• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಕನ್ನಡಿಗರು ಕೊಟ್ಟ ಪೆನ್ ತಮಿಳರಿಗೆ ಒತ್ತೆ ಇಟ್ಟ ಕಾಂಗ್ರೆಸ್ ಸರಕಾರ!

cknewsnow desk by cknewsnow desk
August 18, 2023
in NATION, STATE
Reading Time: 1 min read
0
ಜೆಡಿಎಸ್ ಅಧಿಕಾರಕ್ಕೆ ಬಂದರೆ ಕೃಷಿ ಪಂಪುಸೆಟ್ಟುಗಳಿಗೆ 24/7 ಉಚಿತ ವಿದ್ಯುತ್
932
VIEWS
FacebookTwitterWhatsuplinkedinEmail

ಕಾಂಗ್ರೆಸ್ʼನಿಂದ ಸ್ಟಾಲಿನ್ʼಗೆ ರೆಡ್ ಕಾರ್ಪೆಟ್ ಸ್ವಾಗತ!!; ಸ್ಟಾಲಿನ್ ನಿಮ್ಮ ಸ್ನೇಹಿತರೇ ಅಲ್ಲವೇ? ಮೇಕೆದಾಟು ಅಣೆಕಟ್ಟು ಕಟ್ಟಿ ಎಂದ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಜನರಿಗೆ ದುಂಬಾಲು ಬಿದ್ದು ಪೆನ್ ಕೊಡಿ, ಪೆನ್ ಕೊಡಿ ಎಂದು ಕೇಳಿದರು. ಪಾಪ.. ಜನರೂ ನಂಬಿ ಪೆನ್ ಕೊಟ್ಟರು. ಈಗ ಆ ಪೆನ್ ಅನ್ನು ತೆಗೆದುಕೊಂಡು ಹೋಗಿ ತಮಿಳುನಾಡಿಗೆ ಒತ್ತೆ ಇಟ್ಟಿದ್ದಾರೆ. ರೆಡ್ ಕಾರ್ಪೆಟ್ ಹಾಕಿ ಆ ರಾಜ್ಯದ ಮುಖ್ಯಮಂತ್ರಿ ಸ್ಟಾಲಿನ್ ಅವರಿಗೆ ಸ್ವಾಗತ ಕೊರುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಜಾತ್ಯತೀತ ಜನತಾದಳ ರಾಜ್ಯ ಕಚೇರಿ ಜೆ.ಪಿ.ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದರು ಮಾಜಿ ಮುಖ್ಯಮಂತ್ರಿಗಳು.

ನೀರು ಬಿಡಲು ಹೇಳಿದವರು ಯಾರು?

ರಾಜ್ಯ ಕಾಂಗ್ರೆಸ್ ಸರಕಾರ ಏಕಪಕ್ಷೀಯವಾಗಿ ತಮಿಳುನಾಡಿಗೆ ನೀರು ಹರಿಸಿದೆ. ಯಾರನ್ನು ಕೇಳಿ ಇವರು ನೀರು ಹರಿಸಿದ್ದಾರೆ? ಜನರನ್ನು ಕೇಳಿದ್ದಾರೆಯೇ? ಪ್ರತಿಪಕ್ಷಗಳ ಜತೆ ಚರ್ಚೆ ಮಾಡಿದ್ದಾರೆಯೇ? ಅಥವಾ ನೀರು ಬಿಡುವಂತೆ ಸರಕಾರಕ್ಕೆ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಇಲ್ಲವೇ ಸುಪ್ರೀಂ ಕೋರ್ಟ್ ನಿರ್ದೇಶನ ಇದೆಯೇ? ಹಾಗೇನಾದರೂ ಇದ್ದರೆ ಜನತೆಗೆ ತೀಸಬೇಕು ಎಂದು ಅವರು ಒತ್ತಾಯ ಮಾಡಿದರು.

ದೇವೇಗೌಡರು ಏಕಪಕ್ಷೀಯವಾಗಿ ನೀರು ಹರಿಸಿಲ್ಲ

ಕುಮಾರಸ್ವಾಮಿ ಅವರು ಅವರ ಕಾಲದಲ್ಲಿ ನೀರು ಬಿಟ್ಟಿಲ್ವಾ? ಎಂದು ಕೆಲವರು ಪ್ರಶ್ನೆ ಮಾಡುತ್ತಿದ್ದಾರೆ. ಅವರಿಗೆ ತಿಳಿವಳಿಕೆ ಕೊರತೆ ಇದೆ. ನಾನು ಎರಡು ಸಲ ಮುಖ್ಯಮಂತ್ರಿ ಆಗಿದ್ದಾಗ ತಮಿಳುನಾಡಿಗೆ ನೀರು ಹರಿಸಿದ್ದು ನಿಜ. ಆಗ ನಮ್ಮಲ್ಲಿ ಯಥೇಚ್ಛವಾಗಿ ನೀರು ಇತ್ತು. ಸಂಕಷ್ಟದ ಪರಿಸ್ಥಿತಿ ಇರಲಿಲ್ಲ. ದೇವೇಗೌಡರ ಕಾಲದಲ್ಲಿಯೂ ಕೇಂದ್ರ ಸರಕಾರದ ಮನವಿ ಹಾಗೂ ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ನೀರು ಬಿಡಲಾಗಿತ್ತು. ಏಕಪಕ್ಷೀಯವಾಗಿ ಹಿಂದಿನ ಯಾವ ಸರಕಾರವೂ ನಿರ್ಧಾರ ಕೈಗೊಂಡು ಸರ್ವಾಧಿಕಾರಿ ಮನೋಭಾವದಿಂದ ಜನರ ಸಂಕಷ್ಟ ಲೆಕ್ಕಿಸದೆ ನೆರೆ ರಾಜ್ಯಕ್ಕೆ ನೀರು ಹರಿಸಿರಲಿಲ್ಲ ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ದೇವೇಗೌಡರ ಬಗ್ಗೆ ಮಾತನಾಡಬೇಕಾದರೆ ಇತಿಹಾಸ ತಿಳಿದು ಮಾತನಾಡಬೇಕು. 1962ರಿಂದ ಅವರು ಕಾವೇರಿ, ಕೃಷ್ಣಾ ಸೇರಿದಂತೆ ವಿವಿಧ ನದಿ ನೀರು ಹಕ್ಕಿಗಾಗಿ ಅವರು ನಡೆಸಿದ ಹೋರಾಟವನ್ನು ತಿಳಿದು ಮಾತನಾಡಬೇಕು. ಅವರೆಂದೂ ನಮ್ಮ ರಾಜ್ಯದ ರೈತರ ಹಿತಾಸಕ್ತಿ ಕಡೆಗಣಿಸಿ ನೆರೆ ರಾಜ್ಯಕ್ಕೆ ನೀರು ಬಿಟ್ಟಿಲ್ಲ. ಅವರ ಬಗ್ಗೆ ಮಾತಾಡೋಕೆ ಯಾರಿಗೂ ನೈತಿಕತೆ ಇಲ್ಲ ಎಂದು ಅವರು ತಿಳಿಸಿದರು.

ಈಗ ರಾಜ್ಯದಲ್ಲಿ ಮಳೆ ಇಲ್ಲ, ಬರ ಬಂದು ಕೂತಿದೆ. ಇದು ಸರಕಾರದ ಪಾಪದ ಫಲ. ಇವರ ಲೂಟಿ ಹೊಡೆಯುವ ಕುಕೃತ್ಯಕ್ಕೆ ಪ್ರಕೃತಿಯೂ ಸಹಕಾರ ನೀಡುತ್ತಿಲ್ಲ ಎಂದು ಅವರು ಕಿಡಿಕಾರಿದರು.

ಮೇಕೆದಾಟು ಎಲ್ಲಗೆ ಬಂತು?

ಕಾಂಗ್ರೆಸ್ ನವರು ಮೇಕೆದಾಟ ಪಾದಯಾತ್ರೆ ಮಾಡಿದರು, ಅದು ಎಲ್ಲಿಗೆ ಬಂತು? ಚಿಕನ್ ಲೆಗ್, ಮಟನ್ ಪೀಸ್ ತಿಂದು ಹೋರಾಟ ಮಾಡಿದ್ದು ಅಷ್ಟೇ ಆಯಿತು ಅಲ್ಲಿ. ಡಿಎಂಕೆ ನಿಮ್ಮ ಮಿತ್ರಪಕ್ಷ ಅಲ್ಲವೇ? ತಮಿಳುನಾಡು ಮುಖ್ಯಾಮಂತಿ ಸ್ಟಾಲಿನ್ ಅವರು ನಿಮ್ಮ ಸ್ನೇಹಿತರೇ ಅಲ್ಲವೇ? ಕೊಟ್ಟು ತಗೆದುಕೊಳ್ಳುವ ಸಂಬಂಧ ಮಾಡ್ತಾ ಇದ್ದೀರಲ್ಲಾ? ಮೇಕೆದಾಟು ಮಾಡಿ ಎಂದು ಮಾಜಿ ಮುಖ್ಯಮಂತ್ರಿ ಅವರು ಟಾಂಗ್ ನೀಡಿದರು.

ಕಾವೇರಿ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ನಲ್ಲಿ ತಮಿಳುನಾಡಿನವರು ಅರ್ಜಿ ಹಾಕಿದ್ದಾರೆ. ರಾಜ್ಯ ಸರಕಾರ ಏನು ಮಾಡುತ್ತಿದೆ. ಈಗಾಗಲೇ ಜನರನ್ನು ಲೆಕ್ಕಕ್ಕೆ ಇಡದೇ ತಮಿಳುನಾಡಿಗೆ ನೀರು ಬಿಡುತ್ತಿದ್ದೀರಿ. ಅವರು ಹೆಚ್ಚುವರಿ ನೀರು ಕೇಳಿದರೆ ಕೊಡಲು ಆಗುತ್ತಾ? ನಮ್ಮ ರೈತರು ಇನ್ನೂ ಒಂದು ಬೆಳೆಯನ್ನೂ ಬೆಳೆದಿಲ್ಲ. ತಮಿಳುನಾಡಿನಲ್ಲಿ ಏನು ಪರಿಸ್ಥಿತಿ ಇದೆ, ಅಲ್ಲಿ ಎಷ್ಟು ಬೆಳೆಗಳನ್ನು ತೆಗೆಯಲಾಗುತ್ತಿದೆ ಎನ್ನುವುದು ಈ ಸರಕಾರಕ್ಕೆ ಗೊತ್ತಿದೆಯಾ? ಅಲ್ಲಿ ನಾಲ್ಕು ಲಕ್ಷ ಎಕರೆಗೆ ನೀರಾವರಿ ಸೌಲಭ್ಯ ಮಾಡಿಕೊಂಡಿದ್ದಾರೆ. ಕನಿಷ್ಠ ಜ್ಞಾನ ಈ ಸರಕಾರಕ್ಕೆ ಇದೆಯಾ ಎಂದು ಕುಮಾರಸ್ವಾಮಿ ಅವರು ಕಿಡಿ ಕಾರಿದರು.

ಮಾಡಿದ ಪ್ರಮಾದವನ್ನು ಮುಚ್ಚಿಕೊಳ್ಳಲು ಸರಕಾರ, ಪ್ರತಿಪಕ್ಷಗಳು ರಾಜಕೀಯ ಮಾಡುತ್ತಿವೆ ಎಂದು ಕಾಂಗ್ರೆಸ್ ನವರು ಆರೋಪ ಮಾಡುತ್ತಿದ್ದಾರೆ. ನಾವು ವಿಪಕ್ಷದಲ್ಲಿ ಇರುವುದೇ ರಾಜಕೀಯ ಮಾಡಲು ಹಾಗೂ ಸರಕಾರದ ಲೋಪಗಳನ್ನು ಎತ್ತಿ ತೋರಿಸಲು. ಕರ್ನಾಟಕದ ರೈತರ ಔದಾರ್ಯ ಬೆಲೆ ಇದೆಯಾ? I.n.d.i.a. ಮೈತ್ರಿ ಕೂಟಕ್ಕೆ ಶಕ್ತಿ ತುಂಬಲು ರಾಜ್ಯದ ರೈತರನ್ನು ಬಲಿ ಕೊಡಲು ಹೊರಟಿದ್ದೀರಿ. ಇಂಥ ಓಲೈಕೆ ಅಗತ್ಯ ಇತ್ತಾ? ಸುಪ್ರೀಂ ಕೋರ್ಟ್ ಮುಂದೆ ತಮಿಳುನಾಡಿನವರು ಮತ್ತೊಂದು ಅರ್ಜಿ ಹಾಕಿದರೆ, ಆಗ ನೀವೇನು ಮಾಡುತ್ತೀರಿ? ಎಂದು ಮಾಜಿ ಮುಖ್ಯಮಂತ್ರಿ ಅವರು ತೀಕ್ಷ್ಣವಾಗಿ ಪ್ರಶ್ನಿಸಿದರು.

ಮಾಜಿ ಸಚಿವರಾದ ಬಂಡೆಪ್ಪ ಕಾಷೆಂಪೂರ್, ವೆಂಕಟರಾವ್ ನಾಡಗೌಡ, ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಮುಂತಾದವರು ಜತೆಯಲ್ಲಿ ಇದ್ದರು.

Tags: Cauvery riverckcknewsnowhd kumaraswamykarnatakamk stalinnewstamilnaduwater dispute
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
2,000 ಎಕರೆ ಭೂಮಿ ಯಾರ ಹೆಸರಿಗೆ ಮಾಡಿಕೊಳ್ಳಲು ಹೊರಟಿದ್ದೀರಿ?

2,000 ಎಕರೆ ಭೂಮಿ ಯಾರ ಹೆಸರಿಗೆ ಮಾಡಿಕೊಳ್ಳಲು ಹೊರಟಿದ್ದೀರಿ?

Leave a Reply Cancel reply

Your email address will not be published. Required fields are marked *

Recommended

ಭಾನುವಾರ ಬಂದರೆ ಚಿಕಿನ್-ಮಟನ್‌ ಖರೀದಿ ಭರಾಟೆ; ಸೋಮವಾರಕ್ಕೆ ಸೋಂಕಿತರು ಹೆಚ್ಚುವ ಆತಂಕ, ಬಾಗೇಪಲ್ಲಿಯಲ್ಲಿ ಕರ್ಫ್ಯೂ ಬಗ್ಗೆ ಅಲಕ್ಷ್ಯ

ಭಾನುವಾರ ಬಂದರೆ ಚಿಕಿನ್-ಮಟನ್‌ ಖರೀದಿ ಭರಾಟೆ; ಸೋಮವಾರಕ್ಕೆ ಸೋಂಕಿತರು ಹೆಚ್ಚುವ ಆತಂಕ, ಬಾಗೇಪಲ್ಲಿಯಲ್ಲಿ ಕರ್ಫ್ಯೂ ಬಗ್ಗೆ ಅಲಕ್ಷ್ಯ

5 years ago
ಗುಡಿಬಂಡೆಯ ಕೀರ್ತಿ ಜಗದ ತುಂಬೆಲ್ಲ ಹರಡಲಿ

ಗುಡಿಬಂಡೆಯ ಕೀರ್ತಿ ಜಗದ ತುಂಬೆಲ್ಲ ಹರಡಲಿ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ