• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home POLITICS

ಮಂತ್ರಿಗಿರಿ ಸಿಗದವರ ಮುನಿಸು; ಕಮರಿದ ಶೆಟ್ಟರ್‌, ಸವದಿ ಕನಸು

P K Channakrishna by P K Channakrishna
May 27, 2023
in POLITICS, STATE
Reading Time: 2 mins read
0
ಮಂತ್ರಿಗಿರಿ ಸಿಗದವರ ಮುನಿಸು; ಕಮರಿದ ಶೆಟ್ಟರ್‌, ಸವದಿ ಕನಸು
1.3k
VIEWS
FacebookTwitterWhatsuplinkedinEmail

ಸಿದ್ದು, ಡಿಕೆಶಿ ಸೇರಿ ಸಂಪುಟ ಸಂಖ್ಯೆ 34;‌ ಎಸ್‌.ಎನ್‌.ಸುಬ್ಬಾರೆಡ್ಡಿ, ಎಸ್‌.ಎನ್‌.ನಾರಾಯಣಸ್ವಾಮಿಗೆ ಚಾನ್ಸ್‌ ಮಿಸ್‌ ಆಗಿದ್ದೇಗೆ?

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಬೆನ್ನೆಲ್ಲೇ ಕಾಂಗ್ರೆಸ್‌ ಪಕ್ಷದಲ್ಲಿ ಅತೃಪ್ತಿಯ ಕಾಡ್ಗಿಚ್ಚು ಉಂಟಾಗಿದೆ.

ಬೇಕು ಬೇಕಾದವರಿಗೆ ಮಂತ್ರಿಗಿರಿಯನ್ನು ಹಂಚಲಾಗಿದೆ ಎಂದು ನಿಷ್ಠರೇ ಈಗ ಸಿದ್ದರಾಮಯ್ಯ ಮತ್ತು ಡಿಕೆ.ಶಿವಕುಮಾರ್‌ ವಿರುದ್ಧ ಸಿಟ್ಟಿಗೆದ್ದಿದ್ದಾರೆ. ಹೊಸ ಮಂತ್ರಿಗಳು ಗೂಟದ ಕಾರು ಏರಿ ವಿಧಾನಸೌಧಕ್ಕೆ ಬಂದು ಹೊಸ ಕಚೇರಿಗಳಲ್ಲಿ ಆಸೀನರಾಗುವ ಮುನ್ನವೇ ಭಿನ್ನಮತ ಸ್ಫೋಟಗೊಂಡಿದೆ.

ಪಕ್ಷ ನಿಷ್ಠಾಂತ ನಾಯಕ ಹಾಗೂ ಗಾಂಧಿ ಕುಟುಂಬದ ನಿಷ್ಠ ಬಿ.ಕೆ.ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ಕೈತಪ್ಪಿರುವುದು ಸ್ವತಃ ಪಕ್ಷದ ಮೂಲ ನಿವಾಸಿಗಳ ಕಣ್ಣು ಕೆಂಪಾಗುವಂತೆ ಮಾಡಿದೆ. ಬಹುಶಃ ಅವರು ಇಂದು ಅಥವಾ ಸೋಮವಾರದ ಹೊತ್ತಿಗೆ ವಿಧಾನ ಪರಿಷತ್‌ ಸದಸ್ಯತ್ವಕ್ಕೆ ರಾಜೀನಾಮೆ ನೀಡುವ ಎಲ್ಲಾ ಸಾಧ್ಯತೆಯೂ ಇದೆ.

ಇನ್ನು, ಪಕ್ಷದ ಹಿರಿಯ ಮುಖಂಡ ಆರ್.ವಿ. ದೇಶಪಾಂಡೆ ಅವರನ್ನು ಸಂಪುಟದಿಂದ ಅತ್ಯಂತ ಅಪಮಾನಕರವಾಗಿ ಹೊರಗಿಡಲಾಗಿದೆ. ಇದಕ್ಕೆ ಉಪ ಮುಖ್ಯಮಂತ್ರಿ ಡಿಕೆಶಿಯೇ ಕಾರಣ ಎಂದು ಹೇಳಲಾಗಿದೆ. ಆದರೆ, ಪಕ್ಷಕ್ಕೆ ಆಳಿಲು ಸೇವೆಯಷ್ಟನ್ನೂ ಮಾಡದ ಅವರ ಬಗ್ಗೆ ಪಕ್ಷದೊಳಗೇ ಯಾರಿಂದಲೂ ಸಿಂಪಥಿ ವ್ಯಕ್ತವಾಗುತ್ತಿಲ್ಲ.

ಸಿದ್ದು ನೆರಳಿನಲ್ಲಿ ಇದ್ದುಕೊಂಡು ಮಂತ್ರಿ ಆಗಬಹುದು ಎಂದು ನಂಬಿಕೊಂಡು ಜೆಡಿಎಸ್‌ ಪಕ್ಷಕ್ಕೆ ಕೈಕೊಟ್ಟು ಕಾಂಗ್ರೆಸ್‌ ಪಕ್ಷಕ್ಕೆ ಹಾರಿ ಅರಸೀಕೆರೆ ಕ್ಷೇತ್ರದಿಂದ ಪುನರಾಯ್ಕೆ ಆಗಿರುವ ಕೆ.ಎಂ.ಶಿವಲಿಂಗೇಗೌಡ ಒಳಗೊಳಗೇ ಕುದಿಯುತ್ತಿದ್ದಾರೆ. ನಿನ್ನೆ ಅವರು ಸಿದ್ದರಾಮಯ್ಯ ಅವರ ಮನೆ ಬಾಗಿಲ ಬಳಿ ಅಸಹಾಯಕರಾಗಿ ನಿಂತಿದ್ದ ದೃಶ್ಯಗಳು ವೈರಲ್‌ ಆಗಿವೆ.

ಕುಂಚಿಟಿಗ ಸಮುದಾಯದ ಶಿರಾ ಕ್ಷೇತ್ರದ ಶಾಸಕ ಟಿ.ಬಿ.ಜಯಚಂದ್ರ ಅವರಿಗೆ ವರಿಷ್ಠರಲ್ಲಿ ಒಬ್ಬರು ಕೈಕೊಟ್ಟಿದ್ದಾರೆ ಎನ್ನುವ ಖಚಿತ ಮಾಹಿತಿ ಇದೆ. ಹಿಂದೆ, ಜೆಡಿಎಸ್‌ ಪಕ್ಷದ ಸತ್ಯನಾರಾಯಣ ಅವರು ಅಕಾಲ ಮರಣಕ್ಕೀಡಾದಾಗ ಶಿರಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಜಯಚಂದ್ರ ಅವರಿಗೆ ಟಿಕೆಟ್‌ ನೀಡಲು ರಂದೀಪ್‌ ಸುರ್ಜೇವಾಲ ಅವರು ಸ್ಪಷ್ಟ ವಿರೋಧ ವ್ಯಕ್ತಪಡಿಸಿದ್ದರು. ಕುಂಚಿಟಿಗ ಒಕ್ಕಲಿಗರು ಈಗ ಕಾಂಗ್ರೆಸ್‌ ವಿರುದ್ಧ ಮುನಿಸಿಕೊಂಡಿದ್ದಾರೆ.

ಇನ್ನು ಕ್ಷೇತ್ರಕ್ಕೆ ಹೆಜ್ಜೆಯನ್ನೇ ಇಡದೆ ಗೆದ್ದುಬೀಗಿದ ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ವಿನಯ್‌ ಕುಲಕರ್ಣಿ ಅವರನ್ನು ಅನಿರೀಕ್ಷಿತವಾಗಿ ಕೈಬಿಡಲಾಗಿದೆ.

ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದಾಗ ಯಡಿಯೂರಪ್ಪ ಅವರ ಸಂಪುಟದಲ್ಲಿ ಉಪ ಮುಖ್ಯಮಂತ್ರಿ ಆಗಿದ್ದ ಲಕ್ಷ್ಮಣ ಸವದಿ ಅವರಿಗೆ ಮಂತ್ರಿ ಸ್ಥಾನ ಸಿಗುವ ಸಾಧ್ಯತೆ ಬಹಳ ಇತ್ತು. ಅವರಿಗೆ ಕಾಂಗ್ರೆಸ್‌ ಕೈಕೊಟ್ಟಿದೆ.

ಅದೇ, ಬಿಜೆಪಿ ಪಕ್ಷವನ್ನು ಧಿಕ್ಕರಿಸಿ ಕಾಂಗ್ರೆಸ್‌ ಸೇರಿದ್ದ ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಅವರಿಗೆ ಕೂಡ ನಿರೀಕ್ಷಿತ ಎನ್ನುವಂತೆ ಕಾಂಗ್ರೆಸ್‌ ಕೈಕೊಟ್ಟಿದೆ. ಈ ಇಬ್ಬರು ಲಿಂಗಾಯತ ನಾಯಕರನ್ನು ಬಿಜೆಪಿಯಿಂದ ಸೆಲೆದುಕೊಳ್ಳಲು ಇನ್ನಿಲ್ಲದ ಉತ್ಸಾಹ ತೋರಿಸಿದ ಕಾಂಗ್ರೆಸ್ಸಿಗರು, ಅವರಿಗೆ ಹೊಡೆತ ಕೊಟ್ಟಿದೆ. ಅಟ್‌ ಲೀಸ್ಟ್‌ ಸವದಿಯನ್ನು ಮಂತ್ರಿ ಮಾಡಬಹುದು, ಶೆಟ್ಟರ್‌ ಅವರನ್ನು ಆರು ತಿಂಗಳ ನಂತರ ಮೇಲ್ಮನೆಗೆ ಕರೆಸಿಕೊಂಡು ಮಂತ್ರಿ ಮಾಡಬಹುದು ಎನ್ನುವ ಆಸೆಯೂ ಕಮರಿಹೋಗಿದೆ.

32 ಸಚಿವೆರ ಆಯ್ಕೆಯ ಮಾನದಂಡದ ಬಗ್ಗೆ ಕಾಂಗ್ರೆಸ್‌ ನಲ್ಲಿ ಅತೃಪ್ತಿಯ ಹೊಗೆ ಎದ್ದಿದೆ. ಕೇವಲ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ಅವರ ನಡುವಿನ ತಿಕ್ಕಾಟ ಶಮನ ಮಾಡುವ ರೀತಿಯಲ್ಲಿ ಕ್ಯಾಬಿನೇಟ್‌ ರಚನೆ ಮಾಡಲಾಗಿದೆ ಎಂದು ಮಾಜಿ ಸಚಿವರೊಬ್ಬರು ದೂರಿದರು.

ಸಿಎಂ, ಡಿಸಿಎಂ ಇಬ್ಬರು ತಮ್ಮ ಆಪ್ತರಿಗಾಗಿ ವಿಸ್ತರಣೆ ಮಾಡಿಕೊಂಡ ಸಂಪುಟ ಇದಾಗಿದೆ ಎಂದು ಕೋಲಾರದ ಹಿರಿಯ ನಾಯಕರೊಬ್ಬರು ಸಿಕೆನ್ಯೂಸ್‌ ನೌ ಜತೆ ಬೇಸರ ತೋಡಿಕೊಂಡರು.

ಎಸ್‌.ಎನ್‌.ಸುಬ್ಬಾರೆಡ್ಡಿ, ಎಸ್‌.ಎನ್‌.ನಾರಾಯಣಸ್ವಾಮಿ ನೋ ಚಾನ್ಸ್!!

ಸತತ ಹ್ಯಾಟ್ರಿಕ್‌ ಭಾರಿಸಿ ವಿಧಾನಸಭೆಗೆ ಆಯ್ಕೆ ಆಗಿರುವ ಬಾಗೇಪಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ, ಬಂಗಾರಪೇಟೆಯ ಎಸ್‌ ಎನ್‌ ನಾರಾಯಣಸ್ವಾಮಿಗೆ ಸಂಪುಟದಲ್ಲಿ ಅವಕಾಶ ಸಿಕ್ಕಿಲ್ಲ. ಇವರಿಬ್ಬರಿಗೂ ಅವಕಾಶ ಸಿಗಬಹುದು ಎಂದು ಮಾಧ್ಯಮಗಳು ಲೆಕ್ಕಾಚಾರ ಹಾಕಿದ್ದವು.

ಆದರೆ, ಸುಬ್ಬಾರೆಡ್ಡಿ ಸಚಿವ ಸ್ಥಾನಕ್ಕಾಗಿ ಭಾರೀ ಲಾಬಿಯನ್ನೇನೂ ಮಾಡಿಲಿಲ್ಲ. ಸೌಮ್ಯ ಸ್ವಭಾವದ ಅವರಿಗೆ ಮಂತ್ರಿಗಿರಿ ಹ್ಯಾಂಡಲ್‌ ಮಾಡುವುದು ಕಷ್ಟವೆಂದು ಅಪಪ್ರಚಾರ ನಡೆಸಲಾಯಿತು. ಅದೇ ರೀತಿ, ಕೋಲಾರದ ಕಾಂಗ್ರೆಸ್‌ ಲೀಡರುಗಳಲ್ಲಿ ಕೆಲವರು ನಾರಾಯಣಸ್ವಾಮಿಗೆ ಅಡ್ಡಗಾಲು ಹಾಕಿದ್ದಾರೆ. ಸಿದ್ದರಾಮಯ್ಯ ಅವರಿಗೆ ಪರಮಾಪ್ತರಾದ ಒಬ್ಬರು ಬಂಗಾರಪೇಟೆ ಶಾಸಕರಿಗೆ ಚೆಕ್‌ ಮೇಟ್‌ ಇಟ್ಟರು ಎನ್ನುವ ಸುದ್ದಿ ಬಂದಿದೆ.

ಪ್ರಮಾಣ ವಚನ ಕಾರ್ಯಕ್ರಮದ ಮತ್ತಷ್ಟು ಚಿತ್ರಗಳಿಗಾಗಿ ಸ್ಲೈಡ್‌ ಶೋ ಕ್ಲಿಕ್‌ ಮಾಡಿ..

Tags: cabinetckcknewsnowCongressDK Shivakumarkarnatakanewssiddaramaiah
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಬಾಗೇಪಲ್ಲಿ ನಂತರ ಗುಡಿಬಂಡೆಯಲ್ಲಿ ನಾಳೆ ಶಾಸಕರಿಂದ 35,000 ಫುಡ್‌ ಕಿಟ್‌ ವಿತರಣೆ

ಬಾಗೇಪಲ್ಲಿಗಿಲ್ಲ ಸಚಿವಭಾಗ್ಯ

Leave a Reply Cancel reply

Your email address will not be published. Required fields are marked *

Recommended

ಕೊರೊನಾ ಗೆದ್ದು ಬಂದ ಮೈಸೂರು ಜಿಲ್ಲಾಸ್ಪತ್ರೆ ವೈದ್ಯೆ ಡಾ.ತ್ರಿವೇಣಿ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ; ಸರಕಾರ  ವಾರಿಯರ್‌ಗಳ ಜತೆ ಇರುತ್ತದೆ ಎಂದ BSY

ಕೊರೊನಾ ಗೆದ್ದು ಬಂದ ಮೈಸೂರು ಜಿಲ್ಲಾಸ್ಪತ್ರೆ ವೈದ್ಯೆ ಡಾ.ತ್ರಿವೇಣಿ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ; ಸರಕಾರ ವಾರಿಯರ್‌ಗಳ ಜತೆ ಇರುತ್ತದೆ ಎಂದ BSY

5 years ago
ದೇವರ ಹೆಸರಿನಲ್ಲಿ ಬೊಮ್ಮಾಯಿ ಪ್ರಮಾಣ

ದೇವರ ಹೆಸರಿನಲ್ಲಿ ಬೊಮ್ಮಾಯಿ ಪ್ರಮಾಣ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ