• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಡಿಕೆಶಿ ಸಾಹೇಬರು ಮುಖ್ಯಮಂತ್ರಿ ಸ್ಥಾನವನ್ನು ಒದ್ದು ಕಿತ್ತುಕೊಳ್ಳುವುದು ಯಾವಾಗ?

cknewsnow desk by cknewsnow desk
December 13, 2024
in NATION, STATE
Reading Time: 2 mins read
0
ಭ್ರಷ್ಟಾಚಾರ & ಕೆಮ್ಮು ಎರಡನ್ನೂ ಮುಚ್ಚಿಡಲಾಗಲ್ಲ!!
922
VIEWS
FacebookTwitterWhatsuplinkedinEmail

ಕಾಂಗ್ರೆಸ್ಸಿನಲ್ಲಿ ಬಿರುಸಿನ ಚರ್ಚೆಗೆ ಕಾರಣವಾದ ಡಿಕೆಶಿ ಹೇಳಿಕೆ; ಸಿದ್ದರಾಮಯ್ಯ ಪಾಳೆಯದಲ್ಲಿ ತಳಮಳಡಿಸಿಎಂ ಯಾವಾಗ ಒದೆಯುತ್ತಾರೆ ಎನ್ನುವ ಬಗ್ಗೆ ಶುರುವಾದ ಚರ್ಚೆ

ಬೆಳಗಾವಿ/ಬೆಂಗಳೂರು: ಅಧಿಕಾರ ಬೇಕು ಎಂದರೆ ಒದ್ದು ಕಿತ್ತುಕೊಳ್ಳಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿಧಾನಸಭೆಯಲ್ಲಿ ನೀಡಿರುವ ಹೇಳಿಕೆ ಕಾಂಗ್ರೆಸ್ ಪಕ್ಷದಲ್ಲಿ, ಅದರಲ್ಲಿಯೂ ಸಿದ್ದರಾಮಯ್ಯ ಅವರ ಪಾಳೆಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಮುಖ್ಯವಾಗಿ ಇಂತಹ ಹೇಳಿಕೆ ಉದ್ಧಟತನದ ಪರಮಾವಧಿ ಎಂದು ಸಿದ್ದರಾಮಯ್ಯ ಅವರ ಕೆಲ ಆಪ್ತರು ಅತೃಪ್ತಿ ವ್ಯಕ್ತಪಡಿಸಿದ್ದು, ಡಿಕೆಶಿ ಮಾಡಲಿರುವ ಅಂತಹ ಯಾವುದೇ ಪ್ರಯತ್ನವನ್ನು ವಿಫಲಗೊಳಿಸಲು ಬಿರುಸಿನ ಚಟುವಟಿಕೆ ಶುರು ಮಾಡಿದ್ದಾರೆ.

ಅಧಿಕಾರ ಹಂಚಿಕೆ ಬಗ್ಗೆ ಒಪ್ಪಂದ ಆಗಿದೆ ಎಂದಿದ್ದರು ಡಿಕೆಶಿ. ಅಂತಹ ಒಪ್ಪಂದ ಆಗಿಯೇ ಇಲ್ಲ ಎಂದು ಟಾಂಗ್ ನೀಡಿದ್ದರು ಸಿಎಂ. ಇದು ಕಾಂಗ್ರೆಸ್ ಪಕ್ಷದಲ್ಲಿ ಬಣ ಬಡಿದಾಟಕ್ಕೆ ಹೊಸ ವೇದಿಕೆ ಸೃಷ್ಟಿ ಮಾಡಿಕೊಟ್ಟಿತ್ತು. ಕೊನೆಗೆ, ಅದರ ತೀವ್ರತೆ ಅರ್ಥ ಮಾಡಿಕೊಂಡಿದ್ದ ಡಿಕೆಶಿ, ಅಧಿಕಾರ ಹಂಚಿಕೆಯ ಬಗ್ಗೆ ಯಾರೂ ತುಟಿ ಬಿಚ್ಚಬಾರದು ಎಂದು ತಾಕೀತು ಮಾಡಿದ್ದರು.

ಅದಾದ ಮೇಲೆ ಬೂದಿ ಮುಚ್ಚಿದ ಕೆಂಡದಂತೆ ಇದ್ದ ವಿವಾದ ಇದೀಗ ಡಿಕೆಶಿ ಅವರು, ಒದ್ದು ಅಧಿಕಾರ ಕಿತ್ತುಕೊಳ್ಳಬೇಕು ಎಂದು ಸದನದಲ್ಲಿ ನೀಡಿದ ಹೇಳಿಕೆ ಹಿನ್ನೆಲೆ, ಅದರ ಒಳಮರ್ಮದ ಬಗ್ಗೆ ಪಕ್ಷದಲ್ಲಿ ತಳಮಳ ಶುರುವಾಗಿದೆ.

ಮೇಲಾಗಿ, ನಾನು ಎಸ್.ಎಂ.ಕೃಷ್ಣ ಅವರ ಮನೆ ಬಾಗಿಲನ್ನು ಒದ್ದಿದ್ದೆ. ಅದಕ್ಕೆ ಟಿ.ಬಿ.ಜಯಚಂದ್ರ ಅವರೇ ಸಾಕ್ಷಿ ಎಂದು ಹೇಳಿದ್ದು, ಸಿಎಂ ಪಾಳೆಯದಲ್ಲಿ ಸಿಟ್ಟಿನ ವಾತಾವರಣ ಉಂಟು ಮಾಡಿದೆ.ಕಾಲೆಳೆದಿದ್ದ ಅಶೋಕ್!ಜನವರಿ ನಂತರ ನಿಮ್ಮ ಗ್ರಹಗತಿ ಸರಿಯಿಲ್ಲ, ಒದ್ದು ಮುಖ್ಯಮಂತ್ರಿ ಸ್ಥಾನ ಕಿತ್ತುಕೊಳ್ಳಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಡಿಕೆಶಿ ಕಾಲೆಳೆದಿದ್ದಾರೆ.

ಅಶೋಕ್ ಅವರ ಮಾತು ಸ್ವತಃ ಡಿಸಿಎಂ ಅವರಿಗೆ ಕೊಂಚ ಇರಿಸುಮುರಿಸು ಉಂಟು ಮಾಡಿತು ಎನ್ನುವುದರಲ್ಲಿ ಎರಡು ಮಾತಿಲ್ಲ.

ಬುಧವಾರದ ದಿನ ಬೆಳಗ್ಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ಆರಂಭಗೊಳ್ಳುತ್ತಿದ್ದಂತೆ ಅಗಲಿದ ಮಾಜಿ ಶಾಸಕರಿಗೆ ಸಂತಾಪ ಸೂಚನೆ ಕಲಾಪದಲ್ಲಿ ಮಾತನಾಡಿದ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಗುಣಗಾನ ಮಾಡುತ್ತಾ, ಅವರ ಆಡಳಿತಾವಧಿಯಲ್ಲಿ ಧಮ್ಕಿ ಹಾಕಿ ಮಂತ್ರಿ ಸ್ಥಾನ ಪಡೆದುಕೊಂಡೆ ಎನ್ನುವ ಅಂಶವನ್ನು ಬಾಯ್ಬಿಟ್ಟರು.

ಸರಕಾರ ರಚನೆ ಸಂದರ್ಭದಲ್ಲಿ ಕೇವಲ ಎಂಟು ಮಂದಿಯನ್ನು ಮಾತ್ರ ಮಂತ್ರಿಮಂಡಲಕ್ಕೆ ತೆಗೆದುಕೊಳ್ಳಲು ಕಾಂಗ್ರೆಸ್ ವರಿಷ್ಠರು ಅವಕಾಶ ನೀಡಿದ್ದರು, ಆ ಪಟ್ಟಿಯಲ್ಲಿ ನನ್ನ ಹೆಸರಿರಲಿಲ್ಲ. ಮುಂದೆ ಅವಕಾಶ ಸಿಗದು ಎನ್ನುವ ಆತಂಕದಿಂದ ನನ್ನ ಗುರುಗಳಾದ ಜ್ಯೋತಿಷಿ ಒಬ್ಬರ ಬಳಿ ವಿಷಯ ಹಂಚಿಕೊಂಡಾಗ, “ಅಧಿಕಾರವನ್ನು ಒದ್ದು ಕಿತ್ತುಕೊಳ್ಳಬೇಕು, ಇಲ್ಲವಾದರೆ ಮುಂದೆ ಅವಕಾಶ ಸಿಗದು” ಎಂದು ಸಲಹೆ ಮಾಡಿದರು.

ಗುರುಗಳ ಮಾತಿನಂತೆ ಜಯಚಂದ್ರ ಅವರೊಂದಿಗೆ ಕೃಷ್ಣ ಅವರನ್ನು ತಡರಾತ್ರಿ ಭೇಟಿ ಮಾಡಿ, ನಮ್ಮನ್ನು ಮಂತ್ರಿಮಂಡಲದಿಂದ ಏಕೆ ಬಿಟ್ಟಿದ್ದೀರಿ? ನಿಮ್ಮನ್ನು ರಾಜ್ಯಸಭೆ ಸದಸ್ಯರನ್ನಾಗಿ, ಕೆಪಿಸಿಸಿ ಅಧ್ಯಕ್ಷರನ್ನಾಗಿಸಲು ಹೆಗಲಿಗೆ-ಹೆಗಲು ಕೊಟ್ಟು ದುಡಿಡಿದ್ದೇನೆ. ಸರಕಾರ ರಚನೆಯಲ್ಲಿ ನನಗೆ ಅವಕಾಶ ನೀಡಲಿಲ್ಲವೆಂದರೆ ಜನ ಏನೆಂದುಕೊಳ್ಳುತ್ತಾರೆ? ನಾನೂ ಜತೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ ಸರಕಾರ, ಇಲ್ಲವಾದರೆ ಸರಕಾರ ಇಲ್ಲ ಎಂದು ಸ್ಪಷ್ಟವಾಗಿ ಹೇಳಿದೆ.

ರುದ್ರ ತಾಂಡವ ಮಾಡುತ್ತಿದ್ದೀಯಾ?

ನನ್ನ ಆವೇಶಕ್ಕೆ ಪ್ರತಿಕ್ರಿಯಿಸಿದ ಕೃಷ್ಣ ಅವರು, “ಏನು? ರುದ್ರ ತಾಂಡವ ಮಾಡುತ್ತಿದ್ದೀಯಾ? ಬೆಳಗ್ಗೆ ನೋಡೋಣ” ಎಂದು ಕೇಳಿದರು.ಪ್ರಮಾಣವಚನಕ್ಕೆ ಸಮಯ ನಿಗದಿಯಾಗಿತ್ತು, ಮತ್ತೆ ಬೆಳಗ್ಗೆ ಹೋದಾಗ ನಿನಗೆ ಗ್ರಹಗತಿ ಸರಿಯಿಲ್ಲ, ಮುಂದೆ ಅಕವಾಶ ಸಿಗಲಿದೆ ಎಂದರು. ನಾನು ಜ್ಯೋತಿಷ್ಯ ಕೇಳಿದ್ದೇನೆ, ನನಗೆ ಈ ರೀತಿ ಹೇಳಿದ್ದಾರೆ, ಬೇಕಾದರೆ ಅವರನ್ನೇ ಕೇಳಿ. ನಾನು ಮಂತ್ರಿಯಾಗಬೇಕು ಅಷ್ಟೆ ಎಂದು ಪಟ್ಟು ಹಿಡಿದೆ.ಮಂತ್ರಿಮಂಡಲಕ್ಕೆ ಸೇರ್ಪಡೆನಂತರ ಕೃಷ್ಣ ಅವರು, ಪ್ರಮಾಣ ವಚನ ಸಮಯನ್ನೇ ಮುಂದೂಡಿ ವರಿಷ್ಠರ ಮನವೊಲಿಸಿ, ನನ್ನನ್ನೂ ಮಂತ್ರಿಮಂಡಲಕ್ಕೆ ಸೇರ್ಪಡೆ ಮಾಡಿಕೊಂಡರು ಎಂದರು ಡಿಕೆಶಿ.

ಶಿವಕುಮಾರ್ ಅವರ ಹೇಳಿಕೆ ವೇಳೆ ಮಧ್ಯೆ ಪ್ರವೇಶಿಸಿದ ಪ್ರತಿಪಕ್ಷ ನಾಯಕ ಅಶೋಕ್ ಅವರು, ಈಗಲೂ ಅದೇ ಪರಿಸ್ಥಿತಿ ಇದೆ. ಯಾವಾಗ ಒದ್ದು ಮುಖ್ಯಮಂತ್ರಿ ಹುದ್ದೆ ಕಿತ್ತುಕೊಳ್ಳುತ್ತೀರಾ? ಎಂದು ಮುಖ್ಯಮಂತ್ರಿ ಆಸನ ತೋರಿಸಿ ಕೇಳಿದರು.ನಿಮಗೆ ಯಾರು ಭವಿಷ್ಯ ಹೇಳಿದ್ದಾರೋ, ಅವರು ನನಗೂ ನಿಮಗೆ ಹೇಳಿದ್ದನ್ನೇ ಹೇಳಿದ್ದಾರೆ. ನನಗೂ ವಿಷಯ ಗೊತ್ತು ಎಂದು ಅಶೋಕ್ ಅವರು ಡಿಕೆಶಿ ಕಾಲೆಳೆದರು.

ನಿಮ್ಮ ಗ್ರಹಗತಿ ಸರಿಯಿಲ್ಲ

ಜನವರಿ ನಂತರ ನಿಮ್ಮ ಗ್ರಹಗತಿ ಸರಿಯಿಲ್ಲ, ಅದಕ್ಕೂ ಮೊದಲು ಅಧಿಕಾರ ಪಡೆಯಬೇಕು ಎಂದಿದ್ದಾರೆ ಆ ಗುರುಗಳು. ನಿಮ್ಮ ಹಿಂದಿನ ರೌದ್ರಾವತಾರವನ್ನು ಯಾವಾಗ ತಳೆದು ಅಧಿಕಾರ ಕಿತ್ತುಕೊಳ್ಳುತ್ತೀರಾ ಎಂದು ಮತ್ತೆ ಮತ್ತೆ ಕೇಳಿದರು ಅಶೋಕ್.

ಇಷ್ಟೆಲ್ಲಾ ಚರ್ಚೆ ನಡೆದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ಥಾನದಲ್ಲಿ ಆಸೀನರಾಗಿರಲಿಲ್ಲ. ಸಭಾಧ್ಯಕ್ಷರು, ಅಶೋಕ್ ಮತ್ತು ಶಿವಕುಮಾರ್ ನಡುವಿನ ಸಂವಾದದಲ್ಲಿ ಮಧ್ಯೆ ಪ್ರವೇಶಿಸಿ, ಅಶೋಕ್ ಕೇಳಿದ ಎರಡು-ಮೂರು ಪ್ರಶ್ನೆಗಳಿಗೆ ಸದನದಲ್ಲಿ ಉತ್ತರ ನೀಡಬೇಡಿ. ನಿಮ್ಮ ಕಚೇರಿಗೆ ಕರೆದು ಮಾತನಾಡಿ ಎಂದು ರೂಲಿಂಗ್ ನೀಡುವುದಾಗಿ ತಿಳಿಸಿದರು.

ಮೇಲ್ನೋಟಕ್ಕೆ ಸದನದಲ್ಲಿ ಒದ್ದು ಕಿತ್ತುಕೊಳ್ಳುವ ವಿಷಯದ ಮೇಲಿನ ಚರ್ಚೆ ಸ್ವಾರಸ್ಯಕರವಾಗಿ ಕಂಡರೂ ಒಳಗೆ ಕಾಂಗ್ರೆಸ್ ಪಕ್ಷದಲ್ಲಿ ದೊಡ್ಡ ಬೇಗುದಿಯನ್ನೇ ಸೃಷ್ಟಿ ಮಾಡಿದೆ ಎನ್ನುವುದು ಸುಳ್ಳಲ್ಲ.

Tags: cmCongress. PoliticsdcmDK Shivakumarfight for cm postkarnatakasiddaramaiah
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಪ್ರಧಾನಿಯನ್ನು ಭೇಟಿಯಾಗೋಕೆ ಸಿದ್ದರಾಮಯ್ಯನ ಪರ್ಮಿಷನ್‌ ಬೇಕಾ? ನಾನ್‌ಸೆನ್ಸ್‌ ಎಂದ ದೇವೇಗೌಡರು

ಕಾಂಗ್ರೆಸ್ ಪ್ರಜಾಪ್ರಭುತ್ವವನ್ನು ಅಪಹಾಸ್ಯ ಮಾಡುತ್ತಿದೆ ಎಂದು ಮಾಜಿ ಪ್ರಧಾನಿ HDD ಕಿಡಿ

Leave a Reply Cancel reply

Your email address will not be published. Required fields are marked *

Recommended

ನವಜಾತ ಶಿಶುಗಳ ರಕ್ಷಕ, ಆಹಾರ ತಜ್ಞ ಕೆ.ಸಿ.ರಘು ಅವರು ಇನ್ನಿಲ್ಲ

ನವಜಾತ ಶಿಶುಗಳ ರಕ್ಷಕ, ಆಹಾರ ತಜ್ಞ ಕೆ.ಸಿ.ರಘು ಅವರು ಇನ್ನಿಲ್ಲ

3 years ago
ಇತಿಹಾಸ ಪ್ರಸಿದ್ಧ ಗುಡಿಬಂಡೆ ಶ್ರೀ ಸತಿ ನಾಗಭೈರವಿ ಗುಂಡಾಲಚ್ಚಮ್ಮ ದೇಗುಲದಲ್ಲಿ ಕಾರ್ತೀಕ ದೀಪೋತ್ಸವ

ಇತಿಹಾಸ ಪ್ರಸಿದ್ಧ ಗುಡಿಬಂಡೆ ಶ್ರೀ ಸತಿ ನಾಗಭೈರವಿ ಗುಂಡಾಲಚ್ಚಮ್ಮ ದೇಗುಲದಲ್ಲಿ ಕಾರ್ತೀಕ ದೀಪೋತ್ಸವ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ