• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಅಕ್ಕಿ ಗ್ಯಾರಂಟಿ ಬಗ್ಗೆ ದಿನಕ್ಕೊಂದು ನೆಪ

P K Channakrishna by P K Channakrishna
June 21, 2023
in STATE
Reading Time: 2 mins read
0
ನೀವು GST ಪಾವತಿದಾರರೇ ಹಾಗಾದರೆ ನಿಮ್ಮ ಬಿ.ಪಿ.ಎಲ್. ಕಾರ್ಡ್ ರದ್ದಾಗಬಹುದು!
920
VIEWS
FacebookTwitterWhatsuplinkedinEmail

ಕಾಂಗ್ರೆಸ್ ಸರಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಕಿಡಿ

  • ತಾನು ತಪ್ಪು ಮಾಡಿ ಕೇಂದ್ರ ಸರಕಾರದ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ ಎಂದ ಮಾಜಿ ಮುಖ್ಯಮಂತ್ರಿ
  • ಅಕ್ಕಿ ಬಗ್ಗೆ ಕೇಂದ್ರ ಸಚಿವರ ಜತೆ ಮಾತುಕತೆ ನಡೆಸಬೇಕಿತ್ತು
  • ಸ್ಟ್ರಾಟೆಜಿಸ್ಟ್ ಐಡಿಯಾ ಕೊಟ್ಟ ಅಂತ ಫ್ರೀ ಫ್ರೀ ಅಂದವರು ಯಾರು?

ಬೆಂಗಳೂರು: ಅಕ್ಕಿ ಗ್ಯಾರಂಟಿ ಬಗ್ಗೆ ದಿನಕ್ಕೊಂದು ನೆಪ ಹೇಳುತ್ತಿರುವ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಕಿಡಿಕಾರಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ತಾನು ಎಸಗಿದ ಸ್ವಯಂಕೃತ ತಪ್ಪಿಗೆ ಕೇಂದ್ರ ಸರಕಾರ ಮೇಲೆ ಗೂಬೆ ಕೂರಿಸುತ್ತಾ ಜನರನ್ನು ಯಮಾರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ಬುಧವಾರ ಬೆಳಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಅವರು; ಯಾರೋ ಚುನಾವಣಾ ತಂತ್ರಗಾರರ ಮಾತು ಕೇಳಿಕೊಂಡು ಗ್ಯಾರಂಟಿ ಘೋಷಣೆ ಮಾಡಿದಾಗ, ಯೋಜನೆ ಜಾರಿಗೆ ಅಗತ್ಯವಾದ ಸಿದ್ಧತೆ ಮಾಡಿಕೊಳ್ಳಬೇಕಿತ್ತು. ಅಕ್ಕಿ ಗ್ಯಾರಂಟಿ ಬಗ್ಗೆ ಇವರೇನು ಕೇಂದ್ರ ಸರಕಾರಕ್ಕೆ ಅರ್ಜಿ ಹಾಕಿದ್ರಾ? ಪೊಳ್ಳು ಭರವಸೆ ಕೊಟ್ಟು ಗ್ಯಾರಂಟಿ ಎಂದು ಇನ್ನೊಬ್ಬರ ಮೇಲೆ ಗೂಬೆ ಕೂರಿಸುವುದು ಎಷ್ಟು ಸರಿ. ಸರಿ ತಪ್ಪು ಎನ್ನುವುದನ್ನು ನಾವು ಮಾಡಬೇಕಲ್ಲವೇ ಎಂದು ಅಭಿಪ್ರಾಯಪಟ್ಟರು.

ಕೇಂದ್ರ ಸರ್ಕಾರ ಕೊಡಬೇಕು ಯಾಕೆ ಅಕ್ಕಿ.ಕೊಡಬೇಕು ನಿಮಗೆ? ಕೇಂದ್ರ ಸರ್ಕಾರಕ್ಕೆ ಅರ್ಜಿ ಹಾಕಿಕೊಂಡಿದ್ರಾ ನೀವು? ಯಾವನೋ ಬಂದು ಎಲೆಕ್ಷನ್ ಸ್ಟ್ರಾಟೆಜಿಸ್ಟ್ ಐಡಿಯಾ ಕೊಟ್ಟ ಅಂತ ನೀವು ಫ್ರೀ ಫ್ರೀ ಅಂದ್ರಿ. ಸಚಿವರ ಹೆಂಡ್ತಿಗೂ ಫ್ರೀ, ನನ್ನ ಹೆಂಡತಿಗೂ ಫ್ರೀ ಎಂದು ಹೇಳಿ ಎಲ್ಲರೂ ಅರ್ಜಿ ಹಾಕಿಕೊಳ್ಳಬಹುದು ಎಂದ್ರಿ. ಈಗ ನೋಡಿದರೆ ಬೇರೆ ವರಸೆ ಶುರು ಮಾಡಿಕೊಂಡಿದ್ದೀರಿ.

ಗೃಹಜ್ಯೋತಿ ಕತ್ತಲಾಗಿ ಪರಿಣಮಿಸಿದೆ. ವಿದ್ಯುತ್ ಉಚಿತ ಕೊಡ್ತೀವಿ ಅಂತ ಹೇಳಿದವರು ಈಗಿನ ಪರಿಸ್ಥಿತಿಯನ್ನು ಅವಲೋಕನ ಮಾಡಬೇಕು. ವಿಟಿಯು ಉಪ ಕುಲಪತಿ ಬಾಯಿ ಬಡ್ಕೊತಿದ್ದಾರೆ. ವಿದ್ಯುತ್ ಬಿಲ್ ನೋಡಿ ಅವರು ಶಾಕ್ ಗೆ ಗುರಿಯಾಗಿದ್ದಾರೆ. ಬಾಕಿ ಮೊತ್ತ ಕಂಡು ಬೇಸ್ತು ಬಿದ್ದಿದ್ದಾರೆ. ಇನ್ನೆಷ್ಟು ಶಾಕ್ ಕೊಡುತ್ತೀರಿ ಎಂದು ಮಾಜಿ ಮುಖ್ಯಮಂತ್ರಿ ಅವರು ಸರಕಾರವನ್ನು ತರಾಟೆಗೆ ತೆಗೆದುಕೊಂಡರು.

ಎರಡು ರಾಷ್ಟ್ರೀಯ ಪಕ್ಷಗಳ ಇಂದಿನ ನಡವಳಿಕೆ ನೋಡಿದಾಗ ತೀವ್ರ ಬೇಸರವಾಗುತ್ತಿದೆ ಎಂದ ಅವರು, ರಾಜ್ಯದ ಜನತೆ ಅವರನ್ನು ನಂಬಿ ಮತ ಕೊಟ್ಟಿದ್ದಾರೆ. ಜನತೆ ಎರಡು ಪಕ್ಷಗಳ ನಾಟಕ ನೋಡಬೇಕಾಗಿದೆ. ಇವರು ಯಾವ ರೀತಿ ಟೋಪಿ ಹಾಕ್ತಾರೆ ಅಂತ ನೋಡುವ ಅನಿವಾರ್ಯತೆಯನ್ನು ಜನರೇ ಸೃಷ್ಟಿ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷಡ ಅಧ್ಯಕ್ಷರು, ಸರಕಾರದ ಸಚಿವ ಕೇಂದ್ರ ಸರ್ಕಾರವನ್ನು ದೂಷಣೆ ಮಾಡುತ್ತಿದ್ದಾರೆ. ಗ್ಯಾರಂಟಿಗಳನ್ನು ರೂಪಿಸುವಾಗ ಇದೆಲ್ಲಾ ಗೊತ್ತಿರಲಿಲ್ಲವೇ? ಎಂದು ಕುಮಾರಸ್ವಾಮಿ ಅವರು ತರಾಟೆಗೆ ತೆಗೆದುಕೊಂಡರು.

ಮುಖ್ಯಮಂತ್ರಿಗಳು ನೋಡಿದರೆ ಭಾರತದ ಆಹಾರ ನಿಗಮಕ್ಕೆ ಪತ್ರ ಬರೆದಿದ್ದೆ ಎಂದು ಹೇಳುತ್ತಿದ್ದಾರೆ. ಅವರು ಜವಾಬ್ದಾರಿ ಸ್ಥಾನದಲ್ಲಿ ಇದ್ದು ಇಂಥ ಉಡಾಫೆ ಉತ್ತರ ಕೊಟ್ಟರೆ ಹೇಗೆ? ಕೇಂದ್ರದಿಂದ ಅಕ್ಕಿ ಬೇಕು ಅಂದರೆ ಕೇಂದ್ರ ಸರಕಾರದ ಸಂಬಂಧಪಟ್ಟ ಸಚಿವರ ಜತೆ ಮಾತನಾಡಬೇಕಿತ್ತು. ಮನವಿ ಕೊಡಬೇಕಿತ್ತು. ರಾಜ್ಯದ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವರೇ ಹೋಗಿ ಚರ್ಚೆ ನಡೆಸಬೇಕಿತ್ತು. ಅದನ್ನು ಬಿಟ್ಟು ಉಡಾಫೆ ಹೇಳಿಕೆ ಕೊಡ್ತಿದ್ದಾರೆ ಎಂದು ಅವರು ಕಿಡಿಕಾರಿದರು.

ಕೇಂದ್ರ ಸರ್ಕಾರಕ್ಕೆ ಅವರದೇ ಆದ ಕಮಿಟ್‌ಮೆಂಟ್ ಇರುತ್ತದೆ. ನಮಗೆ ಅಕ್ಕಿ ಬೇಕು ಅಂದರೆ ಅವರು ಹೇಗೆ ಕೊಡ್ತಾರೆ? ನಾನು ಸಾಲಾಮನ್ನಾ ಮಾಡಿದಾಗ ರಾಷ್ಟ್ರಿಕೃತ ಬ್ಯಾಂಕ್ ಗಳಲ್ಲಿದ್ದ ಸಾಲಮನ್ನಾ ಮಾಡಿದಾಗ ಪ್ರಧಾನಿಗಳ ಹಟ್ಟಿರ ಹೋಗಿ ಕೇಳಿದ್ನಾ? ದರ್ದು ಇರೋದು ಕಾಂಗ್ರೆಸ್ ಪಕ್ಷಕ್ಕೆ, ಅವರಿಗೇನಿದೆ ದರ್ದು? ನಿಮಗೆ ಬೇಕಾದ ವ್ಯವಸ್ಥೆ ನೀವೇ ಮಾಡಿಕೊಳ್ಳಬೇಕು ಎಂದು ಅವರು ಅಭಿಪ್ರಾಯಪಟ್ಟರು.

ನಾನು ಪಂಚರತ್ನ ಯೋಜನೆಗಳನ್ನು ಘೋಷಣೆ ಮಾಡಿದ್ದೆ. ಅವುಗಳನ್ನು ಹೇಗೆ ಜಾರಿ ಮಾಡಬೇಕು? ಹೇಗೆ ಹಣ ಹೊಂದಿಸಬೇಕು ಎಂಬುದಕ್ಕೆ ರೂಪುರೇಷೆ ಸಿದ್ದಮಾಡಿದ್ದೆ. ಆದರೆ ಜನ ನನ್ನನ್ನು ನಂಬಲಿಲ್ಲ. ಪಾಪ ಇವರ 5 ಗ್ಯಾರಂಟಿಗಳನ್ನು ನಂಬಿದರು. ಇನ್ನು ಯಜಮಾನಿಯರಿಗೆ 2 ಸಾವಿರ ಹೇಗೆ ಕೊಡ್ತಾರೆ ನೋಡೊಣ.

ಹೆಚ್.ಡಿ.ಕುಮಾರಸ್ವಾಮಿ

ಸತೀಶ್ ಜಾರಕಿಹೊಳಿ ಹೇಳಿಕೆ ಸರಿಯಲ್ಲ

ಕೇಂದ್ರ ಸರಕಾರ ಸರ್ವರ್ ಹ್ಯಾಕ್ ಮಾಡಿದ್ದ ಪರಿಣಾಮ ಗೃಹಲಕ್ಷ್ಮಿ ಗ್ಯಾರಂಟಿ ಜಾರಿ ಮಾಡಲಾಗುತ್ತಿಲ್ಲ ಎಂದಿರುವ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ಬಗ್ಗೆ ಕೇಳಲಾದ ಪ್ರಶ್ನೆಗೆ ಸಿಡಿಮಿಡಿಯಾದ ಮಾಜಿ ಮುಖ್ಯಮಂತ್ರಿಗಳು, ಯಾರ್ರೀ ಸತೀಶ್ ಜಾರಕಿಹೊಳಿ? ಬಾಯಿ ಚಪಲಕ್ಕೆ ಮಾತನಾಡ್ತಿದ್ದಾರೆ ಅವರು. ಯಾಕೆ ಆ್ಯಕ್ ಮಾಡ್ತಾರೆ, ನಿಮ್ಮ ಸರ್ವರ್ ಬಲಪಡಿಸಿಕೊಳ್ಳೋದು ನಿಮ್ಮ ಜವಾಬ್ದಾರಿ ಎಂದರು.

ನಾನಿನ್ನು ಇವರಿಗೆ ಟೈಮ್ ಕೊಡ್ತೀನಿ. ಬಜೆಟ್ ಅಧಿವೇಶನದಲ್ಲಿ ಏನೇನು ಘೋಷಣೆ ಮಾಡ್ತಾರೆ ನೋಡೋಣ. ಪ್ರಣಾಳಿಕೆಯಲ್ಲಿ ಕೂಡ ಅದೆಷ್ಟೋ ಭರವಸೆಗಳನ್ನು ನೀಡಿದ್ದಾರೆ. ಎಲ್ಲವೂ ಎಲ್ಲಿಗೆ ಬಂದು ನಿಲ್ಲುತ್ತದೆಯೋ ನೋಡೋಣ.

ಎಕ್ಸ್ ಪ್ರೆಸ್ ಹೆದ್ದಾರಿ ಅಲ್ಲ ಸಾವಿನ ರಹದಾರಿ

ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಸಂಭವಿಸುತ್ತಿರುವ ನಿರಂತರ ಅಪಘಾತಗಳ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿದ ಕುಮಾರಸ್ವಾಮಿ ಅವರು, ಇದು ಎಕ್ಸ್ ಪ್ರೆಸ್ ಹೆದ್ದಾರಿಯೋ ಅಥವಾ ಸಾವಿನ ರಹದಾರಿಯೋ ಎಂದು ಪ್ರಶ್ನಿಸಿದರು.

ಈ ಹೆದ್ದಾರಿಯನ್ನು ಅತ್ಯಂತ ಅವೈಜ್ಞಾನಿಕವಾಗಿ ನಿರ್ಮಾಣ ಮಾಡಲಾಗಿದೆ. ಅದನ್ನು ಸರಿಪಡಿಸುವ ಬಗ್ಗೆ ಕೇಂದ್ರ ಸರ್ಕಾರವಾಗಲಿ, ಹೆದ್ದಾರಿ ಪ್ರಾಧಿಕಾರವಾಗಲಿ ಅಥವಾ ರಾಜ್ಯ ಸರ್ಕಾರವಾಗಲಿ ಗಮನ ಕೊಡುತ್ತಿಲ್ಲ. ಯಾರೋ ಬಂದರು, ದುಡ್ಡು ಮಾಡಿಕೊಂಡು ಹೋದರು. ಜನ ಮಾತ್ರ ದಿನನಿತ್ಯವೂ ಸಾಯುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಅವರು ಕಿಡಿಕಾರಿದರು.

ಶಾಲೆಗಳಲ್ಲಿ ಮೊಟ್ಟೆ, ಬಾಳೆಹಣ್ಣು ಕಡಿತಕ್ಕೆ ಕಿಡಿ

ಶಾಲಾ ಮಕ್ಕಳಿಗೆ ವಿತರಣೆ ಮಾಡಲಾಗುವ ಮೊಟ್ಟೆ, ಬಾಳೆ ಹಣ್ಣು ಕಡಿತ ಮಾಡಿರುವ ಬಗ್ಗೆಯೂ ಕುಮಾರಸ್ವಾಮಿ ಅವರು ಆಕ್ಷೇಪ ವ್ಯಕ್ತಪಡಿಸಿದರು.

ಮುಂದೆ ಒಂದು ಮೊಟ್ಟೆ, ಒಂದು ಬಾಳೆಹಣ್ಣು ಅದು ಕೂಡ ಇರಲ್ವೇನೊ? ಇವರಿಗೆ ಮಕ್ಕಳ ಆಹಾರದಲ್ಲಿ ಹಣದ ಹಪಾಹಪಿ ಶುರುವಾಗಿದೆ ಎಂದು ಅವರು ಕಟುವಾಗಿ ಟೀಕಿಸಿದರು.

ಪವರ್ ಶೇರಿಂಗ್ ಅವರಿಗೇ ಬಿಟ್ಟಿದ್ದು

ಮುಖ್ಯಮಂತ್ರಿ ಹುದ್ದೆಯನ್ನು ಹಂಚಿಕೊಳ್ಳುವ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಎದ್ದಿರುವ ಕೋಲಾಹಲದ ಬಗ್ಗೆ ಕುಮಾರಸ್ವಾಮಿ ಅವರು ಹೇಳಿದ್ದು ಇಷ್ಟು;

ಅಧಿಕಾರ ಹಂಚಿಕೆ ಅವರಿಗೆ ಸೇರಿದ ವಿಚಾರ. 5 ವರ್ಷ ಅವರೇ ಇರುತ್ತಾರೋ, ಇನ್ನಾರದರೂ ಬರುತ್ತಾರೋ ನನಗೆ ಗೊತ್ತಿಲ್ಲ. ವೀರಪ್ಪ ಮೊಯ್ಲಿ ಅವರ ಕಾಲದಲ್ಲಿ ವಿಧಾನಸೌಧದಲ್ಲಿ ಚೇರ್, ಮೇಜು ಹಿಡಿದುಕೊಂಡು ಕುಸ್ತಿ ಮಾಡಿದ್ದರು. ಈಗಲೂ ಆ ರೀತಿ ಆಗುತ್ತೋ ಏನೋ ನನಗೆ ಗೊತ್ತಿಲ್ಲ. ಎಲ್ಲವೂ ಮುಂದೆ ಗೊತ್ತಾಗಲಿದೆ ಎಂದರು ಅವರು.

Tags: anna bhagyackcknewsnowhd kumaraswamyjdskarnatakanewsricesiddaramaiah
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಜೆಡಿಎಸ್ ಅಧಿಕಾರಕ್ಕೆ ಬಂದರೆ ಕೃಷಿ ಪಂಪುಸೆಟ್ಟುಗಳಿಗೆ 24/7 ಉಚಿತ ವಿದ್ಯುತ್

ಬರಗೆಟ್ಟ ಹೊತ್ತಿನಲ್ಲಿ ಅಂಬರದ ಮೇಲೆ ಸ್ವಯಂವರ ಮಾಡಿಕೊಳ್ಳುತ್ತಿರುವ ಮತಿಗೆಟ್ಟ ವರನಂತೆ ವರ್ತಿಸುತ್ತಿದೆ ಕಾಂಗ್ರೆಸ್ ಸರಕಾರ

Leave a Reply Cancel reply

Your email address will not be published. Required fields are marked *

Recommended

ಚಿಕ್ಕಬಳ್ಳಾಪುರ ಮೆಡಿಕಲ್‌ ಕಾಲೇಜು ಕಾಮಗಾರಿ 50% ಪೂರ್ಣ; ನಿಗದಿತ ಸಮಯದೊಳಗೆ ಜಿಲ್ಲೆಯ ಮಹತ್ವಾಕಾಂಕ್ಷಿ ಯೋಜನೆ ಸಾಕಾರ; ಹಾಗಾದರೆ, ವಿದ್ಯಾರ್ಥಿಗಳ ಪ್ರವೇಶ ಯಾವಾಗ?

ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದ ಸೈಬರ್ ಖದೀಮರು! ಮೆಸೆಂಜರ್‌ ಮೂಲಕ ಹಣಕ್ಕಾಗಿ ಡಿಮಾಂಡ್;‌ ಪೊಲೀಸರಿಗೆ ದೂರು ಕೊಟ್ಟ ಡಿಸಿ ಆರ್.ಲತಾ

5 years ago
ಸಾಕ್ಷಾತ್ ಶ್ರೀರಾಮರೇ ಪ್ರತಿಷ್ಠಾಪಿಸಿದ ಗುಡಿಬಂಡೆ ಶ್ರೀ ರಾಮಲಿಂಗೇಶ್ವರ ದೇವರಿಗೆ ಜ.22ಕ್ಕೆ ಲಿಂಗಾಭಿಷೇಕ

ಸಾಕ್ಷಾತ್ ಶ್ರೀರಾಮರೇ ಪ್ರತಿಷ್ಠಾಪಿಸಿದ ಗುಡಿಬಂಡೆ ಶ್ರೀ ರಾಮಲಿಂಗೇಶ್ವರ ದೇವರಿಗೆ ಜ.22ಕ್ಕೆ ಲಿಂಗಾಭಿಷೇಕ

2 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ