ಸಿಕೆನ್ಯೂಸ್ ನೌ ವರದಿಗೆ ಸ್ಪಂದಿಸಿದ ಆರೋಗ್ಯ ಸಚಿವರು
by GS Bharath Gudibande
ಚಿಕ್ಕಬಳ್ಳಾಪುರ: ಯುದ್ಧಪೀಡಿತ ಉಕ್ರೇನ್ ದೇಶದಿಂದ ರಾಜ್ಯಕ್ಕೆ ವಾಪಸಾಗಿರುವ ಎಲ್ಲ ವೈದ್ಯಕೀಯ ವಿದ್ಯಾರ್ಥಿಗಳಿಗೆ ಶೀಘ್ರವೇ ಗುಡ್ ನ್ಯೂಸ್ ನೀಡುತ್ತೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅಭಯ ನೀಡಿದ್ದಾರೆ.
ರಷ್ಯಾ- ಉಕ್ರೇನ್ ದೇಶಗಳ ನಡುವಿನ ಯುದ್ಧದ ಪರಿಣಾಮದಿಂದ ಭಾರತದ 20 ಸಾವಿರ ವಿದ್ಯಾರ್ಥಿಗಳು ಸ್ವದೇಶಕ್ಕೆಚ ಮರಳಿದ್ದಾರೆ. ಆ ಪೈಕಿ ೭೦೦ ವಿದ್ಯಾರ್ಥಿಗಳು ರಾಜ್ಯದವರೇ ಇದ್ದು, ಅವರಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ 18ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸೇರಿದ್ದಾರೆ.
ಇವರು ಎದುರಿಸುತ್ತಿದ್ದ ಅತಂತ್ರ ಸ್ಥಿತಿಯ ಬಗ್ಗೆ ಸಿಕೆನ್ಯೂಸ್ ನೌ ವರದಿ ಮಾಡಿತ್ತು. ಈ ವರದಿಯ ಬಗ್ಗೆ ಸಚಿವರು ಸ್ಪಂದಿಸಿ ವಿದ್ಯಾರ್ಥಿಗಳ ನೆರವಿಗೆ ಧಾವಿಸುವುದಾಗಿ ತಿಳಿಸಿದ್ದಾರೆ.
ರಾಜ್ಯ ಸರಕಾರ ಈಗಾಗಲೇ ಕೇಂದ್ರದ ಜತೆ ನಿರಂತರ ಸಂಪರ್ಕದಲ್ಲಿದೆ, ಈ ಬಗ್ಗೆ ಸಮಿತಿಯನ್ನು ರಚನೆ ಮಾಡಿದ್ದೇವೆ. ಆದಷ್ಟು ಬೇಗ ಈ ಎಲ್ಲಾ ವಿದ್ಯಾರ್ಥಿಗಳಿಗೆ ಶುಭಸುದ್ದಿ ಸಿಗಲಿದೆ ಎಂದು ಅವರು ಭರವಸೆ ನೀಡಿದ್ದಾರೆ.
- ಕೆಳಗಿನ ವರದಿಯನ್ನು ಓದಲು ಈ ಲಿಂಕ್ ಕ್ಲಿಕ್ ಮಾಡಿʼ