• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಗುಡಿಬಂಡೆ: ಯುವಕರಿಬ್ಬರ ಆತ್ಮಹತ್ಯೆ ತಂದ ಆತಂಕ

cknewsnow desk by cknewsnow desk
April 23, 2022
in CHIKKABALLAPUR, STATE
Reading Time: 1 min read
0
ಸ್ವಿಚ್ ಆಫ್ ಆದ ದಾರಿ ದೀಪಗಳು; ಗುಡಿಬಂಡೆ ಕೆರೆ ಏರಿ ಮೇಲೆ ಕಗ್ಗತ್ತಲು
2.5k
VIEWS
FacebookTwitterWhatsuplinkedinEmail

ನಿರುದ್ಯೋಗ, ಹಣಕಾಸು ಸಮಸ್ಯೆ, ಮಾನಸಿಕ ಒತ್ತಡಕ್ಕೆ ಸಿಲುಕುತ್ತಿರುವ ಯುವಜನತೆ

by GS Bharath Gudibande

ಗುಡಿಬಂಡೆ: ಕಳೆದ ಎರಡು ವರ್ಷಗಳಿಂದ ಕೋವಿಡ್ ಸೋಂಕು ಕಾರಣಕ್ಕೆ ಎಲ್ಲರೂ ಕಂಗಾಲಾಗಿದ್ದರು. ಪ್ರತಿಯೊಬ್ಬರ ಜೀವನವೂ ಹಳಿತಪ್ಪಿ ಕಷ್ಟಕ್ಕೆ ಸಿಲುಕಿದ್ದರು. ಆದರೆ ಈಗ ಸಾಲದ ಶೂಲವೋ ಅಥವಾ ಮಾನಸಿಕ ಒತ್ತಡವೋ ಯುವಕರು ಆತ್ಮಹತ್ಯೆಗೆ ಶರಣಾಗುವ ಘಟನೆಗಳು ಹೆಚ್ಚಾಗುತ್ತಿದ್ದು, ಪೋಷಕರು ದಿಗ್ಭ್ರಾಂತರಾಗಿದ್ದಾರೆ.

ತಾಲೂಕಿನಲ್ಲಿ ಕೆಲ ಯುವಕರು ಮಾನಸಿಕ ಒತ್ತಡ ತಾಳಲಾರದೆ, ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಘಟನೆಗಳು ಬೆಳಕಿಗೆ ಬರುತ್ತಿವೆ.

ಇತ್ತೀಚೆಗಷ್ಟೇ ಗುಡಿಬಂಡೆಯ ಇಬ್ಬರು ಯುವಕರು ಆತ್ಮಹತ್ಯ ಮಾಡಿಕೊಂಡಿದ್ದು, ಇದರಿಂದ ತಾಲೂಕಿನ ಕೆಲ ಯುವಕರು ಮತ್ತು ಪೋಷಕರಲ್ಲಿ ಖಿನ್ನತೆಗೆ ಕಾರಣವಾಗಿದೆ. ಅಧಿಕಾರಿಗಳು ಯುವಕರಲ್ಲಿ ಧೈರ್ಯ ತುಂಬುವ ಕೆಲಸ ಮಾಡಬೇಕಿದೆ.

ನಾನಾ ಕಾರಣಗಳಿಂದ ದೇಶ, ರಾಜ್ಯದಲ್ಲಿ ಯುವಕರ ಆತ್ಮಹತ್ಯೆ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಲೇ ಇವೆ. ಸಣ್ಣಪುಟ್ಟ ಸಮಸ್ಯೆಗಳು ಯುವಕರನ್ನು ಕಂಗೆಡಿಸುತ್ತಿವೆ. ಜೀವನದಲ್ಲಿ ಸಮಸ್ಯೆಗಳು ಸಾಮಾನ್ಯ. ಪ್ರತೀ ಸಮಸ್ಯೆಗೂ ಪರಿಹಾರ ಇದ್ದೇ ಇರುತ್ತದೆ. ಆದರೆ ಕೋಪ, ಖಿನ್ನತೆ, ಅವಿವೇಕದಿಂದ ದುಡುಕು ನಿರ್ಧಾರ ತೆಗೆದುಕೊಳ್ಳಬಾರದು. ಇಂದು ದೊಡ್ಡ ಬೆಟ್ಟದಂತೆ ಕಾಣುವ ಸಮಸ್ಯೆ, ನಾಳೆ ಸಣ್ಣ ಪ್ರಾಬ್ಲಂ ಎನಿಸಬಹುದು. ಸ್ವಾರ್ಟಾಗಿ ಕುಳಿತು ಯೋಚಿಸಿದರೆ ಆ ಸಮಸ್ಯೆ ಚಿಟಿಕೆ ಹೊಡೆಯುವದರಲ್ಲಿ ಪರಿಹಾರ ಆಗಬಹುದು. ಹಾಗಾಗಿ ನಮ್ಮ ಸಮಸ್ಯೆಗಳ ಬಗ್ಗೆ ನಮಗೆ ಅರಿವು ಇರಬೇಕು, ತಾಳ್ಮೆ ಹೆಚ್ಚು ಮುಖ್ಯ. ಆರೋಗ್ಯಕರ ಚಿಂತನೆ, ಒಳ್ಳೆಯ ಅಭ್ಯಾಸಗಳು, ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ಜೀವ ತೆಗೆದುಕೊಳ್ಳುವ ಸನ್ನಿವೇಶ ಬರುವುದಿಲ್ಲ. ನಾವೆಲ್ಲರೂ ಸಂಘಜೀವಿಗಳು ಎನ್ನುವುದನ್ನು ಮರೆಯಬಾರದು. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಯುವಕರಲ್ಲಿ ಆತ್ಮಸ್ಥೈರ್ಯ ತುಂಬುವ ಕೆಲಸಮಾಡಬೇಕು ಎನ್ನುವುದು ಸಿಕೆನ್ಯೂಸ್ ನೌ ಕಳಕಳಿಯಾಗಿದೆ.‌ ಇದಕ್ಕೆ ಸಾಥ್‌ ಕೊಡಲು ಸಿಕೆನ್ಯೂಸ್ ನೌ ಸದಾ ಸಿದ್ಧವಾಗಿರುತ್ತದೆ.

ಆತ್ಮಹತ್ಯೆ ತಡೆಗಟ್ಟುವುದು ಹೇಗೆ?

ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆಗಳು ಹೆಚ್ಚಾಗುತ್ತಿವೆ. ಮಾನಸಿಕ ಖಿನ್ನತೆಗೆ ಹಲವು ಕಾರಣಗಳಿವೆ. ನಮ್ಮ ಜೀವನಶೈಲಿ ಎಲ್ಲವೂ ತುಂಬಾ ಫಾಸ್ಟ್ ಆಗಿದೆ. ಅದನ್ನು ಸ್ವಲ್ಪ ನಿಧಾನ ಮಾಡಬೇಕು. ಅಭಿವೃದ್ಧಿ, ತಂತ್ರಜ್ಞಾನ ನಮ್ಮನ್ನು ಸಂಪೂರ್ಣ ನಿಯಂತ್ರಣ ಮಾಡಲು ಬಿಟ್ಟಿದ್ದೇವೆ. ನಮ್ಮ ಭಾರತೀಯ ಪರಂಪರೆಯಂತೆ ಹಬ್ಬ, ಹರಿದಿನಗಳ ಆಚರಣೆ, ಪೌಷ್ಠಿಕ ಆಹಾರ, ಕ್ರೀಡೇಗಳು, ಧ್ಯಾನ, ಯೋಗ, ಆರ್ಯುವೇದ, ಒಳ್ಳೆಯ ಆಲೋಚನೆ.. ಇವುಗಳನ್ನು ನಾವು ಪಾಲಿಸುವುದಿಲ್ಲ. ಎಲ್ಲರೂ ಇಂಥ ಅಂಶಗಳನ್ನು ಜೀವನದ ಒಂದು ಭಾಗವಾಗಿ ಮಾಡಿಕೊಳ್ಳಬೇಕು ಎಂದು ತಾಲೂಕು ವೈಧ್ಯಾಧಿಕಾರಿ ಡಾ.ನರಸಿಂಹ ಮೂರ್ತಿ ಯುವಕರಿಗೆ ಹೇಳುವ ಕಿವಿಮಾತು.

ಓಡುತ್ತಿರುವ ಈ ಜಗತ್ತಿನಲ್ಲಿ ಯಾರಿಗೂ ಸಮಯವೇ ಇಲ್ಲ ಎಂಬ ಮಾತಿದೆ. ಬಯಸಿದ್ದು ಸಿಗದಿರುವುದು, ಅವಮಾನ ಸಹಿಸಿಕೊಳ್ಳದಿರುವುದು, ಕೆಲಸದ ಒತ್ತಡ, ಖಿನ್ನತೆ, ಕುಟುಂಬದಿಂದ ದೂರದಲ್ಲಿರುವುದು, ಸ್ನೇಹಿತರ ಚಿಂತೆ, ಆರೋಗ್ಯದ ಕಡೆ ಗಮನ ಕೊಡದಿರುವುದು, ಹಣಕಾಸು ಮತ್ತು ಕೆಲಸದ ಒತ್ತಡ, ಜತೆಗೆ ಭವಿಷ್ಯದ ಅನಿಶ್ಚಿತತೆಯ ಬಗ್ಗೆ ಚಿಂತೆ.. ಹೀಗೆ ಒಂದಾ, ಎರಡಾ? ಸಮಸ್ಯೆಗಳ ಆಗರವನ್ನೇ ಮನುಷ್ಯ ತಾನಾಗಿಯೇ ಕಟ್ಟಿಕೊಂಡಿದ್ದಾನೆ. ಇವುಗಳಿಂದ ಹೊರ ಬರಲಾಗದೇ ಆತ್ಮಹತ್ಯೆಯ ಬಗ್ಗೆ ಅಲೋಚನೆ ಮಾಡುತ್ತಾನೆ. ನಮ್ಮ ಆರೋಗ್ಯದ ಬಗ್ಗೆ ಹೆಚ್ಚು ಗಮನ ಕೊಡಬೇಕು, ಧ್ಯಾನ ಯೋಗ, ಆರ್ಯುವೇದ ಹೀಗೆ ನಮ್ಮ ಸಂಪ್ರದಾಯದ ಬಗ್ಗೆ ಗಮನ ನೀಡಬೇಕು. ಯುವಕರಿಗೆ ಧೈರ್ಯ ತುಂಬುವ ವಿಶೇಷ ಕಾರ್ಯಗಾರವನ್ನು ಶೀಘ್ರದಲ್ಲಿಯೇ ಮಾಡುತ್ತೇವೆ.

ಡಾ.ನರಸಿಂಹಮೂರ್ತಿ, ತಾಲೂಕು ಆರೋಗ್ಯ ವೈದ್ಯಾಧಿಕಾರಿ, ಗುಡಿಬಂಡೆ

ಮನುಷ್ಯ ಹುಟ್ಟುವಾಗ ಹೋರಾಟ ನಡೆಸಿಯೇ ಹುಟ್ಟುತ್ತಾನೆ. ಹೀಗಿರುವಾಗ ಜೀವನದಲ್ಲಿ ಬರುವ ಸಮಸ್ಯೆಗಳೆಲ್ಲವೂ ಎಂದಿಗೂ ದೊಡ್ಡದಲ್ಲ. ಪ್ರತೀ ಸಮಸ್ಯೆಗೂ ಪರಿಹಾರ ಇದ್ದೇ ಇರುತ್ತದೆ. ಆದರೆ; ಕೋಪ, ಖಿನ್ನತೆಯಲ್ಲಿ ದುಡುಕು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು. ಇಂದು ದೊಡ್ಡ ಬೆಟ್ಟವಾಗಿ ಕಾಣುವ ಸಮಸ್ಯೆಗಳು ನಾಳೆ ಕುಳಿತು ಯೋಚಿಸಿದರೆ ಅದು ಸಮಸ್ಯೆಯೇ ಎನ್ನಿಸುವುದಿಲ್ಲ. ಗುಡಿಬಂಡೆ ತಾಲೂಕಿನಲ್ಲಿ ಜೀವನಾಧಾರಕ್ಕೆ, ನಿರುದೋಗ ನಿವಾರಣೆಗೆ ಯಾವುದೇ ಕಾರ್ಖಾನೆ ಅಥವಾ ಬೇರೆ ಏನೂ ಇಲ್ಲ. ನಮ್ಮ ಜನಪ್ರತಿನಿಧಿಗಳು ಹಲವು ದಶಕಗಳಿಂದ ಬರೀ ಸುಳ್ಳು ಆಶ್ವಾಸನೆಗಳು ಕೊಡುತ್ತಿದ್ದಾರೆ ಅಷ್ಟೆ. ಇನ್ನಾದರೂ ಗುಡಿಬಂಡೆ ತಾಲೂಕಿನ ಜನರು ಎಚ್ಚೆತ್ತುಕೊಳ್ಳಬೇಕು. ಕನಿಷ್ಠ ನಮ್ಮ ಜೀವನ, ಆರ್ಥಿಕ ಶಕ್ತಿಯನ್ನು ಬದಲಿಸಿಕೊಳ್ಳುವ ರೀತಿಯಲ್ಲಿ ಜನಪ್ರತಿನಿಧಿಗಳು ಕೆಲಸ ಮಾಡಬೇಕು. ಯುವಕರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸುದ್ದಿ ಕೇಳಿ ಮನಸ್ಸಿಗೆ ತುಂಬಾ ನೋವಾಗಿದೆ. ಅಧಿಕಾರಿಗಳು ತಾಲೂಕಿನಲ್ಲಿ ಸಕಾರಾತ್ಮಕ ಮನೋಭಾವ ವೃದ್ಧಿಸುವ ಕಾರ್ಯಗಾರ ಮಾಡಿ ಯುವ ಮನಸ್ಸುಗಳಿಗೆ ಧೈರ್ಯ ತುಂಬ ಕೆಲಸ ಮಾಡಬೇಕು.

ಆಶಾ ಜಯಪ್ಪ, ಮಾಜಿ ಅಧ್ಯಕ್ಷೆ, ತಾಲೂಕು ಪಂಚಾಯಿತಿ, ಗುಡಿಬಂಡೆ

cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಜೆಡಿಎಸ್ ಜನತಾ ಜಲಧಾರೆ ಆರಂಭ

3-4 ತಿಂಗಳಲ್ಲಿ ಬಂಗಾರಪೇಟೆಯ ಯರಗೋಳ್ ಯೋಜನೆ ಪೂರ್ಣ

Leave a Reply Cancel reply

Your email address will not be published. Required fields are marked *

Recommended

ಡಿಕೆಶಿ ಬಹಿರಂಗ ಕ್ಷಮೆ ಕೇಳಬೇಕು: ಸಚಿವ ಡಾ.ಕೆ.ಸುಧಾಕರ್ ಡಿಮಾಂಡ್

ಕೋಚಿಮುಲ್‌ ವಿಭಜನೆ ಆದೇಶ ವಾಪಸ್‌ ವಿರುದ್ಧ ಕಾನೂನು ಹೋರಾಟ

2 years ago
11 ಸಲ ಕಾಲ್‌ ಮಾಡಿದ  ಮಾಜಿ ಸಿಎಂ! ಜೆಡಿಎಸ್‌ ಶಾಸಕರ ಬ್ರೈನ್‌ವಾಶ್!!

ಮಳೆ & ನೆರೆ ನಿರ್ವಹಣೆ: ಸರಕಾರ-ಅಧಿಕಾರಿಗಳ ನಡುವೆ ಸಮನ್ವಯತೆ ಇಲ್ಲ

3 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ