• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS

ಆಪ್ತರಿಂದಲೇ ಸಿದ್ದರಾಮಯ್ಯಗೆ ಶಾಕ್!!

P K Channakrishna by P K Channakrishna
May 21, 2023
in NEWS & VIEWS, NEWS IN USE, POLITICS, STATE
Reading Time: 1 min read
0
ಕೋವಿಡ್ ಕೆಸರು; ಬಿಜೆಪಿ, ಕಾಂಗ್ರೆಸ್ ಪಕ್ಷಗಳಿಗೆ ಪಂಚಪ್ರಶ್ನೆ ಹಾಕಿದ ಎಚ್ಡಿಕೆ

ಸಿದ್ದರಾಮಯ್ಯ

1.5k
VIEWS
FacebookTwitterWhatsuplinkedinEmail

ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಕೈಕೊಟ್ಟ ಆಪ್ತರು; ಆರಂಭದಲ್ಲಿ ಸಂಪುಟ ಸಂಕಟ ತೀವ್ರ

ಬೆಂಗಳೂರು: ಸಿದ್ದರಾಮಯ್ಯ ಸರಕಾರಕ್ಕೆ ಆಗಲೇ ಸಂಪುಟ ಸಂಕಟದ ಶಾಕ್ ಹೊಡೆದಿದ್ದು, ಕ್ಯಾಬಿನೆಟ್ ಸೇರಲು ಸೂಟು ಹೊಲಿಸಿಯೊಂಡಿದ್ದ ಹಿರಿಯ ನಾಯಕರು ಸ್ವತಃ ಸಿದ್ದರಾಮಯ್ಯ ಅವರಿಗೆ ಬಿಸಿ ಮುಟ್ಟಿಸಿದ್ದಾರೆ.

135 ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಬೀಗುತ್ತಿದ್ದ ಕಾಂಗ್ರೆಸ್ ಪಕ್ಷಕ್ಕೆ ಸಿಎಂ ಆಯ್ಕೆ ಬಿಕ್ಕಟ್ಟು ಬಗೆಹರಿಯಿತು ಎನ್ನುವಷ್ಟರಲ್ಲಿ ಕ್ಯಾಬಿನೆಟ್ ರಚನೆ ಕಗ್ಗಂಟು ಆಗಿದೆ.

ಎಂಟು ಸಚಿವರ ಪಟ್ಟಿ ರೆಡಿ ಮಾಡಲು ಶನಿವಾರ ಬೆಳಗಿನಜಾವದವರೆಗೂ ಸಮಾಲೋಚನೆ ನಡೆಸಿದ ಕಾಂಗ್ರೆಸ್ ದುಸ್ಥಿತಿಯ ಬಗ್ಗೆ ಪ್ರತಿಪಕ್ಷಗಳು ಆಡಿಕೊಂಡು ನಗುತ್ತಿವೆ.ಸಿಕೆನ್ಯೂಸ್ ನೌ ಗೆ ಸಿಕ್ಕಿರುವ ಮಾಹಿತಿಯ ಪ್ರಕಾರ; ಕೊನೆಪಕ್ಷ 28 ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಉದ್ದೇಶ ಇತ್ತು.

ಈ ಮೂಲಕ ಸಂಪುಟ ಸಮಸ್ಯೆಯನ್ನು ನಿವಾರಿಸಿಬಿಡುವುದು ಸಿದ್ದರಾಮಯ್ಯ ಹಾಗೂ ಕೆಸಿ ವೇಣುಗೋಪಾಲ್ ಉದ್ದೇಶವಾಗಿತ್ತು ಎನ್ನಲಾಗಿದೆ. ರಾಹುಲ್ ಗಾಂಧಿ ಅವರಿಗೂ ಇದೇ ಇಂಗಿತ ಇತ್ತೆಂದು ಮೂಲವೊಂದು ತಿಳಿಸಿದೆ.

ಆದರೆ, ಪಟ್ಟಿ ಏಕಪಕ್ಷೀಯವಾಗಿದ್ದ ಕಾರಣಕ್ಕೆ ಡಿಕೆ ಶಿವಕುಮಾರ್ ಸಡ್ಡು ಹೊಡೆದು ನಿಂತಿದ್ದಾರೆ. ಚರ್ಚೆಗಳು, ಚೌಕಾಸಿ ವ್ಯವಹಾರ ಕ್ಷಣಕ್ಕೊಂದು ತಿರುವು ಪಡೆಯುತ್ತಾ ಹೋದಾಗ 28 ಜನರ ಪಟ್ಟಿ 8ಕ್ಕೆ ಇಳಿದಿದೆ. ಮೇಲ್ನೋಟಕ್ಕೆ ಜಾತಿ ಸಮೀಕರಣ ಎಂದು ಹೇಳಲಾಗುತ್ತಿದ್ದೆ.

ನಿಜ ಸಂಗತಿ ಎಂದರೆ, ಸಿದ್ದರಾಮಯ್ಯ ಮತ್ತು ಡಿಕೆಶಿ ನಡುವೆ ಸಮೀಕರಣ ಸರಿ ಹೊಂದಿಲ್ಲ. ಪರಿಣಾಮವಾಗಿ, ಹೊಸದಿಲ್ಲಿಯಲ್ಲಿ ಇಡೀ ಶುಕ್ರವಾರ ಹಾಗೂ ಶನಿವಾರ ಮೂರನೇ ಜಾವದವರೆಗೆ ನಡೆದ ಮಾತುಕತೆ ಹಳ್ಳಹಿಡಿದು ಹೋಗಿದೆ.

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ರಾಜ್ಯ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ನಡುವೆ ನಡೆದ ಸಮಾಲೋಚನೆಗಳೆಲ್ಲವೂ ಹೊಳೆಯಲ್ಲಿ ಹುಣಸೆ ಹಿಚುಕಿದಂತೆ ಆಗಿದೆ.

ಬಹುಮತ ಸರಕಾರ ಬಂತು ಎಂದು ಬೀಗುತ್ತಿದ್ದ ಈ ನಾಯಕರಿಗೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವಿನ ತಿಕ್ಕಾಟ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಈ ಸರಕಾರ ಐದು ವರ್ಷ ಉಳಿಯುತ್ತಾ ಎನ್ನುವ ಗ್ಯಾರಂಟಿ ಬಗ್ಗೆ ವರಿಷ್ಠರು ತಲೆ ಕೆಡಿಸಕೊಳ್ಳುವ ಪರಿಸ್ಥಿತಿ ಸೃಷ್ಟಿಯಾಗಿದೆ.

ಸಂಪುಟಕ್ಕೆ ಸಡ್ಡು; ಕಾರ್ಯಕ್ರಮಕ್ಕೆ ಗೈರು

ನಿನ್ನೆ ನಡೆದ ಪ್ರಮಾಣ ಸ್ವೀಕಾರ ಸಮಾರಂಭಕ್ಕೆ ಕಾಂಗ್ರೆಸ್ ಪಕ್ಷದ ಅನೇಕರು ಕೈ ಕೊಟ್ಟಿದ್ದಾರೆ.ಕಾಂಗ್ರೆಸ್ ಪಕ್ಷದ ಮಿತ್ರಪಕ್ಷಗಳ ನಾಯಕರು, ಮೈತ್ರಿ ಸರಕಾರದ ಮುಖ್ಯಮಂತ್ರಿಗಳು, ಸ್ವಪಕ್ಷದ ಸಿಎಂಗಳು ಕಂಠೀರವ ಕ್ರೀಡಾಂಗಣಕ್ಕೆ ಬಂದು ಒಗ್ಗಟ್ಟು ಪ್ರದರ್ಶಿಸಿದರೆ, ಮಂತ್ರಿಗಿರಿ ಸಿಗಲಿಲ್ಲ ಎನ್ನುವ ಸಿಟ್ಟಿಗೆ ಅನೇಕರು ಸಮಾರಂಭದ ಕಡೆ ಸುಳಿಯಲಿಲ್ಲ.

ಮುಖ್ಯವಾಗಿ ಮಾಜಿ ಸಚಿವ ದಿನೇಶ್ ಗುಂಡೂರಾವ್, ಬಸವರಾಜ ರಾಯರೆಡ್ಡಿ, ಸಂತೋಷ್ ಲಾಡ್, ಶಿವರಾಜ್ ತಂಗಡಗಿ ಹಾಗೂ ಶಾಸಕರಾದ ಕೆ.ಎನ್ ರಾಜಣ್ಣ, ಬೈರತಿ ಸುರೇಶ್, ರಾಘವೇಂದ್ರ ಹಿಟ್ನಾಳ್, ತುಕಾರಾಮ್, ರಿಜ್ವಾನ್ ಅರ್ಷದ್ ಸೇರಿದಂತೆ ಅನೇಕರು ಕಂಠೀರವ ಕಡೆ ಕಣ್ಣು ಹಾಕಲೇ ಇಲ್ಲ. ಇವರೆಲ್ಲರೂ ಸಿದ್ದರಾಮಯ್ಯ ಗುಂಪಿನಲ್ಲಿ ಗುರುತಿಸಿಕೊಂಡವರು.

ಇನ್ನು ಡಿಕೆಶಿ ಗುಂಪಿನಲ್ಲಿ ಗುರುತಿಸಿಕೊಂಡಿದ್ದ ಮಧು ಬಂಗಾರಪ್ಪ ಅವರೂ ಬಂದಿರಲಿಲ್ಲ.

ವೀಕ್ಷಕರು ಬೆಂಗಳೂರಿಗೆ ಬಂದು ಸಿದ್ದು ಸಿಎಂ ಆಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದ ಅನೇಕ ನಿಷ್ಠರ ಹೆಸರುಗಳೇ ಸಂಪುಟ ಪಟ್ಟಿಯಲ್ಲಿ ಇಲ್ಲ ಎನ್ನುವ ಮಾಹಿತಿ ಇದೆ. ಆದರೆ, ತಮ್ಮ ಪರ ದನಿ ಎತ್ತಿದ್ದ ಬಹುತೇಕ ಶಾಸಕರ ಹಿತರಕ್ಷಣೆ ಮಾಡಲು ಡಿಕೆ ಶಿವಕುಮಾರ್ ಹರಸಾಹಸ ನಡೆಸುತ್ತಿದ್ದಾರೆ ಎಂದು ಗೊತ್ತಾಗಿದೆ.

ಹೈಕಮಾಂಡ್ ನಲ್ಲಿಯೇ ಗುಂಪುಗಾರಿಕೆಕರ್ನಾಟಕದ ಕಾಂಗ್ರೆಸ್ ತಿಕ್ಕಾಟಕ್ಕೆ ಸಂಬಂಧಿಸಿ ಕಾಂಗ್ರೆಸ್ ಹೈಕಮಾಂಡ್ ನಲ್ಲಿಯೇ ಎರಡು ಗುಪುಗಳು ಸೃಷ್ಟಿಯಾಗಿವೆ. ಆ ಗುಂಪುಗಳು ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವೆ ಹಂಚಿ ಹೋಗಿವೆ ಎಂದು ಗೊತ್ತಾಗಿದೆ. ಈ ಎಲ್ಲಾ ಬೆಳವಣಿಗೆಗಳನ್ನು ಪ್ರತಿಪಕ್ಷ ಬಿಜೆಪಿ ಸೈಲೆಂಟಾಗಿ ಗಮನಿಸುತ್ತಿದೆ.

Tags: ckcknewsnowCongressDK ShivakumarkarnatakaPoliticssiddaramaiah
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಗುಡಿಬಂಡೆಯಲ್ಲಿ ವರುಣ ತಾಂಡವ

ಬೆಂಗಳೂರಿನಲ್ಲಿ ಮಹಾ ಮಳೆ; ಯುವತಿ ಬಲಿ

Leave a Reply Cancel reply

Your email address will not be published. Required fields are marked *

Recommended

ಬೆಂಗಳೂರು ಆರೋಗ್ಯಕ್ಕೆ ಟ್ರೀಟ್‌ಮೆಂಟ್:‌  ಎಲ್ಲ ಆಸ್ಪತ್ರೆಗಳು ಬಿಬಿಎಂಪಿ ಕೈತಪ್ಪಿ ಆರೋಗ್ಯ ಇಲಾಖೆ ವ್ಯಾಪ್ತಿಗೆ; ತಜ್ಞರ ವರದಿ ಪಡೆದ ನಂತರ ಕ್ರಮಕ್ಕೆ ಸರಕಾರ ನಿರ್ಧಾರ

ಬೆಂಗಳೂರು ಆರೋಗ್ಯಕ್ಕೆ ಟ್ರೀಟ್‌ಮೆಂಟ್:‌ ಎಲ್ಲ ಆಸ್ಪತ್ರೆಗಳು ಬಿಬಿಎಂಪಿ ಕೈತಪ್ಪಿ ಆರೋಗ್ಯ ಇಲಾಖೆ ವ್ಯಾಪ್ತಿಗೆ; ತಜ್ಞರ ವರದಿ ಪಡೆದ ನಂತರ ಕ್ರಮಕ್ಕೆ ಸರಕಾರ ನಿರ್ಧಾರ

4 years ago
ಕೈಕೊಟ್ಟ ಜೆಡಿಎಸ್! ನಂಬಿ ಕೆಟ್ಟ ಕಾಂಗ್ರೆಸ್!!

ಕೈಕೊಟ್ಟ ಜೆಡಿಎಸ್! ನಂಬಿ ಕೆಟ್ಟ ಕಾಂಗ್ರೆಸ್!!

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ