• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CKPLUS

200 ಯುನಿಟ್‌ ಮೇಲೆ ಕರೆಂಟ್‌ ಬಿಲ್‌ ಕಟ್ಟಬೇಡಿ; ಮಹಿಳೆಯರು ಬಸ್‌ ಚಾರ್ಜ್‌ ಕೊಡಬೇಡಿ

P K Channakrishna by P K Channakrishna
May 26, 2023
in CKPLUS, ELECTION2024, NATION, POLITICS, STATE
Reading Time: 1 min read
0
200 ಯುನಿಟ್‌ ಮೇಲೆ ಕರೆಂಟ್‌ ಬಿಲ್‌ ಕಟ್ಟಬೇಡಿ; ಮಹಿಳೆಯರು ಬಸ್‌ ಚಾರ್ಜ್‌ ಕೊಡಬೇಡಿ
1.2k
VIEWS
FacebookTwitterWhatsuplinkedinEmail

ಕಾಂಗ್ರೆಸ್ ಅಕ್ರಮ ನಡೆಸಿ ಚುನಾವಣೆ ಗೆದ್ದಿದೆ ಎಂದ ಹೆಚ್.ಡಿ.ಕುಮಾರಸ್ವಾಮಿ ನೇರ ಆರೋಪ; ದಾಖಲೆ ಸಮೇತ ಆರೋಪ ಮಾಡಿದ ಮಾಜಿ ಮುಖ್ಯಮಂತ್ರಿ

ಮಿಸ್ಟರ್ ಸಿದ್ದರಾಮಯ್ಯ ಧೈರ್ಯವಿದ್ದರೆ ತನಿಖೆ ನಡೆಸಿ; ರಾಮನಗರ, ಮಾಗಡಿ ಸೇರಿ 42 ಕ್ಷೇತ್ರಗಳಲ್ಲಿ ಅಮಿಷಗಳ ಕೂಪನ್ ಗಳನ್ನು ಕೊಟ್ಟು ಗೆದ್ದ ಕಾಂಗ್ರೆಸ್

ಬೆಂಗಳೂರು: ಸುಳ್ಳು ಗ್ಯಾರಂಟಿಗಳ ಜತೆಗೆ ಅಕ್ರಮವಾಗಿ ಕೂಪನ್ ಗಳನ್ನು ಹಂಚಿ ರಾಮನಗರ, ಮಾಗಡಿ ಸೇರಿದಂತೆ ರಾಜ್ಯದಲ್ಲಿ 45ರಿಂದ 50 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವು ಅಕ್ರಮವಾಗಿ ಗೆದ್ದಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು.

ಹೀಗಾಗಿ ಸುಳ್ಳು ಗ್ಯಾರಂಟಿಗಳ ವಿರುದ್ಧ ಸಾರ್ವಜನಿಕರು ಸಡ್ಡು ಹೊಡೆಯಬೇಕು. ಯಾವುದೇ ಕಾರಣಕ್ಕೂ 200 ಯುನಿಟ್‌ ಬಳಕೆ ಮಾಡುವ ಗ್ರಾಹಕರು ವಿದ್ಯುತ್‌ ಬಿಲ್‌ ಕಟ್ಟಬೇಡಿ ಹಾಗೂ ಮಹಿಳೆಯರು ಯಾವುದೇ ಬಸ್ಸಿನಲ್ಲಿ ಪ್ರಯಾಣ ಮಾಡಿದರೂ ಬಸ್‌ ಟಿಕೆಟ್‌ ತೆಗೆದುಕೊಳ್ಳಬೇಡಿ ಎಂದು ಅವರು ಹೇಳಿದ್ದಾರೆ.

ಅಲ್ಲದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಟೀಕಾಪ್ರಹಾರ ನಡೆಸಿದ ಅವರು, ಮಿಸ್ಟರ್ ಸಿದ್ದರಾಮಯ್ಯ ಧೈರ್ಯ ಇದ್ದರೆ ಈ ಅಕ್ರಮವನ್ನು ತನಿಖೆಗೆ ಒಳಪಡಿಸಿ ಎಂದು ಅವರು ಒತ್ತಾಯ ಮಾಡಿದರು.

ಪಕ್ಷದ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ಅವರ ಸೋಲಿಗೆ ಕಾಂಗ್ರೆಸ್ ಪಕ್ಷವು ಮತದಾನಕ್ಕೆ ಕೆಲವೇ ಗಂಟೆಗಳ ಮುನ್ನ ಹಂಚಿದ ಕ್ಯೂ ಆರ್ ಕೊಡ್ ಗಳು ಉಳ್ಳ ಈ ಕೂಪನ್ ಗಳೇ ಕಾರಣ. ಇದು ಗಂಭೀರ ಸ್ವರೂಪದ ಚುನಾವಣೆ ಅಕ್ರಮ ಎಂದು ದೂರಿದರು.

ಮೂರು ಸಾವಿರ ಹಾಗೂ ಐದು ಸಾವಿರ ಮೊತ್ತದ ಕ್ಯೂ ಆರ್ ಕೋಡ್ ಗಳನ್ಜು ಹೊಂದಿರುವ ಕೂಪನ್ ಗಳನ್ನು ಮತದಾನಕ್ಕೆ ಕೆಲವೇ ಗಂಟೆಗಳ ಮುನ್ನ ಮತದಾರರಿಗೆ ಹಂಚಲಾಯಿತು. ಈ ಕೂಪನ್ ಗಳಿಂದಲೇ ನಾವು ಸೋಲಬೇಕಾಯಿತು. ಕಾಂಗ್ರೆಸ್ ಅಕ್ರಮವಾಗಿ ಗೆದ್ದಿದೆ. ಈ ಬಗ್ಗೆ ತನಿಖೆ ಮಾಡಿಸುತ್ತೀರಾ ಮಿಸ್ಟರ್ ಸಿದ್ದರಾಮಯ್ಯ ಎಂದು ಮಾಜಿ ಮುಖ್ಯಮಂತ್ರಿ ಅವರು ಕಿಡಿಕಾರಿದರು.

ಹೀಗೆ ಕೂಪನ್ ಗಳನ್ನು ಹಂಚಲು ಕಾಂಗ್ರೆಸ್ ಅಭ್ಯರ್ಥಿಗಳು ಹಣ ಎಲ್ಲಿಂದ ತಂದರು? ಕಾಂಗ್ರೆಸ್ ಅಭ್ಯರ್ಥಿ ಗೆದ್ದರಷ್ಟೇ ಈ ಕೂಪನ್ ನಗದಾಗುತ್ತದೆ. ಆಗ ಕೂಪನ್ ಹೊಂದಿರುವವರು ನಿಗದಿತ ಮಾಲ್ ಅಥವಾ ಅಂಗಡಿಗೆ ಹೋಗಿ ಕೂಪನ್ ನಲ್ಲಿ ನಿಗದಿತ ಮೊತ್ತದ ವಸ್ತುಗಳನ್ನು ಖರೀದಿ ಮಾಡಬಹುದು ಎಂದು ಆಮಿಷ ಒಡ್ಡಲಾಗಿದೆ. ಇದು ಚುನಾವಣೆಯ ಮಹಾ ಅಕ್ರಮ. ಈ ಚುನಾವಣೆ ಆಯೋಗ ತನಿಖೆ ಮಾಡಬೇಕು ಎಂದು ಒತ್ತಾಯ ಮಾಡಿದರು ಮಾಜಿ ಮುಖ್ಯಮಂತ್ರಿಗಳು.

ರಾಮನಗರ, ಮಾಗಡಿ, ರಾಜರಾಜೇಶ್ವರಿ ನಗರ ಸೇರಿದಂತೆ ರಾಜ್ಯದ 45ರಿಂದ 50 ವಿಧಾನಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಈ ರೀತಿಯ ಅಕ್ರಮ ಮಾಡಿದೆ. ಬಿಜೆಪಿ ಸರಕಾರದ ಅಕ್ರಮಗಳನ್ನು ತನಿಖೆ ಮಾಡಿಸುವೆ ಎಂದು ಹೇಳುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲು ಈ ಕೂಪನ್ ಅಕ್ರಮದ ಬಗ್ಗೆ ತನಿಖೆ ಮಾಡಿಸಬೇಕು ಎಂದು ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು.

ಸುಮಾರು ನಲವತ್ತೆರಡು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದವರು ಗಿಫ್ಟ್ ಕೂಪನ್ ಹಂಚಿದ್ದಾರೆ. ಆ ಕೂಪನ್ ಕೊಟ್ಟರೆ, ಮೂರು, ಐದು ಸಾವಿರ ಬೆಲೆಯ ವಸ್ತುಗಳು ಸಿಗುತ್ತೆ ಅಂತ ಆಸೆ ಹುಟ್ಟಿಸಿದ್ದಾರೆ. ಒಂದೊಂದು ಕ್ಷೇತ್ರದಲ್ಲಿ ಸುಮಾರು ಅರವತ್ತು ಸಾವಿರ ಕೂಪನ್ ಹಂಚಿದ್ದಾರೆ ಎಂದ ಮಾಜಿ ಮುಖ್ಯಮಂತ್ರಿ ಅವರು, ಮಾಧ್ಯಮಗೋಷ್ಠಿಯಲ್ಲಿ ಗಿಫ್ಟ್ ಕೂಪನ್ ಗಳನ್ನು ಪ್ರದರ್ಶನ ಮಾಡಿದರು.

ಪ್ರಜಾಪ್ರಭುತ್ವದಲ್ಲಿ ಗೆಲವು ಗೆಲವೇ. ಆದರೆ, ಮಹಾತ್ಮ ಗಾಂಧೀಜಿ ಹೆಸರು ಹೇಳುವ, ಸ್ವಾತಂತ್ರ್ಯ ತಂದುಕೊಟ್ಟ ಪಕ್ಷ ಎಂದು ಬಡಾಯಿ ಕೊಚ್ಚಿಕೊಳ್ಳುವ ಕಾಂಗ್ರೆಸ್ ಅತ್ಯಂತ ಕೀಳು ಕೆಲಸ ಮಾಡಿದೆ. ಆ ಪಕ್ಷಕ್ಕೆ ನೈತಿಕತೆ ಎನ್ನುವುದು ಇದೆಯಾ ಎಂದು ಅವರು ಪ್ರಶ್ನೆ ಮಾಡಿದರು.

ನಮ್ಮ ಬಗ್ಗೆ ಕಾಂಗ್ರೆಸ್ ಒಂದು ಟ್ವೀಟ್ ಮಾಡಿದೆ.ಗ್ಯಾರಂಟಿ ಕಾರ್ಯಕ್ರಮಗಳನ್ನು ಈಡೇರಿಸುವುದು ಇರಲಿ, ನೀವು ಪಕ್ಷ ವಿಸರ್ಜನೆ ಯಾವಾಗ ಮಾಡ್ತೀರಾ ಅಂತಾ ಕೇಳಿದೆ. ಹಿಂದೆ ಒಂದು ಚುನಾವಣೆಯಲ್ಲಿ 179 ಸ್ಥಾನದಿಂದ 39 ಸ್ಥಾನಕ್ಕೆ ಇಳಿದಾಗ ಕಾಂಗ್ರೆಸ್ ನಾಯಕರು ಪಕ್ಷ ವಿಸರ್ಜನೆ ಮಾಡಿದ್ದರಾ? ಕಾಲಚಕ್ರ ತಿರುಗುತ್ತೆ, ಮೇಲೆ ಇದ್ದವನು ಕೆಳಗೆ ಇಳಿಬೇಕು, ಕೆಳಗಿದ್ದವನು ಮೇಲೆ ಬರಬೇಕು. ಈ ದುರಹಂಕಾರದ ಮಾತು ಬೇಡ. ಪಕ್ಷ ವಿಸರ್ಜನೆ ಮಾಡುವುದು, ಅಂತ್ಯಸಂಸ್ಕಾರ ಮಾಡುವುದು ಇದೆಲ್ಲಾ ನಾನು ನಿಮ್ಮಿಂದ ಕಲೀಬೇಕಿಲ್ಲ ಎಂದು ಅವರು ಕಿಡಿಕಾರಿದರು.

ನಾನು ಹೇಳಿದ್ದೇನು?:

ನನಗೆ 123 ಸೀಟು ಬಂದು ಪಂಚರತ್ನ ಯೋಜನೆಗಳನ್ನು ಜಾರಿ ಮಾಡದಿದ್ದರೆ ಪಕ್ಷವನ್ನು ವಿಸರ್ಜನೆ ಮಾಡುತ್ತೇನೆ ಎಂದು ಹೇಳಿದ್ದೆ. ಆ ಹೇಳಿಕೆ ಕಾಂಗ್ರೆಸ್ ನಾಯಕರಿಗೆ ಬೇರೆ ರೀತಿ ಕೇಳಿಸಿದೆ. ಒಮ್ಮೆ ಅವರು ನನ್ನ ಹೇಳಿಕೆಯನ್ನು ಮತ್ತೆ ಕೇಳಿಸಿಕೊಳ್ಳಲಿ. ನಾನು ಹೇಳಿದ್ದು ಏನು ಎಂಬುದು ಅರ್ಥ ಆಗುತ್ತದೆ. ಅವರಂಥ ಕುತಂತ್ರದ ರಾಜಕಾರಣ ಮಾಡಿ, ನಾವು ಪಕ್ಷ ಕಟ್ಟಿಲ್ಲ ಎಂದು ಕುಮಾರಸ್ವಾಮಿ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೇಗೆ ಗೆದ್ದರು ಅನ್ನೋದಕ್ಕಿಂತ ಒಟ್ಟಾರೆ ಗೆದ್ದರು ಅನ್ನುವುದೇ ಮುಖ್ಯ. ಈ ನಾಡಿನ ಜನರ ಮುಂದೆ ಮನವಿ ಮಾಡ್ತೀನಿ. ಒಪ್ಪತ್ತು ಹೊತ್ತಿನ ಊಟದ ಆಸೆಗೆ ನಿಮ್ಮ ಮುಂದಿನ ಭವಿಷ್ಯ ಹಾಳು ಮಾಡಿಕೊಳ್ಳವೇಡಿ. ಒಂದೆರಡು ಸಾವಿರ ಹಣದಿಂದ ನಿಮ್ಮ ಬದುಕು ಸರಿ ಹೋಗುವುದಿಲ್ಲ ಎಂದು ಜನತೆಗೆ ಅವರು ಕಿವಿಮಾತು ಹೇಳಿದರು.

ರಾಜ್ಯಾಧ್ಯಕ್ಷರಾಗಿ ಇಬ್ರಾಹಿಂ ಮುಂದುವರಿಕೆ:

ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾಗಿ ಹಾಲಿ ಅಧ್ಯಕ್ಷ ಸಿಎಂ ಇಬ್ರಾಹಿಂ ಮುಂದುವರಿಯುತ್ತಾರೆ. ಚುನಾವಣೆ ಸೋಲಿನ ಹೊಣೆ ಹೊತ್ತು ಸಿಎಂ ಇಬ್ರಾಹಿಂ ರಾಜೀನಾಮೆ ಕೊಟ್ಟಿದ್ದಾರೆ. ಅವರನ್ನು ಮುಂದುವರೆಸಬೇಕಾ, ಬೇಡವಾ ಅಂತ ನಾವು ನಿರ್ಧಾರ ಮಾಡುತ್ತೇವೆ. ಅವರ ರಾಜೀನಾಮೆ ಅಂಗೀಕಾರ ಮಾಡಿಲ್ಲ. ಆದರೆ ಅವರೇ ರಾಜ್ಯಾಧ್ಯಕ್ಷರಾಗಿ ಮುಂದುವರಿಯುತ್ತಾರೆ ಎಂದು ಕುಮಾರಸ್ವಾಮಿ ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಯುವ ಜನತಾದಳ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ಅವರು ನೀಡಿದ್ದಾರೆ. ಅವರ ರಾಜಿನಾಮೆ ಕೂಡಾ ಅಂಗೀಕಾರ ಆಗಿಲ್ಲ. ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೂ ಯಾರನ್ನು ನೇಮಿಸಬೇಕು ಅಂತಾ ಚರ್ಚೆ ಮಾಡಿ ತೀರ್ಮಾನ ಮಾಡ್ತೀವಿ ಎಂದು ಮಾಜಿ ಮುಖ್ಯಮಂತ್ರಿ ಅವರು ಹೇಳಿದಾಗ ಮಧ್ಯಪ್ರವೇಶ ಮಾಡಿದ ಸಿಎಂ ಇಬ್ರಾಹಿಂ ಅವರು; ನಿಖಿಲ್ ಅವರೂ ಕೂಡ ಮುಂದುವರಿಯುತ್ತಾರೆ ಎಂದು ತಿಳಿಸಿದರು.

ಈ ಐದು ಗ್ಯಾರಂಟಿ ಗಳನ್ನು ಕಾಂಗ್ರೆಸ್ ಜಾರಿಗೆ ತರಲು ಕಷ್ಟ. ಅಡ್ಡದಾರಿಯಲ್ಲಿ ಅಧಿಕಾರಕ್ಕೆ ಅವರಿಂದ ಜನರ ಆಶೋತ್ತರಗಳನ್ನು ಈಡೇರಿಸಲು ಸಾಧ್ಯ ಇಲ್ಲ. ಸಿದ್ದರಾಮಯ್ಯ ಅವರು ಚುನಾವಣೆಗೆ ಮುನ್ನ ಭಾಷಣದಲ್ಲಿ ಎಲ್ಲರಿಗೂ ಫ್ರೀ ಅಂತಾ ಹೇಳ್ತಾ ಇದ್ದರು. ಬಸ್ ಪಾಸ್ ಎಲ್ಲಾ ಕಡೆ ಫ್ರೀ ಅಂತ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದರು. ಮೊದಲ ಸಂಪುಟ ಸಭೆಯಲ್ಲಿಯೇ ಐದು ಗ್ಯಾರಂಟಿಗಳನ್ಹು ಜಾರಿ ಮಾಡುತ್ತೇವೆ ಎಂದು ಅವರು ಹೇಳಿದ್ದರು. ಆದರೆ, ಅವರು ಮಾತು ತಪ್ಪಿದ್ದಾರೆ ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.

ಈ ವಿಚಾರದಲ್ಲಿ ನಾವು ಬೀದಿಗಿಳಿದು ಹೋರಾಟ ಮಾಡುತ್ತೇವೆ. ಜನ ಏನು ತೀರ್ಮಾನ ತೆಗೆದುಕೊಳ್ತಾರೋ ಗೊತ್ತಿಲ್ಲ. ನಾವಂತೂ ಹೋರಾಟ ಮಾಡಲು ಸಿದ್ದ.‌ ಜನರಿಗೆ ತಮಗೆ ಅನ್ಯಾಯ ಆಗಿದೆ ಎಂದರೆ ನಮ್ಮ ಜತೆ ಕೈಜೋಡಿಸಲಿ ಎಂದು ಅವರು ಹೇಳಿದರು.

Tags: cheatingckcknewsnowCongresselection 2023hd kumaraswamyjdskarnataka
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಚಿಂತಾಮಣಿಯ ಡಾ.ಎಂ.ಸಿ.ಸುಧಾಕರ್‌ ಸೇರಿ 24 ಸಚಿವರ ಪ್ರಮಾಣ

ಚಿಂತಾಮಣಿಯ ಡಾ.ಎಂ.ಸಿ.ಸುಧಾಕರ್‌ ಸೇರಿ 24 ಸಚಿವರ ಪ್ರಮಾಣ

Leave a Reply Cancel reply

Your email address will not be published. Required fields are marked *

Recommended

ಹಳ್ಳಿ, ಪಟ್ಟಣ ಮನುಷ್ಯ ಮನದೊಳಗೆ ಬದುಕುತ್ತಿದ್ದ ಗುಬ್ಬಚ್ಚಿಗಳು ಎಲ್ಲಿಗೆ ಹೋದವೋ..?

ಹಳ್ಳಿ, ಪಟ್ಟಣ ಮನುಷ್ಯ ಮನದೊಳಗೆ ಬದುಕುತ್ತಿದ್ದ ಗುಬ್ಬಚ್ಚಿಗಳು ಎಲ್ಲಿಗೆ ಹೋದವೋ..?

4 years ago
ಚಿನ್ನಾಭರಣ ಅಂಗಡಿ ಮೇಲೆ ದರೋಡೆಕೋರರ ದಾಳಿ; ಗುಂಡೇಟಿಗೆ ವ್ಯಕ್ತಿ ಬಲಿ

ಚಿನ್ನಾಭರಣ ಅಂಗಡಿ ಮೇಲೆ ದರೋಡೆಕೋರರ ದಾಳಿ; ಗುಂಡೇಟಿಗೆ ವ್ಯಕ್ತಿ ಬಲಿ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ