• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home EDITORS'S PICKS

ಸಾಕ್ಷಾತ್ ಶ್ರೀರಾಮರೇ ಪ್ರತಿಷ್ಠಾಪಿಸಿದ ಗುಡಿಬಂಡೆ ಶ್ರೀ ರಾಮಲಿಂಗೇಶ್ವರ ದೇವರಿಗೆ ಜ.22ಕ್ಕೆ ಲಿಂಗಾಭಿಷೇಕ

cknewsnow desk by cknewsnow desk
January 13, 2024
in EDITORS'S PICKS, STATE
Reading Time: 2 mins read
0
ಸಾಕ್ಷಾತ್ ಶ್ರೀರಾಮರೇ ಪ್ರತಿಷ್ಠಾಪಿಸಿದ ಗುಡಿಬಂಡೆ ಶ್ರೀ ರಾಮಲಿಂಗೇಶ್ವರ ದೇವರಿಗೆ ಜ.22ಕ್ಕೆ ಲಿಂಗಾಭಿಷೇಕ
1.2k
VIEWS
FacebookTwitterWhatsuplinkedinEmail

ಅಯೋಧ್ಯೆಯಲ್ಲಿ ಶ್ರೀರಾಮರ ಪ್ರಾಣ ಪ್ರತಿಷ್ಠೆ ದಿನವೇ ಕಾರ್ಯಕ್ರಮ

by GS Bharath Gudibande

ಗುಡಿಬಂಡೆ: ಜನವರಿ 22ರಂದು ಅಯೋಧ್ಯೆಯ ರಾಮ ಮಂದಿರದಲ್ಲಿ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ನಡೆಯಲಿದ್ದು, ಅದೇ ದಿನ ಗುಡಿಬಂಡೆಯ ಸುರಸದ್ಮಗಿರಿ ಬೆಟ್ಟದಲ್ಲಿ ಸ್ವತಃ ಶ್ರೀರಾಮನಿಂದ ಪ್ರತಿಷ್ಠಾಪಿಸಲ್ಪಟ್ಟಿದೆ ಎಂದು ನಂಬಲಾಗಿರುವ ಶ್ರೀ ರಾಮಲಿಂಗೇಶ್ವರ ದೇವರಿಗೆ ಲಿಂಗಾಭಿಷೇಕ ನಡೆಯಲಿದೆ.

“ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠೆಗೆ ಇನ್ನು ಕೇವಲ 9 ದಿನಗಳು ಉಳಿದಿವೆ. ಇಡೀ ದೇಶವೇ ಈ ಪವಿತ್ರ ಸಂದರ್ಭಕ್ಕೆ ಸಾಕ್ಷಿಯಾಗಲಿದೆ. ಅದೇ ದಿನ ತಮ್ಮ ಊರಿನಲ್ಲಿ ನೆಲೆಸಿರುವ ಶ್ರೀ ರಾಮಲಿಂಗೇಶ್ವರ ದೇವರಿಗೆ ಅಭಿಷೇಕ ನೆರೆವರಿಸಲು ಪಟ್ಟಣ ಜನರು ತಯಾರಿ ಮಾಡಿಕೊಂಡಿದ್ದಾರೆ.

ಸುರ’ ಎಂದರೆ ದೇವತೆ, ‘ಸದ್ಮ’ ಎಂದರೆ ನಿವಾಸ. ಅಂದರೆ ದೇವರ ನಿವಾಸವಾಗಿರುವುದರಿಂದ ಗುಡಿಬಂಡೆಯ ಬೆಟ್ಟಕ್ಕೆ ಸುರಸದ್ಮಗಿರಿ ಎಂಬ ಹೆಸರು ಬಂದಿದೆ.

ಬೆಟ್ಟದ ಶಿಖರ ಭಾಗದಲ್ಲಿ ಎರಡು ದೇವಸ್ಥಾನಗಳಿದ್ದು, ಒಂದರಲ್ಲಿ ಶಿವಲಿಂಗವನ್ನು, ಮತ್ತೊಂದರಲ್ಲಿ ಶ್ರೀ ಪಾರ್ವತಿ ದೇವಿಯನ್ನು ಪ್ರತಿಷ್ಠಾಪಿಸಲಾಗಿದೆ. ನೂರಾರು ವರ್ಷಗಳಿಂದಲೂ ಈ ತಾಣ ಜನರ ಪಾಲಿಗೆ ಪುಣ್ಯನೆಲೆಯಾಗಿದೆ.

ಶ್ರೀರಾಮರಿಂದ ಪ್ರತಿಷ್ಠಾಪಿಸಲ್ಪಟ್ಟ ಶಿವಲಿಂಗ

ಸ್ಥಳ ಪುರಾಣದ ರೀತ್ಯ, ಇದು ದಂಡಕಾರಣ್ಯ ಪ್ರದೇಶವಾಗಿತ್ತು. ಈ ಸ್ಥಳ ಪುರಾಣ ಕಾಲದಲ್ಲಿ ಸೀತಾರಾಮ, ಲಕ್ಷ್ಮಣರು ಸಂಚರಿಸಿದ್ದರಂತೆ.

ರಾವಣನನ್ನು ವಧಿಸಿದ ನಂತರ ಬ್ರಹ್ಮಹತ್ಯಾ ದೋಷದ ನಿವಾರಣೆಗಾಗಿ ಶ್ರೀರಾಮನು 108 ಲಿಂಗಗಳನ್ನು ಪ್ರತಿಷ್ಠಾಪಿಸುತ್ತಾ, ಅದರಲ್ಲಿ ಒಂದನ್ನು ಸುರಸದ್ಮಗಿರಿಯಲ್ಲಿ ಪ್ರತಿಷ್ಠಾಪಿಸಿದ್ದನೆಂದು; ಹಾಗಾಗಿ ಆಪರೂಪದ ಜ್ಯೋತಿರ್ಲಿಂಗಕ್ಕೆ ರಾಮೇಶ್ವರ ಎಂಬ ಹೆಸರು ಬಂತೆಂದು ಮೂಲಗಳು ತಿಳಿಸುತ್ತವೆ.

ಬ್ರಹ್ಮಾಂಡ ಪುರಾಣದಲ್ಲಿ ಉಲ್ಲೇಖ

ಗುಡಿಬಂಡೆ ಇತಿಹಾಸದ ಬಗ್ಗೆ ಬ್ರಹ್ಮಾಂಡ ಪುರಾಣದಲ್ಲಿ ಉಲ್ಲೇಖವಾಗಿದೆ. ಸುರಸದ್ಮಗಿರಿ ಬೆಟ್ಟದ ಮೇಲಿನ ಲಿಂಗವು ಶ್ರೀರಾಮನಿಂದ ಪ್ರತಿಷ್ಠೆ ಮಾಡಲ್ಪಟ್ಟಿದೆ. ಹಾಗಾಗಿ ಇದನ್ನು ರಾಮಲಿಂಗೇಶ್ವರ ಎಂಬ ಹೆಸರು ಬಂದಿದೆ ಎಂದು ಪಂಡಿತರು ಹೇಳುತ್ತಾರೆ.

ಪ್ರತೀ ವರ್ಷ ಕುಂಭಾಬಿಕ್ಷೇಕ

ಕುಂಭಾಭಿಷೇಕದ ಪ್ರಯುಕ್ತ ಮೂರು ದಿನ ವಿಶೇಷವಾದ ಪೂಜಾ ಕಾರ್ಯ ಇಲ್ಲಿ ನಡೆಯುತ್ತದೆ. ಸೋಮವಾರ ಶಿವಲಿಂಗದ (ರಾಮೇಶ್ವರನ) ಸುತ್ತ ಮಣ್ಣಿನ ಕಟ್ಟೆಯನ್ನು ಕಟ್ಟಿ ಸುರಸದ್ಮಗಿರಿಯಲ್ಲಿ (ಬೆಟ್ಟದ ಮೇಲೆ) ಇರುವ ಎಂಟು ಪ್ರಮುಖ ದೊಣೆ (ಕೊಳಗಳು), ಐದು ಉಪ ದೊಣೆಗಳೂ ಸೇರಿದಂತೆ 13 ದೊಣೆಗಳಿದ್ದು, ಆ ಎಲ್ಲ ಮಣ್ಣಿನ ಮಡಕೆಗಳಿಂದ ನೀರನ್ನು ತಂದು ರಾಮೇಶ್ವರನ ಸುತ್ತಾ ಕಟ್ಟಿರುವ ಕಟ್ಟೆ ತುಂಬುವತನಕ ಅಭಿಷೇಕ ಮಾಡಲಾಗುತ್ತದೆ.

ದೊಣೆಯಿಂದ ದೇವಾಲಯದವರೆಗೆ ಮಕ್ಕಳು, ಮಹಿಳೆಯರು ಸೇರಿದಂತೆ ನೂರಾರು ಜನರು ಸಾಲಾಗಿ ನಿಂತು ಅಭಿಷೇಕಕ್ಕೆ ನೀರು ಒದಗಿಸುತ್ತಾರೆ.

ಕುಂಭಾಭಿಷೇಕದ ಮುಖ್ಯ ಉದ್ದೇಶ, ಈ ಪ್ರದೇಶದಲ್ಲಿ ಉತ್ತಮ ಮಳೆ ಬಿದ್ದು ಒಳ್ಳೆಯ ಬೆಳೆಯಾಗಿ ಜನರು ಸುಖ ಸಂತೋಷದಿಂದ ಜೀವಿಸಲೆಂದು ಕುಂಭಾಭಿಷೇಕವನ್ನು ಪ್ರತಿ ವರ್ಷವು ಮಾಡಲಾಗುತ್ತದೆ.

ಕುಂಭಾಭಿಷೇಕದ ಪ್ರಯುಕ್ತ ಶಾಲಾ ಕಾಲೇಜು ಮಕ್ಕಳು, ಮಹಿಳೆಯರು, ಹಿರಿಯರು, ಸೇರಿದಂತೆ ಜಿಲ್ಲೆಯ ನಾನಾ ಮೂಲೆಗಳಿಂದ ನೂರಾರು ಜನರು ಉತ್ಸಾಹದಿಂದ ಬೆಟ್ಟವನ್ನು ಏರಿ ಶ್ರೀರಾಮ ಪ್ರತಿಷ್ಠಾಪಿಸಿದ ಶ್ರೀರಾಮಲಿಂಗವನ್ನು ದರ್ಶನ ಪಡೆಯುತ್ತಾರೆ. ಇದು ನಿರಂತರವಾಗಿ ನಡೆದುಕೊಂಡು ಬಂದಿರುವ ಸಂಪ್ರದಾಯವಾಗಿದೆ.

ಯಾರು ಏನು ಹೇಳುತ್ತಾರೆ?

ಗುಡಿಬಂಡೆ ಇತಿಹಾಸ ಡಿಜಿಟಲೀಕರಣ

ರಾಮನ ಹೆಸರಿನಲ್ಲಿ ಜ.21ರಂದು ಗುಡಿಬಂಡೆ ಪಟ್ಟಣದ ಶ್ರೀ ತ್ರಿಮತಾಚಾರ್ಯ ಗಾಯತ್ರಿ ಮಂದಿರದಲ್ಲಿ ಸಂಕಲ್ಪ- ಸಂಸ್ಕರಣೆ- ಸಂಯೋಜನೆಯ ದೀಕ್ಷಾನುಷ್ಠಾನ ಸಮಾರಂಭ ಮಾಡುತ್ತಿದ್ದೇವೆ. ಗುಡಿಬಂಡೆಗೆ ಸಂಬಂಧಿಸಿದ ಎಲ್ಲ ಇತಿಹಾಸವನ್ನು ಡಿಜಿಟಲೈಜೇಷನ್ ಮಾಡಲು ತೀರ್ಮಾನ ಮಾಡಿದ್ದು, ಇದಕ್ಕೆ ಪೂರಕವಾಗಿ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ರೀಸರ್ಚ್, ಬೆಂಗಳೂರಿನ ಜ್ಯೋತಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಹಾಗೂ ಶೃಂಗೇರಿ ಮಠ ಸೇರಿ ಭಾರತದ ಸಂಸ್ಕೃತಿಯ ಬಗ್ಗೆ ಸಂಶೋಧನೆ ಮಾಡುತ್ತಿದ್ದೇವೆ. ಡಾ.ಪದ್ಮಶ್ರೀ ಹಾಗೂ ಡಾ.ವೆಂಕಟೇಶ್ ಅವರು ನಮ್ಮ ಜೊತೆಗೆ ಎಂಒಯು ಮಾಡಿಕೊಂಡಿದ್ದಾರೆ. ನಾವು ಕ್ಯಾಟ್ ಲಾಗ್ ಮಾಡಿದ್ದೆವು. ಅದನ್ನು ಈಗ ಡಿಜಿಟಲ್ ಮಾಡಿ ಸಂರಕ್ಷಣೆ ಮಾಡಲು ಪ್ರಯತ್ನ ಮಾಡುತ್ತಿದ್ದೇವೆ ಎಂದು ಉಪನ್ಯಾಸಕರು ಹಾಗೂ ಶ್ರೀ ತ್ರಿಮತಾಚಾರ್ಯ ಗಾಯಿತ್ರಿ ಮಂದಿರದ ಮುಖ್ಯಸ್ಥರಾದ ಸ.ನ ನಾಗೇಂದ್ರ ಅವರು ಸಿಕೆನ್ಯೂಸ್ ನೌ ಜತೆ ಮಾತನಾಡುತ್ತಾ ತಿಳಿಸಿದ್ದಾರೆ.

ಶ್ರೀರಾಮನಿಗೆ ಅರ್ಪಣೆ

ನಮ್ಮ ಮನೆಯಲ್ಲಿ 9 ರೀತಿಯ ರಾಮಾಯಣಗಳು ಇವೆ. ಅವುಗಳನ್ನು ಮುಂದಿನ ದಿನಗಳಲ್ಲಿ ಡಿಜಿಟಲೈಸ್ ಮಾಡಲಿದ್ದೇವೆ ಹಾಗೂ ಈ ಎಲ್ಲವನ್ನೂ ಅಯ್ಯೋಧ್ಯೆಯ ಶ್ರೀರಾಮನಿಗೆ ಸಮರ್ಪಣೆ ಮಾಡಬೇಕು ಎಂಬುದು ನಮ್ಮ ತಂದೆಯವರ ಉದ್ದೇಶವಾಗಿತ್ತು ಎಂದು ಸ.ನ ನಾಗೇಂದ್ರ ಅವರು ಹೇಳಿದ್ದಾರೆ.

ಶ್ರೀರಾಮರು ರಾವಣನನ್ನು ಸಂಹರಿಸಿದಾಗ ಬ್ರಾಹ್ಮಣ ಹತ್ಯೆ ದೋಷದಿಂದ ತೇಜೋಹೀನರಾಗಿರುತ್ತಾರೆ. ಆಗ ಸಹಸ್ರ ಲಿಂಗಗಳನ್ನು ಪ್ರತಿಷ್ಠಾಪಿಸಿದರೆ ಶ್ರೀರಾಮನಿಗೆ ತೇಜಸ್ಸು ಪ್ರಾಪ್ತಿಯಾಗುತ್ತದೆ ಎಂದಾಗ ಅಂತಹ ಸಮಯದಲ್ಲಿ ಪ್ರತಿಷ್ಠಾಪಿಸಲ್ಪಟ್ಟ ಲಿಂಗಗಳಲ್ಲಿ ಗುಡಿಬಂಡೆ ಸುರಸದ್ಮಗಿರಿ ಬೆಟ್ಟದ ಶ್ರೀ ರಾಮೇಶ್ವರ ಲಿಂಗವೂ ಒಂದಾಗಿದೆ. ವನವಾಸ ಸಂದರ್ಭದಲ್ಲಿ ಶ್ರೀರಾಮಚಂದ್ರರು, ಸೀತೆ ಮತ್ತು ಲಕ್ಷ್ಮಣರೊಂದಿಗೆ ಈ ಬೆಟ್ಟದಲ್ಲಿ ತಂಗಿದ್ದರು. ಸೀತಾಮಾತೆಯ ದಾಹ ತೀರಿಸಲು ಬಾಣ ಹೂಡಿದಾಗ ಶ್ರೀರಾಮನ ದೊಣೆ ಸೃಷ್ಟಿಯಾಯಿತು ಎಂಬ ನಂಬಿಕೆ ಇಂದಿಗೂ ಇದೆ.

ವಿ.ಗಂಗಾಧರ / ಅಧ್ಯಕ್ಷರು, ಶ್ರೀ ಪಂಚಲಿಂಗ ದೇವಾಲಯ ಅಭಿವೃದ್ಧಿ ಟ್ರಸ್ಟ್

ಗುಡಿಬಂಡೆಯ ಮನೆಮನೆಗೂ ಮುಟ್ಟಿದ ರಾಮಾಕ್ಷತೆ

Tags: ayodhyachikkaballapurackcknewsnowgudibandelord ramaRama lallashri ramalingeshwara
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಕುಮಾರಸ್ವಾಮಿ ಕೇಂದ್ರ ಮಂತ್ರಿ ಆಗುವ ವಿಚಾರ; ಮೋದಿ ಮನಸಿನಲ್ಲಿ ಏನಿದೆಯೋ ನನಗೆ ಗೊತ್ತಿಲ್ಲ ಎಂದರು ಹೆಚ್.ಡಿ.ದೇವೇಗೌಡರು

ಕುಮಾರಸ್ವಾಮಿ ಕೇಂದ್ರ ಮಂತ್ರಿ ಆಗುವ ವಿಚಾರ; ಮೋದಿ ಮನಸಿನಲ್ಲಿ ಏನಿದೆಯೋ ನನಗೆ ಗೊತ್ತಿಲ್ಲ ಎಂದರು ಹೆಚ್.ಡಿ.ದೇವೇಗೌಡರು

Leave a Reply Cancel reply

Your email address will not be published. Required fields are marked *

Recommended

ಮಾರ್ಚ್‌ 31ರ ಒಳಗಾಗಿ ಬಾಗೇಪಲ್ಲಿ ಕ್ಷೇತ್ರದ  24 ಕೆರೆಗಳಿಗೆ ಸಂಸ್ಕರಿತ ತ್ಯಾಜ್ಯ ನೀರು

ಮಾರ್ಚ್‌ 31ರ ಒಳಗಾಗಿ ಬಾಗೇಪಲ್ಲಿ ಕ್ಷೇತ್ರದ 24 ಕೆರೆಗಳಿಗೆ ಸಂಸ್ಕರಿತ ತ್ಯಾಜ್ಯ ನೀರು

3 years ago
ಶಿರಾ ಗೆದ್ದು ರಾಜ್ಯವನ್ನು ಗೆಲ್ಲುತ್ತೇವೆ; ಆದರೆ, ಉಪ ಚುನಾವಣೆಯಿಂದ ಸರಕಾರ ಬೀಳಲ್ಲ ಎಂದ ಡಿಕೆಶಿ

ಮಂತ್ರಿಗಳೇ ಕೋವಿಡ್‌ ಕಾಲದಲ್ಲೂ ಕಮಿಷನ್ ತಿಂದಿದ್ದು ಸಾಕು, ಖಾಸಗಿ ಆಸ್ಪತ್ರೆಗಳಿಗೆ ಬಾಕಿ ಕೊಡಿ, ಜನರ ಕಷ್ಟ ನೋಡಿ ಎಂದು ಒತ್ತಾಯ ಮಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ