• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಗಾಂಧೀಜಿ ಹತ್ಯೆ ಮಾಡಿದವರಿಂದಲೇ ರಾಷ್ಟ್ರ ವಿಭಜನೆ

P K Channakrishna by P K Channakrishna
August 15, 2022
in STATE
Reading Time: 1 min read
0
ಗಾಂಧೀಜಿ ಹತ್ಯೆ ಮಾಡಿದವರಿಂದಲೇ ರಾಷ್ಟ್ರ ವಿಭಜನೆ
931
VIEWS
FacebookTwitterWhatsuplinkedinEmail

ಆಗ ಇದ್ದಿದ್ದು ಅಸಲಿ ಕಾಂಗ್ರೆಸ್, ಈಗಿರುವುದು ನಕಲಿ ಕಾಂಗ್ರೆಸ್; ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಇಂದು ದೇಶಪ್ರೇಮವನ್ನು ಗುತ್ತಿಗೆ ಪಡೆದವರಂತೆ ವರ್ತಿಸುತ್ತಿರುವ ಶಕ್ತಿಗಳೇ ಸ್ವಾತಂತ್ರ್ಯ ನಂತರ ದೇಶ ವಿಭಜನೆಗೆ ಕಾರಣವಾದವು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಹಾಗೆಯೇ, ಕಾಂಗ್ರೆಸ್ ವಿರುದ್ಧವೂ ಟೀಕಾ ಪ್ರಹಾರ ನಡೆಸಿದ ಅವರು; ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಕಾಂಗ್ರೆಸ್ ಪಕ್ಷವೇ ಬೇರೆ, ಆದರೆ, ಈಗಿನ ಕಾಂಗ್ರೆಸ್ ನಕಲಿ ಕಾಂಗ್ರೆಸ್ ಎಂದು ನೇರವಾಗಿ ಹೇಳಿದರು.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ನಿಮಿತ್ತ ಜೆಡಿಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ 75ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಒಂದು ಕಡೆ ನೆಹರೂ ಭಾವಚಿತ್ರ ಕಣ್ಮರೆ ಮಾಡುತ್ತಾರೆ. ಮತ್ತೊಂದು ಕಡೆ ಜವಹಾರಲಾಲ್ ನೆಹರೂ ರಾಷ್ಟ್ರ ವಿಭಜನೆ ಆಗಲು ಕಾರಣ ಅಂತ ನೆಪ ಹೇಳುತ್ತಾರೆ. ಅಂದು ಗಾಂಧೀಜಿ ಅವರನ್ನು ಕೊಲೆ ಮಾಡಿದವರೇ ದೇಶ ವಿಭಜನೆ ಆಗಲು ಕಾರಣ ಎಂದು ಮಾಜಿ ಮುಖ್ಯಮಂತ್ರಿಗಳು ದೂರಿದರು.

ಅಂದು ನಿಮ್ಮ (ಬಿಜೆಪಿಯ) ಸಂಕುಚಿತ ಮನೋಭಾವದಿಂದಲೇ ದೇಶ ವಿಭಜನೆ ಆಗಲು ಕಾರಣ. ಇಂದು ನೋಡಿದರೆ ನೆಹರು ಅವರ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಲಾಗುತ್ತಿದೆ ಎಂದರು ಅವರು.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಮೃತ ಘಳಿಗೆಯಲ್ಲಿ @JanataDal_S ಪಕ್ಷದ ಕಚೇರಿ ಜೆಪಿ ಭವನದಲ್ಲಿ 76ನೇ ಸ್ವಾತಂತ್ರ್ಯ ದಿನಾಚರಣೆಯ ಅನನ್ಯ ಕ್ಷಣ. ಪಕ್ಷದ ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಂ.ಇಬ್ರಾಹಿಂ ಅವರಿಂದ ಧ್ವಜಾರೋಹಣ. 1/2 pic.twitter.com/85sh1QuHHj

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 15, 2022

75 ವರ್ಷದ ಸವಿನೆನಪಿಗಾಗಿ ಬಿಜೆಪಿ ಹರ್‌ಘರ್ ತಿರಂಗ ಎಂಬ ಕಾರ್ಯಕ್ರಮ ಮಾಡಿದೆ. ಕಾಂಗ್ರೆಸ್ ನಡಿಗೆ ಕಾರ್ಯಕ್ರಮ ಹಮ್ಮಿಕೊಂಡಿವೆ. ಅದರ ಎರಡೂ ರಾಷ್ಟ್ರೀಯ ಪಕ್ಷಗಳೂ ಜನರಿಗೆ ಮಂಕಬೂದಿ ಎರಚುತ್ತುವೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಅಂದು ಸ್ವಾತಂತ್ರ್ಯಕ್ಕಾಗಿ ಹುಟ್ಟಿಕೊಂಡ ಕಾಂಗ್ರೆಸ್‌ ಬೇರೆ. ಇಂದು ಕಾಂಗ್ರೆಸ್ ಹೆಸರೇಳಿ ರಾಜಕೀಯ ಮಾಡುವವರು ನಕಲಿ ಕಾಂಗ್ರೆಸ್ಸಿಗರು. ಅಂದು ಹಲವಾರು ಮಂದಿ ಪ್ರಾಣ ತ್ಯಾಗ ಮಾಡಿ ಸ್ವಾತಂತ್ರ್ಯ ತಂದುಕೊಟ್ಟರು. ಸ್ವಾತಂತ್ರ್ಯ ತಂದುಕೊಟ್ಟ ನಂತರದ ದಿನಗಳ ಬಗ್ಗೆ ಈಗ ಚರ್ಚೆ ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿಗಳು ನುಡಿದರು.

ಜವಾಹರಲಾಲ್ ನೆಹರು ಭಾವಚಿತ್ರ ವಿಚಾರದಲ್ಲಿ ಬಿಜೆಪಿ ಸರ್ಕಾರ ಹೇಗೆ ನಡೆದುಕೊಂಡಿದೆ ಎಂಬುದನ್ನು ನೋಡಿದ್ದೇ‌ನೆ. ಅದಕ್ಕೆ ನಾವೆಲ್ಲರೂ ತಲೆ ತಗ್ಗಿಸುವ ಕೆಲಸವಾಗಿದೆ ಎಂಬುದು ನನ್ನ ಅಭಿಪ್ರಾಯ. ನೆಹರು ಕುಟುಂಬ ಸ್ವಾತಂತ್ರ್ಯ ಹೋರಾಟದಲ್ಲಿ ಹೇಗೆ ಭಾಗವಹಿಸಿತ್ತು. ಅವರ ಕೊಡುಗೆ ಏನೆಂಬುದು ಎಲ್ಲರಿಗೂ ಗೊತ್ತಿರುವ ವಿಚಾರವೇ ಎಂದು ನೆಹರು ಭಾವಚಿತ್ರ ಹಾಕದಿದ್ದಕ್ಕೆ ಕುಮಾರಸ್ವಾಮಿ ಅವರು ಅಸಮಾಧಾನ ವ್ಯಕ್ತಪಡಿಸಿದರು.

ಸಾವರ್ಕರ್ ಭಾವಚಿತ್ರ ತೆಗೆದರೆಂದು ಮುಸ್ಲಿಂ ಯುವಕರನ್ನು ಬಂಧನ ಮಾಡಿದ್ದಾರೆ. ಅಲ್ಲಿ ಸಾವರ್ಕರ್ ಭಾವಚಿತ್ರ ತೆಗೆದರೆಂಬ ಕಾರಣಕ್ಕೆ ಇಲ್ಲಿ ಟಿಪ್ಪು ಫ್ಲೆಕ್ಸ್ ಹರಿದು ಹಾಕಿದ್ದಾರೆ. ಇದು ಅಮೃತ ಮಹೋತ್ಸವ ಆಚರಿಸುವ ವಿಧಾನವೇ? ಎಂದು ಪ್ರಶ್ನಿಸಿದರು ಕುಮಾರಸ್ವಾಮಿ ಅವರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸ್ವಾತಂತ್ರ್ಯ ದಿನವನ್ನು ವಿಶೇಷವಾಗಿ ಆಚರಣೆ ಮಾಡಬೇಕೆಂದು ಕರೆಕೊಟ್ಟಿವೆ. ಆದರೆ ಅವರೇ ಸಂಕುಚಿತ ಮನೋಭಾವದಲ್ಲಿ ಈ ಮಹಾನ್ ದಿನವನ್ನು ಆಚರಿಸುತ್ತಿದ್ದಾರೆ. ನಾಡಿನ ಅನೇಕ ಮಹನೀಯರ ಕೊಡುಗೆ ಸ್ಮರಿಸುವಲ್ಲಿ ಸಂಕುಚಿತ ಮನೋಭಾವ ತೋರಿಸುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಊಟ, ವಸತಿ ಕೊಡದೇ ಹರ್ ಘರ್ ತಿರಂಗ ಮಾಡಿ ಪ್ರಯೋಜನ ಏನು?. ಕೋವಿಡ್ ಅನಾಹುತ ಸಂದರ್ಭದಲ್ಲಿ ಏನೇನಾಯಿತು? ಮನೆ ಮನೆಯ ಮೇಲೆ ಬಾವುಟ ಹಾರಿಸಿ ಎಂದು ಕರೆ ಕೊಟ್ಟಿದ್ದೀರಾ. ಆದರೆ, ಎಷ್ಟೋ ಜನಕ್ಕೆ ವಾಸ ಮಾಡಲು ಮನೆ ಇಲ್ಲ. ಫ್ಲೈ ಓವರ್ ಗಳ ಕೆಳಗೆ, ದೊಡ್ಡ ದೊಡ್ಡ ಪೈಪುಗಳಲ್ಲಿ ಜನ ವಾಸ ಮಾಡುತ್ತಿದ್ದಾರೆ. ಬೃಹತ್ ಜಾಥಾಗಳನ್ನು ಮಾಡಿಕೊಂಡು ಹೊರಟ್ಟಿದ್ದಿರಿ, ನಿಮ್ಮ ಜಾಥಾಗಳಿಂದ ಜನರ ಹೊಟ್ಟೆ ತುಂಬಲ್ಲ. ಪ್ರಧಾನಿ ನರೇಂದ್ರ ಮೋದಿ ಒಂದು ಕಡೆ ಹೇಳುತ್ತಾರೆ. ಉಚಿತ ಸೌಲಭ್ಯಗಳನ್ನು ಕೊಡುವುದು ನಿಲ್ಲಿಸಬೇಕು. ಎಷ್ಟೋ ಕುಟುಂಬಗಳು ಎರಡು ಹೊತ್ತಿನ ಊಟಕ್ಕೆ ಪರದಾಡುವ ಸ್ಥಿತಿ ಇದೆ. ಅಂತಹ ಕುಟುಂಬಗಳ ಗತಿ ಏನು? ಎಂದು ಬಿಜೆಪಿ ಸರ್ಕಾರಗಳನ್ನು ಹೆಚ್ ಡಿಕೆ ಪ್ರಶ್ನಿಸಿದರು.

ಸ್ವಾತಂತ್ರ್ಯ ದ ಅಮೃತ ಮಹೋತ್ಸವ ಆಚರಿಸುತ್ತಿರುವ ಈ ಸಂದರ್ಭದಲ್ಲಿ ಎಲ್ಲರಿಗೂ ಶುಭಾಶಯಗಳು. ಈ ಸ್ವಾತಂತ್ರ್ಯ ದಿನ ಪ್ರತಿ ಕನ್ನಡಿಗರಿಗೆ, ಪ್ರತಿ ಭಾರತೀಯರಿಗೆ ಮಹತ್ವದ ದಿನ. ಹಲವಾರು ಕ್ಲಿಷ್ಟಕರವಾದ ದಿನಗಳನ್ನು ಇಷ್ಟು ದಿನಗಳಲ್ಲಿ ಕಂಡಿದ್ದೇವೆ. ಹಂತ ಹಂತವಾಗಿ ಪ್ರಗತಿಯನ್ನು ಕಾಣುತ್ತಿದ್ದೇವೆ. ಶಾಂತಿ ಹಾಗೂ ಸಹಬಾಳ್ವೆಯಿಂದ ಬಾಳುವಂತಹ ವಾತಾವರಣ ಸೃಷ್ಟಿ ಮಾಡಬೇಕಿದೆ. ಇಂದು ಕನ್ನಡಿಗರಿಗೆ ಅತ್ಯಂತ ಮಹತ್ವವಾದ ದಿನ. ದೇಶಕ್ಕೆ ಬೇಕಾಗಿರೋದು ಶಾಂತಿ ಸಹಬಾಳ್ವೆ. ಪ್ರತಿಯೊಬ್ಬರೂ ತಮ್ಮ ನಡವಳಿಕೆಯಿಂದ ಅಮೃತಮಹೋತ್ಸವ ಅರ್ಥಪೂರ್ಣವಾಗಿ ಆಚರಿಸಬೇಕಿದೆ ಎಂದು ಹೇಳಿದರು.

ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರು, 1995ರಲ್ಲೇ ಜನತಾದಳ ಕಚೇರಿಯಲ್ಲಿ ಧ್ವಜಾರೋಹಣ ಮಾಡಿದೆ. ಆ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿ ಹೆಚ್.ಡಿ.ದೇವೇಗೌಡರು ಧ್ವಜಾರೋಹಣ ಮಾಡಿದ್ದರು. ಮುಂದಿನ ಬಾರಿ ನಾನು ಇಲ್ಲೇ ಧ್ವಜಾರೋಹಣ ಮಾಡುತ್ತೇನೆ. ಹೆಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳಾಗಿ ಧ್ವಜಾರೋಹಣ ಮಾಡುತ್ತಾರೆ ಎಂದು ಭವಿಷ್ಯ ನುಡಿದರು.

ಕೆಂಪುಕೋಟೆ ಮೇಲೆ ರಾಷ್ಟ್ರಧ್ವಜ ಹಾರಿಸಿದ ಏಕೈಕ ಕನ್ನಡಿಗ ಹೆಚ್.ಡಿ.ದೇವೇಗೌಡರು. ಮುಂದಿನ ಬಾರಿ ಕುಮಾರಸ್ವಾಮಿ ಸಿಎಂ ಆಗಿ ದ್ವಜಾರೋಹಣದ ಮಾಡುತ್ತಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸ್ವಾತಂತ್ರ್ಯ ಸಂದೇಶದಲ್ಲಿ ಕುವೆಂಪು ಅವರ ಕವನ ಕೇಳಿ ಸಂತೋಷ ಆಯಿತು. ಭಾರತ ಜನನಿಯ ತನುಜಾತೆ ಕನ್ನಡಾಂಬೆಗೆ ಆಗುತ್ತಿರುವ ಅನ್ಯಾಯ ಕುಮಾರಸ್ವಾಮಿ ಸರಿಪಡಿಸ್ತಾರೆ. ಹಸಿವು ಮುಕ್ತ, ಬಡತನ ಮುಕ್ತ ಕರ್ನಾಟಕವನ್ನಾಗಿ ಕುಮಾರಸ್ವಾಮಿ ಮಾಡ್ತಾರೆ. ಮುಂದೆ ಕುಮಾರಸ್ವಾಮಿ ಅವರು ಅಧಿಕಾರಕ್ಕೆ ಬರುವುದು ಖಂಡಿತಾ ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯರಾದ ಟಿ.ಎ.ಶರವಣ, ಜೆಡಿಎಸ್ ನಗರ ಘಟಕದ ಅಧ್ಯಕ್ಷರಾದ ಆರ್.ಪ್ರಕಾಶ್ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

Tags: August 15azadi ka amrit mahotsavcknewsnowhd kumaraswamyindependence dayjdsrss
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಸೆಪ್ಟೆಂಬರ್’ನಲ್ಲಿ ಸಂಗೊಳ್ಳಿ ರಾಯಣ್ಣ ಮಿಲಟರಿ ಶಾಲೆ ಪ್ರಾರಂಭ

ಸೆಪ್ಟೆಂಬರ್'ನಲ್ಲಿ ಸಂಗೊಳ್ಳಿ ರಾಯಣ್ಣ ಮಿಲಟರಿ ಶಾಲೆ ಪ್ರಾರಂಭ

Leave a Reply Cancel reply

Your email address will not be published. Required fields are marked *

Recommended

ಸಿಕೆನ್ಯೂಸ್‌ ನೌ ಸಮಸ್ತ ಓದುಗರಿಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು

ಸಿಕೆನ್ಯೂಸ್‌ ನೌ ಸಮಸ್ತ ಓದುಗರಿಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು

2 years ago
ಮುನಿರತ್ನ ಇಲ್ಲದೆ ಏಳು ಸಚಿವರು ಪ್ರಮಾಣ ಸ್ವೀಕರಿಸಿದ್ದೇನೋ ಸರಿ! ಆದರೆ, ನಾಗೇಶ್ ವಿಕೆಟ್ ಪತನವಾಗಿದ್ದೇಕೆ? ಅನ್ಯಾಯ ಆಗಿದ್ದು ಕೋಲಾರಕ್ಕೆ, ಖುಷಿಯಾಗಿದ್ದು ವಿರೋಧಿಗಳಿಗೆ

ಮುನಿರತ್ನ ಇಲ್ಲದೆ ಏಳು ಸಚಿವರು ಪ್ರಮಾಣ ಸ್ವೀಕರಿಸಿದ್ದೇನೋ ಸರಿ! ಆದರೆ, ನಾಗೇಶ್ ವಿಕೆಟ್ ಪತನವಾಗಿದ್ದೇಕೆ? ಅನ್ಯಾಯ ಆಗಿದ್ದು ಕೋಲಾರಕ್ಕೆ, ಖುಷಿಯಾಗಿದ್ದು ವಿರೋಧಿಗಳಿಗೆ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ