯಲ್ಲಿರುವುದನ್ನು ಸಿಕೆನ್ಯೂಸ್‌ ನೌ ಪತ್ತೆ ಹಚ್ಚಿದೆ. ಗುಡಿಬಂಡೆ ಪಟ್ಟಣಕ್ಕಿಂತ ಗ್ರಾಮೀನ ಪ್ರದೇಶದಲ್ಲಿ ಶಾಲೆ ಕಟ್ಟಡಗಳು ಸೋರುತ್ತಿವೆ ಇಲ್ಲವೇ ಕುಸಿದು ಬೀಳುವ ಸ್ಥಿತಿಯಲ್ಲಿವೆ.

ಜಂಗಾಲಹಳ್ಳಿ ಶಾಲೆ ಚಿತ್ರಗಳು.

ತಾಲೂಕಿನ ಜಂಗಾಲಹಳ್ಳಿ ಗ್ರಾಮದ ಸರಕಾರಿ ಶಾಲೆ ಸಂಪೂರ್ಣವಾಗಿ ಸೋರುತ್ತಿದೆ. ಮಳೆಯಿಂದ ತರಗತಿ ಕೊಠಡಿಗಳಲ್ಲಿ ನೀರು ತುಂಬಿದೆ. ಕಿಟಕಿ ಬಾಗಿಲುಗಳು ಶಿಥಿಲವಾಗಿದ್ದು, ಮಳೆಯಿಂದ ಕಟ್ಟಡಕ್ಕೆ ರಕ್ಷಣೆ ಇಲ್ಲ. ಶಿಕ್ಷಣ ಇಲಾಖೆಯಿಂದ ಶಾಲಾ ಸಮರ್ಪಕ ನಿರ್ವಹಣೆಯೂ ಇಲ್ಲದಿರುವುದು ಹಾಗೂ ಕಳಪೆ ಕಾಮಗಾರಿ ಎದ್ದು ಕಾಣುತ್ತಿದೆ.

ಹಾಗೆಯೇ; ಪಸುಪುಲೋಡು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮೇಲ್ಭಾಗದ ಚಾವಣಿ ಕಿತ್ತು ಕೆಳಗೆ ಬಿದ್ದಿದೆ. ಅದೃಷ್ಟವಶಾತ್‌ ತರಗತಿಗಳು ನಡೆಯದಿದ್ದ ಸಮಯದಲ್ಲಿ ಚಾವಣಿ ಕುಸಿದು ಬಿದ್ದಿದೆ. ಒಂದು ವೇಳೆ ತರಗತಿ ನಡೆಯುತ್ತಿದ್ದ ವೇಳೆ ಈ ಘಟನೆ ನಡೆದಿದ್ದರೆ ಪ್ರಾಣಾಪಾಯ ತಪ್ಪುತ್ತಿರಲಿಲ್ಲ. ಶಿಕ್ಷಕರ ಮುನ್ನೆಚ್ಚರಿಕೆಯಿಂದ ಅನಾಹುತ ತಪ್ಪಿದೆ.

ಪಸುಪುಲೋಡು ಸರಕಾರಿ ಶಾಲೆಯ ಚಿತ್ರಗಳು.

ಒಂದೆಡೆ ದೇಶದಲ್ಲಿ ಎಲ್ಲರಿಗಿಂತ ಮೊದಲೇ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿ ಮಾಡಿ ಸುದ್ದಿ ಮಾಡಲು ತವಕಿಸುತ್ತಿರುವ ಕರ್ನಾಟಕದಲ್ಲಿ ಗುಡಿಬಂಡೆ ತಾಲೂಕಿನ ಸರಕಾರಿ ಶಾಲೆಗಳ ದುಃಸ್ಥಿತಿ ನಾಗರೀಕ ಸಮಾಜ ತಲೆತಗ್ಗಿಸುವಂತಿದೆ.

ಮಳೆಯಲ್ಲೇ ಮಕ್ಕಳು ಶಾಲೆಯತ್ತ..

ಮತ್ತೆ ಮಳೆ ಯಾಕೆ?

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣಕ್ಕೆ ಮತ್ತೆ ಮಳೆ ಅಬ್ಬರಿಸುತ್ತಿದೆ. ತಮಿಳುನಾಡು, ಆಂಧ್ರ, ತೆಲಂಗಾಣದಲ್ಲಿ ಭಾರೀ ಮಳೆ ಆಗುತ್ತಿದ್ದು, ಕರ್ನಾಟಕದ ಹನ್ನೊಂದು ಜಿಲ್ಲೆಗಳಲ್ಲಿ ಮುಂದಿನ ಇಪ್ಪತ್ತನಾಲ್ಕು ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈಗಾಗಲೇ 9 ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಹಾಗೂ 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಆರೆಂಜ್‌ ಅಲರ್ಟ್‌ ನೀಡಿರುವ ಜಿಲ್ಲೆಗಳಲ್ಲಿ ಎಡೆಬಿಡದೇ ಧಾರಾಕಾರ ಮಳೆಯಾಗಲಿದೆ. ಯೆಲ್ಲೋ ಅಲರ್ಟ್‌ ಜಿಲ್ಲೆಗಳಲ್ಲಿ ಹೆಚ್ಚು ಮಳೆ ಸುರಿಯಲಿದೆ.

Tags: bay of Bengalchikkaballapura districtcycloneheavy rainkarnatakakolarleave declare for schools
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಬೆಂಗಳೂರು ಬಿಟಿಎಸ್‌ʼನಲ್ಲಿ ಚೇತನ್ ಭಗತ್ ಕಚಗುಳಿ

ಬೆಂಗಳೂರು ಬಿಟಿಎಸ್‌ʼನಲ್ಲಿ ಚೇತನ್ ಭಗತ್ ಕಚಗುಳಿ

Leave a Reply Cancel reply

Your email address will not be published. Required fields are marked *

Recommended

ಜಿಲ್ಲಾ ಉಸ್ತುವಾರಿ ಸಚಿವ ಡಾ.ಸುಧಾಕರ್‌ ಹುಟ್ಟೂರು ಪೆರೇಸಂದ್ರಕ್ಕೆ ಕೂಗಳತೆ ದೂರದ ಬಿಜೆಪಿ ಲೀಡರ್‌ ಮಾಲೀಕತ್ವದ ಕ್ರಷರ್‌ನಲ್ಲಿ ಭಾರೀ ಸ್ಫೋಟ; 6 ಜನ ಬಲಿ, ದೇಹಗಳು ಛಿದ್ರ

ಸ್ಫೋಟದ ಆರೋಪಿಗಳನ್ನು ರಕ್ಷಿಸುತ್ತಿಲ್ಲ, ಅನಾಹುತದಲ್ಲಿ ರಾಜಕಾರಣ ಸರಿಯಲ್ಲ; ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಕ್ರಮಕ್ಕೆ ಅವಕಾಶವೇ ಇಲ್ಲ: ಸಚಿವ ಡಾ.ಸುಧಾಕರ್‌

5 years ago
ನಿಜ, ಸಂಚಾರಿ ವಿಜಯ್‌ ಪಾತ್ರಗಳಲ್ಲಿ ಜೀವಿಸಿದ್ದರು; ಇನ್ನು ಮುಂದೆ ನಮ್ಮ ಹೃದಯಗಳಲ್ಲಿ ನೆಲೆಸಲಿದ್ದಾರೆ..

ಅಂಗಾಂಗಗಳಿಗೆ ಹಾಹಾಕಾರ: ಸಾವಿನ ನಂತರವೂ ಬದುಕುವುದನ್ನು ಕಲಿಸಿದ ಸಂಚಾರಿ ವಿಜಯ್

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ