• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS CRIME

ಮಗಳಿಗಾಗಿ ಸೋದರ ಮಾವನನ್ನೇ ಮುಗಿಸಿದ ಪೊಲೀಸ್ ಪೇದೆ

cknewsnow desk by cknewsnow desk
December 25, 2023
in CRIME, STATE
Reading Time: 1 min read
0
ಚೋಳಮಂಡಲಂ ಫೈನಾನ್ಸ್‌ಗೇ ಖದೀಮರ ಟೋಪಿ

ಸಾಂದರ್ಭಿಕ ಚಿತ್ರ

1.1k
VIEWS
FacebookTwitterWhatsuplinkedinEmail

ಖತರ್ನಾಕ್ ಪೇದೆಯನ್ನು ಚಾಣಾಕ್ಷತೆಯಿಂದ ಹಿಡಿದು ಜೈಲಿಗಟ್ಟಿದ ಪೊಲೀಸರು

by Ramasamudra S Veerabhadra Swamy from gnews5.com

ಚಾಮರಾಜನಗರ: ಕೊಲೆ ಪ್ರಕರಣಕ್ಕೆ ಸಂಬಂದಿಸಿ ಚಾಮರಾಜನಗರ ಪೊಲೀಸ್ ಪೇದೆಯೊಬ್ಬನನ್ನು ಮೈಸೂರು ಗ್ರಾಮಾಂತರ ಪೊಲೀಸರು ಜೈಲಿಗೆ ಕಳಿಸಿದ್ದಾರೆ.

ಚಾಮರಾಜನಗರ ಸಶಸ್ತ್ರ ಮೀಸಲು ಪಡೆಯ ಪೇದೆ ಮಹೇಶ್ ಹಾಗೂ ಕೊಲೆಗೆ ಸಹಕರಿಸಿದ ಮತ್ತೊಬ್ಬನ್ನು ಜೈಲಿಗಟ್ಟಲಾಗಿದೆ.

ಇನ್ನೊಬ್ಬ ಆರೋಪಿ ತಲೆ ಮರೆಸಿಕೊಂಡಿದ್ದು, ಮೈಸೂರು ಗ್ರಾಮಾಂತರ ಪೊಲೀಸರು ಆತನ ‌ಬಂಧನಕ್ಕೆ‌ ಬಲೆ ಬೀಸಿದ್ದಾರೆ.

ಇಲಾಖೆಯೊಳಗೆ ಇಂತಹ ಕುಕೃತ್ಯಕ್ಕೆ ಪರೋಕ್ಷವಾಗಿ ಕಾರಣರಾದ ಡಿವೈಸ್ಪಿ ಅವರ ಮೇಲೆ ಕ್ರಮ ಏಕಿಲ್ಲ? ಎಂಬ ಪ್ರಶ್ನೆ ಸಿಬ್ಬಂದಿ ವಲಯದಲ್ಲಿ ಚರ್ಚೆಗೆ ಗ್ರಾಸ ಒದಗಿಸಿದೆ.

ಮಗಳ ಮೇಲೆ ಮೋಹ, ಮಾವನ ಜೀವಕ್ಕೆ ಕುತ್ತು

ಚಾಮರಾಜನಗರ ಸಶಸ್ತ್ರ ಮೀಸಲು ಪಡೆಯ ಪೇದೆ ಮಹೇಶ್ ಆತನ ಸಂಗಡಿಗರು, ಆತನ ಸೋದರ ಮಾವವನ್ನು ವರುಣಾ ಠಾಣಾ ವ್ಯಾಪ್ತಿಯಲ್ಲಿ ಕಾರಿನೊಳಗೆ ಕೊಲೆ ಮಾಡಿ ಕೂಡನಹಳ್ಳಿ ಸಮೀಪದ ರಸ್ತೆಯಲ್ಲಿ ಬಿಸಾಡಿದ್ದರು.

ನಂತರ ಏನೂ ತಿಳಿಯದಂತೆ ಕೊಲೆಯಾದ ವ್ಯಕ್ತಿಯ ಸಂಬಂಧಿಕರ ಜತೆಯಲ್ಲಿಯೇ ಪೇದೆಯೂ ಸೇರಿ ಹುಡುಕಾಟದ ಡ್ರಾಮಾ ಮಾಡಿದ್ದ. ಮೈಸೂರು ಗ್ರಾಮಾಂತರ ಪೊಲೀಸರಿಗೆ ಸಿಕ್ಕ ಶವ ಮೇಲ್ನೊಟಕ್ಕೆ ಕೊಲೆಯಾದಂತೆ ಕಂಡು ಬಂದದ್ದರಿಂದ ಪ್ರಕರಣವನ್ನು ಗಂಬೀರವಾಗಿ ಪರಿಗಣಿಸಿ ತನಿಖೆ ನಡೆಸಿದಾಗ ಕೊಲೆ ಮಾಡಿದವರ ಜಾಡು ಸಿಕ್ಕಿತು. ಆರೋಪಿಗಳನ್ನು ಜೈಲಿಗಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಸ್ತ್ರೀ ವ್ಯಾಮೋಹವೇ ಸೋದರ ಮಾವನ ಕೊಲೆಗೆ ಕಾರಣ ಎಂದು ತಿಳಿದುಬಂದಿದೆ. ಸೋದರ ಮಾವನ ಮಗಳನ್ನು ಇಷ್ಟಪಡುತ್ತಿದ್ದ ಪೇದೆ, ಆಕೆ ವಿವಾಹವಾಗಿ ವಿದೇಶಕ್ಕೆ ಹೋಗಬಹುದಾದ ಹಿನ್ನಲೆಯಲ್ಲಿ ಆಕೆ ವಿದೇಶಕ್ಕೆ ಹೋಗುವುದನ್ನು ತಪ್ಪಿಸಲು ಆಕೆಯ ಅಪ್ಪ ನಿವೃತ್ತ ಶಿಕ್ಷಕ ನಾಗರಾಜು ಅವರನ್ನು ಸಾಯಿಸಿದರೆ ಹೇಗೆ ಎಂಬ ಲೆಕ್ಕಾಚಾರ ಹಾಕಿ ಆತನ ಕಥೆ ಮುಗಿಸಿದ್ದಾರೆ.

ಒನ್ ಸೈಡ್ ಲವ್

ವಿಪರ್ಯಾಸವೆಂದರೆ ಆಕೆಗೆ ಈತನು ಇಷ್ಟವಿರಲಿಲ್ಲ, ಈತ ವಿವಾಹವಾಗಿದ್ದರೂ ಒನ್ ಸೈಡ್ ಲವ್ ಗೆ ತನ್ನ ಸೋದರ ಮಾವನನ್ನೇ ಕೊಲೆ ಮಾಡಿರುವುದು ದುರಂತ.

ಬಹಳ ಕ್ಲಿಷ್ಟಕರವಾದ ಈ ಕೊಲೆ ಪ್ರಕರಣ ಭೇದಿಸಲು ಪೊಲೀಸರ ಪಟ್ಟ ಸಾಹಸ ಅಷ್ಟಿಷ್ಟಲ್ಲ.ಮೊಬೈಲ್ ನೆಟ್ ವರ್ಕ್ ಕೂಡ ಸಿಗದ ಹಾಗೆ ಚಾಣಕ್ಷತನ ಮೆರೆದ ಈ ಪೊಲೀಸ್ ಪೇದೆಯನ್ನು ಎಸ್ಪಿ ಸೀಮಾ ಲಾಟ್ಕರ್ ಅವರ ಮಾರ್ಗದರ್ಶನದಲ್ಲಿ ಮೈಸೂರು ಗ್ರಾಮಾಂತರ ವ್ಯಾಪ್ತಿಯ ಆರಕ್ಷಕ ವೃತ್ತ ನಿರೀಕ್ಷಕ ಶಿವನಂಜಶೆಟ್ಟಿ, ವರುಣಾ ಠಾಣೆಯ ಆರಕ್ಷಕ ಉಪ ನಿರೀಕ್ಷಕರಾದ ಚೇತನ್ ,ಸೆನ್ ವಿಭಾಗದ ಆರಕ್ಷಕ ನಿರೀಕ್ಷಕ ಪುರುಷೋತ್ತಮ್ ಹಾಗೂ ಸಿಬ್ಬಂದಿ ಆರೋಪಿಗಳನ್ನು ಪತ್ತೆ ಹಚ್ಚಿ ಜೈಲಿಗಟ್ಟಿದ್ದಾರೆ.

ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿ ಮಹೇಶ್ ಸತತವಾಗಿ ಏಳೆಂಟು ವರ್ಷಗಳ ಕಾಲ ಜಿಲ್ಲಾ ಕೇಂದ್ರದಲ್ಲಿ ಇರದೆ ಮೇಲಧಿಕಾರಿ ಡಿವೈಸ್ಪಿ ಅವರಿಗೆ ಆಮೀಷವೊಡ್ಡಿ ತಾನು ಬೇರೆ ಬೇರೆ ಚಟುವಟಿಕೆಗಳನ್ನು ರಾಜಾರೋಷವಾಗಿ ಮಾಡಿಕೊಂಡಿದ್ದ ಎನ್ನಲಾಗಿದೆ.

ಈ ಕೊಲೆಯ ಸಂದರ್ಭದಲ್ಲೂ ಆತ ಕೊಲೆಯಾದ ಸ್ಥಳದಲ್ಲಿ ಇದ್ದರೂ ಚಾಮರಾಜನಗರ ಶಸಸ್ತ್ರ ಮೀಸಲು ಪಡೆಯ ಹಾಜರಾತಿಯಲ್ಲಿ ವಿಚಾರಣೆ ಆರಂಭವಾಗುತ್ತಿದ್ದಂತೆ ಇಲಾಖೆಯ ಮೇಲಧಿಕಾರಿಗಳಲ್ಲಿ ಕೆಲವರು ಈತನ ರಕ್ಷಣೆಗೆ ನಿಂತಿದ್ದರು ಎನ್ನುವ ಮಾತು ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ.

ಮೇಲಧಿಕಾರಿಗಳು ಈತನ ಟವರ್ ಲೋಕೆಷನ್ ಹಾಗೂ ಸಿಡಿಆರ್ ತನಿಖೆ ಮಾಡಿ ಆತನಿಗೆ ಅನಧಿಕೃತ ಗೈರುಹಾಜರಿ ಸಂಬಂದ ಎಚ್ಚರಿಕೆ ನೀಡಿದ್ದಿದ್ದರೆ ಈ ಕೊಲೆಯನ್ನು ತಪ್ಪಿಸಬಹುದಿತ್ತು.

ಈಗಾಗಲೆ ವಿವಿಧ ಪ್ರತ್ಯೇಕ ಕ್ರಿಮಿನಲ್ ಚಟುವಟಿಕೆಗಳಲ್ಲಿ ಭಾಗಿಯಾದ ಇಬ್ಬರು ಪೇದೆಗಳನ್ನು ಅಮಾನತು ಮಾಡಲಾಗಿದೆ ಎಂದು ಜಿಲ್ಲಾ ಎಸ್ಪಿ ಪದ್ಮಿನಿ ಸಾಹೊ ಅವರು ತಿಳಿಸಿದ್ದಾರೆ.

Tags: chamarajanagarackcknewsnowconstablecrimemurder by police constableMysurupolice
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಅಖಂಡ ಭಾರತದ ಅಷ್ಟದಿಕ್ಕುಗಳ ಆಮೂಲಾಗ್ರ ಅಭಿವೃದ್ಧಿಗೆ ಸುವರ್ಣ ಅಧ್ಯಾಯ ಬರೆದವರೇ ಅಜಾತಶತ್ರು ಅಟಲ್‌ ಬಿಹಾರಿ ವಾಜಪೇಯಿ

ಅಟಲ್ ಎಂದರೆ ಅಜಾತಶತ್ರು

Leave a Reply Cancel reply

Your email address will not be published. Required fields are marked *

Recommended

ರಾಜ್ಯದಲ್ಲಿ ಮತ್ತೆ ತಲೆ ಎತ್ತಲಿದೆಯಾ ಮೈನಿಂಗ್‌ ಮಾಫಿಯಾ? ಇನ್ನೂ 100 ಕಡೆ ಮೈನಿಂಗ್‌ಗೆ ಅವಕಾಶ ಇದೆ ಎಂದ ಸಚಿವ ಮುರುಗೇಶ್‌ ನಿರಾಣಿ

ರಾಜ್ಯದಲ್ಲಿ ಮತ್ತೆ ತಲೆ ಎತ್ತಲಿದೆಯಾ ಮೈನಿಂಗ್‌ ಮಾಫಿಯಾ? ಇನ್ನೂ 100 ಕಡೆ ಮೈನಿಂಗ್‌ಗೆ ಅವಕಾಶ ಇದೆ ಎಂದ ಸಚಿವ ಮುರುಗೇಶ್‌ ನಿರಾಣಿ

4 years ago
ಅಪಘಾತದಲ್ಲಿ ಗಾಯಗೊಂಡಿದ್ದ ತೆಲುಗು ನಟ, ಸಿನಿಮಾ ವಿಮರ್ಶಕ ಕತ್ತಿ ಮಹೇಶ್ ಇನ್ನಿಲ್ಲ

ಅಪಘಾತದಲ್ಲಿ ಗಾಯಗೊಂಡಿದ್ದ ತೆಲುಗು ನಟ, ಸಿನಿಮಾ ವಿಮರ್ಶಕ ಕತ್ತಿ ಮಹೇಶ್ ಇನ್ನಿಲ್ಲ

4 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ