• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಡಿಕೆಶಿ ಕಲ್ಲುಗುಂಡಿನ ಹಾಗೆ ಇದ್ದಾರೆ ಎಂದ ಟಗರು

cknewsnow desk by cknewsnow desk
January 11, 2022
in STATE
Reading Time: 1 min read
0
ಬೆಳಗ್ಗೆ 8.30ಕ್ಕೆ ಮೇಕೆದಾಟು ಪಾದಯಾತ್ರೆ ಆರಂಭ
961
VIEWS
FacebookTwitterWhatsuplinkedinEmail

ಪಾದಯಾತ್ರೆಗೆ ಮರಳಿದ ಸಿದ್ದರಾಮಯ್ಯ

ಕನಕಪುರ: ಕಾಂಗ್ರೆಸ್‌ ಪಕ್ಷ ಹಮ್ಮಿಕೊಂಡಿರುವ ಮೇಕೆದಾಟು ಪಾದಯಾತ್ರೆಯನ್ನು ಹತ್ತಿಕ್ಕಲು ಯತ್ನಿಸುತ್ತಿರುವ ಬಿಜೆಪಿ ಸರಕಾರದ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.

ಕನಕಪುರದಲ್ಲಿ ಇಂದು ಬೆಳಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಅವರು ಹೇಳಿದ್ದಿಷ್ಟು;

ಮೊನ್ನೆ ನನಗೆ ಜ್ವರ ಇದ್ದದ್ದರಿಂದ ಪಾದಯಾತ್ರೆಯ ನಡುವೆಯೇ ವಿಶ್ರಾಂತಿಗೆ ಹೋಗಬೇಕಾಯ್ತು, ನಿನ್ನೆ ಕೂಡ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಲಿಲ್ಲ. ವೈದ್ಯರ ಸೂಚನೆ ಮೇರೆಗೆ ಅಗತ್ಯ ಚಿಕಿತ್ಸೆ ಪಡೆದು ಇಂದು ಮರಳಿದ್ದೇನೆ. ಕಳೆದೆರಡು ದಿನಗಳ ಕಾಲ ಪಾದಯಾತ್ರೆ ಅತ್ಯಂತ ಯಶಸ್ವಿಯಾಗಿ ನಡೆದಿದೆ. ಇದಕ್ಕಾಗಿ ಡಿ.ಕೆ ಶಿವಕುಮಾರ್ ಅವರಿಗೂ, ಪಕ್ಷದ ಕಾರ್ಯಕರ್ತರಿಗೂ ಹಾಗೂ ಪಕ್ಷದ ಎಲ್ಲಾ ನಾಯಕರಿಗೂ, ಪಾದಯಾತ್ರೆಯಲ್ಲಿ ಭಾಗವಹಿಸಿದ ಪ್ರತಿಯೊಬ್ಬರಿಗೂ ಧನ್ಯವಾದ ಅರ್ಪಿಸುತ್ತೇನೆ.

ಇಂದು ಮೈಸೂರು ಜಿಲ್ಲೆ ಹಾಗೂ ಇನ್ನಿತರ ಹನ್ನೊಂದು ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರು ಪಾದಯಾತ್ರೆಗೆ ಆಗಮಿಸಿದ್ದಾರೆ, ಹೀಗೆ ಮುಂದೆ ಹಾಸನ, ಮಂಡ್ಯ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು, ಕೋಲಾರ ಸುತ್ತಮುತ್ತಲಿನ ಜನ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಯ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಜನ ಸ್ವಯಂ ಪ್ರೇರಿತರಾಗಿ ನಮ್ಮೊಂದಿಗೆ ಅತ್ಯಂತ ಉತ್ಸಾಹದಿಂದ ಭಾಗವಹಿಸುತ್ತಿದ್ದಾರೆ, ಇದು ಮೇಕೆದಾಟು ಯೋಜನೆಯ ಬಗ್ಗೆ ಜನರ ಆಸಕ್ತಿಯನ್ನು ತೋರಿಸುತ್ತದೆ.

ಮೇಕೆದಾಟು ನಮ್ಮ ಕಾಂಗ್ರೆಸ್ ಸರ್ಕಾರದ ಯೋಜನೆ. ಈ ಯೋಜನೆ ಜಾರಿಯಾಗಬೇಕು ಎಂದು ಹೆಚ್ಚಿನ ಆಸಕ್ತಿ ವಹಿಸಿ ಡಿ.ಪಿ.ಆರ್ ಸಿದ್ಧಪಡಿಸಿದ್ದು ನಮ್ಮ ಸರ್ಕಾರ. ಆದರೆ ಜಲ ಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ ಅವರು ನಿತ್ಯ ನಮ್ಮ ಬಗ್ಗೆ ಇಲ್ಲಸಲ್ಲದ ಸುಳ್ಳು ಆರೋಪ ಮಾಡುವ ತಮ್ಮ ತಪ್ಪನ್ನು ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ.

2008 ರಿಂದ 2013 ರ ವರೆಗೆ ಬಿಜೆಪಿ ಪಕ್ಷ ಅಧಿಕಾರದಲ್ಲಿ ಇದ್ದರೂ ಮೇಕೆದಾಟು ಯೋಜನೆ ಬಗ್ಗೆ ಯಾವುದೇ ಆಸಕ್ತಿ ತೋರಿರಲಿಲ್ಲ. ನಾವು ಮೇ 2013 ರಲ್ಲಿ ಅಧಿಕಾರಕ್ಕೆ ಬಂದೆವು, ಸೆಪ್ಟೆಂಬರ್ ತಿಂಗಳಲ್ಲೇ ಮೇಕೆದಾಟು ಜಾರಿ ಆಗಬೇಕು ಎಂದು ಡಿ.ಪಿ.ಆರ್ ಸಿದ್ಧಪಡಿಸಿ ಕಾವೇರಿ ಜಲ ಮಂಡಳಿ ಎದುರು ಮಂಡಿಸಿದ್ದೆವು. ನಮ್ಮ ಡಿ.ಪಿ.ಆರ್ ರೂ. 6,912 ಕೋಟಿ ಇತ್ತು, ಸ್ವಾಧೀನ ಪಡಿಸಿಕೊಳ್ಳಬೇಕಾದ ಭೂಮಿಯ ಮೌಲ್ಯ 2019 ರಲ್ಲಿ ನಾಲ್ಕು ಪಟ್ಟು ಹೆಚ್ಚಾದ ಕಾರಣ ಮತ್ತೆ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಸಚಿವರಾಗಿದ್ದ ಡಿ.ಕೆ ಶಿವಕುಮಾರ್ ಅವರು ರೂ. 9,500 ಕೋಟಿಯ ಪರಿಷ್ಕೃತ ಡಿ.ಪಿ.ಆರ್ ಅನ್ನು ತಯಾರು ಮಾಡಿ ಸಿ.ಡಬ್ಲ್ಯೂ.ಸಿ ಗೆ ಕಳುಹಿಸಿದ್ದರು. ಇಷ್ಟೆಲ್ಲಾ ಮಾಡಿದ ಹೊರತಾಗಿಯೂ ಕಾಂಗ್ರೆಸ್ ಪಕ್ಷ ವಿಳಂಬ ಮಾಡಿತು ಎಂದು ಸುಳ್ಳು ಆರೋಪ ಮಾಡುವ ಕಾರಜೋಳ ಅವರು ಕಳೆದ ಎರಡುವರೆ ವರ್ಷಗಳಲ್ಲಿ ಬಿಜೆಪಿ ಸರ್ಕಾರ ಏನು ಮಾಡಿದೆ ಎಂದು ಹೇಳಲಿ. ಬಸವರಾಜ ಬೊಮ್ಮಾಯಿ ಅವರು ಹಿಂದೆನಿಂತು ಕಾರಜೋಳ ಮೂಲಕ ನಿತ್ಯ ಒಂದೊಂದು ಸುಳ್ಳು ಹೇಳಿಕೆ, ಜಾಹಿರಾತು ಕೊಡಿಸುತ್ತಿದ್ದಾರೆ.

ರಾಜ್ಯದಲ್ಲಿ ನಾವು ಅಧಿಕಾರದಲ್ಲಿ ಇದ್ದಾಗ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇತ್ತು, ನಮಗೆ ಯೋಜನೆ ಜಾರಿಮಾಡಲು ಅನುಮತಿ ಸಿಗಲಿಲ್ಲ ಅಂತ ಬಿಡಬಹುದು, ಆದರೆ ಈಗ ಹಾಗಿಲ್ಲ. ಎರಡೂ ಕಡೆ ಬಿಜೆಪಿ ಸರ್ಕಾರ ಇದೆ, ಕೇಂದ್ರದಲ್ಲಿ ನೀರಾವರಿ, ಕಾನೂನು ಸಚಿವರು ನಿಮ್ಮವರೇ ಇದ್ದಾರೆ, ರಾಜ್ಯದಿಂದ 25 ಜನ ಸಂಸದರನ್ನು ಜನ ಬಿಜೆಪಿಯ ಸಂಸದರನ್ನು ಜನ ಆರಿಸಿ ಕಳುಹಿಸಿದ್ದಾರೆ. ಇನ್ನೂ ಯಾಕೆ ಯೋಜನೆ ಜಾರಿ ಮಾಡಿಲ್ಲ ಮಿಸ್ಟರ್ ಕಾರಜೋಳ?

ತಮಿಳುನಾಡಿನ ಹಸಿರು ನ್ಯಾಯಾಧೀಕರಣದವರು ಒಂದು ಕಮಿಟಿ ರಚನೆ ಮಾಡಿ, ಮೇಕೆದಾಟು ಯೋಜನೆಯ ಕಾಮಗಾರಿ ಆರಂಭವಾಗಿದೆಯೇ ಎಂದು ಪರಿಶೀಲನೆ ನಡೆಸಿ ವರದಿ ನೀಡುವಂತೆ ಆದೇಶ ನೀಡಿತ್ತು. ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಈ ಆದೇಶವನ್ನು ವಜಾಗೊಳಿಸಿದೆ. ಈಗ ಸುಪ್ರೀಂ ಕೋರ್ಟ್, ಹಸಿರು ನ್ಯಾಯಾಧೀಕರಣ, ಕಾವೇರಿ ನೀರು ನಿರ್ವಹಣಾ ಮಂಡಳಿಯಿಂದ ಯೋಜನೆಯ ಬಗ್ಗೆ ಯಾವುದೇ ತಕರಾರು ಇಲ್ಲ. ಹೀಗಿದ್ದರೂ ಸರ್ಕಾರ ವಿಳಂಬ ಮಾಡುತ್ತಿದೆ ಎಂದು ಈಗ ಪ್ರತಿಭಟನೆ ನಡೆಸುತ್ತಿದ್ದೇವೆ.

ಕೊರೊನಾ ಇದೆ, ನಿಯಮ ಪಾಲನೆ ಮಾಡಿಲ್ಲ ಎಂದು ನಾನು ಸೇರಿದಂತೆ ಪಕ್ಷದ 30 ಜನರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಇದಕ್ಕೆಲ್ಲ ನಾವು ಹೆದರಲ್ಲ. ಹೀಗೆ ಕೇಸ್ ಹಾಕಿ ನಮ್ಮನ್ನು ಹೆದರಿಸಬಹುದು ಎಂದಕೊಂಡರೆ ಬಿಜೆಪಿಯವರಂತ ಮೂರ್ಖರು ಯಾರೂ ಇಲ್ಲ.
ಸಾವಿರಾರು ಜನ ಸೇರಿಸಿ ಪ್ರತಿಭಟನೆ ಮಾಡಿದ ಸುಭಾಷ್ ಗುತ್ತೇದಾರ ಅವರ ಮೇಲೆ ಕೇಸ್ ಹಾಕಿದ್ದೀರ ಬೊಮ್ಮಾಯಿ ಅವರೇ? ಶೋಭಾ ಕರಂದ್ಲಾಜೆ, ರೇಣುಕಾಚಾರ್ಯ, ಭಗವಂತ್ ಖೂಬಾ ಇವರೆಲ್ಲರ ಮೇಲೂ ಕೇಸ್ ಹಾಕಿದ್ದಾರಾ? ಗೃಹ ಸಚಿವರ ಕ್ಷೇತ್ರ ತೀರ್ಥಹಳ್ಳಿಯಲ್ಲೇ ದೊಡ್ಡ ಜಾತ್ರೆ ನಡೆಯಿತು, ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಲ್ಕೈದು ಸಾವಿರ ಜನ ಸೇರಿಸಿ ವಿಧಾನ ಪರಿಷತ್ ಸದಸ್ಯರ ಪ್ರಮಾಣ ವಚನ ಕಾರ್ಯಕ್ರಮ ನಡೆಸಿದ್ರು, ಇವೆಲ್ಲಾ ಮಾಡುವಾಗ ಕೊರೊನಾ ಮೂರನೇ ಅಲೆ ಇರಲಿಲ್ಲ, ನಮ್ಮ ಪಾದಯಾತ್ರೆ ಇಂದ ಮಾತ್ರ ಕೊರೊನ ಹರಡುತ್ತಾ? ಇದರಿಂದ ಸರ್ಕಾರದ ದುರುದ್ದೇಶ ಗೊತ್ತಾಗುತ್ತೆ.

ನಾವು ಪಾದಯಾತ್ರೆ ಮಾಡಬಾರದು, ಜನ ಮೇಕೆದಾಟು ಯೋಜನೆಯ ಅಗತ್ಯತೆಯ ಬಗ್ಗೆ ಜಾಗೃತರಾಗಬಾರದು ಎಂಬುದು ಸರ್ಕಾರ ದುರುದ್ದೇಶ. ಬಿಜೆಪಿಯವರು ತಮಿಳುನಾಡಿನಲ್ಲಿ ತಮ್ಮ ರಾಜಕೀಯ ಬಲವರ್ಧನೆಗಾಗಿ ಕರ್ನಾಟಕದ ಜನರಿಗೆ ದ್ರೋಹ ಮಾಡುತ್ತಿದ್ದಾರೆ. ಇದಕ್ಕೆ ಅವಕಾಶ ನೀಡಬಾರದು ಎಂದೇ ನಾವು ಪಾದಯಾತ್ರೆ ಹಮ್ಮಿಕೊಂಡಿದ್ದೇವೆ, ಈ ಪಾದಯಾತ್ರೆ ವಿಷಯದಲ್ಲಿ ಯಾವ ಪ್ರತಿಷ್ಠೆಯಾಗಲೀ, ಒಣ ಜಂಭವಾಗಲೀ ಇಲ್ಲ. ರಾಜ್ಯದ ಹಿತಾಸಕ್ತಿ ಅಷ್ಟೇ ಇದೆ.

ಕೊರೊನಾ ಹರಡುತ್ತಿರೋದು ಬಿಜೆಪಿ ಅವರಿಂದಲೇ. ನಿನ್ನೆ ಮೊನ್ನೆವರೆಗೂ ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ರ‌್ಯಾಲಿ ನಡೆಸಿದ್ದಾರೆ, ಅಲ್ಲೆಲ್ಲಾ ಕೊರೊನಾ ಇಲ್ವ? ರಾಜ್ಯದ ಮುಖ್ಯಮಂತ್ರಿಗಳು, ಸಚಿವರು ಸಾರ್ವಜನಿಕ ಕಾರ್ಯಕ್ರಮ ಮಾಡಿದ್ದಾರೆ. ಇದರಿಂದ ಕೊರೊನಾ ಬರಲ್ವಂತ? ನಮಗೊಂದು ಕಾನೂನು, ಅವರಿಗೊಂದು ಕಾನೂನು ಇದ್ಯಾ? ನಮ್ಮ ಪಾದಯಾತ್ರೆ ತಡೆಯಲು ಬಿಜೆಪಿ ಹತಾಶ ಪ್ರಯತ್ನ ಮಾಡುತ್ತಿದೆ. ನಾವು ಪಾದಯಾತ್ರೆಯಲ್ಲಿ ಭಾಗವಹಿಸಿದವರಿಗೆ ಕಡ್ಡಾಯವಾಗಿ ಮಾಸ್ಕ್, ಸ್ಯಾನಿಟೈಸರ್ ಬಳಕೆ ಮಾಡುವಂತೆ ಹೇಳಿದ್ದೇವೆ.

ಒಂದು ಲಕ್ಷ ಮಾಸ್ಕ್ ಅನ್ನು ಪಾದಯಾತ್ರೆಗೆ ಬಂದವರಿಗಾಗಿ ಕೊಡುತ್ತಿದ್ದೇವೆ. ಸಾಮಾಜಿಕ ಅಂತರ ಕಾಪಾಡಲು ಗಮನ ನೀಡಿದ್ದೇವೆ. ಕೊರೊನಾ ರೋಗ ಹರಡದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುತ್ತಿದ್ದೇವೆ.

ರೋಗ ಉಲ್ಬಣವಾದರೆ ಲಾಕ್ ಡೌನ್ ಮಾಡಬೇಕಾಗುತ್ತೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಬೇಜವಾಬ್ದಾರಿಯ ಹೇಳಿಕೆ ನೀಡಿದ್ದಾರೆ. ಈ ಹಿಂದೆ ಮಾಡಿರುವ ಲಾಕ್ ಡೌನ್ ನಿಂದ ಜನರ ಬದುಕು ಬೀದಿಗೆ ಬಂದಿದೆ, ಇನ್ನೂ ಅವರ ದುಡಿಮೆ ಸರಿ ದಾರಿಗೆ ಬಂದಿಲ್ಲ, ಹೀಗಿರುವಾಗ ಮತ್ತೆ ಲಾಕ್ ಡೌನ್ ಮಾಡುವುದು ದೊಡ್ಡ ತಪ್ಪು. ಒಂದು ವೇಳೆ ಲಾಕ್ ಡೌನ್ ಮಾಡಲೇಬೇಕು ಅಂತಾದರೆ ಕಾರ್ಮಿಕರು, ಕೂಲಿಕಾರರು, ನೇಕಾರರು, ಸವಿತಾ ಸಮಾಜದವರು, ಆಟೋ ಕ್ಯಾಬ್ ಚಾಲಕರು, ಬಡಗಿಗಳು, ಬೀದಿಬದಿ ವ್ಯಾಪಾರಿಗಳು ಹೀಗೆ ಎಲ್ಲಾ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರಿಗೆ ಮೊದಲೇ ಪರಿಹಾರ ಧನ ನೀಡಿ, ಅವರ ಬದುಕಿಗೆ ರಕ್ಷಣೆ ಕೊಟ್ಟು ನಂತರ ಲಾಕ್ ಡೌನ್ ಮಾಡಬೇಕು. ಕಾರಣ ಮೊದಲ ಅಲೆಯಲ್ಲಿ ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದ ಪರಿಹಾರದ ಹಣ ಇನ್ನು ಜನರಿಗೆ ಇನ್ನೂ ತಲುಪಿಲ್ಲ.

ನಿನ್ನೆ ಡಿ.ಕೆ ಶಿವಕುಮಾರ್ ಅವರ ಗಂಟಲು ದ್ರವ ಮಾದರಿ ತಗೊಂಡು ಬರಲು ಸರ್ಕಾರ ವೈದ್ಯಾಧಿಕಾರಿಯನ್ನು ಕಳುಹಿಸಿತ್ತು. ಬಹುಶಃ ಮಾದರಿ ಪರೀಕ್ಷೆ ಮಾಡಿ ಕೊರೊನಾ ಇದೆ ಎಂದು ಸುಳ್ಳು ವರದಿ ಕೊಡುವ ಯೋಚನೆ ಮಾಡಿಕೊಂಡಿದ್ದರೋ ಏನೋ. ಎರಡು ದಿನ ಬಿಸಿಲಿನಲ್ಲಿ ನಡೆದರೂ ಡಿ.ಕೆ ಶಿವಕುಮಾರ್ ಕಲ್ಲುಗುಂಡಿನ ಹಾಗೆ ಇದ್ದಾರೆ.

ಈ ಹಿಂದೆ ಬಳ್ಳಾರಿಯಲ್ಲಿ ಪಾದಯಾತ್ರೆ ಮಾಡಿದಾಗ ಕಡೇ ದಿನ ಐದು ಲಕ್ಷ ಜನ ಸೇರಿದ್ದರೂ. ಈಗಲೂ ಜನ ನಮ್ಮ ಪಾದಯಾತ್ರೆಗೆ ಸ್ವಯಂ ಪ್ರೇರಿತರಾಗಿ ಬರಲು ಆರಂಭ ಮಾಡಿದ್ದಾರೆ. ಇದರಿಂದ ಬಿಜೆಪಿಯವರಿಗೆ ಭಯ ಶುರುವಾಗಿದೆ. ಬಳ್ಳಾರಿ ಪಾದಯಾತ್ರೆ ನೆನಪಾದ್ರೆ ಬಸವರಾಜ ಬೊಮ್ಮಾಯಿ ಅವರಿಗೆ ರಾತ್ರಿ ನಿದ್ರೆ ಬರುತ್ತಿಲ್ಲ ಇರಬೇಕು. ನಮ್ಮ ಪಾದಯಾತ್ರೆ ತಡೆಯಲು ಸತಾಯಗತಾಯ ಪ್ರಯತ್ನ ಮಾಡುತ್ತಿದ್ದಾರೆ, ಆದರೆ ನಾವು ಅವರ ಯಾವ ಷಡ್ಯಂತ್ರಗಳಿಗೂ ಮಣಿಯದೆ ಹನ್ನೊಂದು ದಿನಗಳ ಪಾದಯಾತ್ರೆ ಮಾಡಿಯೇ ಮಾಡುತ್ತೇವೆ.

ನಮ್ಮ ಮೇಲೆ ಸರ್ಕಾರ ಕಾನೂನಿನ ಹಾದಿಯಲ್ಲಿ ಕ್ರಮಕೈಗೊಳ್ಳಲು ಹೊರಟರೆ, ನಾವೂ ಕಾನೂನಿನ ರೀತಿಯಲ್ಲೇ ಉತ್ತರ ಕೊಡುತ್ತೇವೆ. ಏನೇನು ಕೇಸ್ ದಾಖಲಿಸುತ್ತಾರೋ ದಾಖಲಿಸಲಿ, ನಾವೂ ಕಾನೂನು ಹೋರಾಟ ಮಾಡುತ್ತೇವೆ.

ಕೊರೊನಾ ಬರೀ ನಮ್ಮ ರಾಜ್ಯದಲ್ಲಿ ಮಾತ್ರ ಅಲ್ಲ ಇಡೀ ದೇಶದಲ್ಲಿ ಹೆಚ್ಚಾಗ್ತಾ ಇದೆ. ನಾವು ಪಾದಯಾತ್ರೆ ಮಾಡುತ್ತಿರೋದು ಕರ್ನಾಟಕದಲ್ಲಿ. ದೆಹಲಿಯಲ್ಲಿ ಕೊರೊನಾ ಕೇಸ್ ಹೆಚ್ಚಳ ಆಗುತ್ತಿದೆ, ಮಹಾರಾಷ್ಟ್ರದಲ್ಲಿ ಏರಿಕೆ ಆಗ್ತಿದೆ. ಹೀಗೆ ಕೊರೊನಾ ಎಲ್ಲಾ ಕಡೆ ಹೆಚ್ಚಾಗ್ತಲೇ ಇದೆ. ಕೊರೊನಾ ಸೋಂಕು ಹೆಚ್ಚಾಗುವುದಕ್ಕೂ ನಮ್ಮ ಪಾದಯಾತ್ರೆಗೂ ಸಂಬಂಧ ಇಲ್ಲ.

cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಸಿಎಂಗೆ ಸೋಂಕು: ಹೆಲ್ತ್‌ ಮಿನಿಸ್ಟರ್‌ ಡಾ.ಕೆ.ಸುಧಾಕರ್‌ ಹೋಂ ಕ್ವಾರಂಟೈನ್‌

ಸಿಎಂಗೆ ಸೋಂಕು: ಹೆಲ್ತ್‌ ಮಿನಿಸ್ಟರ್‌ ಡಾ.ಕೆ.ಸುಧಾಕರ್‌ ಹೋಂ ಕ್ವಾರಂಟೈನ್‌

Leave a Reply Cancel reply

Your email address will not be published. Required fields are marked *

Recommended

ಬೆಲೆ ಏರಿಕೆ ವಿರುದ್ಧ ಜೆಡಿಎಸ್ ಬೃಹತ್ ಪ್ರತಿಭಟನೆ

ಬೆಲೆ ಏರಿಕೆ ವಿರುದ್ಧ ಜೆಡಿಎಸ್ ಬೃಹತ್ ಪ್ರತಿಭಟನೆ

4 years ago
ಆಡಳಿತ ಪಕ್ಷಕ್ಕೆ ಬಿತ್ತಾ ಕೋವಿಡ್‌ ಹೊಡೆತ!! ಸಿಎಂ ತವರು ಶಿವಮೊಗ್ಗ ಜಿಲ್ಲೆಯಲ್ಲೇ ಮುಗ್ಗರಿಸಿದ ಬಿಜೆಪಿ, ಬಳ್ಳಾರಿಯಲ್ಲೂ ಕಾಂಗ್ರೆಸ್‌; ಮಡಿಕೇರಿಯಲ್ಲಿ ಮಾತ್ರ ಅರಳಿದ ಕಮಲ

17 ಅಭ್ಯರ್ಥಿಗಳ ಕಾಂಗ್ರೆಸ್ ಪಟ್ಟಿ; ಎಂ.ಎಲ್.ಅನಿಲ್ ಕುಮಾರ್‌ಗೆ ಕೋಲಾರ-ಚಿಕ್ಕಬಳ್ಳಾಪುರ ಟಿಕೆಟ್

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ