• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಸರಕಾರಕ್ಕೆ ಸಂಚಕಾರ; ಹೆಚ್.ಡಿ.ಕುಮಾರಸ್ವಾಮಿ, ಯೋಗಿ ಹೇಳಿಕೆಯಿಂದ ಕಾಂಗ್ರೆಸ್‌ನಲ್ಲಿ ತಳಮಳ

cknewsnow desk by cknewsnow desk
October 2, 2023
in NATION, POLITICS, STATE
Reading Time: 1 min read
0
ಸರಕಾರಕ್ಕೆ ಸಂಚಕಾರ; ಹೆಚ್.ಡಿ.ಕುಮಾರಸ್ವಾಮಿ, ಯೋಗಿ ಹೇಳಿಕೆಯಿಂದ ಕಾಂಗ್ರೆಸ್‌ನಲ್ಲಿ ತಳಮಳ
1k
VIEWS
FacebookTwitterWhatsuplinkedinEmail

ಸಂಕ್ರಾಂತಿಗೆ ಸರಕಾರ ಹೋಗುತ್ತದೆ ಎಂದ ಸಿ.ಪಿ.ಯೋಗೇಶ್ವರ್;‌ ಶಾಸಕರ ಮೇಲೆ ನಿಗಾ ಇಟ್ಟಿದೆಯಾ ಕೈ ಪಕ್ಷ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರಕಾರ ಇರುತ್ತಾ? ಹೋಗುತ್ತಾ? ಆಡಳಿತ ಪಕ್ಷವನ್ನೇ ಕಾಡುತ್ತಿರುವ ಯಕ್ಷ ಪ್ರಶ್ನೆ ಇದು.

“ನನ್ನ ಸರಕಾರವನ್ನು ಹದಿನಾಲ್ಕು ತಿಂಗಳಲ್ಲಿಯೇ ತೆಗೆದ ರೀತಿಯಲ್ಲಿಯೇ ಈ ಸರಕಾರವೂ ಮುಳುಗಿ ಹೋಗುತ್ತದೆ” ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದ ಬೆನ್ನಲ್ಲೇ, ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಕೂಡ ಸಂಕ್ರಾಂತಿ ಹೊತ್ತಿಗೆ ಈ ಸರಕಾರ ಹೋಗುತ್ತದೆ ಎಂದು ಹೇಳಿರುವುದು ಸ್ವತಃ ಆಡಳಿತ ಪಕ್ಷದಲ್ಲಿಯೇ ಅಲ್ಲೋಲ ಕಲ್ಲೋಲ ಉಂಟು ಮಾಡಿದೆ.

ಹೆಚ್.ಡಿ.ಕುಮಾರಸ್ವಾಮಿ

ಸಂಕ್ರಾಂತಿ ವೇಳೆಗೆ ಸೂರ್ಯ ಪಥ ಬದಲಿಸುವ ರೀತಿಯಲ್ಲಿ ರಾಜ್ಯದಲ್ಲಿಯೂ ರಾಜಕೀಯ ಪಥ ಬದಲಾವಣೆ ಆಗುತ್ತದೆ. ಸಂಕ್ರಾಂತಿ ಹಬ್ಬದ ಬಳಿಕ ಕಾಂಗ್ರೆಸ್ ಸರಕಾರ ಇರುವುದು ಅನುಮಾನ ಎಂದು ಚನ್ನಪಟ್ಟಣದಲ್ಲಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಹೊಸ ಬಾಂಬ್ ಸಿಡಿಸಿದ್ದಾರೆ.

ಪ್ರಸಕ್ತ ರಾಜಕೀಯ ಬೆಳವಣಿಗೆ, ಕಾಂಗ್ರೆಸ್ ನಾಯಕರ ನಡೆಯೇ ಇದಕ್ಕೆ ಕಾರಣ. 2023 ಮುಗಿದ ಬಳಿಕ ರಾಜಕೀಯ ಬದಲಾವಣೆ ನಿರೀಕ್ಷೆ ಇದೆ. ಕಾಂಗ್ರೆಸ್ಸಿನ ಅಸಮಾಧಾನಿತ ಶಾಸಕರು ವಿಮುಖವಾಗಿ ಯೋಚನೆ ಮಾಡುತ್ತಿದ್ದಾರೆ. ಕೆಲ ಕಾಂಗ್ರೆಸ್ ಶಾಸಕರು ವೈಯಕ್ತಿಕವಾಗಿ ನನ್ನ ಜೊತೆ ಮಾತನಾಡಿದ್ದಾರೆ. ಈ ಸರಕಾರದಲ್ಲಿ ಶಾಸಕರು ಡಮ್ಮಿಗಳಾಗಿದ್ದಾರೆ‌. ಅವರಿಗೆ ಶಾಸಕರ ಕಾರ್ಯ ನಿರ್ವಹಿಸಲು ಆಗುತ್ತಿಲ್ಲ ಎಂದು ಅವರು ಹೇಳಿದ್ದಾರೆ.

ಸಿ.ಪಿ.ಯೋಗೇಶ್ವರ್

ಸರಕಾರವು ಐದು ಗ್ಯಾರಂಟಿಗಳನ್ನು ಕೊಟ್ಟಿದೆ. ಹಾಗಾಗಿ ಅನುದಾನ ಕೊಡಲು ದುಡ್ಡಿಲ್ಲ ಎಂದು ಮುಖ್ಯಮಂತ್ರಿಗಳು ಹೇಳುತ್ತಿದ್ದಾರೆ. ಯಾವುದೇ ಅಭಿವೃದ್ಧಿ ಕಾರ್ಯಕ್ಕೆ ಸರಕಾರದಲ್ಲಿ ದುಡ್ಡಿಲ್ಲ. ಕಾಂಗ್ರೆಸ್ ಶಾಸಕರು ನಿರುದ್ಯೋಗಿಗಳಾಗಿದ್ದಾರೆ‌. ಅವರಿಗೆ ರಾಜಕೀಯ ಭವಿಷ್ಯದ ಆತಂಕ ಇದೆ. ಹಾಗಾಗಿ ಇದರ ಪರಿಣಾಮವನ್ನು ಸಂಕ್ರಾಂತಿ ವೇಳೆಗೆ ಎಲ್ಲರೂ ನೋಡುತ್ತೀರಾ ಎಂದು ಅವರು ಮಾರ್ಮಿಕವಾಗಿ ಹೇಳಿದ್ದಾರೆ.

ನಾವು ಯಾವುದೇ ರೀತಿಯ ಆಪರೇಷನ್ ಮಾಡುತ್ತಿಲ್ಲ. ನಮ್ಮ ಸಂಪರ್ಕದಲ್ಲಿ ಯಾರೂ ಇಲ್ಲ. ಡಿಕೆಶಿ ರೀತಿ ಆಪರೇಷನ್ ಹಸ್ತದ ಕೆಲಸವನ್ನೂ ನಾವು ಮಾಡಲ್ಲ.

ಸಿ.ಪಿ.ಯೋಗೇಶ್ವರ್

ಸದ್ಯ ನನಗಿರುವ ಮಾಹಿತಿ ಪ್ರಕಾರ ಹೇಳಿದ್ದೇನೆ. ಖಾಸಗಿಯಾಗಿ ಸಿಕ್ಕಾಗ ಕೆಲವರು ನೋವನ್ನು ಹೇಳಿಕೊಂಡಿದ್ದಾರೆ. ಕಾಂಗ್ರೆಸ್ ಶಾಸಕರೇ ಸರಕಾರದ ವಿರುದ್ಧ ತಿರುಗಿಬೀಳುತ್ತಾರೆ ಎಂದು ಯೋಗೇಶ್ವರ್ ಅವರು ಹೇಳಿರುವುದು ಕಾಂಗ್ರೆಸ್‌ ಕಳವಳಕ್ಕೆ ಕಾರಣವಾಗಿದೆ.

ಶಾಸಕರ ಮೇಲೆ ನಿಗಾ

ಹೆಚ್.ಡಿ.ಕುಮಾರಸ್ವಾಮಿ ಮತ್ತು ಬಿಜೆಪಿ ನಡೆಯ ಬಗ್ಗೆ ಕಳವಳಗೊಂಡಿರುವ ಕಾಂಗ್ರೆಸ್‌, ಇದೀಗ ಶಾಸಕರ ಮೇಲೆ ತೀವ್ರ ನಿಗಾ ಇರಿಸಿದೆ ಎಂಬ ಮಾಹಿತಿ ಸಿಕ್ಕಿದೆ. ಖಾಸಗಿ ಸುದ್ದಿವಾಹಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ, “ನನ್ನ ಸರಕಾರವನ್ನು ಹದಿನಾಲ್ಕು ತಿಂಗಳಲ್ಲಿಯೇ ತೆಗೆದ ರೀತಿಯಲ್ಲಿಯೇ ಈ ಸರಕಾರವೂ ಮುಳುಗಿ ಹೋಗುತ್ತದೆ” ಎಂದು ಬಾಂಬ್‌ ಸಿಡಿಸಿದ್ದರು. ಅದಕ್ಕೆ ಪೂರಕವಾಗಿ ಯೋಗೇಶ್ವರ್‌ ಅವರು ಸಂಕ್ರಾಂತಿ ಡೆಡ್‌ ಲೈನ್‌ ನೀಡಿದ್ದಾರೆ.

ಅಧಿಕಾರಕ್ಕೆ ಬಂದ ಕೆಲ ದಿನಗಳಲ್ಲಿಯೇ ಶಾಸಕರ ತೀವ್ರ ಅಸಮಾಧಾನಕ್ಕೆ ತುತ್ತಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ತುರ್ತು ಶಾಸಕಾಂಗ ಪಕ್ಷದ ಸಭೆ ಕರೆದು ಅತೃಪ್ತ ಶಾಸಕರನ್ನು ಸಮಾಧಾನಪಡಿಸುವ ಕೆಲಸ ಮಾಡಿದ್ದರು. ದೆಹಲಿಯಲ್ಲಿಯೂ ಈ ನಿಟ್ಟಿನಲ್ಲಿ ತುರುಸಿನ ಸಭೆಗಳು ನಡೆದಿದ್ದವು. ಈಗ ವಿರೋಧ ಪಕ್ಷಗಳ ನಾಯಕರ ನಡೆಗಳು ಆಡಳಿತ ಪಕ್ಷಕ್ಕೆ ನಡುಕ ಹುಟ್ಟಿಸಿದೆ.

ಮುಖ್ಯಮಂತ್ರಿಯನ್ನು ಮಾಡುವುದು ಗೊತ್ತು, ಇಳಿಸುವುದೂ ಗೊತ್ತು ಎಂದಿದ್ದರು ಬಿ.ಕೆ.ಹರಿಪ್ರಸಾದ್.‌ ಸ್ವತಃ ಮುಖ್ಯಮಂತ್ರಿಗೆ ಸಡ್ಡು ಹೊಡೆದು ಹಿಂದುಳಿದ ಜಾತಿಗಳ ಸಮಾವೇಶ ನಡೆಸಿದ್ದರು ಅವರು. ಅದಕ್ಕೂ ಮೊದಲು ಹಿರಿಯ ಶಾಸಕ ಅನುದಾನ ವಿಷಯದಲ್ಲಿ ಅತೃಪ್ತಿ ವ್ಯಕ್ತಪಡಿಸಿ ನೇರ ಮುಖ್ಯಮಂತ್ರಿಗೇ ಪತ್ರ ಬರೆದಿದ್ದರು. ಮತ್ತೊಂದೆಡೆ, ಮುಖ್ಯಮಂತ್ರಿ ಪುತ್ರ ಯತೀಂದ್ರ ವಿರುದ್ಧ ರಾಹುಲ್‌ ಗಾಂಧಿ ಅವರ ತನಕ ದೂರುಗಳು ಹೋಗಿದ್ದವು. ಅಲ್ಲದೆ; ತಮ್ಮ ಕೆಲಸಗಳು ಆಗುತ್ತಿಲ್ಲ ಎನ್ನುವುದು ಆಡಳಿತ ಪಕ್ಷ ಶಾಸಕರ ಗುಸುಗುಸು ಜೋರು ದನಿಯಲ್ಲಿ ಕೇಳಿಸುವ ಹಂತ ತಲುಪಿದೆ.

ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಮುಂದಿನ ಬೆಳವಣಿಗೆಗಳ ಬಗ್ಗೆ ಕಾಂಗ್ರೆಸ್‌ ನಲ್ಲಿ ತಳಮಳ ಹೆಚ್ಚುತ್ತಲೇ ಇದೆ.

Tags: bjpckcknewsnowCongresscp yogeshwarhd kumaraswamyjdsnewsPolitics
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಕೋವಿಡ್ ಲಸಿಕೆ ಅಭಿವೃದ್ಧಿಪಡಿಸಿದ ಇಬ್ಬರು ವೈದ್ಯ ವಿಜ್ಞಾನಿಗಳಿಗೆ ನೊಬೆಲ್

ಕೋವಿಡ್ ಲಸಿಕೆ ಅಭಿವೃದ್ಧಿಪಡಿಸಿದ ಇಬ್ಬರು ವೈದ್ಯ ವಿಜ್ಞಾನಿಗಳಿಗೆ ನೊಬೆಲ್

Leave a Reply Cancel reply

Your email address will not be published. Required fields are marked *

Recommended

ಗುಡಿಬಂಡೆ ಕಸಾಪ ಪದಾಧಿಕಾರಿಗಳ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್

ಗುಡಿಬಂಡೆ ಕಸಾಪ ಪದಾಧಿಕಾರಿಗಳ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್

4 years ago
ಸರಕಾರಕ್ಕೆ ಸಂಚಕಾರ; ಹೆಚ್.ಡಿ.ಕುಮಾರಸ್ವಾಮಿ, ಯೋಗಿ ಹೇಳಿಕೆಯಿಂದ ಕಾಂಗ್ರೆಸ್‌ನಲ್ಲಿ ತಳಮಳ

ಅಧಿಕಾರ ಕೊಡುವ ಗ್ಯಾರಂಟಿ ಇಲ್ಲ; ಆದರೂ ಇಂಗದ ಆಪರೇಷನ್ ಹಸ್ತದ ದಾಹ

2 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ