• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home EDITORS'S PICKS

TATA ತೆಕ್ಕೆಗೆ ಕೋಲಾರದ ಐಫೋನ್‌ ಘಟಕ

P K Channakrishna by P K Channakrishna
October 27, 2023
in EDITORS'S PICKS, NATION, STATE, TECH, WORLD
Reading Time: 1 min read
0
TATA ತೆಕ್ಕೆಗೆ ಕೋಲಾರದ ಐಫೋನ್‌ ಘಟಕ
1k
VIEWS
FacebookTwitterWhatsuplinkedinEmail

1,040 ಕೋಟಿ ರೂ.ಗಳ ಈ ಖರೀದಿ ಒಪ್ಪಂದ; ಎರಡೂವರೆ ವರ್ಷದಲ್ಲಿ ಕೋಲಾರದಿಂದಲೇ ಐಫೋನ್‌ ಪೂರೈಕೆ

ಬೆಂಗಳೂರು: ಕೋಲಾರದ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ಐಫೋನ್‌ ತಯಾರಿಕಾ ಘಟಕ (ವಿಸ್ಟ್ರಾನ್‌ ಇನ್ಫೋಕಾಂ ಮ್ಯಾನುಫ್ಯಾಕ್ಚರಿಂಗ್‌ (ಇಂಡಿಯಾ) ಪ್ರವೇಟ್‌ ಲಿಮಿಟೆಡ್) ಅನ್ನು ಪ್ರತಿಷ್ಠಿತ ಟಾಟಾ ಸಮೂಹವು ತನ್ನ ತೆಕ್ಕೆಗೆ ತೆಗೆದುಕೊಳ್ಳಲಿದ್ದು, ಈ ಖರೀದಿ ಒಪ್ಪಂದಕ್ಕೆ ತೈವಾನ್‌ ದೇಶದ ವಿಸ್ಟ್ರಾನ್‌ ಕಂಪನಿಗೆ ಹಸಿರು ನಿಶಾನೆ ತೋರಿಸಿದೆ.

1,040 ಕೋಟಿ ರೂ.ಗಳ ಈ ಖರೀದಿ ಒಪ್ಪಂದಕ್ಕೆ ತೈವಾನ್‌ ಮೂಲದ ವಿಸ್ಟ್ರಾನ್‌ ಕಂಪನಿ ಆಡಳಿತ ಮಂಡಳಿ ಶುಕ್ರವಾರ ಅನುಮೋದನೆ ನೀಡಿರುವ ಬೆಳವಣಿಗೆ ಭಾರತೀಯ ಕಾರ್ಪೋರೇಟ್‌ ವಲಯದಲ್ಲಿ ಸಂಚಲನ ಉಂಟು ಮಾಡಿದೆ. ಇದರ ಬೆನ್ನಲ್ಲಿಯೇ ಕೇಂದ್ರದ‌ ತಂತ್ರಜ್ಞಾನ ಖಾತೆ ಸಚಿವ ರಾಜೀವ್‌ ಚಂದ್ರಶೇಖರ್‌ ಅವರು ಟಾಟಾ ಸಮೂಹಕ್ಕೆ ಅಭಿನಂದನೆ ಸಲ್ಲಿಸಿ ಟ್ವೀಟ್‌ ಮಾಡಿದ್ದಾರೆ.

PM @narendramodi Ji's visionary PLI scheme has already propelled India into becoming a trusted & major hub for smartphone manufacturing and exports.

Now within just two and a half years, @TataCompanies will now start making iPhones from India for domestic and global markets from… pic.twitter.com/kLryhY7pvL

— Rajeev Chandrasekhar 🇮🇳(Modiyude Kutumbam) (@Rajeev_GoI) October 27, 2023

“ಒಂದು ವರ್ಷ ಕಾಲದ ದೀರ್ಘ ಮಾತುಕತೆಯ ನಂತರ ಖರೀದಿ ಒಪ್ಪಂದಕ್ಕೆ ಬರಲಾಗಿದೆ. ಈ ಘಟಕದ ಮೂಲಕ ಟಾಟಾ ಸಮೂಹವು ಇನ್ನು ಎರಡೂವರೆ ವರ್ಷಗದೊಳಗೆ ದೇಶಿಯವಾಗಿಯೇ ಐಫೋನ್‌ ಗಳನ್ನು ತಯಾರಿಸಿ ಜಾಗತಿಕ ಮಾರುಕಟ್ಟೆಗೆ ಪೂರೈಸಲಿದೆ” ಎಂದು ಸಚಿವರು ತಿಳಿಸಿದ್ದಾರೆ.

ನರಸಾಪುರ ಕೈಗಾರಿಕಾ ಪ್ರದೇಶದಲ್ಲಿಯೇ ಅತ್ಯಂತ ಪ್ರತಿಷ್ಠಿತವಾಗಿರುವ ಈ ಐಫೋನ್‌ ತಯಾರಿಕಾ ಘಟಕದಲ್ಲಿ ಸುಮಾರು 10,000 ಹೆಚ್ಚು ಜನರು ಕೆಲಸ ಮಾಡುತ್ತಿದ್ದಾರೆ. ಇದರಲ್ಲಿ ಭಾರತೀಯರು ಹಾಗೂ ತೈವಾನಿಯನ್ನರು ಸೇರಿದ್ದಾರೆ. ಖರೀದಿ ಒಪ್ಪಂದದ ಬಗ್ಗೆ ಶುಕ್ರವಾರ ವಿಸ್ಟ್ರಾನ್‌ ಕಡೆಯಿಂದ ಅಧಿಕೃತ ಮಾಹಿತಿ ಹೊರಬಿದ್ದಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ಪಿ.ಎಲ್.ಐ ಯೋಜನೆಯಿಂದ ಭಾರತವು ಈಗಾಗಲೇ ಸ್ಮಾರ್ಟ್‌ಫೋನ್ ತಯಾರಿಕೆ ಮತ್ತು ರಫ್ತಿಗೆ ಅತ್ಯಂತ ವಿಶ್ವಾಸಾರ್ಹ ಕೇಂದ್ರವಾಗಿ ಮಾರ್ಪಟ್ಟಿದೆ. ಇನ್ನು ಕೇವಲ ಎರಡೂವರೆ ವರ್ಷಗಳೊಳಗೆ ಟಾಟಾ ಕಂಪನಿಯು ದೇಶೀಯ ಮತ್ತು ಜಾಗತಿಕ ಮಾರುಕಟ್ಟೆಗಳಿಗೆ ಭಾರತದಿಂದ ಐಫೋನ್‌ಗಳನ್ನು ಉತ್ಪಾದಿಸಲು ಪ್ರಾರಂಭಿಸುತ್ತದೆ. ವಿಸ್ಟ್ರಾನ್ ಕಾರ್ಯಾಚರಣೆಯನ್ನು ವಹಿಸಿಕೊಂಡಿರುವ ಟಾಟಾ ತಂಡಕ್ಕೆ ಹಾರ್ದಿಕ ಅಭಿನಂದನೆಗಳು. ಅದ್ಭುತ ಕೊಡುಗೆಗಳನ್ನು ನೀಡಿರುವ ವಿಸ್ಟ್ರಾನ್ ತಂಡಕ್ಕೆ ಧನ್ಯವಾದಗಳು. ಆಪಲ್ ಸಂಸ್ಥೆಯು ತನ್ನ ಚುಕ್ಕಾಣಿಯಲ್ಲಿರುವ ಭಾರತೀಯ ಕಂಪನಿಗಳೊಂದಿಗೆ ಭಾರತದಿಂದ ಜಾಗತಿಕ ಪೂರೈಕೆ ಸರಪಳಿಯನ್ನು ನಿರ್ಮಿಸಲು ಉತ್ತಮವಾಗಿದೆ. ಕೇಂದ್ರ ಸರಕಾರ ಎಲೆಕ್ಟ್ರಾನಿಕ್ಸ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಗ್ಲೋಬಲ್ ಇಂಡಿಯನ್ ಎಲೆಕ್ಟ್ರಾನಿಕ್ಸ್ ಕಂಪನಿಗಳ ಬೆಳವಣಿಗೆಗೆ ಸಂಪೂರ್ಣ ಬೆಂಬಲವಾಗಿ ನಿಂತಿದ್ದು, ಅದು ಭಾರತವನ್ನು ತಮ್ಮ ವಿಶ್ವಾಸಾರ್ಹ ಉತ್ಪಾದನೆ ಮತ್ತು ಪ್ರತಿಭಾನ್ವಿತ ಪಾಲುದಾರನನ್ನಾಗಿ ಮಾಡಲು ಹಾಗೂ ಭಾರತವನ್ನು ಜಾಗತಿಕ ಎಲೆಕ್ಟ್ರಾನಿಕ್ಸ್ ಶಕ್ತಿಯನ್ನಾಗಿ ಮಾಡುವ ಪ್ರಧಾನಮಂತ್ರಿಗಳ ಗುರಿಯನ್ನು ಸಾಧಿಸಲು ಬಯಸುವ ಜಾಗತಿಕ ಎಲೆಕ್ಟ್ರಾನಿಕ್ ಬ್ರ್ಯಾಂಡ್‌ಗಳನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ ಎಂದು ಸಚಿವ ರಾಜೀವ್‌ ಚಂದ್ರಶೇಖರ್‌ ತಿಳಿಸಿದ್ದಾರೆ.

iPhone 13 Pro / Photo courtesy: Wikipedia
Tags: appleckcknewsnowindiaiphonekarnatakakolartaiwantatatata grouptechnologywistron
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ನಾನೇ ಒರಿಜಿನಲ್‌ ಎಂದಿದ್ದ ಸಿ.ಎಂ.ಇಬ್ರಾಹಿಂ ಅವರಿಗೆ ಅಡ್ರೆಸ್‌ ಇಲ್ಲದಂತೆ ಮಾಡಿದ ಜೆಡಿಎಸ್!

ನಾನೇ ಒರಿಜಿನಲ್‌ ಎಂದಿದ್ದ ಸಿ.ಎಂ.ಇಬ್ರಾಹಿಂ ಅವರಿಗೆ ಅಡ್ರೆಸ್‌ ಇಲ್ಲದಂತೆ ಮಾಡಿದ ಜೆಡಿಎಸ್!

Leave a Reply Cancel reply

Your email address will not be published. Required fields are marked *

Recommended

ಶ್ರೀ ಕೇಶವಾನಂದರು ಸಂವಿಧಾನವನ್ನೇ ಗೆಲ್ಲುವಂತೆ ಮಾಡಿದ ಭಾರತಮಾತೆಯ ಅಮೃತ ಪುತ್ರರು

ಶ್ರೀ ಕೇಶವಾನಂದರು ಸಂವಿಧಾನವನ್ನೇ ಗೆಲ್ಲುವಂತೆ ಮಾಡಿದ ಭಾರತಮಾತೆಯ ಅಮೃತ ಪುತ್ರರು

6 years ago
ನ್ಯಾ.ಸದಾಶಿವ ಆಯೋಗದ ವರದಿ ಜಾರಿಗೆ ಮಾದಿಗ ಮೀಸಲು ಹೋರಾಟ ಸಮಿತಿ ಆಗ್ರಹ; ಬೇಡಿಕೆ ಈಡೇರದಿದ್ದರೆ ಸರಕಾರಕ್ಕೆ ಉಳಿಗಾಲವಿಲ್ಲವೆಂದು ಎಚ್ಚರಿಕೆ

ನ್ಯಾ.ಸದಾಶಿವ ಆಯೋಗದ ವರದಿ ಜಾರಿಗೆ ಮಾದಿಗ ಮೀಸಲು ಹೋರಾಟ ಸಮಿತಿ ಆಗ್ರಹ; ಬೇಡಿಕೆ ಈಡೇರದಿದ್ದರೆ ಸರಕಾರಕ್ಕೆ ಉಳಿಗಾಲವಿಲ್ಲವೆಂದು ಎಚ್ಚರಿಕೆ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ