• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE ELECTION2024

ಲೋಕಸಭೆ ಚುನಾವಣೆ ವೇಳಾಪಟ್ಟಿಗೆ ಕ್ಷಣಗಣನೆ; ತಕ್ಷಣದಿಂದಲೇ ನೀತಿ ಸಂಹಿತೆ ಜಾರಿ

cknewsnow desk by cknewsnow desk
March 15, 2024
in ELECTION2024, NATION, POLITICS, STATE
Reading Time: 1 min read
0
ಗ್ರಾಮ ಪಂಚಾಯತಿ ಚುನಾವಣೆಗೆ ದಿನಾಂಕ ಫಿಕ್ಸ್;‌  ಚಿಕ್ಕಬಳ್ಳಾಪುರ, ಕೋಲಾರದ 208 ಪಂಚಾಯತಿಗಳಿಗೆ  ಡಿ.27ಕ್ಕೆ ಮತದಾನ
981
VIEWS
FacebookTwitterWhatsuplinkedinEmail

ರಾಜ್ಯದಲ್ಲಿ ಎಷ್ಟು ಹಂತ? ರಾಜಕೀಯ ಪಕ್ಷಗಳಿಗೆ ಕುತೂಹಲ

ಬೆಂಗಳೂರು: ಕರ್ನಾಟಕದ 28 ಕ್ಷೇತ್ರಗಳೂ ಸೇರಿದಂತೆ ಭಾರತದ 543 ಲೋಕಸಭೆ ಕ್ಷೇತ್ರಗಳಿಗೆ ಶನಿವಾರ ಅಪರಾಹ್ನ ಕೇಂದ್ರ ಚುನಾವಣೆ ಆಯೋಗ ವೇಳಾಪಟ್ಟಿ ಪ್ರಕಟಿಸಲಿದೆ. ಚುನಾವಣೆ ದಿನಾಂಕ ಪ್ರಕಟವಾದ ಕ್ಷಣದಿಂದಲೇ ಮಾದರಿ ನೀತಿ ಸಂಹಿತೆ ಜಾರಿಗೆ ಬರಲಿದೆ.

ಚುನಾವಣೆ ಆಯೋಗಕ್ಕೆ ಹೊಸದಾಗಿ ಇಬ್ಬರು ಆಯುಕ್ತರು ನೇಮಕಗೊಳ್ಳುತ್ತಿದ್ದಂತೆ ಚುನಾವಣೆಗೆ ಅಧಿಸೂಚನೆ ಹೊರಡಿಸಲು ಆಯೋಗ ಮುಂದಾಗಿದೆ.

ರಾಜ್ಯದಲ್ಲಿ ಎಷ್ಟು ಹಂತಗಳಲ್ಲಿ ಮತದಾನ ನಡೆಯಬಹುದು ಎನ್ನುವ ಕುತೂಹಲ ಎಲ್ಲಾ ಪಕ್ಷಗಳಿಗೂ ಇದೆ. ಎರಡು ಹಂತಗಳಲ್ಲಿ ಮತದಾನ ನಡೆಯಬಹುದು ಎಂದು ಚುನಾವಣೆ ವಿಶ್ಲೇಷಕರು ಹೇಳುತ್ತಿದ್ದಾರೆ.

ಪ್ರಸ್ತುತ ಲೋಕಸಭೆಯ ಅವಧಿ ಜೂನ್ 16ಕ್ಕೆ ಕೊನೆಗೊಳ್ಳಲಿದ್ದು, ಅದಕ್ಕೂ ಮುನ್ನ ಹೊಸ ಸದನ ರಚನೆ ಆಗಬೇಕಿದೆ. 2019ರಲ್ಲಿ ಲೋಕಸಭೆ ಚುನಾವಣೆಗೆ ಮಾರ್ಚ್ 10ರಂದು ಅಧಿಸೂಚನೆ ಹೊರಡಿಸಿ, ಮೇ 27ಕ್ಕೆ ಪ್ರಕ್ರಿಯೆ ಪೂರ್ಣಗೊಂಡಿತ್ತು.

ಐದು ದಿನ ತಡವಾಗಿ ದಿನಾಂಕ ಘೋಷಣೆ

ಈ ಬಾರಿ ಇಬ್ಬರು ಚುನಾವಣೆ ಆಯುಕ್ತರ ನೇಮಕಾತಿ ಹಿನ್ನೆಲೆಯಲ್ಲಿ ಐದು ದಿನ ತಡವಾಗಿ ದಿನಾಂಕ ಘೋಷಣೆಯಾಗುತ್ತಿದೆ. ಇಷ್ಟಾದರೂ ಪ್ರಕ್ರಿಯೆಯನ್ನು ಮೇ ಅಂತ್ಯಕ್ಕೆ ಮುಗಿಸಿ, ಹೊಸ ಸರಕಾರದ ಅಸ್ತಿತ್ವಕ್ಕೆ ಅವಕಾಶ ಮಾಡಿಕೊಡಬೇಕಿದೆ. ಕಳೆದ ಚುನಾವಣೆಯಲ್ಲಿ ರಾಷ್ಟ್ರಾದ್ಯಂತ ಏಳು ಹಂತಗಳಲ್ಲಿ ಚುನಾವಣೆ ನಡೆದಿತ್ತು. ಕರ್ನಾಟಕದ 28 ಕ್ಷೇತ್ರಗಳಿಗೆ ಎರಡು ಹಂತಗಳಲ್ಲಿ ಅಂದರೆ, ಏಪ್ರಿಲ್ 18 ಹಾಗೂ 23 ರಂದು ಮತದಾನ ನಡೆದಿತ್ತು.

ಫಲಿತಾಂಶಕ್ಕಾಗಿ ತಿಂಗಳು ಕಾಯುವ ಸ್ಥಿತಿ


ರಾಜ್ಯದಲ್ಲಿ ಏಪ್ರಿಲ್ 23ಕ್ಕೆ ಮತದಾನ ಮುಗಿದಿದ್ದರೂ ಫಲಿತಾಂಶಕ್ಕಾಗಿ ಅಭ್ಯರ್ಥಿಗಳು ಒಂದು ತಿಂಗಳು ಕಾಯುವ ಪರಿಸ್ಥಿತಿ ಒದಗಿತ್ತು. ಕಳೆದ ಬಾರಿ ಮೇ 19ರಂದು ಮತದಾನ ಅಂತ್ಯಗೊಂಡು, ಮೇ 23 ರಂದು ಆಯೋಗ ಮತ ಎಣಿಕೆ ನಡೆಸಿ ಫಲಿತಾಂಶ ಪ್ರಕಟಿಸಿತು.

ಬಿಜೆಪಿಗೆ 51.75% ಮತ

ಕರ್ನಾಟಕದ ಮಟ್ಟಿಗೆ 28 ಕ್ಷೇತ್ರಗಳ ಪೈಕಿ ಬಿಜೆಪಿ 27ರಲ್ಲಿ ಸ್ಪರ್ಧಿಸಿ 25 ಕ್ಷೇತ್ರಗಳನ್ನು ಬುಟ್ಟಿಗೆ ಹಾಕಿಕೊಂಡಿತ್ತು, ಒಟ್ಟಾರೆ ರಾಜ್ಯದ ಜನತೆ ಬಿಜೆಪಿಗೆ ಶೇಕಡ 51.75ರಷ್ಟು ಮತ ಚಲಾಯಿಸಿದ್ದರು.

ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರನ್ನು ಬೆಂಬಲಿಸಿ, ಒಂದು ಸ್ಥಾನದ ಹೆಚ್ಚಿನ ಗೆಲುವು ಸಾಧಿಸಿತ್ತು, ನಂತರ ಅವರು ಬಿಜೆಪಿ ಸೇರ್ಪಡೆಯಾದರು. ಅಂದು ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಕ್ಷೇತ್ರ ಹೊಂದಾಣಿಕೆ ಮಾಡಿಕೊಂಡು, ಇಬ್ಬರೂ ಕೇವಲ ತಲಾ ಒಂದೊಂದು ಕ್ಷೇತ್ರಗಳಲ್ಲಿ ಜಯ ಗಳಿಸಿದ್ದರು.

ಕಾಂಗ್ರೆಸ್‌ಗೆ 32.11%, ಜೆಡಿಎಸ್‌ಗೆ 9.74% ಮತ

ಅಂದು ಕಾಂಗ್ರೆಸ್ ಶೇಕಡ 32.11ರಷ್ಟು, ಜೆಡಿಎಸ್‌ಗೆ ಶೇಕಡ 9.74ರಷ್ಟು ಮತ ಗಳಿಸಿದ್ದವು. 2024 ರಲ್ಲಿ ನಡೆಯುತ್ತಿರುವ ಸಾರ್ವತ್ರಿಕ ಚುನಾವಣೆಗೆ ಚಿತ್ರಣವೇ ಬದಲಾಗಿದ್ದು, ಈ ಬಾರಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟ 25-3 ಕ್ಷೇತ್ರಗಳಲ್ಲಿ ಕಣಕ್ಕಿಳಿಯುತ್ತಿವೆ.

ಬಿಜೆಪಿ ಈಗಾಗಲೇ 20 ಕ್ಷೇತ್ರಗಳಿಗೆ, ಕಾಂಗ್ರೆಸ್ 7 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಹೆಸರಿಸಿದ್ದರೆ, ಜೆಡಿಎಸ್ ಇನ್ನು ಅಭ್ಯರ್ಥಿಗಳನ್ನು ಪ್ರಕಟಿಸಬೇಕಿದೆ. ಆದರೆ ಮೂರೂ ಪಕ್ಷಗಳು ಚುನಾವಣಾ ಸಿದ್ಧತೆ ಮಾಡಿಕೊಂಡು ಹೋರಾಟಕ್ಕೆ ಅಣಿಯಾಗಿವೆ.

ಅದರಲ್ಲೂ ಆಡಳಿತಾರೂಢ ಕಾಂಗ್ರೆಸ್, ಸರಕಾರಿವೆಚ್ಚದಲ್ಲೇ ಗ್ಯಾರಂಟಿ ಯೋಜನೆಗಳ ಸಮಾವೇಶವನ್ನು ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ನಡೆಸುತ್ತಿರುವ ಜೊತೆಗೆ ಸುದ್ದಿ ಮಾಧ್ಯಮಗಳಿಗೆ ಸರ್ಕಾರದ ಜಾಹೀರಾತುಗಳ ಸುರಿಮಳೆಯೇ ಆಗುತ್ತಿದೆ.

ಈ ಬಾರಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಎನ್‌ಡಿಎ ಮೈತ್ರಿಕೂಟದ ನಡುವೆ ಜಿದ್ದಾಜಿದ್ದಿ ಹೋರಾಟ ನಡೆಯಲಿದೆ. ಕಾಂಗ್ರೆಸ್ ಕನಿಷ್ಠ 20 ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿದ್ದರೆ, ಮೈತ್ರಿಕೂಟ ಎಲ್ಲಾ 28 ಕ್ಷೇತ್ರಗಳ ಮೇಲೂ ಕಣ್ಣಿಟ್ಟಿದೆ.

Tags: ckcknewsnowelection 2024election scheduleLok Sabha electionparliamentPolitics
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಲೋಕಸಭೆ ಚುನಾವಣೆ: ಕರ್ನಾಟಕದಲ್ಲಿ 2 ಹಂತ; ಏಪ್ರಿಲ್ 26 – ಮೇ 7ರಂದು ಮತದಾನ

ಲೋಕಸಭೆ ಚುನಾವಣೆ: ಕರ್ನಾಟಕದಲ್ಲಿ 2 ಹಂತ; ಏಪ್ರಿಲ್ 26 – ಮೇ 7ರಂದು ಮತದಾನ

Leave a Reply Cancel reply

Your email address will not be published. Required fields are marked *

Recommended

ಸಂಸತ್ ಭವನ ಬಿಜೆಪಿ ಅಥವಾ ಆರೆಸ್ಸೆಸ್ ಕಚೇರಿ ಅಲ್ಲ

ಸಂಸತ್ ಭವನ ಬಿಜೆಪಿ ಅಥವಾ ಆರೆಸ್ಸೆಸ್ ಕಚೇರಿ ಅಲ್ಲ

3 years ago
ಯಾವ ಕನಸು ನಿಮ್ಮನ್ನು ನಿದ್ದೆ ಮಾಡಲು ಬಿಡುವುದಿಲ್ಲವೋ ಅದೇ ನಿಜವಾದ ಕನಸು

ಪೀಪಲ್ಸ್ ಪ್ರೆಸಿಡೆಂಟ್ ಮತ್ತು ಕನಸುಗಳ ಶಿಕಾರಿ

3 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ