• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home POLITICS

ಜೆಡಿಎಸ್‌ ಶಾಸಕರ ಬ್ರೈನ್‌ ವಾಶ್‌ ಮಾಡುತ್ತಿರುವ ಕಾಂಗ್ರೆಸ್‌ ನಾಯಕರು!!

P K Channakrishna by P K Channakrishna
February 19, 2022
in POLITICS, STATE
Reading Time: 1 min read
0
ಸಿದ್ದರಾಮಯ್ಯ ʼಗೊಬೆಲಪ್ಪʼ, ʼಬ್ರೋಕರಪ್ಪʼ ಎಂದ ಮಾಜಿ ಸಿಎಂ
936
VIEWS
FacebookTwitterWhatsuplinkedinEmail

ರಾಷ್ಟ್ರಧ್ವಜದ ಸಿದ್ದರಾಮಯ್ಯ ಪಾಠ ಮಾಡುವುದು ಅಗತ್ಯವಿಲ್ಲ ಎಂದ ಹೆಚ್.ಡಿ.ಕುಮಾರಸ್ವಾಮಿ

ಪಕ್ಷ ಬಿಡುವವರ ಬಗ್ಗೆ ಚಿಂತೆ ಇಲ್ಲ, ಅವರ ಬಗ್ಗೆ ಎಲ್ಲ ಗೊತ್ತಿದೆ / ಡಬಲ್‌ ಗೇಮ್‌ ಆಡುತ್ತಿರುವವರ ಬಗ್ಗೆ ನನಗೆ ಮಾಹಿತಿ ಇದೆ


ರಾಮನಗರ: ರಾಷ್ಟ್ರಧ್ವಜಕ್ಕೆ ಗೌರವ ಕೊಡುವ ಬಗ್ಗೆ ಸಿದ್ದರಾಮಯ್ಯ ಅವರಿಂದ ಪಾಠ ಕಲಿಯಬೇಕಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀಕ್ಷ್ಣ ಪ್ರತಿಕ್ರಿಯೆ ನೀಡಿದರು.

ಚನ್ನಪಟ್ಟಣ ತಾಲೂಕಿನ ತಗಚಗೆರೆ ಗ್ರಾಮದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ನಾನು ಕೂಡ ಸಂವಿಧಾನವನ್ನು ಓದಿಕೊಂಡಿದ್ದೇನೆ. ಆದರೆ, ನನಗೆ ಸ್ವಯಂ ಘೋಷಿತ ಸಂವಿಧಾನ ತಜ್ಞರೆನಿಸಿಕೊಂಡಿರುವವರಿಂದ ಬೋಧನೆ ಬೇಡ ಎಂದರು.

ದೇಶಕ್ಕೆ ಸ್ವಾತಂತ್ರ್ಯ ಬರುವಾಗ ಕಟ್ಟಿದ ಕಾಂಗ್ರೆಸ್ಸೇ ಬೇರೆ. ಸ್ವಾತಂತ್ರ್ಯ ಬಂದ ನಂತರ ಕಾಂಗ್ರೆಸ್ಸಚನ್ನು ಬರಖಾಸ್ತು ಮಾಡಬೇಕೆಂದು ಮಹಾತ್ಮ ಗಾಂಧೀಜಿ ಅವರು ಅಂದೇ ಹೇಳಿದ್ದರು. ಅವರ ಆಶಯಕ್ಕೆ ವಿರುದ್ಧವಾಗಿ ಮುಂದುವರಿದ ಕಾಂಗ್ರೆಸ್ ಪಕ್ಷವು ಇಂದು ಎಂಥಾ ದಯನೀಯ ಸ್ಥಿತಿಗೆ ಮುಟ್ಟಿದೆ ಎಂಬುದನ್ನು ಎಲ್ಲರೂ ನೋಡುತ್ತಿದ್ದಾರೆಂದು ಮಾಜಿ ಮುಖ್ಯಮಂತ್ರಿಗಳು ಕುಟುಕಿದರು.

ನಾನು 1959ರಲ್ಲಿ ಹುಟ್ಟಿದ್ದೇನೆ. ಸ್ವಾತಂತ್ರ್ಯ ಹೋರಾಟಕ್ಕೆ ನನ್ನದು ಏನೂ ಕೊಡುಗೆ ಇಲ್ಲ. ಈಗ ಸ್ವಾತಂತ್ರ್ಯದ ಇತಿಹಾಸ ಹೇಳುತ್ತಿರುವವರು ಹುಟ್ಟಿದ್ದರಾ? ಆಗ ಸ್ವಾತಂತ್ರ್ಯಕ್ಕಾಗಿ ರಕ್ತಪಾತವೇ ಆಗಿತ್ತು. ಈಗ ಧರ್ಮದ ಹೆಸರಿನಲ್ಲಿ ಅಂಥದ್ದು ನಡೆಯುವುದು ಬೇಕಾ? ಎಂದು ಅವರು ಖಾರವಾಗಿ ಪ್ರಶ್ನಿಸಿದರು.

ಶ್ರೀನಗರದಲ್ಲಿ ಬಾವುಟ ಹಾರಿಸಲು ಹೋಗಿ 12 ಜನರನ್ನು ಸಾಯಿಸಿದರು ಅಂದಿದ್ದರು ಕಾಂಗ್ರೆಸ್ಸಿಗರು.
ಬಿಜೆಪಿಯವರಿಂದ ವಾಚಾಮಗೋಚರ ಟೀಕೆಗೆ ಒಳಗಾಗಿದ್ದರು. ಆಗ ರಾಷ್ಟ್ರಧ್ವಜ ಕಾಣಲಿಲ್ಲವೇ ಇವರಿಗೆ? ರಾಜ್ಯದ ಜನರ ಬಗ್ಗೆ, ಅಭಿವೃದ್ಧಿ ಚರ್ಚೆ ಮಾಡುವುದನ್ನು ಬಿಟ್ಟು ರಾಷ್ಟ್ರಧ್ವಜದ ಬಗ್ಗೆ ವಿಷಯಾಂತರ ಮಾಡುತ್ತಿದ್ದಾರೆ. ಶಕ್ತಿ ಇದ್ದರೆ ಬೀದಿಯಲ್ಲಿ ಹೋರಾಟ ಮಾಡಲಿ. ಅದಕ್ಕೆ ಹೇಳಿದ್ದೇನೆ, ಕಲಾಪಕ್ಕೆ ಅಡ್ಡಿ ಮಾಡುವವರನ್ನು ಅಮಾನತು ಮಾಡಿ. ಇಲ್ಲವೇ ಸದನ ಮುಂದೂಡಿ ಎಂದು ಒತ್ತಾಯ ಮಾಡಿದ್ದೇನೆ. ಸುಖಾ ಸುಮ್ಮನೆ ತೆರಿಗೆ ಹಣ ಪೋಲು ಮಾಡುವುದು ಬೇಡ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಬಿಜೆಪಿ ಮೈತ್ರಿ ಬಗ್ಗೆ ಆಹ್ವಾನ ಇಲ್ಲ

ಜೆಡಿಎಸ್ – ಬಿಜೆಪಿ ಮೈತ್ರಿ ಬಗ್ಗೆ ಯಾವುದೇ ಪ್ರಸ್ತಾಪ ಇಲ್ಲ. ಅವರಿಂದ ಯಾವ ಆಹ್ವಾನವೂ ಬಂದಿಲ್ಲ ನಮಗೆ. ಪ್ರಧಾನಿ ಮೋದಿಯವರು ದೇವೇಗೌಡರನ್ನು ಮೆಚ್ಚಿಕೊಳ್ಳುವುದು ಅವರಿಬ್ಬರ ವೈಯಕ್ತಿಕ ಸಂಬಂಧ. ಅದರಲ್ಲಿ ರಾಜಕೀಯ ಇಲ್ಲ. ಚುನಾವಣೆಗೆ ಇನ್ನೂ ಒಂದು ವರ್ಷ ಸಮಯ ಇದೆ, ಏನೆಲ್ಲ ನಡೆಯುತತದೆಯೋ ಕಾದು ನೋಡೋಣ. ಈಗಂತೂ ಬಿಜೆಪಿಯವರು ನಮ್ಮ ಬಳಿ ಬರುವ ಪ್ರಮೇಯ ಇಲ್ಲ. ಸದ್ಯಕ್ಕೆ ಅವರಿಗೆ ಪೂರ್ಣ ಬಹುಮತ ಇದೆ ಎಂದರು ಕುಮಾರಸ್ವಾಮಿ.

ರಾಜ್ಯದಲ್ಲಿ ಕಾಂಗ್ರೆಸ್ ಅಲೆ ಇಲ್ಲ. ಅವರದ್ದು 70 ಸೀಟ್ ಅಷ್ಟೇ. ಅದರ ಮೇಲೆ ಕಾಂಗ್ರೆಸ್ ಹೋಗಲ್ಲ. ಹೀಗಾಗಿ
ಜೆಡಿಎಸ್ ಶಾಸಕರ ಬ್ರೈನ್ ವಾಷ್ ಮಾಡುತ್ತಿದ್ದಾರೆ ಕಾಂಗ್ರೆಸ್ ನಾಯಕರು. ನಮಗೂ ರಾಜಕೀಯ ಗೊತ್ತಿದೆ. ನನಗೆ ಯಾವ ಶಾಕ್ ಇಲ್ಲ, ಯಾರು ಯಾರು ಹೋಗ್ತಾರೆಂದು ನನಗೆ ಗೊತ್ತು. ಇವರ ಹಣೆಬರಹ ಗೊತ್ತಿದೆ, ಯಾರು ಯಾರು ಡಬಲ್ ಗೇಮ್ ಆಡ್ತಿದ್ದಾರೆಂದು ಗೊತ್ತು. ಎಲ್ಲಕ್ಕೂ ಕಾಲ ಕೂಡಿ ಬರುತ್ತದೆ. ನಮ್ಮದು ರೈತರು ಕಟ್ಟಿರುವ ಪಕ್ಷ. ನಾವು ಯಾವ ಆಪರೇಷನ್ ಅನ್ನು ಮಾಡಲ್ಲ, ಅದರ ಅವಶ್ಯಕತೆ ಇಲ್ಲ ಎಂದು ಅವರು ಹೇಳಿದರು.

ಮಕ್ಕಳ ಜತೆ ಚೆಲ್ಲಾಟ ಬೇಡ

ನಾನು ಮಂಡ್ಯದಲ್ಲಿ ಮಾತನಾಡುವಾಗ ಮಕ್ಕಳ ಜತೆ ಚೆಲ್ಲಾಟ ಆಡಬೇಡಿ ಎಂದು ರಾಷ್ಟ್ರೀಯ ಪಕ್ಷಗಳಿಗೆ ಹೇಳಿದ್ದೇನೆ. ಮಾತನಾಡುವಾಗ ಹಿಜಾಬ್ ಎಂದು ಮಾಧ್ಯಮಮಿತ್ರರು ಕೇಳಿದರು. ಆಗ ನಾನು ಹಿಜಾಬ್ – ಗಿಜಾಬ್ ಗೊತ್ತಿಲ್ಲ, ಮಕ್ಕಳ ಭವಿಷ್ಯ ಮುಖ್ಯ ಅಂದಿದ್ದೇನೆ. ಆಡುಭಾಷೆಯಲ್ಲಿ ಮಾತನಾಡುವಾಗ ಮದುವೆ-ಗಿದುವೆ ಅನ್ನುತ್ತೇವಲ್ಲ ಹಾಗೆ. ಅದನ್ನೇ ಹಿಜಾಬ್ ಬಗ್ಗೆ ಕುಮಾರಸ್ವಾಮಿ ಅಗೌರವವಾಗಿ ಮಾತನಾಡಿದ್ದಾರೆಂದು ಅಪಪ್ರಚಾರ ಮಾಡುತ್ತಿದ್ದಾರೆ. ನಾನು ಯಾವುದೇ ಸಮಾಜಕ್ಕೆ, ಧರ್ಮಕ್ಕೆ ಅಪಚಾರ ಮಾಡಲ್ಲ, ಮಾಡುವುದೂ ಇಲ್ಲ. ಅಂಥ ಮನಃಸ್ಥಿತಿಯೂ ನನ್ನದಲ್ಲ. ನಾನು ಎಲ್ಲರನ್ನು ಗೌರವಿಸುವವನು. ಇದನ್ನು ಜನ ಅರ್ಥ ಮಾಡಿಕೊಳ್ಳಬೇಕು. ದೇಶವನ್ನು ಲೂಟೆ ಹೊಡೆದವರು ಈಗ ರಾಷ್ಟ್ರಧ್ವಜ, ರಾಷ್ಟ್ರಭಕ್ತಿ ಬಗ್ಗೆ ಮಾತನಾಡುತ್ತಿದ್ದಾರೆಂದು ಕಾಂಗ್ರೆಸ್ಸಿಗರಿಗೆ ತಿರುಗೇಟು ಕೊಟ್ಟರು.

2023ಕ್ಕೆ ನಮ್ಮದೇ ಸರಕಾರ

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಸ್ಥಾನಗಳನ್ನು ಗೆದ್ದು 2023ಕ್ಕೆ ಕನ್ನಡನಾಡಿನ ಜನತೆಯ ಆರ್ಶೀವಾದದಿಂದ ಜೆಡಿಎಸ್ ಸರಕಾರ ಬಂದೇಬರುತ್ತದೆ. ಇದರಲ್ಲಿ ಯಾವುದೇ ಅನುಮಾನ ಇಲ್ಲ. ಹೀಗಾಗಿ ಪಕ್ಷ ಬಿಡುತ್ತೇವೆ ಎನ್ನುವವರ ಬಗ್ಗೆ ಚಿಂತೆ ಇಲ್ಲ. ಈ ಹಿಂದೆಯೂ 7 ಜನ ಪಕ್ಷ ಬಿಟ್ಟು ಹೋಗಿದ್ದರು. ಯಾರು ಎಷ್ಟೇ ಪ್ರಯತ್ನಪಟ್ಟರೂ ಪಕ್ಷವನ್ನು ನಿರ್ನಾಮ ಮಾಡಲು ಆಗಲ್ಲ. ಚನ್ನಪಟ್ಟಣದ ಜನ ನೂರಾರು ವಾಹನಗಳಲ್ಲಿ ಬಂದು ದೇವೇಗೌಡರ ಹೋರಾಟಕ್ಕೆ ಬೆಂಬಲ ನೀಡುತ್ತಿದ್ದರು. ಜೆಡಿಎಸ್ ಎಲ್ಲಿದೆ ಅನ್ನುವುದನ್ನು 2023ಕ್ಕೆ ಜನ ತೋರಿಸುತ್ತಾರೆ ಎಂದು ಅವರು ತಿಳಿಸಿದರು.

ಪಾದಯಾತ್ರೆಯಿಂದ ಅಧಿಕಾರ ಸಿಗಲ್ಲ

ಮೇಕೆದಾಟು ಪಾದಯಾತ್ರೆಯಿಂದ ಅಧಿಕಾರ ಹಿಡಿಯಲು ಹೊರಟ್ಟಿದ್ದಾರೆ ಕಾಂಗ್ರೆಸ್ಸಿಗರು. ಪಾದಯಾತ್ರೆಯಿಂದ ಮೇಕೆದಾಟು ಯೋಜನೆ ಆಗಲ್ಲ. ಕಾನೂನಾತ್ಮಕವಾಗಿ ಗೆಲ್ಲಬೇಕು. ರಾಜ್ಯದಲ್ಲಿ ಎಷ್ಟು ಅಣೆಕಟ್ಟುಗಳ ಕೆಲಸ ನಿಂತಿದೆ ಎನ್ನುವ ಮಾಹಿತಿ ಅವರಿಗಿದೆಯಾ? ರಾಜ್ಯದ ನೀರಾವರಿ ಯೋಜನೆಗಳಿಗಾಗಿ 2ರಿಂದ 5 ಲಕ್ಷ ಕೋಟಿ ರೂ. ಹಣ ಬೇಕು. ಕಾಂಗ್ರೆಸ್ ನಾಯಕರ ಹೋರಾಟದಿಂದ ಅದು ಆಗುವುದಾದರೆ ನಾನು ಕೂಡ ಹೋರಾಟಕ್ಕೆ ಹೋಗುತ್ತೇನೆ ಎಂದರು ಮಾಜಿ ಮುಖ್ಯಮಂತ್ರಿಗಳು.

ರಾಮನಗರ ನನ್ನ ಕರ್ಮಭೂಮಿ. ಇಲ್ಲಿ ಅವರು ಏನು ಮಾಡಲು ಆಗುವುದಿಲ್ಲ. ಜಿಲ್ಲೆಯ ಜನರು ನನ್ನ ಜತೆಗಿದ್ದಾರೆ, ನನ್ನನ್ನು ಅಲ್ಲಾಡಿಸಲು ಅವರಿಗೆ ಆಗಲ್ಲ. ಆದರೂ ನನ್ನನ್ನು ಖಾಲಿ ಮಾಡಿಸಲು ಅವರು ವ್ಯರ್ಥ ಪ್ರಯತ್ನ ಮಾಡುತ್ತಿದ್ದಾರೆ. ಒಂದಲ್ಲ, ಇನ್ನು ಹತ್ತು ಪಾದಯಾತ್ರೆ ಮಾಡಲಿ, ಇದು ದಿನವೂ ಬಿರಿಯಾನಿ, ಬಾಳೆಕಾಯಿ ಬಜ್ಜಿ, ಜ್ಯೂಸ್ ಇಟ್ಟುಕೊಂಡು ಮಾಡುವ ಪಾದಯಾತ್ರೆ ಜನಪರ ಪಾದಯಾತ್ರೆನಾ? ಎಂದು ಅವರು ಖಾರವಾಗಿ ಪ್ರಶ್ನಿಸಿದರು.

P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಎಲ್ಲೋಡು ಶ್ರೀ ಲಕ್ಷ್ಮೀ ಆದಿನಾರಾಯಣಸ್ವಾಮಿ ಬ್ರಹ್ಮ ರಥೋತ್ಸವ; ಕೂರ್ಮಗಿರಿಯಲ್ಲಿ ಭಕ್ತರ ಜಾತ್ರೆ

ಎಲ್ಲೋಡು ಶ್ರೀ ಲಕ್ಷ್ಮೀ ಆದಿನಾರಾಯಣಸ್ವಾಮಿ ಬ್ರಹ್ಮ ರಥೋತ್ಸವ; ಕೂರ್ಮಗಿರಿಯಲ್ಲಿ ಭಕ್ತರ ಜಾತ್ರೆ

Leave a Reply Cancel reply

Your email address will not be published. Required fields are marked *

Recommended

ಸಂಗೊಳ್ಳಿ ರಾಯಣ್ಣ ಪ್ರತಿಮೆ; ಕಾನೂನಿನ ಮದ್ದರೆಯಲು ಮುಂದಾದ ಸರಕಾರ

ಸಂಗೊಳ್ಳಿ ರಾಯಣ್ಣ ಪ್ರತಿಮೆ; ಕಾನೂನಿನ ಮದ್ದರೆಯಲು ಮುಂದಾದ ಸರಕಾರ

5 years ago
ಕೋವಿಡ್‌ ಎದುರಿಸಲು ಹಳ್ಳಿಹಳ್ಳಿಗೂ ಟೆಲಿಮೆಡಿಸನ್‌ ; ಪ್ರಥಮ ಹೆಜ್ಜೆಇಟ್ಟ ಸರಕಾರ

ವಿದ್ಯಾರ್ಥಿಗಳು-ಪೋಷಕರ ಪಾಲಿಗೆ ನೀಟ್ ಮರಣಶಾಸನ

3 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ