• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಚಿಕ್ಕಬಳ್ಳಾಪುರ ಬಳಿ ಭೀಕರ ಅಪಘಾತ; ಆಂಧ್ರದ ಗೊರಂಟ್ಲದ 13 ಜನರ ದುರ್ಮರಣ

cknewsnow desk by cknewsnow desk
October 26, 2023
in CHIKKABALLAPUR, CKPLUS, CRIME, EDITORS'S PICKS, KOLAR, NATION, STATE
Reading Time: 3 mins read
0
ಚಿಕ್ಕಬಳ್ಳಾಪುರ ಬಳಿ ಭೀಕರ ಅಪಘಾತ; ಆಂಧ್ರದ ಗೊರಂಟ್ಲದ 13 ಜನರ ದುರ್ಮರಣ
1.4k
VIEWS
FacebookTwitterWhatsuplinkedinEmail

ನಿಂತಿದ್ದ ಸೀಮೆಂಟ್ ಬಲ್ಕರ್ ವಾಹನಕ್ಕೆ ಟಾಟಾ ಸುಮೋ ಡಿಕ್ಕಿ; ಬೆಂಗಳೂರಿನಲ್ಲಿ ಬದುಕು ಕಂಡುಕೊಂಡಿದ್ದ ನತದೃಷ್ಟರ ಧಾರುಣ ಅಂತ್ಯ: ಮೃತರಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

by M.krishnappa Chikkaballapura

ಚಿಕ್ಕಬಳ್ಳಾಪುರ: ಪಂಕ್ಚರ್ ಆಗಿ ನಿಂತಿದ್ದ ಸಿಮೆಂಟ್ ತುಂಬಿದ್ದ ಕಂಟೈನರ್ ಲಾರಿಗೆ ಟಾಟಾ ಸುಮೋ ಡಿಕ್ಕಿ ಹೊಡೆದ ಪರಿಣಾಮ ಸುಮೋದಲ್ಲಿ ಪ್ರಯಾಣಿಸುತ್ತಿದ್ದ 13 ಮಂದಿ ಮೃತಪಟ್ಟಿರುವ ಧಾರುಣ ಘಟನೆ ನಗರದ ಹೊರ ವಲಯದ ಚಿತ್ರಾವತಿ ಬಳಿಯ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಇಂದು (ಗುರುವಾರ) ಬೆಳಗ್ಗೆ 7 ಗಂಟೆ ಸಮಯದಲ್ಲಿ ನಡೆದಿದೆ.

ಚಿತ್ರಾವತಿ ಸಮೀಪದ ಸಂಚಾರಿ ಪೊಲೀಸ್ ಠಾಣೆ ಮುಂಭಾಗ ಈ ದುರಂತ ಸಂಭವಿಸಿದೆ. ಬಾಗೇಪಲ್ಲಿ ಕಡೆಯಿಂದ ಬೆಂಗಳೂರು ಕಡೆಗೆ ಚಲಿಸುತ್ತಿದ್ದ ಟಾಟಾ ಸುಮೋದಲ್ಲಿ 7 ಪುರುಷರು 4 ಮಹಿಳೆಯರು ಸೇರಿ ಇಬ್ಬರು ಬಾಲಕರು ಪ್ರಯಾಣಿಸುತ್ತಿದ್ದರು. ಡಿಕ್ಕಿಯಾಗಿ ಕಾರಿನಲ್ಲಿದ್ದ ಚಾಲಕ ಸೇರಿದಂತೆ 13 ಮಂದಿಯ ಪೈಕಿ 12 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಉಳಿದ ಒಬ್ಬರು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಕೊನೆಯುಸಿರೆಳೆದ್ದಿದ್ದಾರೆ.

ಮೃತಪಟ್ಟವರು ಆಂಧ್ರದ ಸತ್ಯಸಾಯಿ ಜಿಲ್ಲೆಯ ಗೋರಂಟ್ಲ ವ್ಯಾಪ್ತಿಗೆ ಸೇರಿದ ಕೊತ್ತಚೆರುವು ಕಡೆಯವರು ಎಂದು ತಿಳಿದುಬಂದಿದೆ. ಇವರೆಲ್ಲರೂ ಕರ್ನಾಟಕದ ಹಲವು ಭಾಗಗಲ್ಲಿ ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಮೃತದೇಹಗಳನ್ನು ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಗೆ ಸಾಗಿಸಿ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಸಂಬಂಧಿಕರ ವಶಕ್ಕೆ ಒಪ್ಪಿಸಲಾಯಿತು.

ಚಿಕ್ಕಬಳ್ಳಾಪುರ ಬಳಿಯ ಚಿತ್ರಾವತಿಯ ಸಮೀಪ ಭೀಕರ ಅಪಘಾತ; ಆಂಧ್ರ ಪ್ರದೇಶದ ಗೊರಂಟ್ಲದ 13 ಕೂಲಿ ಕಾರ್ಮಿಕರ ದುರ್ಮರಣ

ನಿಂತಿದ್ದ ಸೀಮೆಂಟ್ ಬಲ್ಕರ್ ವಾಹನಕ್ಕೆ ಟಾಟಾ ಸುಮೋ ಡಿಕ್ಕಿ; ಬೆಂಗಳೂರಿನಲ್ಲಿ ಬದುಕು ಕಂಡುಕೊಂಡಿದ್ದ ನತದೃಷ್ಟರ ಧಾರುಣ ಅಂತ್ಯ#RoadAccident #Chikkaballapura #Crime pic.twitter.com/LqYDmqsWbm

— cknewsnow.com (@cknewsnow) October 26, 2023

ಈ ನತದೃಷ್ಟ ಕೂಲಿಕಾರ್ಮಿಕರು ಬಾಗೇಪಲ್ಲಿ ಕಡೆಯಿಂದ ಬೆಂಗಳೂರು ಕಡೆಗೆ ಹೊರಟಿದ್ದ ಟಾಟಾ ಸುಮೋ ವಾಹನದಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಅಪಘಾತದಲ್ಲಿ ಮೃತಪಟ್ಟವರು

ಮೃತರಲ್ಲಿ ದೊಡ್ಡಬಳ್ಳಾಪುರ ನಗರದ ಅರುಣಾ, ನವೀನ್ ಕುಮಾರ್ (32), ಕಾವಲಬೈರಸಂದ್ರದ ನರಸಿಂಹ ಮೂರ್ತಿ ಹಾಗೂ ಇವರ ತಂದೆ ಕೃಷ್ಣಪ್ಪ (37), ಕಲಿಗೆರೆ ಗ್ರಾಮದ ನರಸಿಂಹಪ್ಪ (40), ದೊಡ್ಡಬಳ್ಳಾಪುರ ನಗರದ ಹೃತ್ವಿಕ್ (6), ಈತನ ತಾಯಿ ಅರುಣಾ, ತಂದೆ ನವೀನ್ ಕುಮಾರ್, ಅನಂತಪುರದ ಪೆರಿಮಿಳಿ ಪವನ್ ಕುಮಾರ್ (32), ಇವರ ತಂದೆ ಪೆರಿಮಿಳಿ ನಾಗಭೂಷಣ್, ಬೆಂಗಳೂರಿನ ಸುಬ್ಬಮ್ಮ, ಇವರ ಪತಿ ವೆಂಕಟನಾರಾಯಣ, ಬೆಂಗಳೂರಿನ ಶಾಂತಮ್ಮ, ಪತಿ ಶಂಕರಪ್ಪ (37), ಬೆಂಗಳೂರಿನ ರಾಜವರ್ಧನ್ ಮೃತ ಶಾಂತಮ್ಮ ಪುತ್ರ (15), ಶಂಕರಪ್ಪ, ಆಂಧ್ರ ಪ್ರದೇಶದ ಮರಕೋರಪಲ್ಲಿಯ ನಾರಾಯಣಪ್ಪ (50), ಆಂಧ್ರಪ್ರದೇಶದ ಹಿಂದೂಪುರ ಸತ್ಯಸಾಯಿ ಜಿಲ್ಲೆಯ ಬೆಲ್ಲಾಲ ವೆಂಕಟಾದ್ರಿ(32), ಪತ್ನಿ ಬೆಲ್ಲಾಲ ಲಕ್ಷ್ಮಿ, ಆಂಧ್ರಪ್ರದೇಶದ ಗಣೇಶ್ (17), ತಂದೆ ಮುನಿಕೃಷ್ಣ ಮೃತ ದುರ್ದೈವಿಗಳಾಗಿದ್ದಾರೆ.

ಇವರೆಲ್ಲರೂ ಬೆಂಗಳೂರಿನಲ್ಲಿ ಕೂಲಿ ಕಾರ್ಮಿಕರು. ದಸರಾ ಹಬ್ಬಕ್ಕೆ ಸ್ವಗ್ರಾಮಕ್ಕೆ ತೆರಳಿ ಇಂದು ಬೆಂಗಳೂರಿಗೆ ವಾಪಸಾಗುತ್ತಿದ್ದರು. ಈ ಸಂದರ್ಭದಲ್ಲಿ ಅವರು ಧಾರುಣ ಸಾವಿಗೀಡಾಗಿದ್ದಾರೆ.

ಡಿಕ್ಕಿ ಹೊಡೆದ ರಭಸಕ್ಕೆ ಟಾಟಾ ಸುಮೋ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸುಮೋದಲ್ಲಿ ಸಿಲುಕಿದ್ದ ಮೃತದೇಹಗಳನ್ನು ಹೊರ ತೆಗೆಯಲು ಪೊಲೀಸರು ಹರಸಾಹಸ ಪಟ್ಟರು. ಈ ದೃಶ್ಯ ಹೃದಯ ವಿದ್ರಾವಕವಾಗಿತ್ತು.

ಮೃತಪಟ್ಟ ಎಲ್ಲ ದೇಹಗಳನ್ನು ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಯ ಶವಗಾರದಲ್ಲಿ ಇರಿಸಿ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ. ಆಸ್ಪತ್ರೆ ಬಳಿ ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು.

ಮೃತಪಟ್ಟವರಿಗೆ ತಲಾ 2 ಲಕ್ಷ ರೂ. ಪರಿಹಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

  • ಅಪಘಾತದ ಭೀಕರ ದೃಶ್ಯಗಳು

ಅಪಘಾತಕ್ಕೆ ಕಾರಣವೇನು?

ಪ್ರಕರಣಕ್ಕೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ 13 ಮಂದಿಯ ಸಾವಿಗೂ ಚಾಲಕನೇ ಕಾರಣನೇ ಎಂಬ ಪ್ರಶ್ನೆ ಕಾಡುತ್ತಿದೆ. ಕಾರಣ ಗೋರೆಂಟ್ಲದಿಂದ ಬೆಂಗಳೂರಿಗೆ ಪ್ರಯಾಣಿಕರನ್ನು ಸಾಗಿಸುವ ಚಾಲಕ ನರಸಿಂಹಪ್ಪ, ಕಳೆದ ರಾತ್ರಿ ಪ್ರಯಾಣಿಕರನ್ನು ತುಂಬಿಕೊಂಡು ಬೆಂಗಳೂರಿಗೆ ಬಂದು ಹೋಗಿದ್ದ ಎನ್ನಲಾಗಿದೆ. ಇನ್ನೂ ಬೆಳಗ್ಗೆ ಹಾಗೆಯೇ ಮರಳಿ ಪ್ರಯಾಣಿಕರನ್ನ ತುಂಬಿಕೊಂಡು ಬೆಂಗಳೂರಿಗೆ ಹೊರಟಿದ್ದ. ಹೀಗಾಗಿ ಸರಿಯಾಗಿ ನಿದ್ದೆಯಿಲ್ಲದ ಕಾರಣ ಇಡೀ ರಾತ್ರಿ ವಾಹನ ಚಾಲನೆ ಮಾಡಿದ ಪರಿಣಾಮ ನಿದ್ದೆ ಮಂಪರೇ ಅಪಘಾತಕ್ಕೆ ಕಾರಣವಾಯಿತೇ ಅಥವಾ ಮುಂಜಾನೆಯ ಮಂಜಿನಲ್ಲಿ ನಿಂತಿದ್ದ ವಾಹನವನ್ನು ಗುರುತಿಸಲಾಗದೆ ವಾಹನ ಡಿಕ್ಕಿಯಾಯಿತೇ ಎನ್ನುವ ಪ್ರಶ್ನೆ ಎದುರಾಗಿದೆ. ಪ್ರಕರಣದಲ್ಲಿ ಗೋರಂಟ್ಲ ಮೂಲದ ಕರೇಕಲ್ಲ ಗ್ರಾಮದ ಚಾಲಕ ನರಸಿಂಹಪ್ಪ ಸಹ ಮೃತಪಟ್ಟಿದ್ದಾರೆ.

ಟಾಟಾ ಸುಮೋ ಚಾಲಕನ ಅತಿ ವೇಗ ಹಾಗೂ ಅಜಾಗರೂಕತೆ ಈ ಅಪಘಾತಕ್ಕೆ ಒಂದು ಕಾರಣವಾಗಿದ್ದರೆ, ದಟ್ಟವಾದ ಮಂಜಿನಿಂದಾಗಿ ರಾಷ್ಟ್ರೀಯ ಹೆದ್ದಾರಿಗಳಂತಹ ಸ್ಥಳಗಳಲ್ಲಿ ಇಂತಹ ಅವಘಡಗಳು ಪದೇಪದೆ ಸಂಭವಿಸುತ್ತಿವೆ. ಈ ಸಂದರ್ಭದಲ್ಲಿ ಚಾಲಕರು ತಮ್ಮ ವಾಹನಗಳನ್ನು ನಿಧಾನಗತಿಯಲ್ಲಿ ಚಾಲನೆ ಮಾಡಿದರೆ ಅವಘಡಗಳಿಂದ ತಪ್ಪಿಸಿಕೊಳ್ಳಬಹುದಾಗಿದೆ ಎಂದು ಸ್ಥಳದಲ್ಲಿದ್ದ ಮಾಡಿದ ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದರು.

  • ಅಪಘಾತ ಸ್ಥಳದಲ್ಲಿ ಪೊಲೀಸರ ಕಾರ್ಯಾಚರಣೆ

ಚಳಿಗಾಲ ಆರಂಭವಾಗಿ ಹೆದ್ದಾರಿಯಲ್ಲಿ ದಟ್ಟ ಮಂಜು ಆವರಿಸಿರುತ್ತದೆ. ಹಿಗಿದ್ದಾರೂ ಚಾಲಕರು ಅತಿ ವೇಗದಿಂದ ವಾಹನಗಳನ್ನು ಚಾಲನೆ ಮಾಡುತ್ತಿರುವುದು ಸಾಮಾನ್ಯವಾಗಿದೆ. ಹೆದ್ದಾರಿಯಲ್ಲಿ ವೇಗ ಮಿತಿ ಇದ್ದರೂ ಚಾಲಕರು ಅದನ್ನು ಅಲಕ್ಷಿಸಿ ಪ್ರಾಣಕ್ಕೆ ಅಪಾಯ ತಂದುಕೊಳ್ಳುತ್ತಿದ್ದಾರೆ.

ಇಂದು ಅಪಘಾತ ಸಂಭವಿಸಿದ ಚಿತ್ರಾವತಿ ಬಳಿ ಹೆದ್ದಾರಿ ಅಪಘಾತ ವಲಯವಾಗಿದೆ. ಈ ಮೊದಲು ಈ ಭಾಗದ ಆಸುಪಾಸಿನಲ್ಲಿ ಸಾಕಷ್ಟು ಅಪಘಾತಗಳು ಸಂಭವಿಸಿವೆ. ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಎಲ್ಲಿಯೂ ಅಪಾಯದ ಸೂಚನಾ ಫಲಕ, ಎಚ್ಚರಿಕೆ ಸೂಚಕ ದೀಪಗಳನ್ನು ಅಳವಡಿಸಿಲ್ಲ. ಮೇಲಾಗಿ, ಅಕ್ಕಪಕ್ಕದ ಹಳ್ಳಿಗಳ ಜನರು ಬೆಳಗಿನ ಜಾವದಿಂದಲೇ ಚಿಕ್ಕಬಳ್ಳಾಪುರ ನಗರಕ್ಕೆ ಹಣ್ಣು ತರಕಾರಿ ಹೂವು ಸಾಗಣೆ ಮಾಡುತ್ತಾರೆ. ಇಂಥ ವೇಳೆ ಸಂಚಾರಿ ನಿಯಮಗಳ ಪಾಲನೆ ಬಗ್ಗೆ ಹೆದ್ದಾರಿ ಪೆಟ್ರೋಲಿಂಗ್ ಸಿಬ್ಬಂದಿ ಹೆಚ್ಚು ಮುನ್ನೆಚ್ಚರಿಕೆ ವಹಿಸಬೇಕು.

ಮಿಗಿಲಾಗಿ, ಹೆದ್ದಾರಿ ಉದ್ದಕ್ಕೂ ಅಕ್ಕಪಕ್ಕ ಪೆಟ್ರೋಲ್ ಬಂಕ್ ಗಳು, ಹೋಟೆಲ್, ಡಾಬಾಗಳು ಸಾಕಷ್ಟು ಪ್ರಮಾಣದಲ್ಲಿ ಇವೆ. ಅವುಗಳ ಮುಂಭಾಗದಲ್ಲಿ ವಾಹನಗಳನ್ನು ಮನ ಬಂದಂತೆ ನಿಲ್ಲಿಸಲಾಗಿರುತ್ತದೆ. ಅಂತಹ ವಾಹನಗಳ ಹಿಂಬದಿಯ ಇಂಡಿಕೇಟರ್ ಗಳು ಆಫ್ ಆಗಿರುತ್ತವೆ. ಅಪಘಾತಗಳಿಗೆ ಇದೂ ಪ್ರಮುಖ ಕಾರಣವಾಗಿದೆ ಎಂದು ಸ್ಥಳೀಯರು ದೂರುತ್ತಾರೆ.

ಆಸ್ಪತ್ರೆಯಲ್ಲಿ ಮೃತರ ಸಂಬಂಧಿಕರ ರೋಧನೆ.

ಈ ಸಂಬಂಧ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಸ್ಥಳಿಯ ಶಾಸಕ ಪ್ರದೀಪ್ ಈಶ್ವರ್ ಮಾಜಿ ಸಚಿವ ಡಾ.ಕೆ.ಸುಧಾಕರ್ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.

ಅಪಘಾತಕ್ಕೆ ಈಡಾದ ಬಗ್ಗೆ ಸಂಪೂರ್ಣ ತನಿಖೆ ಕೈಗೊಳ್ಳಲು ಸಂಬಂಧಪಟ್ಟ ಪೊಲೀಸರಿಗೆ ಶಾಸಕ ಪ್ರದೀಪ್ ಈಶ್ವರ್ ಸೂಚಿಸಿದರು. ಅಪಘಾತ ನಡೆದ ಸ್ಥಳಕ್ಕೆ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ್ ಹಾಗೂ ಶವಗಾರದದ ಸ್ಥಳಕ್ಕೆ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಭೇಟಿ ನೀಡಿದ್ದರು.

ಸ್ಥಳದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ್

ಪಂಕ್ಚರ್ ಆಗಿ ನಿಂತಿದ್ದ ಸಿಮೆಂಟ್‌ ಬಲ್ಕರ್ ಲಾರಿಗೆ ಹಿಂದಿನಿಂದ ರಭಸವಾಗಿ ಬಂದ ಟಾಟಾ ಸುಮೋ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.‌ ಎಲ್ಲಾ ಆಯಾಮಗಳಲ್ಲಿಯೂ ತನಿಖೆ ನಡೆಸುತ್ತಿದ್ದೇವೆ. ಅತಿಯಾದ ವೇಗವೇ ಅಪಘಾತಕ್ಕೆ ಕಾರಣ.

ಡಿ.ಎಲ್.ನಾಗೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

Tags: andra pradeshchikkaballapurachitravatickcknewsnowcrimeGorantlakarnatakapoliceroad accidentsatya sai districttata sumo
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಧರ್ಮಸ್ಥಳದಲ್ಲಿ ಆಣೆ ಮಾಡಲು ನಾನು ರೆಡಿ; 5 ತಿಂಗಳಲ್ಲಿ ಹಣ ಮಾಡಿಲ್ಲ ಎಂದು ಸಿಎಂ, ಸಚಿವರು ಪ್ರಮಾಣ ಮಾಡಲಿ

ಧರ್ಮಸ್ಥಳದಲ್ಲಿ ಆಣೆ ಮಾಡಲು ನಾನು ರೆಡಿ; 5 ತಿಂಗಳಲ್ಲಿ ಹಣ ಮಾಡಿಲ್ಲ ಎಂದು ಸಿಎಂ, ಸಚಿವರು ಪ್ರಮಾಣ ಮಾಡಲಿ

Leave a Reply Cancel reply

Your email address will not be published. Required fields are marked *

Recommended

ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ಅಗತ್ಯವಿಲ್ಲ: ರಾಜಮಾತೆ ಪ್ರಮೋದಾ ದೇವಿ ಒಡೆಯರ್

ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ಅಗತ್ಯವಿಲ್ಲ: ರಾಜಮಾತೆ ಪ್ರಮೋದಾ ದೇವಿ ಒಡೆಯರ್

3 years ago
ವೃದ್ಧ ದಂಪತಿಯ ಸ್ವಾತಂತ್ರ್ಯ ರಕ್ಷಿಸಿದ ಉಪ ವಿಭಾಗಾಧಿಕಾರಿ

ವೃದ್ಧ ದಂಪತಿಯ ಸ್ವಾತಂತ್ರ್ಯ ರಕ್ಷಿಸಿದ ಉಪ ವಿಭಾಗಾಧಿಕಾರಿ

3 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ