• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಲೀಲಾವತಿ ನಿಧನಕ್ಕೆ ಪ್ರಧಾನಮಂತ್ರಿ ಮೋದಿ, ಮಾಜಿ ಪ್ರಧಾನಿ ದೇವೇಗೌಡರು ಸೇರಿ ಅನೇಕ ಗಣ್ಯರ ಕಂಬನಿ

cknewsnow desk by cknewsnow desk
December 8, 2023
in NATION, STATE
Reading Time: 2 mins read
0
ಲೀಲಾವತಿ ನಿಧನಕ್ಕೆ ಪ್ರಧಾನಮಂತ್ರಿ ಮೋದಿ, ಮಾಜಿ ಪ್ರಧಾನಿ ದೇವೇಗೌಡರು ಸೇರಿ ಅನೇಕ ಗಣ್ಯರ ಕಂಬನಿ
958
VIEWS
FacebookTwitterWhatsuplinkedinEmail

ಮಹಾನಟಿ ಆಗಲಿಕೆಗೆ ಕಂಬನಿ ಮಿಡಿದ ಗಣ್ಯರು

ಬೆಂಗಳೂರು: ಹಿರಿಯ ನಟಿ ಲೀಲಾವತಿ ಅವರ ನಿಧನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಸೇರಿದಂತೆ ಅನೇಕ ಗಣ್ಯರು ಕಂಬನಿ ಮಿಡಿದ್ದಾರೆ.

ಪ್ರಧಾನಿ ಮೋದಿ ಅವರು ಕನ್ನಡದಲ್ಲಿಯೇ ಎಕ್ಸ್‌ ಜಾಲತಾಣದಲ್ಲಿ ಲೀಲಾವತಿ ಅವರ ಗುಣಗಾನ ಮಾಡಿ ಕಂಬನಿ ಮಿಡಿದ್ದಾರೆ.

“ಕನ್ನಡ ಚಿತ್ರರಂಗದ ಹೆಸರಾಂತ ನಟಿ ಲೀಲಾವತಿ ಅವರ ನಿಧನದ ಸುದ್ದಿ ಕೇಳಿ ದುಃಖವಾಯಿತು. ಸಿನಿಮಾದ ನೈಜ ಪ್ರತೀಕವಾದ ಅವರು ಹಲವಾರು ಚಲನಚಿತ್ರಗಳಲ್ಲಿ ತಮ್ಮ ಬಹುಮುಖ ನಟನೆಯೊಂದಿಗೆ ಬೆಳ್ಳಿ ಪರದೆಯನ್ನು ಅಲಂಕರಿಸಿದವರು. ಅವರ ವೈವಿಧ್ಯಮಯ ಪಾತ್ರಗಳು ಮತ್ತು ಅದ್ಭುತ ಪ್ರತಿಭೆಯನ್ನು ಸದಾ ಸ್ಮರಿಸಲಾಗುತ್ತದೆ ಮತ್ತು ಪ್ರಶಂಸಿಸಲಾಗುತ್ತದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ.” ಎಂದು ಮೋದಿ ಅವರು ಹೇಳಿದ್ದಾರೆ.

ಕನ್ನಡ ಚಿತ್ರರಂಗದ ಹೆಸರಾಂತ ನಟಿ ಲೀಲಾವತಿ ಅವರ ನಿಧನದ ಸುದ್ದಿ ಕೇಳಿ ದುಃಖವಾಯಿತು. ಸಿನಿಮಾದ ನೈಜ ಪ್ರತೀಕವಾದ ಅವರು ಹಲವಾರು ಚಲನಚಿತ್ರಗಳಲ್ಲಿ ತಮ್ಮ ಬಹುಮುಖ ನಟನೆಯೊಂದಿಗೆ ಬೆಳ್ಳಿ ಪರದೆಯನ್ನು ಅಲಂಕರಿಸಿದವರು. ಅವರ ವೈವಿಧ್ಯಮಯ ಪಾತ್ರಗಳು ಮತ್ತು ಅದ್ಭುತ ಪ್ರತಿಭೆಯನ್ನು ಸದಾ ಸ್ಮರಿಸಲಾಗುತ್ತದೆ ಮತ್ತು ಪ್ರಶಂಸಿಸಲಾಗುತ್ತದೆ. ಅವರ ಕುಟುಂಬ…

— Narendra Modi (@narendramodi) December 8, 2023

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಅಗಲಿಕೆಯ ಸುದ್ದಿ ನೋವುಂಟು ಮಾಡಿದೆ. ಅವರ ಆತ್ಮಕ್ಕೆ ಶಾಂತಿ ದೊರಕಲಿ ಹಾಗು ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. pic.twitter.com/SB7d9hAbhs

— H D Deve Gowda (@H_D_Devegowda) December 8, 2023

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಅಗಲಿಕೆಯ ಸುದ್ದಿ ನೋವುಂಟುಮಾಡಿದೆ. ಕಳೆದ ವಾರವಷ್ಟೇ ಅವರು ಅನಾರೋಗ್ಯಕ್ಕೀಡಾದ ವಿಚಾರ ತಿಳಿದು ಅವರ ಮನೆಗೆ ಭೇಟಿನೀಡಿ ಆರೋಗ್ಯ ವಿಚಾರಿಸಿ ಪುತ್ರ ವಿನೋದ್ ರಾಜ್ ಅವರೊಂದಿಗೆ ಮಾತನಾಡಿದ್ದೆ. ಹಲವು ದಶಕಗಳ ಕಾಲ ತಮ್ಮ‌ ಮನೋಜ್ಞ ಅಭಿನಯದ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದ ಲೀಲಾವತಿ ಅವರು ಗುಣಮುಖರಾಗಿ ಇನ್ನಷ್ಟು ಕಾಲ ನಮ್ಮ ನಡುವೆ ಇರುತ್ತಾರೆಂಬ ನನ್ನ ನಂಬಿಕೆ ಹುಸಿಯಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಅಗಲಿಕೆಯ ಸುದ್ದಿ ನೋವುಂಟುಮಾಡಿದೆ. ಕಳೆದ ವಾರವಷ್ಟೇ ಅವರು ಅನಾರೋಗ್ಯಕ್ಕೀಡಾದ ವಿಚಾರ ತಿಳಿದು ಅವರ ಮನೆಗೆ ಭೇಟಿನೀಡಿ ಆರೋಗ್ಯ ವಿಚಾರಿಸಿ ಪುತ್ರ ವಿನೋದ್ ರಾಜ್ ಅವರೊಂದಿಗೆ ಮಾತನಾಡಿದ್ದೆ.

ಹಲವು ದಶಕಗಳ ಕಾಲ ತಮ್ಮ‌ ಮನೋಜ್ಞ ಅಭಿನಯದ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದ ಲೀಲಾವತಿ ಅವರು ಗುಣಮುಖರಾಗಿ… pic.twitter.com/5D9orugWet

— Siddaramaiah (@siddaramaiah) December 8, 2023

ಕನ್ನಡ ಚಿತ್ರರಂಗದ ಶ್ರೇಷ್ಠ ನಟಿಯರಲ್ಲಿ ಒಬ್ಬರು, ಬಹುಭಾಷಾ ಕಲಾವಿದರಾದ ಲೀಲಾವತಿ ಅವರ ನಿಧನದ ವಾರ್ತೆ ಕೇಳಿ ಬಹಳ ನೋವುಂಟಾಯಿತು. ನಾಯಕಿಯಾಗಿ ಮಾತ್ರವಲ್ಲದೆ, ಪೋಷಕ ಪಾತ್ರಗಳಿಗೂ ಜೀವ ತುಂಬಿ ಬೆಳ್ಳಿತೆರೆಯ ಮೇಲೆ ಅವುಗಳ ಹೆಜ್ಜೆಗುರುತುಗಳು ಮೂಡುವಂತೆ ಮಾಡಿದವರು ಅವರು. ಅಮ್ಮ, ಅಕ್ಕ, ಅತ್ತೆ ಸೇರಿ ಅನೇಕ ಪಾತ್ರಗಳಲ್ಲಿ ಪರಕಾಯ ಪ್ರವೇಶ ಮಾಡಿ ನಟಿಸುತ್ತಿದ್ದರು. ಭಕ್ತ ಕುಂಬಾರ, ವೀರ ಕೇಸರಿ, ಭಾಗ್ಯದೇವತೆ, ಸೋತು ಗೆದ್ದವಳು, ನಂದಾದೀಪ, ವಿಧಿ ವಿಲಾಸ, ಸಂತ ತುಕಾರಾಂ, ರಣಧೀರ ಕಂಠೀರವ ಸೇರಿ ಅವರು ನಟಿಸಿದ್ದ ಅನೇಕ ಚಿತ್ರಗಳು ಕನ್ನಡಿಗರ ಮನೆ ಮನಗಳನ್ನು ತುಂಬಿರುತ್ತವೆ. ಲೀಲಾವತಿ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಪುತ್ರ ವಿನೋದ್ ರಾಜ್ ಅವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಕುಮಾರಸ್ವಾಮಿ ಅವರು ಶೋಕ ವ್ಯಕ್ತಪಡಿಸಿದ್ದಾರೆ.

ಕನ್ನಡ ಚಿತ್ರರಂಗದ ಶ್ರೇಷ್ಠ ನಟಿಯರಲ್ಲಿ ಒಬ್ಬರು, ಬಹುಭಾಷಾ ಕಲಾವಿದರಾದ ಲೀಲಾವತಿ ಅವರ ನಿಧನದ ವಾರ್ತೆ ಕೇಳಿ ಬಹಳ ನೋವುಂಟಾಯಿತು. ನಾಯಕಿಯಾಗಿ ಮಾತ್ರವಲ್ಲದೆ, ಪೋಷಕ ಪಾತ್ರಗಳಿಗೂ ಜೀವ ತುಂಬಿ ಬೆಳ್ಳಿತೆರೆಯ ಮೇಲೆ ಅವುಗಳ ಹೆಜ್ಜೆಗುರುತುಗಳು ಮೂಡುವಂತೆ ಮಾಡಿದವರು ಅವರು. ಅಮ್ಮ, ಅಕ್ಕ, ಅತ್ತೆ ಸೇರಿ ಅನೇಕ ಪಾತ್ರಗಳಲ್ಲಿ ಪರಕಾಯ ಪ್ರವೇಶ ಮಾಡಿ… pic.twitter.com/lVu2kBkgnw

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 8, 2023

ಹಿರಿಯ ನಟಿ ಲೀಲಾವತಿ ಅವರ ಅಗಲಿಕೆಯ ಸುದ್ದಿ ಅತೀವ ದುಃಖ ಉಂಟುಮಾಡಿದೆ. ಇತ್ತೀಚೆಗಷ್ಟೇ ಅವರು ನೆಲಮಂಗಲ ಬಳಿಯ ಸೋಲದೇವನಹಳ್ಳಿಯಲ್ಲಿ ನಿರ್ಮಿಸಿದ್ದ ಪಶು ಆಸ್ಪತ್ರೆಯನ್ನು ಉದ್ಘಾಟಿಸಿದ್ದೆ. ಸಂಕಷ್ಟದಲ್ಲಿದ್ದರೂ ಸಮಾಜ ಸೇವೆ ಮಾಡಬೇಕೆನ್ನುವ ಅವರ ಕಳಕಳಿ ನನ್ನ ಹೃದಯ ಮುಟ್ಟಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಪುತ್ರ ವಿನೋದ್‌ ರಾಜ್‌ ಕುಟುಂಬವರ್ಗದವರು ಹಾಗೂ ಅಭಿಮಾನಿಗಳ ನೋವಿನಲ್ಲಿ ನಾನೂ ಕೂಡ ಭಾಗಿ ಎಂದಿದ್ದಾರೆ ಡಿಸಿಎಂ ಡಿ.ಕೆ.ಶಿವಕುಮಾರ್.

ಹಿರಿಯ ನಟಿ ಲೀಲಾವತಿ ಅವರ ಅಗಲಿಕೆಯ ಸುದ್ದಿ ಅತೀವ ದುಃಖ ಉಂಟುಮಾಡಿದೆ. ಇತ್ತೀಚೆಗಷ್ಟೇ ಅವರು ನೆಲಮಂಗಲ ಬಳಿಯ ಸೋಲದೇವನಹಳ್ಳಿಯಲ್ಲಿ ನಿರ್ಮಿಸಿದ್ದ ಪಶು ಆಸ್ಪತ್ರೆಯನ್ನು ಉದ್ಘಾಟಿಸಿದ್ದೆ. ಸಂಕಷ್ಟದಲ್ಲಿದ್ದರೂ ಸಮಾಜ ಸೇವೆ ಮಾಡಬೇಕೆನ್ನುವ ಅವರ ಕಳಕಳಿ ನನ್ನ ಹೃದಯ ಮುಟ್ಟಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಂತನಲ್ಲಿ… pic.twitter.com/vxiUH5ceKB

— DK Shivakumar (@DKShivakumar) December 8, 2023
ಕನ್ನಡ ಚಿತ್ರರಂಗದ ಅಮ್ಮ ಲೀಲಾವತಿ ಇನ್ನಿಲ್ಲ
Tags: cinemackcknewsnowkannada actressleelavathi
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಗಾಂಧಿ ಜಯಂತಿಗೂ ಮುನ್ನವೇ ಪಬ್ ಒಪೆನ್!

ಸದನದಲ್ಲಿ ಪ್ರತಿಧ್ವನಿಸಿದ 140 ಕೋಟಿ ರೂ. ಮಾಧ್ಯಮ ಪ್ರಚಾರದ ವೆಚ್ಚ

Leave a Reply Cancel reply

Your email address will not be published. Required fields are marked *

Recommended

ಅಖಿಲ ಭಾರತ ಕೋಟಾ: MBBS ಸೇರಿ ವೈದ್ಯ ಕೋರ್ಸುಗಳಲ್ಲಿ ಒಬಿಸಿಗೆ 27%, ಆರ್ಥಿಕ ದುರ್ಬಲರಿಗೆ 10% ಮೀಸಲು

ಅಖಿಲ ಭಾರತ ಕೋಟಾ: MBBS ಸೇರಿ ವೈದ್ಯ ಕೋರ್ಸುಗಳಲ್ಲಿ ಒಬಿಸಿಗೆ 27%, ಆರ್ಥಿಕ ದುರ್ಬಲರಿಗೆ 10% ಮೀಸಲು

5 years ago
ಚಿನ್ನದ ನಾಡಿಗೆ ಆಪಲ್‌ ಗರಿ; ಜಿಲ್ಲೆಯಲ್ಲಿ ಐಫೋನ್‌ ಹವಾ! ಯುವಜನರಿಗೆ ಸ್ಟೀವ್‌ ಜಾಬ್ಸ್‌ ಕನವರಿಕೆ!!

ಸಿಇಟಿ- 2021 ಪರೀಕ್ಷೆಗೆ ಆನ್‌ಲೈನ್‌ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ