• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home POLITICS

BSY ಕರೆ ಮಾಡಿ ಬೆಂಬಲ ಕೇಳಿದ್ದಾರೆ; ಶೀಘ್ರವೇ ಪರಿಷತ್‌ ಚುನಾವಣೆ ಮೈತ್ರಿ ಬಗ್ಗೆ ನಿರ್ಧಾರ ಎಂದ HDK

P K Channakrishna by P K Channakrishna
December 5, 2021
in POLITICS, STATE
Reading Time: 1 min read
0
ಜೆಡಿಎಸ್‌ ಬಗ್ಗೆ ಕಾಂಗ್ರೆಸ್ ನಡೆಸಿದ ಅಪಪ್ರಚಾರಕ್ಕೆ ಫಲಿತಾಂಶವೇ ಉತ್ತರ ನೀಡಿದೆ: ಹೆಚ್‌ಡಿಕೆ
977
VIEWS
FacebookTwitterWhatsuplinkedinEmail

  • ಪ್ರತೀ ತಾಲೂಕಿಗೆ ಜೆಡಿಎಸ್‌ ವೀಕ್ಷಕರ ತಂಡ; ಪಕ್ಷದ ಇತಿಹಾಸದಲ್ಲೇ ಮೊದಲು
  • ಜಿ.ಟಿ.ದೇವೇಗೌಡರ ಬಗ್ಗೆ ಚರ್ಚೆ ಅನಗತ್ಯ ಎಂದ ದಳಪತಿ

ಮೈಸೂರು: ಪ್ರಸಕ್ತ ವಿಧಾನ ಪರಿಷತ್‌ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವ ಅಥವಾ ಯಾವುದೇ ಪಕ್ಷಕ್ಕೆ ಬೆಂಬಲ ನೀಡುವ ಬಗ್ಗೆ ಈವರೆಗೆ ಅಧಿಕೃತವಾಗಿ ಚರ್ಚೆ ನಡೆದಿಲ್ಲ. ಆದರೆ, ಈ ಬಗ್ಗೆ ಅತಿ ಶೀಘ್ರವೇ, ಅಂದರೆ ಮಂಗಳವಾರದೊಳಗೆ ನಿರ್ಧಾರ ಕೈಗೊಳ್ಳುವುದಾಗಿ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು.

ಮೈಸೂರಿನಲ್ಲಿಂದು ಮಾಧ್ಯಮಗಳ ಜತೆ ಮಾತನಾಡಿದ ಅವರು; “ಮೈತ್ರಿ ಬಗ್ಗೆ ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಅವರು ಹೊರಗೆ ಮುಕ್ತವಾಗಿಯೇ ಮಾತನಾಡಿದ್ದಾರೆ. ಅಲ್ಲದೆ, ಸ್ವತಃ ಅವರು ನನಗೆ ಮೊಬೈಲ್‌ ಕರೆ ಮಾಡಿ ಬೆಂಬಲ ಕೇಳಿದ್ದಾರೆ. ಎಲ್ಲಿ ಜೆಡಿಎಸ್‌ ಅಭ್ಯರ್ಥಿಗಳಲ್ಲವೋ ಅಂಥ ಕ್ಷೇತ್ರಗಳಲ್ಲಿ ಜೆಡಿಎಸ್‌ ಮತದಾರರು ಬಿಜೆಪಿ ಅಭ್ಯರ್ಥಿಗಳಿಗೆ ಮತ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ” ಎಂದರು.

ಯಡಿಯೂರಪ್ಪ ಅವರ ಮಾತಿಗೆ ಪೂರಕವಾಗಿ ಮುಖ್ಯಮಂತ್ರಿಗಳು ಮತ್ತು ಬಿಜೆಪಿಯ ಇತರೆ ನಾಯಕರು ಮೈತ್ರಿ ಬಗ್ಗೆ ಕುಮಾರಸ್ವಾಮಿ ಮತ್ತು ಯಡಿಯೂರಪ್ಪ ತೀರ್ಮಾನ ಮಾಡಿಕೊಳ್ಳುತ್ತಾರೆ ಎಂದು ಹೇಳುತ್ತಿದ್ದಾರೆ. ಅದು ವೈಯಕ್ತಿಕ ಮಟ್ಟದಲ್ಲಿ ತೀರ್ಮಾನ ಆಗುತ್ತದೆ ಎಂದು ಆ ಪಕ್ಷದಲ್ಲಿ ನಂಬಿದ್ದಾರೆ. ಇದರ ಜತೆಗೆ, ಕಾಂಗ್ರೆಸ್‌ ನಾಯಕರು ನಮಗೆ ಜೆಡಿಎಸ್‌ ಬೆಂಬಲದ ಅಗತ್ಯವಿಲ್ಲ ಎಂದು ಮುಕ್ತವಾಗಿ ಹೇಳಿಬಿಟ್ಟಿದ್ದಾರೆ. ಈ ಎಲ್ಲ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಬೆಂಬಲದ ವಿಷಯವನ್ನು ಅಂತಿಮಗೊಳಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿಗಳು ತಿಳಿಸಿದರು.

ಅಲ್ಲದೆ; ಮೈತ್ರಿ ಬಗ್ಗೆ ಕುಮಾರಸ್ವಾಮಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಈಗಾಗಲೇ ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೇಗೌಡರು ತಿಳಿಸಿದ್ದಾರೆ. ಆದಷ್ಟು ಬೇಗ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಗುವುದು. ಇನ್ನು, ಕಾಂಗ್ರೆಸ್ ಪಕ್ಷ ನಮ್ಮ ಬೆಂಬಲ ಕೇಳಿಲ್ಲ. ಸ್ಥಳೀಯ, ರಾಜ್ಯಮಟ್ಟದಲ್ಲಿ ನಮ್ಮೊಂದಿಗೆ ಆ ಪಕ್ಷ ಗೌರವಯುತವಾಗಿ ನಡೆದುಕೊಂಡಿಲ್ಲ. ಇದೆಲ್ಲವನ್ನೂ ಸೂಕ್ಷ್ಮವಾಗಿ ಗಮನಿಸಿ ಸಣ್ಣಪುಟ್ಟ ಸಮಸ್ಯೆಗಳಿರುವ ಜಿಲ್ಲೆಗಳಲ್ಲಿ ಪರಿಸ್ಥಿತಿ ಸರಿಪಡಿಸಿ 2023ರ ಚುನಾವಣೆಗೆ ಪಕ್ಷಕ್ಕೆ ಅನುಕೂಲವಾಗುವ ರೀತಿಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ವಿವರಿಸಿದರು.

ಚುನಾವಣೆ ನಡೆಯುತ್ತಿರುವ ಅಷ್ಟೂ ಜಿಲ್ಲೆಗಳ ಪಕ್ಷದ ಪದಾಧಿಕಾರಿಗಳು, ಮುಖಂಡರ ಜತೆ ಮಾತುಕತೆ ನಡೆಸಿ ಪಕ್ಷಕ್ಕೆ ಅನುಕೂಲವಾಗುವ ಅಗುವ ರೀತಿಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು. ನಮ್ಮ ಗುರಿ 2023ರ ಚುನಾವಣೆಯಲ್ಲಿ 123 ಸ್ಥಾನ ಗೆಲ್ಲುವುದೇ ಆಗಿದೆ.

ರಾಜ್ಯವ್ಯಾಪಿ ನಮ್ಮ ಪಕ್ಷಕ್ಕೆ ನೆಲೆ ಇರುವುದರಿಂದಲೇ ಬಿಜೆಪಿ ನಾಯಕರು ನಮ್ಮ ಬೆಂಬಲ ಕೇಳಿದ್ದಾರೆ. ಆದರೆ, ನಮ್ಮ ಬೆಂಬಲ ಕೇಳದೇ ಇರುವ ಇನ್ನೊಂದು ಪಕ್ಷಕ್ಕೆ ನಾವೇ ಮುಂದೆ ಹೋಗಿ ಬೆಂಬಲ ನೀಡುವ ಪ್ರಶ್ನೆ ಉದ್ಭವ ಆಗುವುದಿಲ್ಲ. ಇವೆಲ್ಲ ಅಂಶಗಳನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಬೆಂಬಲದ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಸ್ಪಷ್ಟ ಮಾತುಗಳಲ್ಲಿ ತಿಳಿಸಿದರು.

ಪ್ರತೀ ತಾಲೂಕಿಗೆ ವೀಕ್ಷಕರ ನೇಮಕ

ಪರಿಷತ್‌ ಚುನಾವಣೆ ಎದುರಿಸಲು ಜೆಡಿಎಸ್‌ ವ್ಯವಸ್ಥಿತ ಸಿದ್ಧತೆ ಮಾಡಿಕೊಂಡಿದ್ದು, ಸ್ಪರ್ಧೆ ಮಾಡಿರುವ ಆರು ಕ್ಷೇತ್ರಗಳ ಪ್ರತೀ ತಾಲೂಕಿಗೂ ವೀಕ್ಷಕರ ತಂಡವನ್ನು ನೇಮಕ ಮಾಡಲಾಗಿದೆ. ಪಕ್ಷದ ಇತಿಹಾಸದಲ್ಲಿಯೇ ಮೊತ್ತ ಮೊದಲಿಗೆ ಇಂಥ ಕ್ರಮಕ್ಕೆ ಮುಂದಾಗಿದ್ದೇವೆ. ನಮ್ಮ ವೀಕ್ಷಕರ ತಂಡ ಆಯಾ ತಾಲೂಕುಗಳ ಸ್ಥಳೀಯ ಸಂಸ್ಥೆಗಳ ಎಲ್ಲ ಮತದಾರರನ್ನು ಖುದ್ದು ಭೇಟಿ ಮಾಡುತ್ತಿದೆ ಎಂದು ಅವರು ಹೇಳಿದರು.

ಪಕ್ಷ ಈ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿದೆ. ವೀಕ್ಷಕರ ತಂಡದ ಜತೆಗೆ ಆಯಾ ತಾಲೂಕಿನ ಪಕ್ಷದ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ವ್ಯವಸ್ಥಿತವಾಗಿ ಕೆಲಸ ಮಾಡುತ್ತಿದ್ದಾರೆ. ಅಷ್ಟೂ ವೀಕ್ಷಕರ ತಂಡಗಳನ್ನು ನೇರವಾಗಿ ನಾನೇ ಪರಿವೇಕ್ಷಣೆ ಮಾಡುತ್ತಿದ್ದೇನೆ, ಹಾಗೂ ಬಿಡದಿಯಲ್ಲಿ ನಡೆದ ʼಜನತಾಪರ್ವ 1.Oʼ, ಮತ್ತು ಪಕ್ಷದ ರಾಜ್ಯ ಕಚೇರಿಯಲ್ಲಿ ನಡೆದ ʼಜನತಾ ಸಂಗಮʼ ಕಾರ್ಯಾಗಾರಗಳಲ್ಲಿ ನೀಡಲಾದ ಸೂಚನೆ- ನಿರ್ದೇಶನಗಳನ್ನು ಅಳವಡಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ಪರಿಷತ್ ಚುನಾವಣೆ ಗೆಲ್ಲಲು ಪಕ್ಷ ರೂಪಿಸಿರುವ ಈ ವ್ಯವಸ್ಥೆಯನ್ನು ೨೦೨೩ರ ವಿಧಾನಸಭೆ ಚುನಾವಣೆಗೂ ರಾಜ್ಯವ್ಯಾಪಿ ಅನ್ವಯ ಮಾಡಲಾಗುವುದು. ಅದಕ್ಕೆ ಪೂರ್ವಭಾವಿಯಾಗಿ ಈಗ ಪ್ರಾಯೋಗಿಕವಾಗಿ ಅಳವಡಿಸಿಕೊಂಡಿದ್ದೇವೆ. ಈ ಮೂಲಕ ಮತದಾರರನ್ನು ನೇರವಾಗಿ ಪಕ್ಷ ತಲುಪುತ್ತಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಜಿ.ಟಿ.ದೇವೇಗೌಡರ ಬಗ್ಗೆ ಚರ್ಚೆ ಅನಗತ್ಯ

ಶಾಸಕ ಜಿ.ಟಿ.ದೇವೇಗೌಡರು ಜಿಡಿಎಸ್ ಮುಖಂಡರು, ಕಾರ್ಯಕರ್ತರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಧ್ಯಮ ಪ್ರರಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕುಮಾರಸ್ವಾಮಿ ಅವರು; “ನಿಮ್ಮ ಮಾತು ನಿಜ ಇರಬಹುದು. ಈಗಾಗಲೇ ಅವರು (ಜಿ.ಟಿ.ದೇವೇಗೌಡರು) ತಮ್ಮದೇ ಆದ ನಿರ್ಧಾರಗಳನ್ನು ಕೈಗೊಂಡಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಅವರು ಈ ಚುನಾವಣೆಯಲ್ಲೂ ತಮ್ಮದೇ ಲೆಕ್ಕಾಚಾರದಲ್ಲಿ ಇರಬಹುದು. ಅದರ ಬಗ್ಗೆ ಚರ್ಚೆ ಮಾಡುವುದು ಅನಗತ್ಯ. ಅವರೇನು ರಾಜಕೀಯ ಸನ್ಯಾಸಿಗಳಲ್ಲವಲ್ಲ. ಅವರ ಭವಿಷ್ಯವನ್ನೂ ಅವರು ಮುಂದಿನ ಚುನಾವಣೆ ಹೊತ್ತಿಗೆ ರೂಪಿಸಿಕೊಳ್ಳಬೇಕಲ್ಲವೇ? ಅವರು ಈಗ ಏನು ಮಾಡುತ್ತಾರೆ ಎನ್ನುವುದು ನನಗೆ ಮುಖ್ಯವಲ್ಲ. ಆದರೆ, ನನ್ನ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳುವುದಷ್ಟೇ ನನಗೆ ಮುಖ್ಯ” ಎಂದರು.

ಅವರಿಗೆ ಎಲ್ಲ ಪಕ್ಷಗಳಲ್ಲೂ ಹಿತೈಷಿಗಳಿದ್ದ ಹಾಗೆಯೇ ನಮಗೂ ಇತರೆ ಎಲ್ಲ ಪಕ್ಷಗಳಲ್ಲೂ ಹಿತೈಷಿಗಳು, ವಿಶ್ವಾಸಿಗಳೂ ಇದ್ದಾರೆ. ನಮ್ಮ ಅಭ್ಯರ್ಥಿಗಳು ಗೆಲ್ಲುವುದಕ್ಕೆ ಅವರೆಲ್ಲರ ಬೆಂಬಲವನ್ನೂ ನಾನೂ ಕೇಳುತ್ತಿದ್ದೇನೆ. ಇದರಲ್ಲಿ ತಪ್ಪೇನಿದೆ? ಆರೂ ಕ್ಷೇತ್ರಗಳಲ್ಲಿ ನಾವು ಗೆದ್ದೇ ಗೆಲ್ಲುತ್ತೇವೆ ಹಾಗೂ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಜೆಡಿಎಸ್ ಸ್ಪರ್ಧೆ ಮಾಡಿರುವ ಕ್ಷೇತ್ರಗಳಲ್ಲಿ ಕಾಂಗ್ರೆಸ್-ಬಿಜೆಪಿ ಪಕ್ಷಗಳು ಗಂಭೀರವಾಗಿ ಹೋರಾಟ ನಡೆಸುತ್ತಿವೆ. ಅದೇ ರೀತಿ ಉಳಿದ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಪೈಪೋಟಿ ಇದೆ. ಹೀಗಾಗಿ ಮುಂದಿನ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಈಗಿನ ಪರಿಷತ್ ಚುನಾವಣೆ ಮುಖ್ಯವಾಗಿದೆ ಎಂದು ಕುಮಾರಸ್ವಾಮಿ ಅವರು ಅಭಿಪ್ರಾಯಪಟ್ಟರು.

ಮೈಸೂರಿನಲ್ಲಿ ನಮ್ಮ ಅಭ್ಯರ್ಥಿಗೆ ಗೆಲುವಿನ ಅವಕಾಶಗಳು ಹೆಚ್ಚಿದೆ. ಎರಡನೇ ಪ್ರಾಶಸ್ತ್ಯದ ಮತಗಳು ನಮಗೇ ಹೆಚ್ಚು ಬೀಳಲಿವೆ. ಬಿಜೆಪಿಗೆ, ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕುವ ಅಭ್ಯರ್ಥಿಗಳು ಎರಡನೇ ಪ್ರಾಶಸ್ತ್ಯದ ಮತವನ್ನು ನಮ್ಮ ಅಭ್ಯರ್ಥಿಗೆ ಹಾಕುತ್ತಾರೆನ್ನುವ ಬಲವಾದ ನಂಬಿಕೆ ನನಗಿದೆ. ಹಾಗೆಯೇ, ಮೊದಲನೇ ಪ್ರಾಶಸ್ತ್ಯದ ಮತವನ್ನು ಜೆಡಿಎಸ್ ಅಭ್ಯರ್ಥಿಗೆ ಕೊಟ್ಟು ಎರಡನೇ ಪ್ರಾಶಸ್ತ್ಯದ ಮತವನ್ನು ಯಾವ ಪಕ್ಷದ ಅಭ್ಯರ್ಥಿಗಾದರೂ ಕೊಡಿ ಎಂದು ನಾನು ಈಗಾಗಲೇ ಮುಕ್ತವಾಗಿ ಹೇಳಿದ್ದೇನೆ ಎಂದು ಅವರು ಹೇಳಿದರು.

ಮಾಧ್ಯಮಗೋಷ್ಠಿಯಲ್ಲಿ ಮಾಜಿ ಸಚಿವ ಸಾ.ರಾ.ಮಹೇಶ್, ಪರಿಷತ್ ಚುನಾವಣೆಯ ಮೈಸೂರು ಅಭ್ಯರ್ಥಿ ಮಂಜೇಗೌಡ ಮುಂತಾದವರು ಹಾಜರಿದ್ದರು.

Tags: bjpbs yediyurappabsycknewsnowhd kumaraswamyhdkjdskarnatakamlc electionnewsPolitics
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ವಿಜಯನಗರ ಜಿಲ್ಲೆಗೆ ಅಸ್ತು ಎಂದ ಸಂಪುಟ; ಬಳ್ಳಾರಿ ರಾಜಕೀಯದಲ್ಲಿ ಹೊಸ ಸಮೀಕರಣ ಖಚಿತ

ಹಂಪಿಯ ಹಾಹಾಕಾರ; ಮಲಗಿದೆ ಸರಕಾರ

Leave a Reply Cancel reply

Your email address will not be published. Required fields are marked *

Recommended

ರಕ್ಕಸ ರಷ್ಯಾ: ಒಂದೆಡೆ ಸಂಧಾನ, ಇನ್ನೊಂದೆಡೆ ಪೈಶಾಚಿಕ ದಾಳಿ

ರಕ್ಕಸ ರಷ್ಯಾ: ಒಂದೆಡೆ ಸಂಧಾನ, ಇನ್ನೊಂದೆಡೆ ಪೈಶಾಚಿಕ ದಾಳಿ

4 years ago
ಕಾವೇರಿ ಬಿಕ್ಕಟ್ಟು; ಮೋದಿ ಮಧ್ಯಪ್ರವೇಶಕ್ಕೆ ಹೆಚ್.ಡಿ.ದೇವೇಗೌಡರ ಒತ್ತಾಯ

ಕಾವೇರಿ ಬಿಕ್ಕಟ್ಟು; ಮೋದಿ ಮಧ್ಯಪ್ರವೇಶಕ್ಕೆ ಹೆಚ್.ಡಿ.ದೇವೇಗೌಡರ ಒತ್ತಾಯ

3 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ