• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಕುಡಿಯುವ ನೀರಿನಲ್ಲಿ ಯುರೇನಿಯಂ; ಸುರಕ್ಷಿತ ನೀರು ಕೊಡಲು ಆಗ್ರಹ

cknewsnow desk by cknewsnow desk
March 23, 2022
in CHIKKABALLAPUR, KOLAR, STATE
Reading Time: 1 min read
0
ಕುಡಿಯುವ ನೀರಿನಲ್ಲಿ ಯುರೇನಿಯಂ; ಸುರಕ್ಷಿತ ನೀರು ಕೊಡಲು ಆಗ್ರಹ
949
VIEWS
FacebookTwitterWhatsuplinkedinEmail

ಶಾಶ್ವತ ನೀರಾವರಿ ಹೋರಾಟ ಸಮಿತಿ, ಯುವಶಕ್ತಿಯಿಂದ ಸರಕಾರಕ್ಕೆ ಮನವಿ; ನೀರಿನ ಸ್ಯಾಂಪಲ್‌ ಪರೀಕ್ಷೆಗೆ ಒತ್ತಾಯ

ಚಿಕ್ಕಬಳ್ಳಾಪುರ: ರಾಜ್ಯದ ಈಶಾನ್ಯ ಭಾಗದ ಬಯಲುಸೀಮೆಯ ಬರಪೀಡಿತ ಜಿಲ್ಲೆಗಳಾದ ಚಿಕ್ಕಬಳ್ಳಾಪುರ ಮತ್ತು ಕೋಲಾರದಲ್ಲಿ ಜಲಮೂಲಗಳು ಕಲುಷಿತವಾಗಿದ್ದು, ನೀರಿನಲ್ಲಿ ಅಪಾಯಕಾರಿ ಯುರೇನಿಯಂ ಧಾತು ಪತ್ತೆಯಾಗಿದೆ. ಹೀಗಾಗಿ ಜನ ಜಾನುವಾರುಗಳಿಗೆ ಕುಡಿಯಲು ಪರ್ಯಾಯ ಸುರಕ್ಷಿತ ನೀರನ್ನು ಒದಗಿಸಬೇಕು ಎಂದು ಶಾಶ್ವತ ನೀರಾವರಿ ಹೋರಾಟ ಸಮಿತಿ ಹಾಗೂ ಯುವಶಕ್ತಿ ಸಂಘಟನೆಗಳು ರಾಜ್ಯ ಸರಕಾರವನ್ನು ಒತ್ತಾಯ ಮಾಡಿವೆ.

ವಿಶ್ವ ಜಲದಿನದ ಪ್ರಯುಕ್ತ ಮಂಗಳವಾರ ಶಾಶ್ವತ ನೀರಾವರಿ ಹೋರಾಟ ಸಮಿತಿಯ ಅಧ್ಯಕ್ಷ ಆರ್.‌ಆಂಜನೇಯ ರೆಡ್ಡಿ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಆರ್.‌ಲತಾ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಬಳಿಕ ಈ ಬಗ್ಗೆ ಮಾಹಿತಿ ನೀಡಿದ ಆಂಜನೇಯ ರೆಡ್ಡಿ ಅವರು ಹೇಳಿದ್ದಿಷ್ಟು;
  • ಈಗಾಗಲೇ ಜಿಲ್ಲೆಯ ಜಲಮೂಲಗಳಲ್ಲಿ ವಿಷಾಂಶಗಳು ಹೇರಳವಾಗಿ ಪತ್ತೆಯಾಗಿದ್ದು, ಈಗ ಯುರೇನಿಯಂ ಕೂಡ ಕಂಡು ಬಂದಿದೆ. ಕುಡಿಯುವ ನೀರಿನ ಉದ್ದೇಶಕ್ಕಾಗಿ ಸ್ಥಾಪನೆ ಮಾಡಲಾಗಿರುವ RO ಘಟಕಗಳ ಕಾರ್ಯಕ್ಷಮತೆ ಕ್ಷೀಣಿಸಿದ್ದು, ನಿರ್ವಹಣೆಯೂ ಸರಿಯಾಗಿರುವುದಿಲ್ಲ. ಹೀಗಾಗಿ ಜನರು ವಿಷಕಾರಿ ನೀರನ್ನೇ ಕುಡಿಯುತ್ತಿದ್ದಾರೆ.
  • ಭಾರತೀಯ ವಿಜ್ಞಾನ ಸಂಸ್ಥೆಯ ವಿಜ್ಞಾನಿಗಳು ನಡೆಸಿರುವ ಅಧ್ಯಯನದಲ್ಲಿ ಅಪಾಯಕಾರಿ ಮಟ್ಟ ಮೀರಿ ನೀರಿನಲ್ಲಿ ಯುರೇನಿಯಂ ಅಂಶ ಪತ್ತೆಯಾಗಿರುವುದು ಖಚಿತವಾಗಿದೆ. ಇಂಥ ನೀರು ಕುಡಿಯುವುದರಿಂದ ಮೂತ್ರಪಿಂಡಗಳ ವೈಫಲ್ಯ, ಕ್ಯಾನ್ಸರ್‌, ನವಜಾತ ಶಿಶುಗಳ ದುರ್ಮರಣ, ದೈಹಿಕ ಜಡತ್ವ ಹಾಗೂ ಪಾರ್ಶ್ವವಾಯು ಉಂಟಾಗುತ್ತದೆ ಎಂದು ವಿಜ್ಞಾನಿಗಳು ಎಚ್ಚರಿಕೆ ನೀಡಿದ್ದಾರೆ.
  • ತಕ್ಷಣವೇ ಪ್ರತಿಯೊಂದು ಕೊಳವೆ ಬಾವಿಯ ನೀರಿನ ಸ್ಯಾಂಪಲ್ ಸಂಗ್ರಹ ಮಾಡಿ, ಆ ಸ್ಯಾಂಪಲ್‌ʼಗಳನ್ನು ಪ್ರಯೋಗಾಲಯಕ್ಕೆ ಕಳಿಸಿ ISO, BIS, WHO ಮಾನದಂಡದ ಪ್ರಕಾರ ನೀರಿನ ಗುಣಮಟ್ಟವನ್ನು ಖಾತ್ರಿಪಡಿಸಿಕೊಳ್ಳಬೇಕು ಎಂದು ನಾವು ಸರಕಾರವನ್ನು ಒತ್ತಾಯ ಮಾಡಿದ್ದೇವೆ.
  • ವಿಶ್ವ ಆರೋಗ್ಯ ಸಂಸ್ಥೆ ಮಾನದಂಡದಂತೆ ಒಂದು ಲೀಟರ್‌ ಕುಡಿಯುವ ನೀರಿನಲ್ಲಿ30 ಮೈಕ್ರೋಗ್ರಾಂ ಯುರೇನಿಯಂ ಇರಬಹುದು. ಅದೇ ರೀತಿ ಬ್ಯೂರೋ ಆಫ್‌ ಇಂಡಿಯನ್‌ ಸ್ಟ್ಯಾಂಡರ್ಡ್ಸ್‌ (BIS)‌ ಪ್ರಕಾರ ಒಂದು ಲೀಟರ್‌ ನೀರಿನಲ್ಲಿ 60 ಮೈಕ್ರೋಗ್ರಾಂ ಇರಬಹುದು. ಆದರೆ, ನಮ್ಮ ಎರಡೂ ಜಿಲ್ಲೆಗಳಲ್ಲಿ ಒಂದು ಲೀಟರ್‌ ಕುಡಿಯುವ ನೀರಿನಲ್ಲಿ 1000 ಮೈಕ್ರೋಗ್ರಾಂ ಗಿಂತಲೂ ಹೆಚ್ಚು ಯುರೇನಿಯಂ ಪತ್ತೆಯಾಗಿದೆ. ಈ ಭಯಾನಕ ಸಂಗತಿಯನ್ನು ಕೇಂದ್ರ ಜಲಶಕ್ತಿ ಸಚಿವರೇ ಸ್ಪಷ್ಟಪಡಿಸಿದ್ದಾರೆ. ಆದರೆ, ರಾಜ್ಯ ಸರಕಾರ ಮಾತ್ರ ಮೌನಕ್ಕೆ ಶರಣಾಗಿದೆ.
  • ಇದರ ಜತೆಗೆ, ಬೆಂಗಳೂರು ಮಹಾನಗರದ ವಿಷಕಾರಿ ತ್ಯಾಜ್ಯ ನೀರನ್ನು ಎರಡು ಹಂತಗಳಲ್ಲಿ ಅವೈಜ್ಞಾನಿಕವಾಗಿ ಶುದ್ಧೀಕರಿಸಿ ಎರಡೂ ಜಿಲ್ಲೆಗಳ ಕೆರೆಗಳಿಗೆ ತುಂಬಿಸಲಾಗುತ್ತಿದೆ. ಪರಿಣಾಮವಾಗಿ ಕೆರೆಗಳು ಕಲುಷಿತವಾಗಿ, ಅಂತರ್ಜಲವೂ ಕಲುಷಿತವಾಗುತ್ತಿದೆ.
  • ತಕ್ಷಣವೇ ಜಿಲ್ಲಾಡಳಿತವೂ ಈ ಎಲ್ಲ ನೀರಿನ ಸ್ಯಾಂಪಲ್‌ ಗಳನ್ನು ಸಂಗ್ರಹ ಮಾಡಿ ISO, BIS, WHO ನಿಗದಿ ಮಾಡಿರುವ ಮಾನದಂಡಗಳ ಪ್ರಕಾರ ನೀರಿನ ಸುರಕ್ಷತೆಯನ್ನು ಖಾತ್ರಿಪಡಿಸಿಕೊಂಡು ಜನ ಜಾನುವಾರುಗಳಿಗೆ ಪೂರೈಕೆ ಮಾಡಬೇಕು.
ಜಿಲ್ಲಾಧಿಕಾರಿ ಹೇಳಿದ್ದೇನು?

ಯುರೇನಿಯಂ ಧಾತು ಪತ್ತೆಯಾದ ಎಂಟು ಕೊಳವೆ ಬಾವಿಗಳನ್ನು ಬಂದ್‌ ಮಾಡಿಸಲಾಗಿದೆ. ನೀರಿನ ಸುರಕ್ಷತೆ ಗುಣಮಟ್ಟಕ್ಕೆ ಆದ್ಯತೆ ಕೊಡಲಾಗುತ್ತದೆ. ಹಾಗೆಯೇ ನೀರಿನ ಸ್ಯಾಂಪಲ್‌ ಗಳನ್ನು ಸಂಗ್ರಹ ಮಾಡಿ ಲ್ಯಾಬ್‌ ಗೆ ಕಳಿಸಲಾಗುವುದು ಹಾಗೂ ಕುಡಿಯುವ ನೀರಿನ ಘಟಕಗಳ ನೀರಿನ ಗುಣಮಟ್ಟ ಪರಿಶೀಲನೆ ನಡೆಸಲಾಗುವುದು ಎಂದು ಇದೇ ವೇಳೆ ಜಿಲ್ಲಾಧಿಕಾರಿಗಳು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸಿಇಓ ಪಿ.ಶಿವಶಂಕರ್‌, ಮುಖಂಡರಾದ ಎಂ.ಆರ್.ಲಕ್ಷ್ಮೀನಾರಾಯಣ, ನಂದಿ ಪುರಷೋತ್ತಮ, ಉದಯ ಶಂಕರ್‌, ವಿಜಯಭಾವ ರೆಡ್ಡಿ, ಸುಷ್ಮಾ ಶ್ರೀನಿವಾಸ್‌, ಪ್ರಭಾ ನಾರಾಯಣ ಗೌಡ ಮುಂತಾದವರು ಹಾಜರಿದ್ದರು.

cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ತಮಿಳುನಾಡಿಗೆ ಕೇರ್‌ ಮಾಡಬೇಡಿ, ಮೊದಲು ಪ್ರಧಾನಿ ಮನವೊಲಿಸಿ

ತಮಿಳುನಾಡಿಗೆ ಕೇರ್‌ ಮಾಡಬೇಡಿ, ಮೊದಲು ಪ್ರಧಾನಿ ಮನವೊಲಿಸಿ

Leave a Reply Cancel reply

Your email address will not be published. Required fields are marked *

Recommended

ಕರ್ನಾಟಕದೊಳಗೆ ಆಂಧ್ರ ರಾಜಕೀಯ; ಚಕ್ರ ತಿರುಗಿಸುತ್ತಿದೆ ತೆಲುಗು ವೋಟ್‌ ಬ್ಯಾಂಕ್‌ !

ಅಕ್ಟೋಬರ್‌ ಅ.25ರಿಂದ 1 ರಿಂದ 5ನೇ ತರಗತಿ ಮಕ್ಕಳಿಗೆ ಶಾಲೆ

4 years ago
ಹೊಸ ವರ್ಷಾಚರಣೆಗೆ ಬರಲಿದೆ ಕೋವಿಡ್‌ ಹೊಸ ಮಾರ್ಗಸೂಚಿ; ಸಂಭ್ರಮ ಸರಳವಾಗಿರಲಿ, ಅಬ್ಬರಕ್ಕೆ ಅವಕಾಶವೇ ಇಲ್ಲ

ಹೊಸ ವರ್ಷಾಚರಣೆಗೆ ಬರಲಿದೆ ಕೋವಿಡ್‌ ಹೊಸ ಮಾರ್ಗಸೂಚಿ; ಸಂಭ್ರಮ ಸರಳವಾಗಿರಲಿ, ಅಬ್ಬರಕ್ಕೆ ಅವಕಾಶವೇ ಇಲ್ಲ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ