• About
  • Advertise
  • Careers
  • Contact
Wednesday, June 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS CRIME

ಬೆಸ್ಕಾಂನಲ್ಲಿ ನಕಲಿ ನೇರ ನೇಮಕಾತಿ ಪ್ರಮಾಣ ಪತ್ರಗಳ ಹಾವಳಿ

cknewsnow desk by cknewsnow desk
April 19, 2023
in CRIME, NEWS IN USE
Reading Time: 1 min read
0
ಬೆಸ್ಕಾಂನಲ್ಲಿ ನಕಲಿ ನೇರ ನೇಮಕಾತಿ ಪ್ರಮಾಣ ಪತ್ರಗಳ ಹಾವಳಿ
936
VIEWS
FacebookTwitterWhatsuplinkedinEmail

ಉದ್ಯೋಗಾಂಕ್ಷಿಗಳನ್ನು ಬೆಚ್ಚಿಬೀಳಿಸಿದ ಪ್ರಕರಣ

ಬೆಂಗಳೂರು: ಬೆಸ್ಕಾಂನಲ್ಲಿ ಮಾಪನ ಓದುಗ ಹುದ್ದೆ , ಕಿರಿಯ ಸಹಾಯಕರ ಹುದ್ದೆಗೆ ನೇರ ಸಂದರ್ಶನಕ್ಕೆ ಹಾಜರಾಗಲು ಕೋರಿ ಕೆಪಿಟಿಸಿಎಲ್‌ ಹಾಗು ಬೆಸ್ಕಾಂ ಹೆಸರಿನ ಲೆಟರ್‌ ಹೆಡ್‌ ನಲ್ಲಿ ನಕಲಿ ನೇಮಕ ಪ್ರಮಾಣ ಪತ್ರಗಳನ್ನು ಸೃಷ್ಠಿಸಿ ಅಭ್ಯರ್ಥಿಗಳಿಗೆ ವಿತರಿಸುತ್ತಿರುವ ಪ್ರಕರಣದ ಕುರಿತು ಬೆಸ್ಕಾಂ ವಿಧಾನಸೌಧದ ಪೊಲೀಸ್‌ ಠಾಣೆಗೆ ದೂರು ನೀಡಿದೆ

ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಅವರ ಸೂಚನೆ ಮೇರೆಗೆ ಪ್ರಧಾನ ವ್ಯವಸ್ಥಾಪಕ (ಆಡಳಿತ ಮತ್ತು ಮಾನವ ಸಂಪನ್ಮೂಲ) ಸಿ.ಎನ್.‌ ಮಂಜುನಾಥ್‌ ಅವರು ವಿಧಾನ ಸೌಧ ಠಾಣೆಯಲ್ಲಿ ದೂರು ನೀಡಿದ್ದಾರೆ.

ಇದುವರೆಗೆ ಐದು ಪ್ರಕರಣಗಳು ಬೆಸ್ಕಾಂ ಗಮನಕ್ಕೆ ಬಂದಿದ್ದು, ಅಧಿಕೃತ ಜ್ಞಾಪನ ಪತ್ರ / ಸುತ್ತೋಲೆ ಎಂಬ ನಕಲಿ ನೇಮಕ ಆದೇಶಗಳನ್ನು ವಿದ್ಯುತ್‌ ಸರಬರಾಜು ಕಂಪನಿ ಹಾಗು ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮದ ಹೆಸರಿನಲ್ಲಿ ಹಲವು ಉದ್ಯೋಗ ಆಕಾಂಕ್ಷಿ ವ್ಯಕ್ತಿಗಳಿಗೆ ಕಳುಹಿಸಿ ವ್ಯವಸ್ಥಿತವಾಗಿ ವಂಚಿಲಾಗುತ್ತಿದೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

ಬೆಸ್ಕಾಂ ಮತ್ತು ಕೆಪಿಟಿಸಿಎಲ್‌ ನಿಂದ ಉದ್ಯೋಗ ಆಕಾಂಕ್ಷಿಗಳಿಗೆ ನೇರ ಸಂದರ್ಶನಕ್ಕೆ ಹಾಜರಾಗಲು ಸುತ್ತೋಲೆಗಳನ್ನು ಕಳುಹಿಸುವುದಿಲ್ಲ. ಇದೊಂದು ಉದ್ಯೋಗ ವಂಚನೆಯ ಜಾಲವಾಗಿದ್ದು, ಬೆಸ್ಕಾಂ ಮತ್ತು ಕೆಪಿಟಿಸಿಎಲ್‌ ಹೆಸರಿನಲ್ಲಿ ನಿರುದ್ಯೋಗಿ ಯುವಕ- ಯುವತಿಯರನ್ನು ವಂಚಿಸಿ ಹಣ ಪಡೆಯಲಾಗುತ್ತಿದೆ ಮತ್ತು ಕಂಪನಿಗೆ ಕೆಟ್ಟ ಹೆಸರು ತರುವ ಉದ್ದೇಶ ಇದರಲ್ಲಿ ಅಡಗಿದೆ ಎಂದು ಪ್ರಧಾನ ವ್ಯವಸ್ಥಾಪಕರು ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.

ನಕಲಿ ನೇಮಕ ಪ್ರಮಾಣ ಪತ್ರ ಹಂಚಿ ಉದ್ಯೋಗ ಆಕಾಂಕ್ಷಿಗಳನ್ನು ವಂಚಿಸುತ್ತಿರುವ ಜಾಲವನ್ನು ಪತ್ತೆ ಹಚ್ಚಿ ವಂಚಕರ ವಿರುದ್ಧ ಕಾನೂನು ಕ್ರಮ ಜರುಗಿಸಲು ಬೆಸ್ಕಾಂ ದೂರಿನಲ್ಲಿ ಕೋರಿದೆ.

ವಂಚನೆಯ ವಿವರ: ಕೆಪಿಟಿಸಿಎಲ್‌ ಹಾಗು ಬೆಸ್ಕಾಂ ಹೆಸರಿನ ಲೆಟರ್‌ ಹೆಡ್‌ ನಲ್ಲಿ ಅಭ್ಯರ್ಥಿಗಳಿಗೆ ನೇರ ನೇಮಕಾತಿಯ ಸುತ್ತೋಲೆಯನ್ನು ಕಳುಹಿಸಲಾಗುತ್ತಿದೆ. ಮಾಪನ ಓದುಗ ಹುದ್ದೆ ಮತ್ತು ಕಿರಿಯ ಸಹಾಯಕರ ಹುದ್ದೆಗೆ ನೇಮಕ ಮಾಡಲು ಬೆಸ್ಕಾಂನ ಕಾರ್ಯನಿರ್ವಾಹಕ ಅಭಿಯಂತರರು , ಅಧೀಕ್ಷಕ ಇಂಜಿನಿಯರ್‌ ಅವರು ಸಹಿ ಮಾಡಿದ ರೀತಿಯಲ್ಲಿ, ನಕಲಿ ನೇಮಕ ಪ್ರಮಾಣ ಪತ್ರಗಳನ್ನು ಸಿದ್ದಪಡಿಸಿ ಅವುಗಳನ್ನು ವಾಟ್ಸ್‌ ಪ್‌ ಮೂಲಕ ಅಭ್ಯರ್ಥಿಗಳಿಗೆ ಕಳುಹಿಸಲಾಗುತ್ತಿದೆ.

ಈಗಾಗಲೇ ಮಾಪಕ ಓದುಗ ಮತ್ತು ಕಿರಿಯ ಸಹಾಯಕ ಹುದ್ದೆಗೆ ನಕಲಿ ನೇಮಕ ಆದೇಶಗಳನ್ನು ಸೃಷ್ಠಿಸಿ ನಾಗೇಶ್‌ , ಆರ್.‌ ಕೆ. ಸಿದ್ದೇಶ, ಎ. ಅನು, ಹೆಚ್.‌ ಟಿ. ದಿವ್ಯ, ಹಾಗು ಜಿ.ಎಸ್.‌ ಸುಹಾಸ್‌ ಎಂಬುವರಿಗೆ ಕಳುಹಿಸಿ ಕೊಡಲಾಗಿದೆ.

ನಾಲ್ಕು ಪ್ರಕರಣಗಳಲ್ಲಿ ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ಮಾರ್ಚ್‌ 17, 2023 ರಂದು ಬೆಸ್ಕಾಂನ ಪ್ರಧಾನ ವ್ಯವಸ್ಥಾಪಕರು ದೂರು ನೀಡಿದ್ದು, ಎಫ್‌ ಐಆರ್‌ ದಾಖಲಾಗಿದೆ. ಇನ್ನೊಂದು ಪ್ರಕರಣದಲ್ಲಿ ಸುಹಾಸ್‌ ಎನ್ನುವರಿಗೆ ಕಿರಿಯ ಸಹಾಯಕ ಹುದ್ದೆಗೆ ನಕಲಿ ನೇಮಕ ಆದೇಶ ನೀಡಿರುವ ಪ್ರಕರಣದ ಕುರಿತು ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ದೂರು ನೀಡಲಾಗಿದೆ.

Tags: Bengalurubescomckcknewsnowcrimeduplicate appointment orderpolice
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ

ಮಾರ್ಚ್‌ 1ರಿಂದ ದ್ವಿತೀಯ ಪಿಯು, 20ರಿಂದ sslc ಪರೀಕ್ಷೆ

by cknewsnow desk
December 3, 2024
0

ಎಲ್ಲ ಪರೀಕ್ಷೆಗಳು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ

ಪೋಡಿ ತ್ವರಿತ ಇತ್ಯರ್ಥಕ್ಕೆ 1,786 ಹುದ್ದೆ ಭರ್ತಿ

ಪೋಡಿ ತ್ವರಿತ ಇತ್ಯರ್ಥಕ್ಕೆ 1,786 ಹುದ್ದೆ ಭರ್ತಿ

by cknewsnow desk
August 12, 2024
0

1,000 ಗ್ರಾಮ ಲೆಕ್ಕಿಗರು, 750 ಸರ್ವೇಯರ‍್ಸ್, 36 ಎಡಿಎಲ್‌ಆರ್‌ಗಳ ನೇಮಕ

ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೆ ಹೈಕೋರ್ಟ್ ಛೀಮಾರಿ

ವಾಲ್ಮೀಕಿ ಹಗರಣ: ಹೈಕೋರ್ಟ್ ಮಟ್ಟಿಲೇರಿದ ಯೂನಿಯನ್ ಬ್ಯಾಂಕ್

by cknewsnow desk
July 23, 2024
0

ರಾಜ್ಯ ಸರಕಾರಕ್ಕೆ ಹೊಸ ಪೀಕಲಾಟ

kptclನಲ್ಲಿ 902 ಹುದ್ದೆಗೆ ನೇಮಕ

kptclನಲ್ಲಿ 902 ಹುದ್ದೆಗೆ ನೇಮಕ

by cknewsnow desk
May 24, 2024
0

ನೇಮಕಾತಿ ಆದೇಶ ನೀಡಿದ ಸರಕಾರ

ಪೆನ್ ಡ್ರೈ ಪ್ರಕರಣ: HDK ಹೆಸರು ಹೇಳಲು ₹100 ಕೋಟಿ ಆಫರ್ ಕೊಟ್ಟ ಡಿಕೆಶಿ!

ಪೆನ್ ಡ್ರೈ ಪ್ರಕರಣ: HDK ಹೆಸರು ಹೇಳಲು ₹100 ಕೋಟಿ ಆಫರ್ ಕೊಟ್ಟ ಡಿಕೆಶಿ!

by cknewsnow desk
May 17, 2024
0

ಹೊಸ ಬಾಂಬ್‌ ಸ್ಫೋಟಿಸಿದ ವಕೀಲ ಬಿಜೆಪಿ ನಾಯಕ ದೇವರಾಜೇಗೌಡ

ಹಾಸನ ಪೆನ್‍ಡ್ರೈವ್ ಪ್ರಕರಣ; ಅಶ್ಲೀಲ ವಿಡಿಯೋ ಲೀಕ್‌ ಹಿಂದೆ DCM ಡಿಕೆಶಿ ಕೈ ಚಳಕ

ಹಾಸನ ಪೆನ್‍ಡ್ರೈವ್ ಪ್ರಕರಣ; ಅಶ್ಲೀಲ ವಿಡಿಯೋ ಲೀಕ್‌ ಹಿಂದೆ DCM ಡಿಕೆಶಿ ಕೈ ಚಳಕ

by cknewsnow desk
May 6, 2024
0

ನಾಗಮಂಗಲದ ಎಲ್.‌ಆರ್.‌ಶಿವರಾಮೇಗೌಡ ಮಧ್ಯಸ್ಥಿಕೆ; ಮೊಬೈಲ್‌ ಸಂಭಾಷಣೆ ಆಡಿಯೋ ಬಿಡುಗಡೆ

Next Post
ಯೋಗ ದೇಶ, ಧರ್ಮಕ್ಕೆ ಸೀಮಿತವಲ್ಲ,  ಮನುಷ್ಯನ ಅಸ್ತಿತ್ವಕ್ಕೆ ಸೇರಿರುವಂಥದ್ದು: ನಿರ್ಮಲಾನಂದ ನಾಥ ಶ್ರೀಗಳು

ಸಂಶೋಧನೆ ವಿಶ್ವಕ್ಕೆ ಕೆಡಕುಂಟು ಮಾಡದಿರಲಿ

Leave a Reply Cancel reply

Your email address will not be published. Required fields are marked *

Recommended

ಗುಡಿಬಂಡೆ ಚಿಕ್ಕದು! ಗ್ರಂಥಾಲಯವೂ ಸಣ್ಣದು!! ಸರಕಾರದ ನಿರ್ಲಕ್ಷ್ಯ ಅತಿ ದೊಡ್ಡದು!!

ಗುಡಿಬಂಡೆ ಚಿಕ್ಕದು! ಗ್ರಂಥಾಲಯವೂ ಸಣ್ಣದು!! ಸರಕಾರದ ನಿರ್ಲಕ್ಷ್ಯ ಅತಿ ದೊಡ್ಡದು!!

4 years ago
ಪ್ರಾಧ್ಯಾಪಕರಾದ ದಳಪತಿ

ದೇವೇಗೌಡರು ಮತ್ತು ಸಿಂಧಗಿ ಕ್ಷೇತ್ರದ ಕರುಳಬಳ್ಳಿ ಸಂಬಂಧ ಬಿಡಿಸಿಟ್ಟ ಹೆಚ್.ಡಿ.ಕುಮಾರಸ್ವಾಮಿ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ