• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home POLITICS

ಸಂವಿಧಾನದತ್ತವಾಗಿ ಪ್ರಮಾಣ ಸ್ವೀಕರಿಸಿದ್ದ ಮುಖ್ಯಮಂತ್ರಿಯನ್ನು ಕಾಂಗ್ರೆಸ್ ನಾಯಕರು ಅಬ್ಬೆಪಾರಿಯಂತೆ ನಡೆಸಿಕೊಂಡರು!!

cknewsnow desk by cknewsnow desk
March 2, 2023
in POLITICS, STATE
Reading Time: 2 mins read
0
ಸಂವಿಧಾನದತ್ತವಾಗಿ ಪ್ರಮಾಣ ಸ್ವೀಕರಿಸಿದ್ದ ಮುಖ್ಯಮಂತ್ರಿಯನ್ನು ಕಾಂಗ್ರೆಸ್ ನಾಯಕರು ಅಬ್ಬೆಪಾರಿಯಂತೆ ನಡೆಸಿಕೊಂಡರು!!
917
VIEWS
FacebookTwitterWhatsuplinkedinEmail

ಸಿದ್ದರಾಮಯ್ಯ, ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ HD ಕುಮಾರಸ್ವಾಮಿ

ಕಾಲು ಮುರುಕ ಕುದುರೆ ಕೊಟ್ಟು ಏರು ಎಂದ ಮನೆ ಮುರುಕ; ಮೈತ್ರಿ ಸರಕಾರದ ಸಂಕಟಗಳನ್ನು ಎಳೆಎಳೆಯಾಗಿ ಬಿಡಿಸಿಟ್ಟ ಹೆಚ್ಡಿಕೆ

ಮೈಸೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ #HDKumaraswamy ಅವರು, ಮೈತ್ರಿ ಸರಕಾರ ಮಾಡಿದಾಗ ಆಡಳಿತ ನಡೆಸಲು ಹೆಜ್ಜೆಹೆಜ್ಜೆಗೂ ನನಗೆ ಕಿರುಕುಳ ನೀಡಿದರು. ಸಂವಿಧಾನದತ್ತವಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಒಬ್ಬ ಮುಖ್ಯಮಂತ್ರಿಯನ್ನು ಅತ್ಯಂತ ಕೀಳಾಗಿ, ಅಬ್ಬೆಪಾರಿಯಂತೆ ನಡೆಸಿಕೊಂಡರು ಎಂದು ಗಂಭೀರ ಆರೋಪ ಮಾಡಿದರು.

ಮೈಸೂರು ಪತ್ರಕರ್ತರ ಸಂಘ ಇಂದು ಹಮ್ಮಿಕೊಂಡಿದ್ದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ಟೀಕಾಪ್ರಹಾರ ನಡೆಸಿದರು.

ರೈತರ ಸಾಲಮನ್ನಾ ಮಾಡಲು ಕಾಂಗ್ರೆಸ್‌ ನಾಯಕರು ಅಡ್ಡಿಪಡಿಸಿದರು. ಸಾಲಮನ್ನಾ ಭರವಸೆ ನಿಮ್ಮದು, ನಮ್ಮದಲ್ಲ. ಮನ್ನಾ ಮಾಡುವ ನಿರ್ಧಾರದಿಂದ ಹಿಂದೆ ಸರಿಯಿರಿ ಕಾಂಗ್ರೆಸ್ ನಾಯಕರು ನನ್ನ ಮೇಲೆ ಒತ್ತಡ ಹೇರಿದ್ದರು. ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಬಹುಮತ ಬಂದಿಲ್ಲ‌. ಹೀಗಾಗಿ ಸಾಲಮನ್ನಾ ಸಾಧ್ಯವಿಲ್ಲ ಅಂತ ಜನರಿಗೆ ಹೇಳಿ ಎಂದು ಒತ್ತಡ ಹೇರಿದ್ದರು. ನಾನು ಈ ಒತ್ತಡಕ್ಕೆ ಮಣಿಯಲಿಲ್ಲ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಫಲಿತಾಂಶ ಬಂದ ಮೇಲೆ ಕಾಂಗ್ರೆಸ್‌ ನಾಯಕರು ಸರಕಾರ ಮಾಡಲು ನಮಗೆ ದುಂಬಾಲು ಬಿದ್ದರು. ನಿಮಗೆ ಬೇಷರತ್‌ ಬೆಂಬಲ ಎಂದು ಭರವಸೆ ನೀಡಿದರು. ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿ ಮಾಡಿ, ನಾವು ಬೆಂಬಲ ಕೊಡುತ್ತೇವೆ ಎಂದು ಅಶೋಕ ಹೋಟೆಲ್‌ʼನಲ್ಲಿ ನಾನು ಮತ್ತು ದೇವೇಗೌಡರು ಅವರ ಮುಖಕ್ಕೆ ಹೇಳಿದೆವು. ಆದರೂ ನೀವೇ ಮುಖ್ಯಮಂತ್ರಿಯಾಗಿ, ಐದು ವರ್ಷ ನಿಮಗೆ ಬೇಷರತ್ತು ಬೆಂಬಲ ನೀಡುತ್ತೇವೆ ಎಂದು ಹೇಳಿದ್ದರು. ಆಮೇಲೆ ರಾಜ್ಯ ಕಾಂಗ್ರೆಸ್‌ ನಾಯಕರು ಮಾಡಿದ್ದೇನು ಎನ್ನುವುದು ಇಡೀ ರಾಜ್ಯಕ್ಕೆ ಗೊತ್ತಿದೆ ಎಂದು ಮಾಜಿ ಮುಖ್ಯಮಂತ್ರಿಗಳು ವಿವರಿಸಿದರು.

ಕಾಂಗ್ರೆಸ್‌ ನಾಯಕರು ಸರಕಾರ ರಚಿಸಲು ಇನ್ನಿಲ್ಲದ ಆತುರ ತೋರಿದಾಗ ನಾನು ಹೇಳಿದ್ದೆ. ಯಾಕೆ ವಿನಾಕಾರಣ ತರಾತುರಿ ಮಾಡುತ್ತೀರಿ ಎಂದು ನಾನೇ ಹೇಳಿದ್ದೆ. ಆದರೂ ಅವರು ದುಂಬಾಲು ಬಿದ್ದು ಸರಕಾರ ಮಾಡಿಸಿದರು. ನನ್ನ ಮಗನ ಆರೋಗ್ಯ ಸರಿ ಇಲ್ಲ. ಸಿಎಂ ಸ್ಥಾನ ನಮಗೆ ಬೇಡ. ನಿಮ್ಮಲ್ಲೇ ಯಾರಾದರೂ ಸಿಎಂ ಆಗಲಿ, ಬೇಕಾದರೆ ಖರ್ಗೆ ಅವರನ್ನೇ ಸಿಎಂ ಮಾಡಿ ಎಂದು ಹೆಚ್.ಡಿ.ದೇವೇಗೌಡರು ಹೇಳಿದ್ದರು. ಆದರೆ ದೇವೇಗೌಡರ ಮಾತಿಗೆ ಕಾಂಗ್ರೆಸ್ ನಾಯಕರು ಒಪ್ಪದೆ ನನ್ನನ್ನು ಮುಖ್ಯಮಂತ್ರಿ ಮಾಡಿದರು. ಆಮೇಲೆ ಶುರುವಾಗಿದ್ದೇ ನನ್ನನ್ನು ಹಿಂಸಿಸುವ ಹಿಂಸಾಕಾಂಡ ಎಂದು ಕುಮಾರಸ್ವಾಮಿ ಅವರು ಆ ಸಂದರ್ಭದವನ್ನು ಎಳೆಎಳೆಯಾಗಿ ಬಿಡಿಸಿಟ್ಟರು.

  • ಮೈಸೂರು ಪತ್ರಕರ್ತರ ಸಂಘದ ಅಧ್ಯಕ್ಷ ರವಿಕುಮಾರ್, ಉಪಾಧ್ಯಕ್ಷ ಬಸವಣ್ಣ, ಕಾರ್ಯದರ್ಶಿ ಸುಬ್ರಹ್ಮಣ್ಯ, ರಂಗಸ್ವಾಮಿ ಮುಂತಾದವರು ಮಾಜಿ ಮುಖ್ಯಮಂತ್ರಿಗಳನ್ನು ಗೌರವಿಸಿದರು.

ಶುರುವಿಲ್ಲೇ ಷರತ್ತುಗಳು

ಸಚಿವ ಸಂಪುಟ ರಚನೆ ವೇಳೆಯಲ್ಲೇ ಕಾಂಗ್ರೆಸ್ ನಾಯಕರ ವಿವಿಧ ಕಂಡೀಷನ್ ಆರಂಭವಾದವು. ನಾವು 78 ಶಾಸಕರಿದ್ದೇವೆ. ನಮಗೆ ಹೆಚ್ಚು ಖಾತೆಗಳು ಬೇಕು, ಪ್ರಮುಖ ಖಾತೆಗಳೇ ಬೇಕು. ಹಣಕಾಸು, ಇಂಧನ, ಜಲ ಸಂಪನ್ಮೂಲ ಸೇರಿ ಎಲ್ಲ ಪ್ರಮುಖ ಖಾತೆಗಳು ನಮಗೆ ಬೇಕು ಎಂದು ಪಟ್ಟು ಹಿಡಿದರು. ನಾನು ಸಾಲಮನ್ನಾ ಭರವಸೆ ಕೊಟ್ಟಿದ್ದೆ. ಹೀಗಾಗಿ ಹಣಕಾಸು ಖಾತೆ ಕೊಡುವ ಹಾಗೆಯೇ ಇರಲಿಲ್ಲ. ಇನ್ನು, ಕಾಂಗ್ರೆಸ್‌ ಪಕ್ಷದ ಅಯಾ ಮಂತ್ರಿಗಳು ತಮ್ಮ ಇಲಾಖೆಯ ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲೂ ತಮ್ಮ ಮಾತೇ ನಡೆಯಬೇಕೆಂದು ಪಟ್ಟು ಹಿಡಿದಿದ್ದರು. ಯಾವ ಇಲಾಖೆಯ ವಿಚಾರದಲ್ಲೂ ಮುಖ್ಯಮಂತ್ರಿ ಆಗಿದ್ದ ನಾನು ಯಾವ ತೀರ್ಮಾನವನ್ನು ಸ್ವತಂತ್ರವಾಗಿ ಮಾಡಲು ಆಗಲಿಲ್ಲ. ಓರ್ವ ಮಂತ್ರಿಯಂತೂ ನನ್ನ ಇಲಾಖೆಯ ವಿಚಾರಕ್ಕೆ ಬರಬೇಡಿ ಎಂದು ನೇರವಾಗಿ ನನಗೇ ಹೇಳಿದ್ದರು ಎಂದು ಕುಮಾರಸ್ವಾಮಿ ಅವರು ಹೇಳಿದರು.

ಸಭೆಗೆ ಕರೆಯುವ ಸೌಜನ್ಯ ತೋರಲಿಲ್ಲ

ಹಿರಿಯ ಅಧಿಕಾರಿಗಳನ್ನು ವರ್ಗ ಮಾಡುವುದು ಮುಖ್ಯಮಂತ್ರಿಯ ಅಧಿಕಾರ. ಅದಕ್ಕೂ ನನಗೆ ಅವಕಾಶ ನೀಡಲಿಲ್ಲ. ಒಬ್ಬ ಎಂಜಿನಿಯರ್‌ ವರ್ಗ ಮಾಡಿದ್ದಾಗ ಅಧಿಕಾರ ವಹಿಸಿಕೊಳ್ಳಲು ಓರ್ವ ಕಾಂಗ್ರೆಸ್‌ ಸಚಿವ ಆ ಎಂಜಿನಿಯರ್‌ ಗೆ ಬಿಡಲಿಲ್ಲ. ಇನ್ನು, ನಾನು ಹಲವು ಬಾರಿ ಕೇಳಿದರೂ ಜೆಡಿಎಸ್-ಕಾಂಗ್ರೆಸ್ ಶಾಸಕರನ್ನು ಒಟ್ಟುಗೂಡಿಸಿ ಜಂಟಿ ಶಾಸಕಾಂಗ ಪಕ್ಷದ ಸಭೆಯನ್ನು ಕರೆಯಲಿಲ್ಲ. ಒಮ್ಮೆ ನನ್ನನ್ನು ತಮ್ಮ ಆಪ್ತರೊಬ್ಬರ ಹೋಟೆಲ್ಲಿಗೆ ಕರೆಸಿಕೊಂಡ ಸಿದ್ದರಾಮಯ್ಯ, ಅಲ್ಲಿ ನಡೆಯುತ್ತಿದ್ದ ಕಾಂಗ್ರೆಸ್ ಶಾಸಕಾಂಗ ಸಭೆಗೂ ಒಳಕ್ಕೂ ನನ್ನನ್ನು ಕರೆಯಲಿಲ್ಲ. ಹೋಟೆಲಿನ ಹೊರಗೆ ಕೊಂಚ ಹೊತ್ತು ನಾನು ಅಬ್ಬೆಪಾರಿಯಂತೆ ಹೊರಗೆ ನಿಂತು ವಾಪಸ್‌ ಬಂದೆ. ಸಂವಿಧಾನದತ್ತವಾಗಿ ಪ್ರಮಾಣ ಸ್ವೀಕರಿಸಿದ್ದ ಮುಖ್ಯಮಂತ್ರಿಯನ್ನು ಕಾಂಗ್ರೆಸ್‌ ಪಕ್ಷ ನಡೆಸಿಕೊಂಡ ಬಗೆ ಇದು. ಎಲ್ಲವನ್ನೂ ವಿಷಕಂಠನಂತೆ ಸಹಿಸಿಕೊಂಡೆ ಎಂದು ಮಾಜಿ ಮುಖ್ಯಮಂತ್ರಿಗಳು ಆಕ್ರೋಶ ವ್ಯಕ್ತಪಡಿಸಿದರು.

ಮೈಸೂರಿನಲ್ಲಿ ನಾನು ಈ ಎಲ್ಲ ವಿಷಯಗಳನ್ನು ಹೇಳುತ್ತಿದ್ದೇನೆ. ತಾಯಿ ಚಾಮುಂಡೇಶ್ವರಿಯ ಸನ್ನಿಧಿಯಲ್ಲಿ ಈ ಸತ್ಯಗಳನ್ನು ಹೇಳುತ್ತಿದ್ದೇನೆ. ರಾಜ್ಯದ ಜನರಿಗೆ ಈ ವಿಷಯಗಳು ಗೊತ್ತಾಗಬೇಕಿದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಬಿಜೆಪಿ ಸರಕಾರ ಬರಲು ಕಾಂಗ್ರೆಸ್‌, ಸಿದ್ದರಾಮಯ್ಯ ಅವರೇ ಕಾರಣ

ಅಲ್ಪಸಂಖ್ಯಾತರಿಗೆ ಕಾಂಗ್ರೆಸ್‌ ಪಕ್ಷ ದ್ರೋಹ ಮಾಡಿದ್ದೇ ಜಾಸ್ತಿ. ಬಿಜೆಪಿ ಟೀಂ ಜೆಡಿಎಸ್ ಎಂದು ಕಾಂಗ್ರೆಸ್ʼನವರು ಅಪ್ರಚಾರ ಮಾಡಿ ೨೦೧೮ರಲ್ಲಿ ನಮ್ಮ ಪಕ್ಷದ ಕತ್ತು ಕೊಯ್ದರು. ಸಿದ್ದವನದಲ್ಲಿ ಸಿದ್ದರಾಮಯ್ಯ ವಿಶ್ರಾಂತಿಗೆಂದು ಹೋಗಿ ಮೈತ್ರಿ ಸರಕಾರವನ್ನು ಮುಗಿಸಲು ಮದ್ದು ಅರೆದರು. ಅಲ್ಲಿ ಕೂತು ಸಂಚು ರೂಪಿಸಿದರು. ಸಿದ್ದವನದಲ್ಲೇ ಕೂತು, ಈ ಸರಕಾರ ಲೋಕಸಭೆ ಚುನಾವಣೆವರೆಗೂ ಮಾತ್ರ ಇರುತ್ತದೆ ಎಂದು ಹೇಳಿದ್ದು ಯಾರು? ಬಿಜೆಪಿ ಜೊತೆ ಕಾಂಗ್ರೆಸ್ ಪಕ್ಷಕ್ಕೆ ಮೊದಲಿನಿಂದಲೇ ʼಒಳ ಹೊಂದಾಣಿಕೆʼ ಇತ್ತು. ಈಗಿನ ಬಿಜೆಪಿ ಸರಕಾರ ಬರಲು ಕಾಂಗ್ರೆಸ್‌ ಪಕ್ಷ ಹಾಗೂ ಸಿದ್ದರಾಮಯ್ಯ ಅವರೇ ಕಾರಣ ಎಂದು ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು.

ಕಾಲು ಮುರುಕ ಕುದುರೆ ಕೊಟ್ಟ ಮನೆ ಮುರುಕ

ನಾನು ಎಲ್ಲಿ ಸಾಲಮನ್ನಾ ಮಾಡಿಬಿಡುತ್ತೇನೋ ಎಂದು ಕಾಂಗ್ರೆಸ್ ಪಕ್ಷದವರು ಬಜೆಟ್ ಮಂಡಿಸಲಿಕ್ಕೂ ನನಗೆ ಅಡ್ಡಿ ಉಂಟು ಮಾಡಿದರು. ಸಿದ್ದರಾಮಯ್ಯ, ಜೆ.ಸಿ.ಮಾಧುಸ್ವಾಮಿ ಹಾಗೂ ಅಂದಿನ ಸ್ಪೀಕರ್ ಕುಮ್ಮಕ್ಕಾಗಿ ಬಜೆಟ್ ಮಂಡನೆಗೆ ಅವಕಾಶವೇ ನೀಡಬಾರದು ಎಂದು ತಂತ್ರಗಾರಿಕೆ ಮಾಡಿದ್ದರು. ದೇವವರ್ಗದಲ್ಲಿ ನಮ್ಮ‌ ಶಾಸಕರ ಪುತ್ರನೊಬ್ಬ ಸೀಡಿ ಮಾಡಿಕೊಂಡು ಬಾರದೆ ಇದ್ದಿದ್ದರೆ ನಾನು ಎರಡನೇ ಬಜೆಟ್ ಮಂಡಿಸೋಕೆ ಆಗುತ್ತಿರಲಿಲ್ಲ. ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ 19 ಸಾವಿರ ಕೋಟಿ ರೂ. ಕೊಟ್ಟಿದ್ದೇನೆ. ಆ ಸರಕಾರದಲ್ಲಿ ಕತ್ತೆ ದುಡಿದ ರೀತಿ ದುಡಿದ್ದೇನೆ. ಈಗ ನೋಡಿದರೆ ಕೊಟ್ಟ ಕುದುರೆ ಏರದವನೂ ವೀರನೂ ಅಲ್ಲ ಶೂರನ ಅಲ್ಲ ಅಂತಾ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳುತ್ತಾರೆ. ಆದರೆ, ಇವರು ನನಗೆ ಕಾಲಿಲ್ಲದ ಕುದುರೆ ಕೊಟ್ಟಿದ್ದರು. ʼಕಾಲು ಮುರುಕ ಕುದುರೆʼ ಕೊಟ್ಟು ಅದನ್ನು ಏರು ಎನ್ನುವವರನ್ನು ನಮ್ಮ ಕಡೆ ʼಮನೆ ಮುರುಕʼ ಅನ್ನುತ್ತಾರೆ ಎಂದು ಸಿದ್ದರಾಮಯ್ಯ ಅವರನ್ನು ಪರೋಕ್ಷವಾಗಿ ʼಮನೆ ಮುರಕʼ ಎಂದು ಕರೆದರು ಕುಮಾರಸ್ವಾಮಿ ಅವರು.

ಹಳ್ಳಿಗಳಲ್ಲಿ ನಡೆಯಲಿ ಪ್ರಜಾಧ್ವನಿ

ಕಾಂಗ್ರೆಸ್ ನಾಯಕರು ನಗರ ಪ್ರದೇಶದಲ್ಲಿ ಪ್ರಜಾಧ್ವನಿ ಮಾಡುವುದಲ್ಲ. ತಾಲೂಕುಗಳಲ್ಲಿ 500 ರೂ ಕೊಟ್ಟು ಜನರನ್ನು ಕರೆ ತರುವುದಲ್ಲ, ಬದಲಾಗಿ ಹಳ್ಳಿಗಳಿಗೆ ಹೋಗಿ. ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಇನ್ನೂ ಶೌಚಾಲಯ ವ್ಯವಸ್ಥೆಯೇ ಇಲ್ಲ. ನನ್ನ ಮನೆಗೆ ಬಂದು ಸಮಸ್ಯೆ ಹೇಳುವ ಜನರ ಕಷ್ಟ ಕೇಳಿ. ನಾನು ಇಂಥ ಜನರಿಗಾಗಿ ಪಂಚರತ್ನ ಕಾರ್ಯಕ್ರಮ ರೂಪಿಸಿದ್ದೇನೆ. ಇದನ್ನು ಯಾರೇ ಆರ್ಥಿಕ ತಜ್ಞ ರೂಪಿಸಿದ್ದಲ್ಲ. ಕೆಲವರು ಭಾಗ್ಯಗಳನ್ನು ಕೊಟ್ಟು ಸಮಾಜವನ್ನು ಉದ್ಧಾರ ಮಾಡಿದ್ದೇನೆ ಎನ್ನುತ್ತಾರೆ. ಆದರೆ, ಐದು ವರ್ಷ ಆಡಳಿತ ನಡೆಸಿದ ಅವರು ಹಳ್ಳಿಗಳಿಗೆ ಹೋಗಿ ನೋಡೊದರೆ ಗೊತ್ತಾಗುತ್ತದೆ, ತಮ್ಮ ಆಡಳಿತ ಹಣೆಬರಹ ಏನು ಎಂದು. ಈಗ ನೋಡಿದರೆ; ಕಾಂಗ್ರೆಸ್ ನಾಯಕರು ಘೋಷಣೆ ಮಾಡಿರುವ ಉಚಿತ ವಿದ್ಯುತ್, 2000 ಹಣ ಕಾರ್ಯಕ್ರಮ ರೂಪಿಸಲು 48 ಸಾವಿರ ಕೋಟಿ ರೂ. ಬೇಕು. ಹಣ ಎಲ್ಲಿಂದ ತರುತ್ತಾರೆ? ಹಿಂದೆ ಇದೇ ಕಾಂಗ್ರೆಸ್‌ ಪಕ್ಷ 7 ಕೆಜಿ ಅಕ್ಕಿ ಕೊಡುವುದಾಗಿ ಘೋಷಣೆ ಮಾಡಿತ್ತು. ಕೇವಲ 5 ಕೆಜಿಗೆ ಆಗುವಷ್ಟು ಹಣ ಮಾತ್ರ ಮೀಸಲಿಟ್ಟಿದ್ದರು. 2 ಕೆಜಿ ಹೊರೆ ನನ್ನ ಮೇಲೆ ಬಿತ್ತು ಎಂದು ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಕಾಂಗ್ರೆಸ್ ಜೊತೆಗೆ ಸರಕಾರ ಮಾಡಿ ತಪ್ಪು ಮಾಡಿದೆ ಎನಿಸಿದರೂ, ರೈತರ ಸಾಲಮನ್ನಾ ಮಾಡಿದ ತೃಪ್ತಿ ನನಗಿದೆ. ನನ್ನ ಇಮೇಜ್ ಡ್ಯಾಮೇಜ್ ಮಾಡಲು ಅವರು ಪ್ರಯತ್ನಿಸಿದರು, ಆದರೆ ನನ್ನ ಇಮೇಜ್ʼಗೆ ಎಲ್ಲೂ ಧಕ್ಕೆ ಆಗಿಲ್ಲ. ಈ ಬಾರಿ ಯಾರೊಂದಿಗೂ ಹೊಂದಾಣಿಕೆ ‌ಮಾಡಿಕೊಳ್ಳಲ್ಲ, 120 ಸ್ಥಾನ ಬರುವ ವಿಶ್ವಾಸ ಇದೆ.

ಹೆಚ್.ಡಿ.ಕುಮಾರಸ್ವಾಮಿ

ಬಿಜೆಪಿ ಜತೆ ಸೇರಿ ಸರಕಾರ ಮಾಡಲ್ಲ. ಅಂದು ಬಿಜೆಪಿ ಜತೆಗೆ ಸಮ್ಮಿಶ್ರ ಸರಕಾರ ಮಾಡಿದಾಗ ಬಿಜೆಪಿ ಬೇರೆ ರೇತಿ ಇತ್ತು. ಈಗ ಬಿಜೆಪಿಗರು ಅಧಿಕಾರದ ರುಚಿ ನೋಡಿದ್ದಾರೆ. ಈಗ ಕಾಂಗ್ರೆಸ್ ಮತ್ತು ಬಿಜೆಪಿ ಒಂದೇ ನಾಣ್ಯದ ಎರಡು ಮುಖಗಳಂತೆ ಆಗಿವೆ. ಅಂದು ಸಮ್ಮಿಶ್ರ ಸರಕಾರ ಮಾಡದೆ ಇದ್ದಿದ್ದರೆ ಕೋಲಾರದ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲುತ್ತಿರಲಿಲ್ಲ. ಸಮ್ಮಿಶ್ರ ಸರಕಾರದಲ್ಲಿ ನಾನು ಟ್ರ್ಯಾಪ್ ಆಗಿದ್ದಂತೂ ಸತ್ಯ. ಕಾಂಗ್ರೆಸ್ಸಿಗೆ ನಮ್ಮಿಂದ ಸಹಾಯ ಆಗಿದೆ, ಅವರಿಂದ ಜೆಡಿಎಸ್ ಪಕ್ಷಕ್ಕೆ ಸಹಾಯ ಆಗಿಲ್ಲ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಮೋದಿ, ಅಮಿತ್ ಶಾ ಅವರಿಬ್ಬರು ಎಷ್ಟು ಬಾರಿ ರಾಜ್ಯಕ್ಕೆ ಬಂದರೂ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ. ಒಂದು ವೇಳೆ ಜನರು ಬಿಜೆಪಿ ಸರಕಾರವನ್ನು ಗೆಲ್ಲಿಸಿದರೆ ಹತ್ತು ಪರಪ್ಪನ ಅಗ್ರಹಾರ ಜೈಲುಗಳನ್ನು ಕಟ್ಟಿಸಬೇಕಾಗುತ್ತದೆ. ಅಷ್ಟರ ಮಟ್ಟಿಗೆ ಬಿಜೆಪಿ ಹಾಳಾಗಿದೆ. ಈಗಂತೂ ಬಿಜೆಪಿ ಸ್ಪೀಡ್ʼಗೆ ಬ್ರೇಕ್ ಹಾಕಲು ನನ್ನಂದ ಸಾಧ್ಯವೇ ಹೊರತು ಕಾಂಗ್ರೆಸ್ʼನಿಂದ ಸಾಧ್ಯವಿಲ್ಲ ಎಂದು ಸ್ಪಷ್ಟ ಮಾತುಗಳಲ್ಲಿ ಕುಮಾರಸ್ವಾಮಿ ಅವರು ಹೇಳಿದರು.

ವಿಧಾನಸಭೆ ಚುನಾವಣೆ ಸಮೀಪಿಸುತ್ತಿದೆ. ಈ ತಿಂಗಳ 20ರಿಂದ 30ರೊಳಗೆ ದಿನಾಂಕ ಪ್ರಕಟ ಆಗಬಹುದು. ಸದ್ಯದಲ್ಲೇ ಚುನಾವಣೆ ಆಯೋಗ ದಿನಾಂಕ ಘೋಷಣೆ ಮಾಡಲಿದೆ. ಹೀಗಾಗಿ ಎಲ್ಲಾ ಪಕ್ಷಗಳಲ್ಲೂ ತಯಾರಿ ಮಾಡಿಕೊಳ್ಳುತ್ತಿವೆ. ಒಂದು ಕಾಲದಲ್ಲಿ ಜೆಡಿಎಸ್‌ ಪಕ್ಷ ಐಸಿಯುಗೆ ಹೋಗಿದೆ ಎನ್ನುತ್ತಿದ್ದವರಿಗೆ ಈಗ ನಡುಕ ಶುರುವಾಗಿದೆ. ಈ ಪಕ್ಷ 10ರಿಂದ 20 ಸ್ಥಾನ ಗೆಲ್ಲಬಹುದು ಅನ್ನುವ ಮಾತು ಹೇಳುತ್ತಿದ್ದರು. ಅವರು ನಮ್ಮ ವೇಗ ಕಂಡು ಅವಾಕ್ಕಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿಗಳು ಪ್ರಶ್ನೆಯೊಂದಕ್ಕೆ ಉತ್ತರ ಕೊಟ್ಟರು.

ಮೈಸೂರು ಪತ್ರಕರ್ತರ ಸಂಘದ ಅಧ್ಯಕ್ಷ ರವಿಕುಮಾರ್, ಉಪಾಧ್ಯಕ್ಷ ಬಸವಣ್ಣ, ಕಾರ್ಯದರ್ಶಿ ಸುಬ್ರಹ್ಮಣ್ಯ, ರಂಗಸ್ವಾಮಿ ಮುಂತಾದವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸಂಘದ ವತಿಯಿಂದ ಮಾಜಿ ಮುಖ್ಯಮಂತ್ರಿಗಳನ್ನು ಗೌರವಿಸಲಾಯಿತು.

Tags: ckcknewsnowhd kumaraswamyjdskarnatakaMysuruPolitics
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಗ್ರಾಮ ಪಂಚಾಯತಿ ಚುನಾವಣೆಗೆ ದಿನಾಂಕ ಫಿಕ್ಸ್;‌  ಚಿಕ್ಕಬಳ್ಳಾಪುರ, ಕೋಲಾರದ 208 ಪಂಚಾಯತಿಗಳಿಗೆ  ಡಿ.27ಕ್ಕೆ ಮತದಾನ

ಮೇ 10ಕ್ಕೆ ಕರ್ನಾಟಕ ವಿಧಾನಸಭೆ ಚುನಾವಣೆ

Leave a Reply Cancel reply

Your email address will not be published. Required fields are marked *

Recommended

ನಿಶ್ಚಿತಾರ್ಥ ಆದ ಮೇಲೆ ಮದುವೆಗೆ ಒಲ್ಲೆ ಎಂದ ಸೈನಿಕ; ಠಾಣೆಯ ಮೆಟ್ಟಿಲೇರಿದ ಪ್ರಕರಣ

ನಿಶ್ಚಿತಾರ್ಥ ಆದ ಮೇಲೆ ಮದುವೆಗೆ ಒಲ್ಲೆ ಎಂದ ಸೈನಿಕ; ಠಾಣೆಯ ಮೆಟ್ಟಿಲೇರಿದ ಪ್ರಕರಣ

4 years ago
ಆಮ್ಲಜನಕ, ರೆಮಿಡಿಸ್ವೀರ್‌ ಕೃತಕ ಅಭಾವ ಸೃಷ್ಟಿ!! ಸೋಂಕಿತರ ಸಂಖ್ಯೆಗೂ-ಬೇಡಿಕೆಗೂ ತಾಳ-ಮೇಳವಿಲ್ಲ, ಸಪ್ಲೈ ಆಗುತ್ತಿರುವುದೆಲ್ಲ ಎಲ್ಲಿ ಹೋಗುತ್ತಿದೆ ಎಂದು ಪ್ರಶ್ನಿಸಿದ ಡಿಸಿಎಂ

ಇನ್ನು 10 ದಿನದಲ್ಲಿ ರಾಜ್ಯದ ಎಲ್ಲ ಉನ್ನತ ಶಿಕ್ಷಣ ವಿದ್ಯಾರ್ಥಿಗಳಿಗೂ ಕೋವಿಡ್‌ ವ್ಯಾಕ್ಸಿನ್‌

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ