• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಲೋಕಸಭೆ ಎಲೆಕ್ಷನ್‌; ಕರ್ನಾಟಕದ ಆಡಳಿತಾರೂಢ ಕಾಂಗ್ರೆಸ್ಸಿಗೆ ಅಭ್ಯರ್ಥಿಗಳ ಬರಗಾಲ

P K Channakrishna by P K Channakrishna
November 27, 2023
in NATION, POLITICS, STATE
Reading Time: 2 mins read
0
ಲೋಕಸಭೆ ಎಲೆಕ್ಷನ್‌; ಕರ್ನಾಟಕದ ಆಡಳಿತಾರೂಢ ಕಾಂಗ್ರೆಸ್ಸಿಗೆ ಅಭ್ಯರ್ಥಿಗಳ ಬರಗಾಲ
978
VIEWS
FacebookTwitterWhatsuplinkedinEmail

20 ಸೀಟುಗಳಿಗೆ ಗುರಿ ಇಟ್ಟಿರುವ ಕೈ ಪಕ್ಷಕ್ಕೆ 16 ಕ್ಷೇತ್ರಗಳಲ್ಲಿ ಸ್ಪರ್ಧಾಳುಗಳೇ ಇಲ್ಲ

ಬೆಂಗಳೂರು: ಜನಪ್ರಿಯ ಯೋಜನೆಗಳ ಮೂಲಕ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದ್ದ ಕಾಂಗ್ರೆಸ್ ಪಕ್ಷಕ್ಕೆ ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಕಣಕ್ಕೆ ಇಳಿಸಲು ಇಲ್ಲಿ ಅಭ್ಯರ್ಥಿಗಳೇ ಇಲ್ಲ.

ಈ ಕಾರಣಕ್ಕಾಗಿ ಅಪರೇಶನ್ ಹಸ್ತಕ್ಕೆ ಮುಂದಾಗಿರುವ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಿಂದ ಅಭ್ಯರ್ಥಿಗಳಾಗುವ ಶಕ್ತಿ ಇರುವ ನಾಯಕರಿಗೆ ಗಾಳ ಹಾಕುತ್ತಿದೆ.

2024ರ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 20 ಕ್ಷೇತ್ರಗಳಲ್ಲಿ ಜಯಗಳಿಸಲು ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಗೆ ಸಮರ್ಥ ಅಭ್ಯರ್ಥಿಗಳಿಲ್ಲದೆ, ಹೊಸ ತಲೆನೋವು ಕಾಡುತ್ತಿದೆ. ಲಭ್ಯ ಇರುವ ಅಭ್ಯರ್ಥಿಗಳು ಬಹುತೇಕ ರಿಜೆಕ್ಟ್ ಆಗಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ಚಾಮರಾಜನಗರ, ಮೈಸೂರು-ಕೊಡಗು ಲೋಕಸಭೆ ಕ್ಷೇತ್ರವೂ ಸೇರಿದಂತೆ ರಾಜ್ಯದ 16 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳಿಗಾಗಿ ಕಾಂಗ್ರೆಸ್ ಇನ್ನಿಲ್ಲದ ತಲಾಶ್ ಮಾಡುತ್ತಿದೆ.

ಕಳೆದ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರ ಒಂದನ್ನು ಹೊರತುಪಡಿಸಿದರೆ, ಉಳಿದ 27 ಕ್ಷೇತ್ರಗಳನ್ನು ಕಾಂಗ್ರೆಸ್ ಕಳೆದುಕೊಂಡಿತ್ತು. ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಸಹೋದರ ಡಿ.ಕೆ.ಸುರೇಶ್ ಅವರೊಬ್ಬರು ಮಾತ್ರ ಲೋಕಸಭೆಗೆ ಆಯ್ಕೆ ಆಗಿದ್ದರು.

ಆಗ ಜೆಡಿಎಸ್ ನೊಂದಿಗೆ ಮೈತ್ರಿ ಮಾಡಿಕೊಂಡು ಕಣಕ್ಕಿಳಿದಿದ್ದ ಕಾಂಗ್ರೆಸ್ ಗೆದ್ದಿದ್ದು ಒಂದೇ ಒಂದು ಕ್ಷೇತ್ರ. ಹಾಗೆಯೇ ಜೆಡಿಎಸ್ ಕೂಡ ಹಾಸನ ಕ್ಷೇತ್ರದಲ್ಲಿ ಮಾತ್ರ ಗೆಲುವು ಸಾಧಿಸಿ ಉಳಿದೆಡೆ ಪರಾಭವಗೊಂಡಿತ್ತು.ಆದರೆ, ರಾಜ್ಯದ 28 ಲೋಕಸಭೆ ಕ್ಷೇತ್ರಗಳ ಪೈಕಿ ಬಿಜೆಪಿ 25 ಕ್ಷೇತ್ರಗಳಲ್ಲಿ ಅಭೂತಪೂರ್ವ ಗೆಲುವು ಸಾಧಿಸಿ ಹೊಸ ಇತಿಹಾಸ ಸೃಷ್ಟಿಸಿತ್ತು.

ಮತದಾನದ ಪ್ರಮಾಣ ಹೆಚ್ಚಳಕ್ಕೆ ಆಸಕ್ತಿ

ವಿಧಾನಸಭೆ ಚುನಾವಣೆಯಲ್ಲಿ 136 ಸ್ಥಾನ ಗಳಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್, ಅದೇ ಅಂಕಿ-ಅಂಶಗಳ ಆಧಾರದ ಮೇಲೆ ಲೋಕಸಭೆ ಚುನಾವಣೆಯಲ್ಲಿ ಕನಿಷ್ಠ 20 ಸ್ಥಾನಗಳನ್ನು ಗೆದ್ದು, ವರಿಷ್ಠರಿಂದ ಶಹಬ್ಬಾಸ್ ಗಿರಿ ಗಿಟ್ಟಿಸಿಕೊಳ್ಳಲು ಮುಂಚೂಣಿ ನಾಯಕರು ಹರ ಸಾಹಸ ನಡೆಸಿದ್ದಾರೆ.

ಮೈಸೂರು-ಕೊಡಗು ಕ್ಷೇತ್ರವಷ್ಟೇ ಅಲ್ಲದೆ, ಮಂಡ್ಯ, ಹಾಸನ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ಉಡುಪಿ-ಚಿಕ್ಕಮಗಳೂರು, ಹಾವೇರಿ, ರಾಯಚೂರು ಸೇರಿ 16ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುವ ಅಭ್ಯರ್ಥಿಗಳಿಲ್ಲ.

ಕೆಲವೆಡೆ ಅಭ್ಯರ್ಥಿಗಳಿದ್ದರೂ ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿ ತೋರುತ್ತಿಲ್ಲ. ಈ ಕೊರತೆಯನ್ನು ನೀಗಿಸಲು ಬಿಜೆಪಿ ಹಾಗೂ ಜೆಡಿಎಸ್ ನಿಂದ ವರ್ಚಸ್ವಿ ಹಾಗೂ ಪ್ರಭಾವಿ ಮುಖಂಡರನ್ನು ಸೆಳೆಯುವ ಪ್ರಯತ್ನ ತೆರೆಮರೆಯಲ್ಲಿ ನಡೆದಿತ್ತು. ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟವನ್ನು ಜೆಡಿಎಸ್ ಸೇರಿದ್ದು, ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಬಿ.ವೈ ವಿಜಯೇಂದ್ರ ನೇಮಕಗೊಂಡಿರುವುದು ಕಾಂಗ್ರೆಸ್ ಪಕ್ಷದ ಆಪರೇಷನ್ ಹಸ್ತಕ್ಕೆ ದೊಡ್ಡ ಪೆಟ್ಟು ನೀಡಿದೆ.

ಹಿಂದೆ ಸರಿದ ಬಿಜೆಪಿ-ಜೆಡಿಎಸ್ ಮುಖಂಡರು

ಕಾಂಗ್ರೆಸ್ ಸೇರಲು ಮೊದಲು ಆಸಕ್ತಿ ತೋರಿದ್ದ ವಿರೋಧ ಪಕ್ಷಗಳ ಮುಖಂಡರು ತಮ್ಮ ಪಕ್ಷಗಳಲ್ಲಾದ ಬೆಳವಣಿಗೆಯಿಂದ ಹಿಂದಕ್ಕೆ ಸರಿದಿದ್ದಾರೆ. ಸಚಿವರ ಉಸ್ತುವಾರಿಯಲ್ಲಿ ಪ್ರತಿ ಕ್ಷೇತ್ರಕ್ಕೆ ಸಮಿತಿಗಳನ್ನು ನೇಮಕ ಮಾಡಿದ್ದರೂ ಅವರಿಂದಲೂ ಸಮರ್ಥ ಅಭ್ಯರ್ಥಿ ಆಯ್ಕೆ ಮಾಡಲು ಸಾಧ್ಯವಾಗಿಲ್ಲ. ಇನ್ನೊಂದೆಡೆ; ಬೆಂಗಳೂರು ಉತ್ತರ, ಕಲಬುರಗಿ, ಮೈಸೂರು, ಚಾಮರಾಜನಗರ, ಮಂಡ್ಯ, ತುಮಕೂರು ಸೇರಿ ಅನೇಕ ಕ್ಷೇತ್ರಗಳಲ್ಲಿ ಸಚಿವರನ್ನೇ ಅಭ್ಯರ್ಥಿಗಳನ್ನು ಮಾಡುವ ಒತ್ತಡದಲ್ಲಿದೆ ಕಾಂಗ್ರೆಸ್.

ಆದರೆ, ಬಹುತೇಕ ಎಲ್ಲಾ ಸಚಿವರು ಲೋಕಸಭೆ ಚುನಾವಣೆಯಲ್ಲಿ ಅಭ್ಯರ್ಥಿ ಆಗಲು ಹೆದರುತ್ತಿದ್ದಾರೆ. ಲೋಕಸಭೆಯನ್ನು ನಂಬಿಕೊಂಡರೆ ಇರುವ ಶಾಸಕ ಸ್ಥಾನ, ಮಂತ್ರಿಗಿರಿ ಹೋಗಬಹುದು ಎನ್ನುವ ಭೀತಿ ಅವರಲ್ಲಿ ಆವರಿಸಿದೆ.

ಕೆಲ ಜಿಲ್ಲೆಗಳಿಂದ ಈಗಾಗಲೇ ಅಭ್ಯರ್ಥಿಗಳ ಬಗ್ಗೆ ವರದಿ ಬಂದಿದ್ದರೂ ಆ ವರದಿ ರಾಜ್ಯ ನಾಯಕರಿಗೆ ತೃಪ್ತಿ ತಂದಿಲ್ಲ. ಜಿಲ್ಲಾ ಘಟಕಗಳು ಶಿಫಾರಸು ಮಾಡಿರುವ ಅಭ್ಯರ್ಥಿಗಳ ಯಾದಿಯನ್ನು ಬೆಂಗಳೂರು ಮತ್ತು ದೆಹಲಿ ಕೂತು ಕಾಂಗ್ರೆಸ್ ಪರ ಚುನಾವಣಾ ತಂತ್ರಗಾರಿಕೆ ಕೆಲಸ ಮಾಡುತ್ತಿರುವ ಪಂಡಿತರಿಗೆ ಒಪ್ಪಿಗೆ ಆಗಿಲ್ಲ.

ಇನ್ನು, ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಂದೆ ಮುಖ್ಯಮಂತ್ರಿ ಸ್ಥಾನ ಗಿಟ್ಟಿಸಿಕೊಳ್ಳಲು ವರಿಷ್ಠರು ನೀಡಿರುವ ಗುರಿ ಮುಟ್ಟಲೇಬೇಕಾದ ಸವಾಲಿದೆ. ಆ ಅನಿವಾರ್ಯತೆಗೆ ಸಿಲುಕಿರುವ ಅವರು ಗೆಲುವಿಗಾಗಿ ಎಲ್ಲಾ ದಾರಿಗಳನ್ನು ತುಳಿಯುತ್ತಿದ್ದಾರೆ.

ಆದರೆ, ಅನ್ಯ ಪಕ್ಷಗಳಿಂದ ಮುಖಂಡರನ್ನು ಕರೆ ತರುವ ಯತ್ನ ಸದ್ಯಕ್ಕೆ ವಿಫಲವಾಗಿದ್ದು, ಅವರ ಕೈ ಕಟ್ಟಿ ಹಾಕಿದಂತಾಗಿದೆ. ಇಷ್ಟರ ನಡುವೆಯೂ ಚುನಾವಣೆಯಲ್ಲಿ ಮತದಾನದ ಪ್ರಮಾಣ ಹೆಚ್ಚಿಸಿಕೊಂಡು ಗುರಿ ಮುಟ್ಟಲು ಬಿಜೆಪಿ, ಜೆಡಿಎಸ್ ನ ಎರಡು-ಮೂರನೇ ಹಂತದ ನಾಯಕರನ್ನು ಪ್ರತಿ ವಾರ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ತೃಪ್ತಿಪಟ್ಟುಕೊಳ್ಳುತ್ತಿದ್ದಾರೆ.

ಆದರೂ ತಮಗೆ ನೀಡಿರುವ ಗುರಿ ಮುಟ್ಟಲು ಮಾತ್ರ ಸಾಧ್ಯವಾಗಿಲ್ಲ. ಇದಕ್ಕಾಗಿ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ಮುಂದೆ ಯಾವ ಕಾರ್ಯತಂತ್ರ ರೂಪಿಸುತ್ತಾರೋ ಎಂಬುದನ್ನು ಕಾದು ನೋಡಬೇಕು.

ಚಿಕ್ಕಬಳ್ಳಾಪುರ ಪರಿಸ್ಥಿತಿ ಏನಿದೆ?

ಕಾಂಗ್ರೆಸ್ ಭದ್ರಕೋಟೆ ಆಗಿರುವ ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರವನ್ನು ಕಳೆದ ಬಾರಿ ಬಿಜೆಪಿ ಕಿತ್ತುಕೊಂಡಿತ್ತು. ಬಿ.ಎನ್. ಬಚ್ಚೇಗೌಡ ಎದುರು ಆ ಹೊತ್ತಿಗೆ ಹ್ಯಾಟ್ರಿಕ್ ಹೊಡೆದಿದ್ದ ಮಾಜಿ ಸಿಎಂ ವೀರಪ್ಪ ಮೊಯಿಲಿ ಸೋತಿದ್ದರು.

ಈಗ ಬಚ್ಚೇಗೌಡರೇ ಬಿಜೆಪಿಯಿಂದ ಕಾಲು ಹೊರಗಿಟ್ಟು ಕಾಂಗ್ರೆಸ್ ಪರ ವಾಲಿಕೊಂಡಿದ್ದಾರೆ. ಈ ಬಲ ತಮಗೆ ಪ್ಲಸ್ ಆಗಬಹುದು ಎನ್ನುವ ಲೆಕ್ಕ ಮೊಯಿಲಿ ಅವರಲ್ಲಿದೆ. ಅಲ್ಲದೆ, ಅವರಿಗೆ ಬಿಟ್ಟರೆ ಟಿಕೆಟ್ ಇನ್ನಾರಿಗೆ ಎನ್ನುವ ಹೇಳಿಕೆಗಳ ನಡುವೆಯೇ ಹೈಕಮಾಂಡ್ ಮುಂದೆ ಇರುವ ವರದಿಗಳು, ಸಮೀಕ್ಷೆಗಳು ಬೇರೆಯದೇ ಹೇಳುತ್ತಿವೆ. ಮೊಯಿಲಿ ಅವರಿಗೆ ಕ್ಷೇತ್ರದಲ್ಲಿ ಜನರಿಂದಲೇ ಭಾರೀ ವಿರೋಧ ಇದೆ. ಒಂದು ವೇಳೆ ಈ ಬಾರಿ ಮೊಯಿಲಿ ಅವರೇ ಅಭ್ಯರ್ಥಿ ಆದರೆ, ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ಮತದಲ್ಲಿ ಒಂದಿಷ್ಟು ಎದುರಾಳಿ ಅಭ್ಯರ್ಥಿಗೆ ಹೋದರೂ ಅಚ್ಚರಿ ಇಲ್ಲ. ಕಳೆದ ಬಾರಿ ಬಚ್ಚೇಗೌಡರ ದಡ ಸೇರಿದ್ದು ಹೀಗೆಯೇ.

ಹೀಗಾಗಿ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿಯೂ ಕಾಂಗ್ರೆಸ್ ಪಕ್ಷಕ್ಕೆ ಸಮರ್ಥ ಅಭ್ಯರ್ಥಿ ಇಲ್ಲ.

ಕೋಲಾರದಲ್ಲಿಯೂ ಇದೇ ಸ್ಥಿತಿ

ಬೆಂಗಳೂರಿನ ಮಗ್ಗುಲಲ್ಲೇ ಇರುವ ಕೋಲಾರ ಲೋಕಸಭೆ ಕ್ಷೇತ್ರದ ಸ್ಥಿತಿಯೂ ಹಾಗೆಯೇ ಇದೆ. ಕಳೆದೆ ಚುನಾವಣೆಯಲ್ಲಿ ಕೆ.ಹೆಚ್.ಮುನಿಯಪ್ಪ ಅವರನ್ನು ಮಟ್ಟ ಹಾಕಬೇಕು ಎಂದು ಕೆಲ ಕಾಂಗ್ರೆಸ್ಸಿಗರೇ ಪಕ್ಷ ದ್ರೋಹ ಎಸಗಿದ ಪರಿಣಾಮ ಮುನಿಯಪ್ಪ ಸೋತು, ಬಿಜೆಪಿಯ ಮುನಿಸ್ವಾಮಿ ಗೆದ್ದಿದ್ದರು. ಅಂದು ತಮ್ಮ ಗೆಲುವಿಗೆ ಕಾರಣ ಆಗಿದ್ದವರಿಗೇ ಈಗ ಮುನಿಸ್ವಾಮಿ ಮುಳ್ಳಾಗಿ ಬದಲಾಗಿದ್ದಾರೆ. ಹೀಗಾಗಿ ಕಾಂಗ್ರೆಸ್ ಕೂಟದಲ್ಲಿ ಕೊಂಚ ಏಕತೆ ಕಾಣುತ್ತಿದೆ.

ಮೇಲ್ನೋಟಕ್ಕೆ ಇದು ಸುಲಭವಿಲ್ಲ. ಜಿಲ್ಲಾ ಕಾಂಗ್ರೆಸ್ ನಲ್ಲಿರುವ ಮೇಲಾಟ, ತಂತ್ರಗಾರಿಕೆ ಆ ಪಕ್ಷದ ಅಭ್ಯರ್ಥಿಗೆ ಬಹುದೊಡ್ಡ ಕಂಟಕ. ಕಳೆದ ಬಾರಿ ಸೋತಿದ್ದ ಮುನಿಯಪ್ಪ ಈ ಬಾರಿ ಸುಮ್ಮನಿರುವ ಪೈಕಿ ಅಲ್ಲ. ಲೋಕಸಭೆಯಲ್ಲಿ ಸೋಲಿಸಿದರೇನಂತೆ ದೇವನಹಳ್ಳಿ ಕ್ಷೇತ್ರಕ್ಕೆ ಬಂದು ಶಾಸಕರಾಗಿ ಮಂತ್ರಿಯೂ ಆಗಿದ್ದಾರೆ. ಕೋಲಾರದಲ್ಲಿ ತಮ್ಮ ಸೋಲಿಗೆ ಕಾರಣರಾದವರು ವಿಧಾನಸಭೆ ಮೆಟ್ಟಿಲು ಹತ್ತದಂತೆ ನೋಡಿಕೊಂಡಿದ್ದಾರೆ. ಹೀಗಾಗಿ ಕೋಲಾರದಲ್ಲಿ ಕಳೆದ ಬಾರಿಯಂತೆ ಈ ಸಲವೂ ಕಾಂಗ್ರೆಸ್ ನಲ್ಲಿ ಒಳಾಟವೇ ವಿಜೃಂಭಿಸಲಿದೆ. ಹೀಗಾಗಿ ಅಭ್ಯರ್ಥಿ ಆಗಲು ಯಾರೂ ಧೈರ್ಯ ತೋರುತ್ತಿಲ್ಲ.

Tags: candidatesckcknewsnowCongresskarnatakaparliament election 2024Politics
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಕಾಂತಾರ-2 FIRST LOOK

ಕಾಂತಾರ-2 FIRST LOOK

Leave a Reply Cancel reply

Your email address will not be published. Required fields are marked *

Recommended

ಎನ್ ಟಿಆರ್ ಜನ್ಮಶತಮಾನೋತ್ಸವದ ಸ್ಮರಣೆ: ₹100 ನಾಣ್ಯ ಲೋಕಾರ್ಪಣೆ

ಎನ್ ಟಿಆರ್ ಜನ್ಮಶತಮಾನೋತ್ಸವದ ಸ್ಮರಣೆ: ₹100 ನಾಣ್ಯ ಲೋಕಾರ್ಪಣೆ

3 years ago
ಕಾಂಗ್ರೆಸ್‌ ಪಕ್ಷವನ್ನು ತೊರೆದು ಸಚಿವ ಡಾ.ಸುಧಾಕರ್‌ ನೇತೃತ್ವದಲ್ಲಿ ಬಿಜೆಪಿ ಸೇರುತ್ತಿರುವುದಕ್ಕೆ ಕಾರಣಗಳನ್ನು ಕೊಟ್ಟ ಕೆ.ವಿ.ನವೀನ್‌ ಕಿರಣ್‌

ಕಾಂಗ್ರೆಸ್‌ ಪಕ್ಷವನ್ನು ತೊರೆದು ಸಚಿವ ಡಾ.ಸುಧಾಕರ್‌ ನೇತೃತ್ವದಲ್ಲಿ ಬಿಜೆಪಿ ಸೇರುತ್ತಿರುವುದಕ್ಕೆ ಕಾರಣಗಳನ್ನು ಕೊಟ್ಟ ಕೆ.ವಿ.ನವೀನ್‌ ಕಿರಣ್‌

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ