• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home EDITORS'S PICKS

ಚಿಕ್ಕಬಳ್ಳಾಪುರಕ್ಕೆ ಎಂಟಿಬಿ! ಬೆಂಗಳೂರು ಗ್ರಾಮಾಂತರಕ್ಕೆ ಡಾ.ಕೆ.ಸುಧಾಕರ್‌ ಉಸ್ತುವಾರಿ!!

P K Channakrishna by P K Channakrishna
January 24, 2022
in EDITORS'S PICKS, POLITICS, STATE
Reading Time: 2 mins read
1
ಚಿಕ್ಕಬಳ್ಳಾಪುರಕ್ಕೆ ಎಂಟಿಬಿ! ಬೆಂಗಳೂರು ಗ್ರಾಮಾಂತರಕ್ಕೆ ಡಾ.ಕೆ.ಸುಧಾಕರ್‌ ಉಸ್ತುವಾರಿ!!
1.3k
VIEWS
FacebookTwitterWhatsuplinkedinEmail

ಆರೋಗ್ಯ ಸಚಿವರ ಕೈತಪ್ಪಿದ ತವರು ಜಿಲ್ಲೆ ಉಸ್ತುವಾರಿ!; ಮಾಧುಸ್ವಾಮಿ, ಅಶೋಕ್‌ ಅವರಿಗೆ ಸಿಗದ ಜಿಲ್ಲೆಗಳು!!; ಕೋಲಾರಕ್ಕೆ ಮುನಿರತ್ನ

ಬೆಂಗಳೂರು: ಸಚಿವರಿಗೆ ತವರು ಜಿಲ್ಲೆಗಳ ಉಸ್ತುವಾರಿ ನೀಡಬಾರದೆನ್ನುವ ಬಿಜೆಪಿ ಹೈಕಮಾಂಡ್‌ʼನ ಹೊಸ ರೂಲ್ಸ್‌ ಅನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಾರಿಗೆ ತಂದಿದ್ದಾರೆ.

ಆದರೆ, ಕೆಲವರ ವಿಷಯದಲ್ಲಿ ವರಿಷ್ಠರು ಚಾಪೆ ಕೆಳಗೆ ತೂರಿದರೆ, ಮುಖ್ಯಮಂತ್ರಿ ರಂಗೋಲಿ ಕೆಳಗೆ ಜಾರುವ ಪ್ರಯತ್ನ ಮಾಡಿದ್ದಾರೆ. ತಮ್ಮ ಆಪ್ತರ ವಿಷಯದಲ್ಲಿ ಅವರು ಹಾಗೆ ನಡೆದುಕೊಂಡಿದ್ದಾರೆ ಎನ್ನುವ ಅನುಮಾನ ಮೂಡಿದೆ. ಅದು ಸಂಪುಟ ವಿಸ್ತರಣೆಗೆ ಮುನ್ನ ಸಿಎಂ ಇಟ್ಟ ಹೆಜ್ಜೆ ಅನೇಕ ಅರ್ಥಗಳಿಗೆ ಕಾರಣವಾಗಿದೆ.

ಮುಖ್ಯವಾಗಿ ಚಿಕ್ಕಬಳ್ಳಾಪುರ ಶಾಸಕ ಹಾಗೂ ಹಾಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಅವರಿಗೆ ತವರು ಜಿಲ್ಲೆ ಚಿಕ್ಕಬಳ್ಳಾಪುರದ ಉಸ್ತುವಾರಿ ಬದಲು ಪಕ್ಕದ, ಬೆಂಗಳೂರು ನಗರಕ್ಕೆ ಹೊಂದಿಕೊಂಡಿರುವ ಮಹತ್ವದ್ದಾದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ಕೊಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿಗೆ ಪಟ್ಟು ಹಿಡಿದಿದ್ದ ಎಂಟಿಬಿ ನಾಗರಾಜ್‌ ಅವರಿಗೆ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಕೊಡಲಾಗಿದೆ.

ಹೈಕಮಾಂಡ್‌ ರೂಲ್ಸ್‌ ಪ್ರಕಾರ ಉತ್ತರ ಕರ್ನಾಟಕದ ಸಚಿವರಿಗೆ ದಕ್ಷಿಣ ಕರ್ನಾಟಕದ ಉಸ್ತುವಾರಿಯನ್ನು, ಬಯಲುಸೀಮೆ ಜಿಲ್ಲೆಗಳ ಸಚಿವರಿಗೆ ಕರಾವಳಿ ಅಥವಾ ಮಲೆನಾಡು ಜಿಲ್ಲೆಗಳ ಉಸ್ತುವಾರಿ, ಆ ಭಾಗದ ಸಚಿವರಿಗೆ ಅದೇ ರೀತಿ ದೂರದ ಜಿಲ್ಲೆಗಳ ಉಸ್ತುವಾರಿ ನೀಡುವುದಾಗಿತ್ತು.

ಸಿಕೆನ್ಯೂಸ್‌ ನೌ ಎಲ್ಲರಿಗಿಂತ ಮೊದಲೇ; ಅಂದರೆ ಮಾರ್ಚ್‌ 30ರಂದೇ ಈ ಬಗ್ಗೆ ವರದಿ ಮಾಡಿತ್ತು.

ಈ ಸುದ್ದಿಯನ್ನು ಓದಲು ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ..
ತವರು ಜಿಲ್ಲೆ ಉಸ್ತುವಾರಿ ‌ಆಪರೇಷನ್: ಸಚಿವ ಡಾ.ಕೆ.ಸುಧಾಕರ್‌ ಕೈತಪ್ಪುತ್ತಾ ಚಿಕ್ಕಬಳ್ಳಾಪುರ ಜಿಲ್ಲಾ ಹೊಣೆಗಾರಿಕೆ

ಇನ್ನು, ರಾಜರಾಜೇಶ್ವರಿ ನಗರದ ಮುನಿರತ್ನ ಅವರಿಗೆ ಕೋಲಾರ ಜಿಲ್ಲೆ ಉಸ್ತುವಾರಿ ನೀಡಲಾಗಿದೆ. ಮುನಿರತ್ನ ಕೂಡ ಕೋಲಾರ ಉಸ್ತುವಾರಿ ಬಗ್ಗೆ ತೃಪ್ತಿ ಹೊಂದಿಲ್ಲ ಎನ್ನಲಾಗಿದ್ದು, ಅವರೂ ಬೆಂಗಳೂರು ನಗರದ ಮೇಲೆ ಕಣ್ಣಿಟ್ಟಿದ್ದರು ಎನ್ನಲಾಗಿದೆ.

ಚಿಕ್ಕಬಳ್ಳಾಪುರ, ಕೋಲಾರದ ಕಥೆ ಹೀಗಾದರೆ, ಬೆಂಗಳೂರು ನಗರದ ಮೇಲೆ ಕಣ್ಣಿಟ್ಟು ಸಿಎಂ ಮೇಲೆ ಭಾರೀ ಪ್ರಭಾವ ಬೀರಿದ್ದ ಆರ್.ಅಶೋಕ್‌ ಅವರಿಗೆ ಯಾವ ಜಿಲ್ಲೆಯನ್ನೂ ಕೊಡಲಾಗಿಲ್ಲ. ಬಹುಶಃ ಬೇರೆ ಜಿಲ್ಲೆ ಉಸ್ತುವಾರಿಯನ್ನು ಅಶೋಕ್‌ ಬೇಡ ಎಂದಿರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಬೆಂಗಳೂರು ನಗರ ಉಸ್ತುವಾರಿ ಸಿಎಂ ತಮ್ಮ ಕೈಯ್ಯಲ್ಲೇ ಇಟ್ಟುಕೊಂಡಿದ್ದಾರೆ. ಮತ್ತೊಬ್ಬ ಹಿರಿಯ ಸಚಿವ ಕೆ.ಎಸ್.‌ಈಶ್ವರಪ್ಪ ಅವರಿಗೆ ಶಿವಮೊಗ್ಗವನ್ನು ತಪ್ಪಿಸಿ ನೆರೆಯ ಚಿಕ್ಕಮಗಳೂರು ಜಿಲ್ಲೆ ಕೊಟ್ಟು ಸಿಟ್ಟು ಶಮನ ಮಾಡುವ ಯತ್ನ ನಡೆಸಲಾಗಿದೆ.

ವಿಜಯನಗರ ಜಿಲ್ಲೆ ಅಸ್ತಿತ್ವಕ್ಕೆ ಕಾರಣರಾಗಿದ್ದ ಆನಂದ್‌ ಸಿಂಗ್‌ ಅವರಿಗೆ ತವರು ಜಿಲ್ಲೆಯ ಬದಲಾಗಿ ಪಕ್ಕದ ಕೊಪ್ಪಳ ಜಿಲ್ಲೆ ಕೊಡಲಾಗಿದೆ. ಖಾತೆ ಹಂಚಿಕೆ ಬಗ್ಗೆ ಕ್ಯಾತೆ ತೆಗೆದು ಮುಖ್ಯಮಂತ್ರಿ ಮತ್ತು ವರಿಷ್ಟರ ಸಿಟ್ಟಿಗೆ ಗುರಿಯಾಗಿದ್ದ ಸಿಂಗ್‌ ಅವರಿಗೆ ಈ ರೀತಿ ಟಾಂಗ್‌ ಕೊಡಲಾಗಿದೆ. ಆದರೆ, ಬಿ.ಶ್ರೀರಾಮುಲು ಅವರಿಗೆ ಬಳ್ಳಾರಿಯನ್ನೇ ಕೊಡಲಾಗಿದೆ. ಇದು ಬಿಕ್ಕಟ್ಟಿಗೆ ಕಾರಣವಾಗುವ ನಿರೀಕ್ಷೆ ಇದೆ.

ಉಳಿದಂತೆ ಮೂವರು ಸಚಿವರುಗೆ ಡಬಲ್‌ ಧಮಾಕಾ ಸಿಕ್ಕಿದೆ. ಕೆ.ಗೋಪಾಲಯ್ಯ ಅವರಿಗೆ ಹಾಸನ ಜತೆಗೆ ಮಂಡ್ಯ ಉಸ್ತುವಾರಿ ಸಿಕ್ಕಿದೆ. ಬಿಸಿ ಪಾಟೀಲ್‌ ಅವರಿಗೆ ಚಿತ್ರದುರ್ಗ-ಗದಗ ನೀಡಲಾಗಿದೆ. ಶಂಕರ್‌ ಪಾಟೀಲ್‌ ಮುನೇನಕೊಪ್ಪ ಅವರಿಗೆ ರಾಯಚೂರು-ಬೀದರ್‌ ಜಿಲ್ಲೆಗಳ ಹೊಣೆ ನೀಡಲಾಗಿದೆ. ಮಂಡ್ಯದ ಕೆಸಿ ನಾರಾಯಣ ಗೌಡರಿಗೆ ಶಿವಮೊಗ್ಗ ಕೊಡಲಾಗಿದೆ.

ಉಳಿದಂತೆ ಮುಖ್ಯಮಂತ್ರಿಗಳು ತಮ್ಮ ತವರು ಜಿಲ್ಲೆ ಉಸ್ತುವಾರಿಯನ್ನು ಉತ್ತರ ಕನ್ನಡ ಜಿಲ್ಲೆಯ ಶಿವರಾಮ್‌ ಹೆಬ್ಬಾರ್‌ ಅವರಿಗೆ ವಹಿಸಿದ್ದಾರೆ.

ತವರು ಜಿಲ್ಲೆ ತುಮಕೂರು ಉಸ್ತುವಾರಿ ನಿರೀಕ್ಷೆಯಲ್ಲಿದ್ದ ಬಿಸಿ ನಾಗೇಶ್‌ ಅವರಿಗೆ ಕೊಡಗು ಜಿಲ್ಲೆ ನೀಡೆಲಾಗಿದೆ. ಜೆಸಿ ಮಾಧುಸ್ವಾಮಿ ಅವರಿಗೆ ತುಮಕೂರಷ್ಟೇ ಅಲ್ಲ ಬೇರೆ ಯಾವ ಜಿಲ್ಲೆಯ ಉಸ್ತುವಾರಿಯನ್ನೂ ಕೊಡದಿರುವುದು ಎಲ್ಲರ ಅಚ್ಚರಿಗೆ ಕಾರಣವಾಗಿದೆ. ತುಮಕೂರು ಜಿಲ್ಲೆ ಉಸ್ತುವಾರಿಯನ್ನು ಅರಗ ಜ್ಞಾನೇಂದ್ರ ಅವರಿಗೆ ವಹಿಸಲಾಗಿದೆ.

ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಮೇಲೆ, ಸ್ವಾತಂತ್ರ್ಯ ದಿನಾಚರಣೆ ದಿನದಂದು ಧ್ವಜಾರೋಹಣ ಮಾಡಲು, ಆ ನಂತರ ಕೋವಿಡ್‌ ಪರಿಸ್ಥಿತಿ ನಿಭಾಯಿಸಲು ಮಂತ್ರಿಗಳಿಗೆ ಉಸ್ತುವಾರಿ ನೀಡಿದ್ದರು. ಆದರೆ, ಇದನ್ನೇ ಉಸ್ತುವಾರಿ ಎಂದು ಬಿಂಬಿಸಿಕೊಂಡು ಸರಕಾರ ಸಭೆ, ಕಾರ್ಯಕ್ರಮಗಳನ್ನು ನಡೆಸಿದ್ದ ಕೆಲ ಸಚಿವರು ಅಧಿಕಾರ ದುರುಪಯೋಗ ಮಾಡಿಕೊಂಡಿದ್ದರು. ಮಾತ್ರವಲ್ಲದೆ, ಝೀರೋ ಟ್ರಾಫಿಕ್‌ ಎಂದೆಲ್ಲ ಶೋ ಮಾಡಿದ್ದರು. ಸದ್ಯಕ್ಕೆ ಅವರ ಬುಡ ಅಲ್ಲಾಡಿಸುವ ಕೆಲಸವನ್ನು ಬಿಜೆಪಿ ಮಾಡಿದೆ.

ಈಗ ಜನವರಿ 26ರ ಗಣರಾಜ್ಯೋತ್ಸವ ದಿನದಂದು ಧ್ವಜಾರೋಹಣ ಮಾಡುವುದು ಸೇರಿದಂತೆ ಪೂರ್ಣ ಪ್ರಮಾಣದ ಜಿಲ್ಲಾ ಉಸ್ತುವಾರಿ ಹೊಣೆಯನ್ನು ಸಿಎಂ ವಹಿಸಿದ್ದಾರೆ. ಆದರೆ, ಸದಾ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುವ ಮಾಧುಸ್ವಾಮಿ ಹಾಗೂ ಸಿಎಂ ಆಪ್ತ ಬಳಗದಲ್ಲೇ ಇದ್ದ ಆಶೋಕ್‌ ಅವರಿಗೆ ಜಿಲ್ಲೆಗಳು ಸಿಗದಿರುವುದು ಅನೇಕ ಅನುಮಾನಗಳಿಗೆ ಕಾರಣವಾಗಿದೆ.

ರಾಜ್ಯದ ಎಲ್ಲ ಜಿಲ್ಲೆಗಳಿಗೆ ನೂತನ ಕೋವಿಡ್ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರುಗಳನ್ನಾಗಿ ನೇಮಿಸಿ ಆದೇಶಿಸಲಾಗಿದೆ.@CMofKarnataka pic.twitter.com/0Jqnodth8j

— Basavaraj S Bommai (Modi Ka Parivar) (@BSBommai) January 24, 2022

ಜಿಲ್ಲಾ ಉಸ್ತುವಾರಿ ಸಚಿವರು


1.ಬಸವರಾಜ ಬೊಮ್ಮಾಯಿ: ಬೆಂಗಳೂರು ನಗರ
2.ಗೋವಿಂದ ಕಾರಜೋಳ: ಬೆಳಗಾವಿ
3.ಕೆ.ಎಸ್.ಈಶ್ವರಪ್ಪ: ಚಿಕ್ಕಮಗಳೂರು
4.ಬಿ.ಶ್ರೀರಾಮುಲು: ಬಳ್ಳಾರಿ 
5.ವಿ.ಸೋಮಣ್ಣ: ಚಾಮರಾಜನಗರ
6.ಉಮೇಶ್ ಕತ್ತಿ: ವಿಜಯಪುರ 
7.ಎಸ್.ಅಂಗಾರ: ಉಡುಪಿ 
8.ಆರಗ ಜ್ಞಾನೇಂದ್ರ: ತುಮಕೂರು 
9.ಡಾ.ಸಿ. ಎನ್.ಅಶ್ವತ್ಥನಾರಾಯಣ: ರಾಮನಗರ 
10.ಸಿ.ಸಿ.ಪಾಟೀಲ್: ಬಾಗಲಕೋಟೆ 
11.ಆನಂದ್ ಸಿಂಗ್: ಕೊಪ್ಪಳ 
12.ಕೋಟಾ ಶ್ರೀನಿವಾಸ ಪೂಜಾರಿ: ಉತ್ತರ ಕನ್ನಡ 
13.ಪ್ರಭು ಚವ್ಹಾಣ್: ಯಾದಗಿರಿ 
14.ಮುರುಗೇಶ್‌ ನಿರಾಣಿ: ಕಲಬುರಗಿ 
15.ಶಿವರಾಮ್ ಹೆಬ್ಬಾರ್: ಹಾವೇರಿ 
16.ಎಸ್.ಟಿ.ಸೋಮಶೇಖರ್: ಮೈಸೂರು 
17.ಬಿ. ಸಿ.ಪಾಟೀಲ್: ಚಿತ್ರದುರ್ಗ ಮತ್ತು ಗದಗ 
18.ಬಿ.ಎ.ಬಸವರಾಜ: ದಾವಣಗೆರೆ 
19.ಡಾ.ಕೆ.ಸುಧಾಕರ್: ಬೆಂಗಳೂರು ಗ್ರಾಮಾಂತರ 
20.ಕೆ. ಗೋಪಾಲಯ್ಯ: ಹಾಸನ ಮತ್ತು ಮಂಡ್ಯ 
21.ಶಶಿಕಲಾ ಜೊಲ್ಲೆ: ವಿಜಯನಗರ 
22.ಎಂಟಿಬಿ ನಾಗರಾಜ್: ಚಿಕ್ಕಬಳ್ಳಾಪುರ 
23.ಕೆ.ಸಿ.ನಾರಾಯಣ ಗೌಡ:‌ ಶಿವಮೊಗ್ಗ 
24.ಬಿ.ಸಿ.ನಾಗೇಶ್‌: ಕೊಡಗು 
25.ವಿ.ಸುನೀಲ್ ಕುಮಾರ್: ದಕ್ಷಿಣ ಕನ್ನಡ 
26.ಹಾಲಪ್ಪ ಆಚಾರ್: ಧಾರವಾಡ 
27.ಶಂಕರ್ ಬಿ. ಮುನೇನಕೊಪ್ಪ: ರಾಯಚೂರು ಮತ್ತು ಬೀದರ್ 
28.ಮುನಿರತ್ನ: ಕೋಲಾರ

P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಚಿಕ್ಕಬಳ್ಳಾಪುರ ಜಿಲ್ಲೆ ಉಸ್ತುವಾರಿ; ಒಂದೇ ಕಲ್ಲಿನಲ್ಲಿ 3 ಹಕ್ಕಿಗಳಿಗೆ ಗುರಿ ಇಟ್ಟ ಬಿಜೆಪಿ

ಚಿಕ್ಕಬಳ್ಳಾಪುರ ಜಿಲ್ಲೆ ಉಸ್ತುವಾರಿ; ಒಂದೇ ಕಲ್ಲಿನಲ್ಲಿ 3 ಹಕ್ಕಿಗಳಿಗೆ ಗುರಿ ಇಟ್ಟ ಬಿಜೆಪಿ

Comments 1

  1. Pingback: ಚಿಕ್ಕಬಳ್ಳಾಪುರ ಜಿಲ್ಲೆ ಉಸ್ತುವಾರಿ; ಒಂದೇ ಕಲ್ಲಿನಲ್ಲಿ 3 ಹಕ್ಕಿಗಳಿಗೆ ಗುರಿ ಇಟ್ಟ ಬಿಜೆಪಿ - cknewsnow

Leave a Reply Cancel reply

Your email address will not be published. Required fields are marked *

Recommended

ಸಾಮಾಜಿಕ ಅಭಿವೃದ್ದಿಗೆ ಕಾರ್ಪೊರೇಟ್ ಸಹಕಾರ ಅಗತ್ಯ

ಸಾಮಾಜಿಕ ಅಭಿವೃದ್ದಿಗೆ ಕಾರ್ಪೊರೇಟ್ ಸಹಕಾರ ಅಗತ್ಯ

3 years ago
ಕೆ.ಅಮರನಾರಾಯಣ, ಮುನಿ ವೆಂಕಟಪ್ಪ, ಕೆ.ವಿ. ರಾಜುಗೆ ರಾಜ್ಯೋತ್ಸವ ಗರಿ

ಉದ್ಧವ್‌ ಠಾಕರೆ ಉದ್ಧಟತನಕ್ಕೆ ತಿರುಗೇಟು; ಒಂದು ಅಡಿ ಜಾಗವೂ ಬಿಡಲ್ಲ ಎಂದ ಸಿಎಂ, ತಾಕತ್ತಿದ್ದರೆ ಶಿವಸೇನೆಗೆ ನೀಡಿರುವ ಬೆಂಬಲ ಹಿಂಪಡೆಯಿರಿ ಎಂದು ಕಾಂಗ್ರೆಸ್‌ಗೆ ಚಾಲೆಂಜ್‌ ಮಾಡಿದ ಡಿಸಿಎಂ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ